AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೋಳಿ ಆಟದ ನಡುವೆ ಪರಸ್ಪರ ಚಪ್ಪಲಿ ಎಸೆದುಕೊಂಡ ಜನತೆ: ವಿಚಿತ್ರ ಹೋಳಿ ಆಚರಣೆಯ ವಿಡಿಯೋ ವೈರಲ್​

ಬಿಹಾರದ ಪಾಟ್ನಾದಲ್ಲಿ ಪರಸ್ಪರ ಚಪ್ಪಲಿ ಎಸೆದುಕೊಂಡು ಹೋಳಿ ಹಬ್ಬವನ್ನು ಆಚರಿಸಲಾಗಿದೆ. ಇದರ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿದೆ.

ಹೋಳಿ ಆಟದ ನಡುವೆ ಪರಸ್ಪರ ಚಪ್ಪಲಿ ಎಸೆದುಕೊಂಡ ಜನತೆ: ವಿಚಿತ್ರ ಹೋಳಿ ಆಚರಣೆಯ ವಿಡಿಯೋ ವೈರಲ್​
ಚಪ್ಪಲಿ ಎಸೆದುಕೊಂಡು ಹೋಳಿ ಆಚರಣೆ
TV9 Web
| Edited By: |

Updated on: Mar 18, 2022 | 12:34 PM

Share

ಇಂದು ದೇಶದಾದ್ಯಂತ ರಂಗಿನಾಟ ಹೋಳಿ (Holi)  ಹಬ್ಬದ ಸಂಭ್ರಮ. ಪರಸ್ಪರ ಬಣ್ಣಗಳನ್ನು ಎರಚಿಕೊಂಡು  ಹಬ್ಬ ಆಚರಿಸಲಾಗಿತ್ತಿದೆ. ಹೋಳಿ ಎಂದರೆ ಸಿಹಿ ಹಂಚಿ, ಹೊಸ ಬಟ್ಟೆ ತೊಟ್ಟು ಖುಷಿಯಿಂದ ಆಚರಿಸಲಾಗುತ್ತದೆ. ದೇಶದ ವಿವಿದೆಡೆ ವಿವಿಧ ರೀತಿಯಲ್ಲಿ ಹೋಳಿಯನ್ನು ಆಚರಿಸಲಾಗುತ್ತದೆ. ವಿಜಯದ ಸಂಕೇತವಾದ ಈ ಹಬ್ಬವನ್ನು ಶೃದ್ಧೆಯಿಂದ ಆಚರಿಸಲಾಗುತ್ತದೆ. ಆದರೆ ಬಿಹಾರದ ಪಾಟ್ನಾದಲ್ಲಿ ಪರಸ್ಪರ ಚಪ್ಪಲಿ (slippers) ಎಸೆದುಕೊಂಡು ಹೋಳಿ ಹಬ್ಬವನ್ನು ಆಚರಿಸಲಾಗಿದೆ. ಇದನ್ನು ಚಪ್ಪಲ್​ ಮಾರ್​ ಹೋಳಿ (Chappal Maar Holi) ಎಂದು ಕರೆಯಲಾಗಿದೆ. ಇದರ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿದೆ.

ಬಿಹಾರದ ಪಾಟ್ನಾದ ವಾಟರ್ ಪಾರ್ಕ್‌ನಲ್ಲಿ ಹೋಳಿ ಆಡಲು ಜನರು ಪರಸ್ಪರ ಚಪ್ಪಲಿ ಎಸೆಯಲು ಪ್ರಾರಂಭಿಸಿದಾಗ ಸಂಭ್ರಮಾಚರಣೆ ತೀವ್ರ ಸ್ವರೂಪ ಪಡೆದುಕೊಂಡಿತ್ತು. ಮಾರ್ಚ್​ 17 ರಂದು ನಡೆದ ಛೋಟಿ ಹೋಳಿವೇಳೆ ವಾಟರ್​ ಪಾರ್ಕ್​ನಲ್ಇ ನೂರಾರು ಚಪ್ಪಲಿಗಳು ಗಾಳಿಯಲ್ಲಿ ಹಾರಾಡುತ್ತಿರುವ ದೃಶ್ಯಗಳ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿದೆ. ವೀಡಿಯೊದಲ್ಲಿ ಜನ  ವಾಟರ್ ಪಾರ್ಕ್‌ಗೆ ಭೇಟಿ ನೀಡಿ ವಾಟರ್ ಸ್ಲೈಡ್‌ಗಳ ಬಳಿ ಬಣ್ಣದ ನೀರಿನ ಬೃಹತ್ ಕೊಳದಲ್ಲಿ ಚಪ್ಪಲಿ ಎಸೆಯುತ್ತಾ ಆಡುತ್ತಿರುವುದನ್ನು ಕಾಣಬಹುದು. ಒಬ್ಬರಿಗೊಬ್ಬರು ಬಣ್ಣ ಹಚ್ಚಿದ ನಂತರ ಜನರು ಪರಸ್ಪರ ಚಪ್ಪಲಿ ಎಸೆಯಲು ಆರಂಭಿಸಿದರು. ಚಪ್ಪಲ್ ಮಾರ್ ಹೋಳಿ (ಚಪ್ಪಲಿ ಏಟಿನ ಹೋಳಿ) ಎನ್ನುವ ಆಟವನ್ನು ಆಡುವಾಗ ಜನರು ಒಬ್ಬರನ್ನೊಬ್ಬರು ಗುರಿಯಾಗಿಸಿಕೊಂಡು ಚಪ್ಪಲಿಗಳನ್ನು ಎಸೆಯುವುದನ್ನು ಕಾಣಬಹುದು. ಬಣ್ಣದ ನೀರಿನಲ್ಲಿ ಹಲವು ಚಪ್ಪಲಿಗಳು ತೇಲುತ್ತಿರುವುದನ್ನು ಕಾಣಬಹುದಾಗಿದೆ.

ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆದ ವಿಡಿಯೋ 36 ಸಾವಿರಕ್ಕೂ ಹೆಚ್ಚು ವೀಕ್ಷಣೆ ಪಡೆದಿದೆ. ಇದರ ವಿಡಿಯೋವನ್ನು ಸುದ್ದಿ ಸಂಸ್ಥೆ ಎಎನ್​ಐ ಹಂಚಿಕೊಂಡಿದ್ದು ಸಿಕ್ಕಾಪಟ್ಟೆ ವೈರಲ್​ ಆಗಿದೆ.

ಇದನ್ನೂ ಓದಿ:

Viral Video: ಸಂಬಳ ಕಡಿಮೆ ಎಂದು ವರ್ಕ್​ ಫ್ರಾಮ್ ಹೋಮ್​​ನಲ್ಲಿಯೂ ಆಫೀಸ್​ನಲ್ಲಿ ಬಂದು ಉಳಿದುಕೊಂಡ ವ್ಯಕ್ತಿ

Follow Us
ಮಡಿಕೇರಿ-ಕೊಡಗು ಭಾಗದಲ್ಲಿ ಕಾಫಿ ಬೆಳೆಗಾರರಿಗೆ ಎದುರಾಯ್ತು ಹೊಸ ತಲೆನೋವು
ಮಡಿಕೇರಿ-ಕೊಡಗು ಭಾಗದಲ್ಲಿ ಕಾಫಿ ಬೆಳೆಗಾರರಿಗೆ ಎದುರಾಯ್ತು ಹೊಸ ತಲೆನೋವು
ಮಂಗಳೂರಿನಲ್ಲಿ ಆಹಾರ ಪರೀಕ್ಷಾ ಲ್ಯಾಬ್‌ನ ಅಗತ್ಯ
ಮಂಗಳೂರಿನಲ್ಲಿ ಆಹಾರ ಪರೀಕ್ಷಾ ಲ್ಯಾಬ್‌ನ ಅಗತ್ಯ
ಬೆಂಗಳೂರಿನ 2ನೇ ವಿಮಾನ ನಿಲ್ದಾಣಕ್ಕೆ ಹಾರೋಹಳ್ಳಿಯಲ್ಲಿ ಸ್ಥಳ ಪರಿಶೀಲನೆ
ಬೆಂಗಳೂರಿನ 2ನೇ ವಿಮಾನ ನಿಲ್ದಾಣಕ್ಕೆ ಹಾರೋಹಳ್ಳಿಯಲ್ಲಿ ಸ್ಥಳ ಪರಿಶೀಲನೆ
ಹನೂರು ಪ್ರಕರಣ: ಗೃಹ ಪ್ರವೇಶದ ಸಂಭ್ರಮ ತುಂಬಿರಬೇಕಿದ್ದ ಮನೆಯಲ್ಲೀಗ ಸೂತಕ!
ಹನೂರು ಪ್ರಕರಣ: ಗೃಹ ಪ್ರವೇಶದ ಸಂಭ್ರಮ ತುಂಬಿರಬೇಕಿದ್ದ ಮನೆಯಲ್ಲೀಗ ಸೂತಕ!
ನಿಮ್ಮ ಕನಸಿನ ಮನೆ ಅಥವಾ ಆಸ್ತಿಯನ್ನು ಖರೀದಿಸುವ ಸುವರ್ಣಾವಕಾಶ ಈಗ ನಿಮ್ಮದು
ನಿಮ್ಮ ಕನಸಿನ ಮನೆ ಅಥವಾ ಆಸ್ತಿಯನ್ನು ಖರೀದಿಸುವ ಸುವರ್ಣಾವಕಾಶ ಈಗ ನಿಮ್ಮದು
ಬೆಂಗಳೂರಿನಲ್ಲಿ ಕಾರಿನಲ್ಲಿ ಸಾಗಿಸುತ್ತಿದ್ದ 9 ಕೋಟಿ ರೂ. ನಗದು ಜಪ್ತಿ
ಬೆಂಗಳೂರಿನಲ್ಲಿ ಕಾರಿನಲ್ಲಿ ಸಾಗಿಸುತ್ತಿದ್ದ 9 ಕೋಟಿ ರೂ. ನಗದು ಜಪ್ತಿ
ಶ್ರೀರಂಗಪಟ್ಟಣದ ಚಾಮುಂಡೇಶ್ವರಿಗೆ 3 ಲಕ್ಷ ರೂಪಾಯಿ ನೋಟುಗಳ ವಿಶೇಷ ಅಲಂಕಾರ
ಶ್ರೀರಂಗಪಟ್ಟಣದ ಚಾಮುಂಡೇಶ್ವರಿಗೆ 3 ಲಕ್ಷ ರೂಪಾಯಿ ನೋಟುಗಳ ವಿಶೇಷ ಅಲಂಕಾರ
ಹುಬ್ಬಳ್ಳಿ ಲಕ್ಷ್ಮೀ ದೇವಸ್ಥಾನದಲ್ಲಿ ಭಕ್ತರ ದಂಡು, ವಿಶೇಷ ಅಲಂಕಾರ
ಹುಬ್ಬಳ್ಳಿ ಲಕ್ಷ್ಮೀ ದೇವಸ್ಥಾನದಲ್ಲಿ ಭಕ್ತರ ದಂಡು, ವಿಶೇಷ ಅಲಂಕಾರ
ಶೇಷಾದ್ರಿಪುರಂ ಮಹಾಲಕ್ಷ್ಮೀ ದೇವಾಲಯದಲ್ಲಿ ಸಡಗರದ ಪೂಜೆ
ಶೇಷಾದ್ರಿಪುರಂ ಮಹಾಲಕ್ಷ್ಮೀ ದೇವಾಲಯದಲ್ಲಿ ಸಡಗರದ ಪೂಜೆ
ಗೊರವನಹಳ್ಳಿ ಮಹಾಲಕ್ಷ್ಮೀ ದೇವಾಲಯದಲ್ಲಿ ವರಮಹಾಲಕ್ಷ್ಮೀ ಹಬ್ಬದ ಸಂಭ್ರಮ
ಗೊರವನಹಳ್ಳಿ ಮಹಾಲಕ್ಷ್ಮೀ ದೇವಾಲಯದಲ್ಲಿ ವರಮಹಾಲಕ್ಷ್ಮೀ ಹಬ್ಬದ ಸಂಭ್ರಮ