AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮನೆಯಲ್ಲೇ ಆಕ್ಸಿಜನ್​ ತಯಾರಿಸಿ ಅಪಾಯ ಎದುರಿಸಬೇಡಿ: ತಜ್ಞರು

ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ವಿಡಿಯೋ ನೋಡಿದ ಜನರು ಮನೆಯಲ್ಲಿಯೇ ಅಕ್ಸಿಜನ್​ ತಯಾರಿಕೆಗೆ ಮುಂದಾಗಿದ್ದಾರೆ. ಈ ಕುರಿತಂತೆ ಭೀಕರ ಅಪಾಯವನ್ನು ಎದುರಿಸುತ್ತೀರಿ ಎಂದು ತಜ್ಞರು ಎಚ್ಚರಿಕೆ ನೀಡಿದ್ದಾರೆ.

ಮನೆಯಲ್ಲೇ ಆಕ್ಸಿಜನ್​ ತಯಾರಿಸಿ ಅಪಾಯ ಎದುರಿಸಬೇಡಿ: ತಜ್ಞರು
ಪ್ರಾತಿನಿಧಿಕ ಚಿತ್ರ
shruti hegde
|

Updated on: May 11, 2021 | 5:13 PM

Share

ಭಾರತ ದೇಶದಲ್ಲಿ ಕೊರೊನಾ ಸೋಂಕು ವ್ಯಾಪಕವಾಗಿ ಹರಡುತ್ತಿದೆ. ಈ ಸಂದರ್ಭದಲ್ಲಿ ಆಕ್ಸಿಜನ್​ ಕೊರತೆ ಕಂಡು ಬರುತ್ತಿದೆ. ಹೀಗಿರುವಾಗ ಮನೆಯಲ್ಲಿಯೇ ಆಮ್ಲಜನಕ ತಯಾರಿಕೆಯ ಪ್ರಯತ್ನಕ್ಕೆ ಮುಂದಾಗಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ವಿಡಿಯೋ ನೋಡಿದ ಜನರು ಮನೆಯಲ್ಲಿಯೇ ಅಕ್ಸಿಜನ್​ ತಯಾರಿಕೆಗೆ ಮುಂದಾಗಿದ್ದಾರೆ. ಈ ಕುರಿತಂತೆ ಭೀಕರ ಅಪಾಯವನ್ನು ಎದುರಿಸುತ್ತೀರಿ ಎಂದು ತಜ್ಞರು ಎಚ್ಚರಿಕೆ ನೀಡಿದ್ದಾರೆ.

ಸಾಮಾಜಿಕ ಜಾಲತಾಣಗಳಾದ ಯೂಟ್ಯೂಬ್​ ಮತ್ತು ಫೆಸ್​ಬುಕ್​ಗಳಲ್ಲಿ ಮನೆಯಲ್ಲಿಯೇ ಆಕ್ಸಿಜನ್​ ತಯಾರಿಸುವ ಕುರಿತಾದ ಮಾಹಿತಿಗಳು ಹರಿದಾಡುತ್ತಿದೆ. ಡಿಐವೈ ಆಕ್ಸಿಜನ್​ ಸಾಂದ್ರತೆ ವಿಧಾನದ ಮೂಲಕ ಆಕ್ಸಿಜನ್​ ತಯಾರಿಸುವ ರೀತಿ ಕೂಡಾ ಈಗಾಗಲೇ ಜನರ ಮಾತಿಗೆ ಕಾರಣವಾಗಿದೆ. ಹಾಗೂ ಇಂತಹ ವಿಷಯಕ್ಕೆ ಸಂಬಂಧಿಸಿದ ವಿಡಿಯೋಗಳು ಲಕ್ಷಾಂತರ ವೀಕ್ಷಣೆ ಪಡೆದುಕೊಂಡಿದೆ. ಹೀಗಾಗಿ ವೈದ್ಯರು ಈ ಕುರಿತಂತೆ ಅಪಾಯದ ಆತಂಕ ಹೊರಹಾಕಿದ್ದಾರೆ.

ಮನೆಯಲ್ಲಿಯೇ ಆಮ್ಲಜನಕ ತಯಾರಿಸುವ ಪ್ರಯತ್ನಗಳು ವಿಶ್ವಾಸಾರ್ಹವಲ್ಲದ ವಿಧಾನಗಳಾಗಿವೆ ಎಂಬುದು ವೈದ್ಯರ ಅಭಿಪ್ರಾಯ. ಭಾರತವು ಆಮ್ಲಜನಕದ ಸರಬರಾಜನ್ನು ಹುಡುಕಲು ಪರದಾಡುತ್ತಿದೆ. ಅನೇಕ ಆಸ್ಪತ್ರೆಗಳು ಆಮ್ಲಜನಕವಿಲ್ಲ ಎಂಬ ಕಾರಣಕ್ಕೆ ರೋಗಿಗಳನ್ನು ದೂರವಿಡುತ್ತಿದೆ. ಕೊರೊನಾ ವೈರಸ್​ ಗುಣಪಡಿಸುವ ಕುರಿತಾಗಿ ಪೊಳ್ಳು ವಿಡಿಯೋಗಳು ಸಾಮಾಜಿಕ ಜಾಲತಾಣದಲ್ಲಿ ಹೆಚ್ಚುತ್ತಿದೆ. ಈ ವಿಡಿಯೋಗಳನ್ನು ನೀಡಿ ಆ ಕುರಿತು ಮೊರೆ ಹೋಗಬೇಡಿ ಎಮದು ವೈದ್ಯರು ಸೂಚನೆ ನೀಡಿದ್ದಾರೆ.

ಇದನ್ನೂ ಓದಿ: ಮಾತೃಭೂಮಿಗೆ ಆಕ್ಸಿಜನ್​ ಸಿಲಿಂಡರ್​ ಕಳುಹಿಸಿಕೊಟ್ಟ ಅರಬ್​ ದೇಶದ ಹಿಂದೂ ಮುಖಂಡರು

ಸಿರಿಯಾ ಮೇಲೆ ಇಸ್ರೇಲ್ ದಾಳಿ; ಲೈವ್ ಮಧ್ಯದಲ್ಲೇ ಓಡಿಹೋದ ಟಿವಿ ನಿರೂಪಕಿ
ಸಿರಿಯಾ ಮೇಲೆ ಇಸ್ರೇಲ್ ದಾಳಿ; ಲೈವ್ ಮಧ್ಯದಲ್ಲೇ ಓಡಿಹೋದ ಟಿವಿ ನಿರೂಪಕಿ
ಸಂಧಾನದ ಮಾತು ನಡೆಯುವ ಬಗ್ಗೆ ನಿನ್ನೆ ವಿಜಯೇಂದ್ರ ಸುಳಿವು ನೀಡಿದ್ದರು
ಸಂಧಾನದ ಮಾತು ನಡೆಯುವ ಬಗ್ಗೆ ನಿನ್ನೆ ವಿಜಯೇಂದ್ರ ಸುಳಿವು ನೀಡಿದ್ದರು
ನಾನು ಮಂಗಳೂರು ಹುಡುಗಿ: ಹೆಮ್ಮೆಯಿಂದ ಹೇಳಿದ ಜೆನಿಲಿಯಾ ಡಿಸೋಜಾ
ನಾನು ಮಂಗಳೂರು ಹುಡುಗಿ: ಹೆಮ್ಮೆಯಿಂದ ಹೇಳಿದ ಜೆನಿಲಿಯಾ ಡಿಸೋಜಾ
ಸಿಗಂದೂರು ತೂಗು ಸೇತುವೆ ಮೇಲೆ ಸಂಚರಿಸುವುದೇ ಏನೋ ಒಂಥರಾ ಸಂತೋಷ, ಉಲ್ಲಾಸ
ಸಿಗಂದೂರು ತೂಗು ಸೇತುವೆ ಮೇಲೆ ಸಂಚರಿಸುವುದೇ ಏನೋ ಒಂಥರಾ ಸಂತೋಷ, ಉಲ್ಲಾಸ
ಸಾರಿಗೆ ನೌಕರರಿಗೆ 38 ತಿಂಗಳುಗಳ ಹಿಂಬಾಕಿ ಸರ್ಕಾರ ಕೊಡಬೇಕಿದೆ: ಸುಬ್ಬಾರಾವ್
ಸಾರಿಗೆ ನೌಕರರಿಗೆ 38 ತಿಂಗಳುಗಳ ಹಿಂಬಾಕಿ ಸರ್ಕಾರ ಕೊಡಬೇಕಿದೆ: ಸುಬ್ಬಾರಾವ್
ನಿಗಮಗಳಿಗೆ ಸದಸ್ಯರ ನೇಮಕಾತಿ ಶೀಘ್ರದಲ್ಲಿ ನಡೆಯಲಿದೆ: ಪರಮೇಶ್ವರ್
ನಿಗಮಗಳಿಗೆ ಸದಸ್ಯರ ನೇಮಕಾತಿ ಶೀಘ್ರದಲ್ಲಿ ನಡೆಯಲಿದೆ: ಪರಮೇಶ್ವರ್
ಚಾಮುಂಡಿ ತಾಯಿ ಆಶೀರ್ವಾದ ಪಡೆದ ದೊಡ್ಮನೆ ಹುಡುಗ್ರು
ಚಾಮುಂಡಿ ತಾಯಿ ಆಶೀರ್ವಾದ ಪಡೆದ ದೊಡ್ಮನೆ ಹುಡುಗ್ರು
ನಾನು ನೀಡಿದ ಚೆಕ್​ಗಳು ಬೌನ್ಸ್ ಆಗುವ ಚಾನ್ಸೇ ಇಲ್ಲ ಎಂದ ಕೆಜಿಎಫ್ ಬಾಬು
ನಾನು ನೀಡಿದ ಚೆಕ್​ಗಳು ಬೌನ್ಸ್ ಆಗುವ ಚಾನ್ಸೇ ಇಲ್ಲ ಎಂದ ಕೆಜಿಎಫ್ ಬಾಬು
ಬಾಲಸೋರ್​​ನಲ್ಲಿ ಬೃಹತ್ ಪ್ರತಿಭಟನೆ; ಪೊಲೀಸರಿಂದ ಜಲಫಿರಂಗಿ ಪ್ರಯೋಗ
ಬಾಲಸೋರ್​​ನಲ್ಲಿ ಬೃಹತ್ ಪ್ರತಿಭಟನೆ; ಪೊಲೀಸರಿಂದ ಜಲಫಿರಂಗಿ ಪ್ರಯೋಗ
ಮುಂಬೈನಲ್ಲಿ ಟೆಸ್ಲಾ ಕಾರು ಚಲಾಯಿಸಿದ ಡಿಸಿಎಂ ಏಕನಾಥ್ ಶಿಂಧೆ
ಮುಂಬೈನಲ್ಲಿ ಟೆಸ್ಲಾ ಕಾರು ಚಲಾಯಿಸಿದ ಡಿಸಿಎಂ ಏಕನಾಥ್ ಶಿಂಧೆ