Sign In

By signing in or creating an account, you agree with Associated Broadcasting Company's Terms & Conditions and Privacy Policy.

ನೆಟ್ಟಿಗರ ಗಮನ ಸೆಳೆದ ಕಡಲೆಕಾಯಿ ಮಾರಾಟಗಾರನ ಕಚ್ಚಾ ಬಾದಾಮ್​ ಹಾಡು: ವಿಡಿಯೋ ವೈರಲ್​

ಬಬೂನ್​ ಬಡ್ಯಾಕರ್​ ಎನ್ನುವ ವ್ಯಕ್ತಿ ಬರಿಗಾಲಿನಲ್ಲಿ ಸೈಕಲ್​ ತುಳಿದುಕೊಂಡು ಮನೆಮನೆಗೆ ತೆರಳಿ ಕಡಲೆಕಾಯಿ ಮಾರುತ್ತಾನೆ. ಹೀಗೆ ಕಡಲೆಕಾಯಿ ಮಾರುವ ವೇಳೆ ಕಚ್ಚಾ ಬಾದಮ್​ ಹಾಡನ್ನು ಹಾಡುತ್ತಾನೆ.

ನೆಟ್ಟಿಗರ ಗಮನ ಸೆಳೆದ ಕಡಲೆಕಾಯಿ ಮಾರಾಟಗಾರನ ಕಚ್ಚಾ ಬಾದಾಮ್​ ಹಾಡು: ವಿಡಿಯೋ ವೈರಲ್​
ಬೂಬನ್​ ಬಡ್ಯಾಕರ್​
Follow us
TV9 Web
| Updated By: Pavitra Bhat Jigalemane

Updated on: Jan 07, 2022 | 2:42 PM

ಸಾಮಾಜಿಕ ಜಾಲತಾಣಗಳು ಹೊಸ ಹೊಸ ವಿಚಾರಗಳಿಂದ ವಿಭಿನ್ನ ರೀತಿಯ ವೀಡಿಯೋಗಳಿಂದ  ನೆಟ್ಟಿಗರನ್ನು ಸೆಳೆಯುತ್ತಿರುತ್ತವೆ. ವೈರಲ್​ ಹಾಡುಗಳು, ವೈರಲ್​ ವೀಡಿಯೋಗಳು, ವೈರಲ್​  ಆಹಾರಗಳಿಂದ ನೋಡುಗರನ್ನು ಅಚ್ಚರಿಗೊಳಿಸುತ್ತಿರುತ್ತವೆ. ಇದೀಗ ಕಡಲೆಕಾಯಿ ಮಾರಾಟಗಾರನೊಬ್ಬ ಕಚ್ಚಾ ಬಾದಾಮ್ ಎನ್ನುವ​ ಹಾಡನ್ನು ರಚಿಸಿ ಹಾಡನ್ನು ಹಾಡುತ್ತಾ ಕಡಲೆಕಾಯಿ ಮಾರಿದ್ದಾನೆ. ಇದರ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ಸಖತ್ ವೈರಲ್​ ಆಗಿದೆ. 

ಪಶ್ವಿಮ ಬಂಗಾಳದ ಬ್ರಿಬುರ್ಮ್ ಎನ್ನುವ​ ಹಳ್ಳಿಯೊಂದರಲ್ಲಿ ಕಡಲೆಕಾಯಿ ಮಾರಾಟ ಮಾಡುವ ವ್ಯಕ್ತಿಯೊಬ್ಬ ಹಾಡು ಹೇಳಿಕೊಂಡು ತಾನು ತಂದಿರುವ ಕಡಲೆಕಾಯಿಯನ್ನು ಮಾರಾಟ ಮಾಡಿದ್ದಾನೆ. ಅವನ ಹಾಡು ನೆಟ್ಟಿಗರ ಗಮನ ಸೆಳೆದಿದೆ. ಬೂಬನ್​ ಬಡ್ಯಾಕರ್​ ಎನ್ನುವ ವ್ಯಕ್ತಿ ಬರಿಗಾಲಿನಲ್ಲಿ ಸೈಕಲ್​ ತುಳಿದುಕೊಂಡು ಮನೆಮನೆಗೆ ತೆರಳಿ ಕಡಲೆಕಾಯಿ ಮಾರುತ್ತಾನೆ. ಹೀಗೆ ಕಡಲೆಕಾಯಿ ಮಾರುವ ವೇಳೆ ಕಚ್ಚಾ ಬಾದಮ್​ ಹಾಡನ್ನು ಹಾಡುತ್ತಾನೆ. ಈತನ ಹಾಡು ಕೇಳಿಯೆ ಜನ ಕಳೆದುಹೋಗುತ್ತಾರೆ. ಬಬೂನ್ ಅವರ ಹಾಡು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್​ ಆಗಿದೆ. ಹಲವರು ಅವರ ಕಚ್ಚಾ ಬಾದಾಮ್​ ಹಾಡಿಗೆ ಮ್ಯಾಶ್​ ಅಪ್​ಗಳನ್ನು ಮಾಡಿ ಹಂಚಿಕೊಂಡಿದ್ದಾರೆ. ಯುಟ್ಯೂಬ್​ನಲ್ಲಿ ಹಂಚಿಕೊಳ್ಳಲಾದ ಈ ವೀಡಿಯೋ 11 ಲಕ್ಷಕ್ಕೂ ಅಧಿಕ ವೀಕ್ಷಣೆ ಪಡೆದಿದ್ದು , 69 ಸಾವಿರಕ್ಕೂ ಹೆಚ್ಚು ಲೈಕ್ಸ್​ ಪಡೆದಿದೆ.

ಇನ್ನೊಂದು ಪ್ರಮುಖ ವಿಚಾರವೆಂದರೆ ಬೂಬನ್​ ತಮ್ಮ ಕಚ್ಚಾ ಬಾದಾಮ್​ ಹಾಡಿಗಾಗಿ  ಪೊಲೀಸ್​ ಠಾಣೆ​ ಮೆಟ್ಟಲನ್ನೂ ಏರಿದ್ದರು. ಹೌದು. ಸಾಮಾಜಿಕ ಜಾಲತಾಣಗಳಲ್ಲಿ ತನ್ನ ಹಾಡು ವೈರಲ್​ ಆಗಿ ಲಕ್ಷಾಂತರ ಜನ ವೀಕ್ಷಿಸಿದರೂ ತನಗೆ ಯಾವುದೇ ಆದಾಯ ಬಂದಿಲ್ಲ. ನಾನೊಬ್ಬ ಸಾಮಾನ್ಯ ಮನುಷ್ಯ. ನನ್ನ ಹಾಡಿನಿಂದ ಹಲವರು ಹಣಗಳಿಸುತ್ತಿದ್ದಾರೆ. ನನಗೂ ನನ್ನ ಹಾಡಿನಿಂದ ಬಂದ ಲಾಭ ಸಿಗಬೇಕು ಎಂದು ಪೋಲೀಸರಿಗೆ ದೂರನ್ನೂ ನೀಡಿದ್ದರು. ಈ ಬಗ್ಗೆ ಅವರು ಪೋಲೀಸರಿಗೆ ದೂರು ನೀಡಿದ ನಂತರ ನನಗೆ ಹಲವು ಬೆದರಿಕೆ ಕರೆಗಳೂ ಬಂದಿವೆ. ಅದೆಲ್ಲವನ್ನೂ ನಾನು ಎದುರಿಸಿದ್ದೇನೆ ಎಂದಿದ್ದಾರೆ.

ಇದನ್ನೂ ಓದಿ:

Goldfish: ಗೋಲ್ಡ್​ ಫಿಶ್​ಗಳಿಗೆ ವಾಹನ ಚಲಾಯಿಸುವ ತರಬೇತಿ ನೀಡಿದ ವಿಜ್ಞಾನಿಗಳು

‘ಮೇ 9ಕ್ಕೆ ತಂದೆ ಕನಸು ನನಸಾಗುತ್ತೆ, ನನ್ನ ಹೊಸ ಜೀವನ ಶುರು’: ಚಂದನ್ ಶೆಟ್ಟಿ
‘ಮೇ 9ಕ್ಕೆ ತಂದೆ ಕನಸು ನನಸಾಗುತ್ತೆ, ನನ್ನ ಹೊಸ ಜೀವನ ಶುರು’: ಚಂದನ್ ಶೆಟ್ಟಿ
ಕೇವಲ 10 ರನ್​​ಗಳಿಂದ ಶತಕ ವಂಚಿತರಾದ ಶುಭ್​ಮನ್ ಗಿಲ್
ಕೇವಲ 10 ರನ್​​ಗಳಿಂದ ಶತಕ ವಂಚಿತರಾದ ಶುಭ್​ಮನ್ ಗಿಲ್
ಚಂದನ್ ಶೆಟ್ಟಿ ಟ್ಯಾಲೆಂಟ್ ಬಗ್ಗೆ ವಿವರಿಸಿದ ಅನುಭವಿ ಕಲಾವಿದ ತಬಲಾ ನಾಣಿ
ಚಂದನ್ ಶೆಟ್ಟಿ ಟ್ಯಾಲೆಂಟ್ ಬಗ್ಗೆ ವಿವರಿಸಿದ ಅನುಭವಿ ಕಲಾವಿದ ತಬಲಾ ನಾಣಿ
ಮಂಗಳೂರು: ಕಟೀಲು ದುರ್ಗಾಪರಮೇಶ್ವರಿ ದೇವಸ್ಥಾನದ ಮುಂಭಾಗ ಬೆಂಕಿ ಆಟ
ಮಂಗಳೂರು: ಕಟೀಲು ದುರ್ಗಾಪರಮೇಶ್ವರಿ ದೇವಸ್ಥಾನದ ಮುಂಭಾಗ ಬೆಂಕಿ ಆಟ
ರಾಂಬನ್‌ನಲ್ಲಿ ಭೂಕುಸಿತ; ಜಮ್ಮು-ಶ್ರೀನಗರ ರಾಷ್ಟ್ರೀಯ ಹೆದ್ದಾರಿ ಬಂದ್
ರಾಂಬನ್‌ನಲ್ಲಿ ಭೂಕುಸಿತ; ಜಮ್ಮು-ಶ್ರೀನಗರ ರಾಷ್ಟ್ರೀಯ ಹೆದ್ದಾರಿ ಬಂದ್
ತಾನೇ ಯುವಕನಿಗೆ ಹಿಗ್ಗಾಮುಗ್ಗಾ ಥಳಿಸಿ ದೂರು ನೀಡಿದ ವಿಂಗ್ ಕಮಾಂಡರ್: ವಿಡಿಯೋ
ತಾನೇ ಯುವಕನಿಗೆ ಹಿಗ್ಗಾಮುಗ್ಗಾ ಥಳಿಸಿ ದೂರು ನೀಡಿದ ವಿಂಗ್ ಕಮಾಂಡರ್: ವಿಡಿಯೋ
ದಾಖಲಾತಿ ಹೆಚ್ಚಳಕ್ಕೆ ಸರ್ಕಾರಿ ಶಾಲೆ ಶಿಕ್ಷಕರಿಂದ ಡಿಫರೆಂಟ್ ಕ್ಯಾಂಪೇನ್
ದಾಖಲಾತಿ ಹೆಚ್ಚಳಕ್ಕೆ ಸರ್ಕಾರಿ ಶಾಲೆ ಶಿಕ್ಷಕರಿಂದ ಡಿಫರೆಂಟ್ ಕ್ಯಾಂಪೇನ್
ಮೋದಿ ತಾತ ಕೊಟ್ಟ ನವಿಲುಗರಿ ಹಿಡಿದು ಕುಣಿದಾಡಿದ ಜೆಡಿ ವ್ಯಾನ್ಸ್ ಮಕ್ಕಳು
ಮೋದಿ ತಾತ ಕೊಟ್ಟ ನವಿಲುಗರಿ ಹಿಡಿದು ಕುಣಿದಾಡಿದ ಜೆಡಿ ವ್ಯಾನ್ಸ್ ಮಕ್ಕಳು
ಓಂ ಪ್ರಕಾಶ್​ ಹತ್ಯೆ: ಏನಿದು ಸ್ಕಿಜೋಫ್ರೇನಿಯಾ ರೋಗ? ಎಷ್ಟು ಡೇಂಜರ್​?
ಓಂ ಪ್ರಕಾಶ್​ ಹತ್ಯೆ: ಏನಿದು ಸ್ಕಿಜೋಫ್ರೇನಿಯಾ ರೋಗ? ಎಷ್ಟು ಡೇಂಜರ್​?
ಕಾರು ಅಡ್ಡಗಟ್ಟಿ ಮಧ್ಯದ ಬೆರಳು ತೋರಿಸಿ ನಿಂದಿನಿಸಿದ ಆಟೋ ಚಾಲಕ
ಕಾರು ಅಡ್ಡಗಟ್ಟಿ ಮಧ್ಯದ ಬೆರಳು ತೋರಿಸಿ ನಿಂದಿನಿಸಿದ ಆಟೋ ಚಾಲಕ