AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶ್ರೀಲಂಕಾ: ಬಸ್​ ಒಳಗೆ ಜಾಗ ಇಲ್ಲ ಅಂತ ವಿದ್ಯಾರ್ಥಿಗಳು ಎಲ್ಲೆಲ್ಲಿ ಕೂತು ಪ್ರಯಾಣಿಸುತ್ತಿದ್ದಾರೆ ನೋಡಿ

ಶ್ರೀಲಂಕಾದಲ್ಲಿ ಪ್ರಯಾಣಿಕರು ಬಸ್​​ನಲ್ಲಿ ಕುಳಿತುಕೊಳ್ಳಲು ಜಾಗವಿಲ್ಲದೆ ಬಾಗಿಲು ಮತ್ತು ಕಿಟಕಿಗಳಲ್ಲಿ ನೇತಾಡುತ್ತಿದ್ದಾರೆ.

ಶ್ರೀಲಂಕಾ: ಬಸ್​ ಒಳಗೆ ಜಾಗ ಇಲ್ಲ ಅಂತ ವಿದ್ಯಾರ್ಥಿಗಳು ಎಲ್ಲೆಲ್ಲಿ ಕೂತು ಪ್ರಯಾಣಿಸುತ್ತಿದ್ದಾರೆ ನೋಡಿ
ಶ್ರೀಲಂಕಾ ಬಸ್​​
TV9 Web
| Edited By: |

Updated on:Jun 29, 2022 | 11:13 PM

Share

ಶ್ರೀಲಂಕಾ: ಶ್ರೀಲಂಕಾದಲ್ಲಿ (Shrilanka) ಆರ್ಥಿಕತೆ (Economic)  ಸಂಪೂರ್ಣವಾಗಿ ಕುಸಿದಿದ್ದು, ಜನರು ಆಹಾರ, ಇಂಧನ (Oil) ಮತ್ತು ಇತರ ಅಗತ್ಯ ವಸ್ತುಗಳನ್ನು ಖರೀದಿಸಲು ಹೆಣಗಾಡುತ್ತಿದ್ದಾರೆ.  ಹಾಗೆ ದೇಶದಲ್ಲಿ ರಾಜಕೀಯ ಅಶಾಂತಿ ಮತ್ತು ಹಿಂಸಾಚಾರ ಬುಗಿಲೆದ್ದಿದೆ. ಶ್ರೀಲಂಕಾ ಪ್ರವಾಸೋದ್ಯಮವನ್ನು ಅವಲಂಬಿಸಿದೆ. ಆದರೆ ಕರೊನಾ ಮಹಾಮಾರಿ ಮತ್ತು 2019 ರಲ್ಲಿ ನಡೆದ ಭಯೋತ್ಪಾದಕರ ದಾಳಿಯಿಂದ ಪ್ರವಾಸೋದ್ಯಮ ಮೇಲೆ ದೊಡ್ಡ ಪ್ರಮಾಣದ ಹೊಡೆತ ಬಿದ್ದಿದೆ. ಶ್ರೀಲಂಕಾದಲ್ಲಿ ಜನರು ಅಡುಗೆ ಅನಿಲ ಮತ್ತು ಪೆಟ್ರೋಲ್‌ ಖರೀದಿಗೆ  ದಿನಗಟ್ಟಲೆ ಕಾಯುತ್ತಿದ್ದಾರೆ.  ಪೆಟ್ರೋಲ್ ಸಿಗದೆ ಕೆಲ ಜನರು ವಾಹನ ಚಲಾಯಿಸುವುದನ್ನು ಬಿಟ್ಟು ಸೈಕಲ್​​ನಲ್ಲಿ ಸಂಚರಿಸುತ್ತಿದ್ದಾರೆ.

ಸದ್ಯ ಶ್ರೀಲಂಕಾದಲ್ಲಿ ವಿದ್ಯಾರ್ಥಿಗಳನ್ನು ತುಂಬಿಕೊಂಡ  ಕೆಂಪು ಬಸ್​​ನ ವಿಡಿಯೋ ಸಾಮಾಜಿಕ  ಜಾಲತಾಣದಲ್ಲಿ ವೈರಲ್​ ಆಗಿದೆ.  ಬಸ್‌ನಲ್ಲಿ ಜನರನ್ನು ಕುರಿ ತುಂಬಿದ ಹಾಗೆ ತುಂಬಿದ್ದಾರೆ.  ಕಾರಣ  ವಿಪರೀತ ಇಂಧನ ಕೊರತೆ. ಬಸ್​​ನಲ್ಲಿ ಕುಳಿತುಕೊಳ್ಳಲು ಜಾಗವಿಲ್ಲದೆ ವಿದ್ಯಾರ್ಥಿಗಳು ಬಾಗಿಲು ಮತ್ತು ಕಿಟಕಿಗಳಲ್ಲಿ ನೇತಾಡುತ್ತಿದ್ದಾರೆ. ಇದನ್ನು ಹೊರತುಪಡಿಸಿ ಹಲವಾರು ವಿದ್ಯಾರ್ಥಿಗಳು ಬಸ್‌ನ ಹಿಂಭಾಗದಲ್ಲಿರುವ ಲಗೇಜ್ ಇಡುವ ಜಾಗದಲ್ಲಿ ಕುಳಿತಿದ್ದಾರೆ. ಇದನ್ನು ಬಸ್ ಹಿಂದೆ ಚಲಾಯಿಸುತ್ತಿದ್ದ ಬೈಕ್ ಸವಾರನೊಬ್ಬ ವಿಡಿಯೋ ಮಾಡಿದ್ದಾನೆ. ವಿಡಿಯೋ ಟ್ವಿಟರ್‌ನಲ್ಲಿ 42 ಸಾವಿರ ವೀಕ್ಷಣೆಗಳೊಂದಿಗೆ ವೈರಲ್ ಆಗುತ್ತಿದೆ.

Published On - 11:13 pm, Wed, 29 June 22

ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ