AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Photo Viral: ಬೆಂಗಳೂರು ಮಾಲ್​​​​ಗಳ ಪಾರ್ಕಿಂಗ್​​ ಸ್ಥಳಗಳಲ್ಲಿ ಎಲೆಕ್ಟ್ರಿಕ್ ವಾಹನಗಳಿಗೆ ಅವಕಾಶ ಇಲ್ಲ, ಯಾಕೆ?

ಬೆಂಗಳೂರು ದೊಡ್ಡ ದೊಡ್ಡ ಮಾಲ್​​ಗಳಲ್ಲಿ ವಾಹನಗಳಿಗೆ ಬಹುಮಹಡಿ ಪಾರ್ಕಿಂಗ್ ಸೌಲಭ್ಯ ಇದೆ ಆದರೆ ಎಲೆಕ್ಟ್ರಿಕ್ ವಾಹನಗಳಿಗೆ ಪಾರ್ಕಿಂಗ್ ವ್ಯವಸ್ಥೆಗಳು ಇಲ್ಲ ಎಂದು ಬೆಂಗಳೂರು ಮೂಲದ ಛಾಯಾಗ್ರಾಹಕರೊಬ್ಬರು ಎಕ್ಸ್​​​ನಲ್ಲಿ ಫೋಟೋವೊಂದನ್ನು ಹಂಚಿಕೊಂಡಿದ್ದಾರೆ. ಎಲೆಕ್ಟ್ರಿಕ್ ವಾಹನಗಳಿಗೆ (ಇವಿ) ಪ್ರತ್ಯೇಕ ಪಾರ್ಕಿಂಗ್ ಸ್ಥಳಗಳನ್ನು ನೀಡಲಾಗಿದೆ

Photo Viral: ಬೆಂಗಳೂರು ಮಾಲ್​​​​ಗಳ ಪಾರ್ಕಿಂಗ್​​ ಸ್ಥಳಗಳಲ್ಲಿ ಎಲೆಕ್ಟ್ರಿಕ್ ವಾಹನಗಳಿಗೆ ಅವಕಾಶ ಇಲ್ಲ, ಯಾಕೆ?
Follow us
ಅಕ್ಷಯ್​ ಪಲ್ಲಮಜಲು​​
|

Updated on:Mar 26, 2024 | 11:45 AM

ಬೆಂಗಳೂರು ಮಾಲ್​​​​ಗಳ ವಿರೋಧ ಇವಿ ಚಾಲಕರು ಅಕ್ರೋಶ ವ್ಯಕ್ತಪಡಿಸಿದ್ದಾರೆ. ಬೆಂಗಳೂರು ದೊಡ್ಡ ದೊಡ್ಡ ಮಾಲ್​​ಗಳಲ್ಲಿ ವಾಹನಗಳಿಗೆ ಬಹುಮಹಡಿ ಪಾರ್ಕಿಂಗ್ ಸೌಲಭ್ಯ ಇದೆ ಆದರೆ ಎಲೆಕ್ಟ್ರಿಕ್ ವಾಹನಗಳಿಗೆ ಪಾರ್ಕಿಂಗ್ ವ್ಯವಸ್ಥೆಗಳು ಇಲ್ಲ ಎಂದು ಬೆಂಗಳೂರು ಮೂಲದ ಛಾಯಾಗ್ರಾಹಕರೊಬ್ಬರು ಎಕ್ಸ್​​​ನಲ್ಲಿ ಫೋಟೋವೊಂದನ್ನು ಹಂಚಿಕೊಂಡಿದ್ದಾರೆ. ಎಲೆಕ್ಟ್ರಿಕ್ ವಾಹನಗಳಿಗೆ (ಇವಿ) ಪ್ರತ್ಯೇಕ ಪಾರ್ಕಿಂಗ್ ಸ್ಥಳಗಳನ್ನು ನೀಡಲಾಗಿದೆ ಎಂದು ಹೇಳಿದ್ದಾರೆ.

ಮಾಲ್​​​ನ ಈ ಕ್ರಮ ಇವಿ ಚಾಲಕರಿಗೆ ಭಯವನ್ನು ಉಂಟು ಮಾಡಿದೆ. ನಿಶಾಂತ್ ರತ್ನಾಕರ್ ಅವರು ದಕ್ಷಿಣ ಬೆಂಗಳೂರು ಮಾಲ್‌ನಲ್ಲಿ ಇವಿಗಳಿಗಾಗಿ ಹೊರಾಂಗಣ ಪಾರ್ಕಿಂಗ್ ಸ್ಥಳಗಳನ್ನು ನೀಡಲಾಗಿದೆ ಎಂದು ಎಕ್ಸ್​​ನಲ್ಲಿ ಹೇಳಿದ್ದಾರೆ. ಎಲೆಕ್ಟ್ರಿಕ್ ವೆಹಿಕಲ್ ಪಾರ್ಕಿಂಗ್ ವಲಯ ಎಂಬ ಬೋರ್ಡ್​​​​ ಕೂಡ ಹಾಕಲಾಗಿದೆ. ಇದು Irrational fear psychosis ಎಂದು ಎಕ್ಸ್​​​​ನಲ್ಲಿ ಟ್ವೀಟ್​​​ ಮಾಡಿದ್ದಾರೆ. ಎಲೆಕ್ಟ್ರಿಕ್ ವಾಹನಗಳಿಗೆ ಸಂಬಂಧಿಸಿದಂತೆ ಕೆಲವು ಕೆಟ್ಟ ಕ್ರಮಗಳನ್ನು ಮಾಲ್​​​​ಗಳು ತೆಗೆದುಕೊಂಡಿದೆ ಎಂದು ಹೇಳಿದ್ದಾರೆ.

ಮಾಲ್​​​ಗಳಲ್ಲಿ ಮಲ್ಟಿ ಲೆವೆಲ್ ಪಾರ್ಕಿಂಗ್ ಇರುವಾಗ EV ವಾಹನಗಳನ್ನು ಹೊರಗೆ ಬಿಸಿಲಿನಲ್ಲಿ ನಿಲುಗಡೆ ಮಾಡಲು ತಿಳಿಸಿರುವುದು ಇದೀಗ ಎಲ್ಲ ಅಕ್ರೋಶಕ್ಕೆ ಕಾರಣವಾಗಿದೆ. ಇತ್ತೀಚೆಗೆ ಇವಿಗಳನ್ನು ಸಾಗಿಸುವ ಟ್ರಕ್‌ನಲ್ಲಿ ಬೆಂಕಿ ಕಾಣಿಸಿಕೊಂಡ ಕಾರಣ ಮಾಲ್​​​ಗಳ ಪಾರ್ಕಿಂಗ್​​​​​ ಸ್ಥಳಗಳಲ್ಲಿ ಎಲೆಕ್ಟ್ರಿಕ್ ವೆಹಿಕಲ್ ನಿಲುಗಡೆಯಲ್ಲಿ ಮಾಡಲು ಅವಕಾಶ ಇಲ್ಲ ಎಂದು ಮಾಲ್​​ಗಳ ಸಿಬ್ಬಂದಿಗಳು ಹೇಳಿದ್ದಾರೆ.

ಎಲೆಕ್ಟ್ರಿಕ್ ವೆಹಿಕಲ್ ತಯಾರಕರು ಹಾಗೂ ಇವಿ ಸಂಸ್ಥಾಪಕರಾದ ತರುಣ್ ಮೆಹ್ತಾ ಮತ್ತು ಸ್ವಪ್ನಿಲ್ ಜೈನ್ ಅವರಿಗೆ ಅನೇಕ ಎಕ್ಸ್​​ ಬಳಕೆದಾರರು ಟ್ಯಾಗ್​​​ ಮಾಡಿದ್ದಾರೆ. ಎಲೆಕ್ಟ್ರಿಕ್ ವಾಹನಗಳ ಬಗ್ಗೆ ಇರುವ ತಪ್ಪು ಕಲ್ಪನೆ ತೆಗೆದು ಹಾಕಿ ಹಾಗೂ ಮಾಲ್‌ನ ಆಡಳಿತದೊಂದಿಗೆ ಮಾತನಾಡಿ ಎಂದು ತರುಣ್ ಮೆಹ್ತಾ ಮತ್ತು ಸ್ವಪ್ನಿಲ್ ಜೈನ್​​ಗೆ ಟ್ಯಾಗ್​​ ಮಾಡಿದ್ದಾರೆ.

ಇದನ್ನೂ ಓದಿ: ಅಯೋಧ್ಯೆಯಲ್ಲಿ ಮತ್ತೊಂದು ಪುಟ್ಟ ರಾಮಲಲ್ಲಾನ ವಿಗ್ರಹ ಕೆತ್ತಿದ ಶಿಲ್ಪಿ ಅರುಣ್ ಯೋಗಿರಾಜ್, ಫೋಟೋ ವೈರಲ್

ಇನ್ನು ಏಪ್ರಿಲ್ 2022 ರಲ್ಲಿ, ಕಂಪನಿಯ ಹೇಳಿಕೆಯ ಪ್ರಕಾರ, ದೇಶದ ವಿವಿಧ ಭಾಗಗಳಲ್ಲಿ ಇವಿ ವಾಹನಗಳಿಗೆ ಬೆಂಕಿ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಓಲಾ ಎಲೆಕ್ಟ್ರಿಕ್ ತನ್ನ 1,441 ಎಲೆಕ್ಟ್ರಿಕ್ ದ್ವಿಚಕ್ರ ವಾಹನಗಳನ್ನು ಹಿಂಪಡೆಯುವುದಾಗಿ ಹೇಳಿದೆ. ಒಕಿನಾವಾ ಆಟೋಟೆಕ್ ಸುಮಾರು 3,000 ವಾಹನಗಳನ್ನು ಹಿಂಪಡೆದಿದೆ. ಇನ್ನು ಇಂತಹ ಘಟನೆಗಳ ಬಗ್ಗೆ ಸರ್ಕಾರ ತನಿಖೆ ನಡೆಸುತ್ತಿದೆ. ಹಾಗೂ ಸರಿಯಾದ ಕ್ರಮ ತೆಗೆದುಕೊಳ್ಳದಿದ್ದಾರೆ ಇವಿ ಕಂಪನಿಗಳಿಗೆ ದಂಡ ವಿಧಿಸಲಾಗುವುದು ಎಂದು ಹೇಳಿದ್ದಾರೆ.

ಇನ್ನಷ್ಟು ವೈರಲ್ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Published On - 11:44 am, Tue, 26 March 24

ಸೋಪಿಗೆ ತಮನ್ನಾ ಭಾಟಿಯಾ ಏಕೆ ಬೇಡ, ಸ್ಪಷ್ಟ ಕಾರಣ ನೀಡಿದ ಸಂಸದ ಯದುವೀರ್
ಸೋಪಿಗೆ ತಮನ್ನಾ ಭಾಟಿಯಾ ಏಕೆ ಬೇಡ, ಸ್ಪಷ್ಟ ಕಾರಣ ನೀಡಿದ ಸಂಸದ ಯದುವೀರ್
ಆಡ್ತೀನಿ, ಆಡಲ್ಲ.. ಯಾವುದನ್ನು ಖಚಿತವಾಗಿ ಹೇಳಲಾರೆ ಎಂದ ಧೋನಿ
ಆಡ್ತೀನಿ, ಆಡಲ್ಲ.. ಯಾವುದನ್ನು ಖಚಿತವಾಗಿ ಹೇಳಲಾರೆ ಎಂದ ಧೋನಿ
ತಮ್ಮ ಅಭಿಮಾನಿ ಕುಟುಂಬಕ್ಕೆ 5 ಲಕ್ಷ ರೂ. ಸಹಾಯ ಮಾಡಿದ ಸಚಿವ ಜಮೀರ್
ತಮ್ಮ ಅಭಿಮಾನಿ ಕುಟುಂಬಕ್ಕೆ 5 ಲಕ್ಷ ರೂ. ಸಹಾಯ ಮಾಡಿದ ಸಚಿವ ಜಮೀರ್
ಸುದೀಪ್ ಕೈಗೆ ಗಾಯ, ಕಿಚ್ಚನ ಕೈಗೆ ಏನಾಯ್ತು? ಅಭಿಮಾನಿಗಳ ಪ್ರಶ್ನೆ
ಸುದೀಪ್ ಕೈಗೆ ಗಾಯ, ಕಿಚ್ಚನ ಕೈಗೆ ಏನಾಯ್ತು? ಅಭಿಮಾನಿಗಳ ಪ್ರಶ್ನೆ
ಬೆಂಗಳೂರು-ಮಂಗಳೂರು ರಸ್ತೆಯಲ್ಲಿ ಟ್ರಾಫಿಕ್ ಜಾಮ್​: ಬದಲಿ ಮಾರ್ಗ ಸೂಚನೆ
ಬೆಂಗಳೂರು-ಮಂಗಳೂರು ರಸ್ತೆಯಲ್ಲಿ ಟ್ರಾಫಿಕ್ ಜಾಮ್​: ಬದಲಿ ಮಾರ್ಗ ಸೂಚನೆ
ಅಯೋಧ್ಯೆಯಲ್ಲಿ ಶ್ರೀರಾಮನ ದರ್ಶನ ಪಡೆದ ವಿರಾಟ್ ಕೊಹ್ಲಿ-ಅನುಷ್ಕಾ ಶರ್ಮಾ
ಅಯೋಧ್ಯೆಯಲ್ಲಿ ಶ್ರೀರಾಮನ ದರ್ಶನ ಪಡೆದ ವಿರಾಟ್ ಕೊಹ್ಲಿ-ಅನುಷ್ಕಾ ಶರ್ಮಾ
ಚಿಕ್ಕಮಗಳೂರಿನಲ್ಲಿ ಮಳೆಗೆ ಸಾಲು ಸಾಲು ಅವಾಂತರ:ನದಿಗೆ ಬಿದ್ದ 2 ಕಾರುಗಳು
ಚಿಕ್ಕಮಗಳೂರಿನಲ್ಲಿ ಮಳೆಗೆ ಸಾಲು ಸಾಲು ಅವಾಂತರ:ನದಿಗೆ ಬಿದ್ದ 2 ಕಾರುಗಳು
ಕೂದಲು ಹಿಡಿದು ತಾಯಿಯನ್ನು ಮನಬಂದಂತೆ ಥಳಿಸಿದ ಸಾಕು ಮಗ
ಕೂದಲು ಹಿಡಿದು ತಾಯಿಯನ್ನು ಮನಬಂದಂತೆ ಥಳಿಸಿದ ಸಾಕು ಮಗ
ಮಡೆನೂರು ಮನು ವಿವಾದದಲ್ಲಿ ಅಪ್ಪಣ್ಣ ಹೆಸರು ಕೇಳಿಬಂದಿದ್ದಕ್ಕೆ ನಟನ ಸ್ಪಷ್ಟನೆ
ಮಡೆನೂರು ಮನು ವಿವಾದದಲ್ಲಿ ಅಪ್ಪಣ್ಣ ಹೆಸರು ಕೇಳಿಬಂದಿದ್ದಕ್ಕೆ ನಟನ ಸ್ಪಷ್ಟನೆ
ಭಾರಿ ಮಳೆಯಿಂದ ಶಿರಾಡಿ ಘಾಟ್​​ ರಸ್ತೆಯಲ್ಲಿ ಭೂ ಕುಸಿತ
ಭಾರಿ ಮಳೆಯಿಂದ ಶಿರಾಡಿ ಘಾಟ್​​ ರಸ್ತೆಯಲ್ಲಿ ಭೂ ಕುಸಿತ