AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮದುವೆಯಲ್ಲಿ ತನ್ನ ಬಗ್ಗೆ ವಿಚಾರಿಸಿಲ್ಲ ಎಂದು ಕೋಪಗೊಂಡ ಫೋಟೋಗ್ರಾಫರ್ ಮಾಡಿದ್ದೇನು ಗೊತ್ತಾ?

ಬೆಳಗ್ಗೆಯಿಂದ ಸಂಜೆ ತನಕ ನಿಂತುಕೊಂಡೆ ಮದುವೆಯ ಸುಂದರ ಫೋಟೋಗಳನ್ನುಗಳನ್ನು ಕ್ಲಿಕಿಸಿಕೊಳ್ಳುವವರೇ ಈ ಫೋಟೋಗ್ರಾಫರ್. ಆದರೆ ಮದುವೆ ಮನೆಯವರು ಅಥವಾ ಮದುವೆ ಮಂಟಪದಲ್ಲಿ ಈ ಫೋಟೋಗ್ರಾಫರ್ ಬಗ್ಗೆ ವಿಚಾರಿಸುವುದೇ ಇಲ್ಲ. ಆದರೆ ಇಲ್ಲೊಬ್ಬ ಫೋಟೋಗ್ರಾಫರ್ ಈ ವಿಚಾರವಾಗಿ ಸಿಟ್ಟುಗೊಂಡಿದ್ದು, ಮಾಡಿದ ಕೆಲಸ ತಿಳಿದರೆ ಅಚ್ಚರಿಯಾಗುತ್ತದೆ. ಈ ಕುರಿತಾದ ಸಂಪೂರ್ಣ ಮಾಹಿತಿ ಇಲ್ಲಿದೆ.

ಮದುವೆಯಲ್ಲಿ ತನ್ನ ಬಗ್ಗೆ ವಿಚಾರಿಸಿಲ್ಲ ಎಂದು ಕೋಪಗೊಂಡ ಫೋಟೋಗ್ರಾಫರ್ ಮಾಡಿದ್ದೇನು ಗೊತ್ತಾ?
ಸಾಂದರ್ಭಿಕ ಚಿತ್ರImage Credit source: Getty Images
ಸಾಯಿನಂದಾ
|

Updated on: May 11, 2025 | 6:47 PM

Share

ಎಲ್ಲರೂ ಕೂಡ ತಮ್ಮ ಮದುವೆ (marriage) ಕ್ಷಣಗಳನ್ನು ಸೆರೆಹಿಡಿಯಬೇಕೆಂದು ಅಂದುಕೊಂಡುತ್ತಾರೆ. ಹೀಗಾಗಿ ಎಷ್ಟೇ ಖರ್ಚು ಆದರೂ ಸರಿಯೇ ಚೆನ್ನಾಗಿ ಫೋಟೋ ತೆಗೆಯುವ ಫೋಟೋಗ್ರಾಫರ್ (photographer) ಗಳನ್ನು ಮದುವೆಗೆಂದೇ ಹೇಳುತ್ತಾರೆ. ಆದರೆ ಬೆಳಗ್ಗೆ ಯಿಂದ ಸಂಜೆ ನಿಂತುಕೊಂಡೆ ಕೆಲಸ ಮಾಡುವ ಈ ಫೋಟೋಗ್ರಾಫರ್ ಕಷ್ಟ ಕೇಳುವವರು ಯಾರು, ಅವರಿಗೂ ಕೂಡ ಕೋಪ ಅನ್ನೋದು ಬರುತ್ತದೆ. ಆದರೆ ಕೆಲವೊಮ್ಮೆ ಅವರ ಬಳಿ ಯಾರು ಕೂಡ ಊಟ ತಿಂಡಿ ಆಯ್ತಾ, ನೀರು ಬೇಕಾ ಎಂದು ಕೇಳುವುದಿಲ್ಲ. ಇದೀಗ ಇಲ್ಲೊಬ್ಬ ಫೋಟೋಗ್ರಾಫರ್ ಊಟ ನೀರು ಕೊಡಲಿಲ್ಲ, ತನ್ನ ಬಗ್ಗೆ ಯಾರು ಕೂಡ ವಿಚಾರಿಸಿಲ್ಲ ಎಂದು ಕೋಪಗೊಂಡಿದ್ದು ಮದುವೆಯ ಫೋಟೋಗಳನ್ನೆ ಡಿಲೀಟ್ ಮಾಡಿದ್ದಾನೆ ಎನ್ನಲಾಗಿದೆ. ಈ ಸುದ್ದಿಯೊಂದು ಸೋಶಿಯಲ್ ಮೀಡಿಯಾದಲ್ಲಿ ಭಾರಿ ಚರ್ಚೆಗೆ ಕಾರಣವಾಗಿದೆ.

Famous plus ಹೆಸರಿನ ಖಾತೆಯಲ್ಲಿ ಈ ಬಗೆಗಿನ ಪೋಸ್ಟ್ ವೊಂದನ್ನು ಶೇರ್ ಮಾಡಿಕೊಳ್ಳಲಾಗಿದೆ. ಈ ಘಟನೆಯ ಬಗ್ಗೆ ವಿವರವಾಗಿ ಬರೆಯಲಾಗಿದೆ.. ಫೋಟೊಗ್ರಾಫರ್ ತುಂಬಾ ಹೊತ್ತು ಪೋಟೊ ತೆಗೆದ ಕಾರಣ ಸುಸ್ತಾಗಿ ಸ್ವಲ್ಪ ಹೊತ್ತು ವಿಶ್ರಾಂತಿ ತೆಗೆದುಕೊಳ್ಳಲು ಮುಂದಾಗಿದ್ದಾನೆ. ಈ ವೇಳೆ ಯಲ್ಲಿ ವಧು ವರರ ಕಡೆಯವರ ಬಳಿ ಊಟ, ನೀರು ಕೊಡುವಂತೆ ಕೇಳಿಕೊಂಡಿದ್ದಾರೆ. ಆದರೆ ಮದುಮಕ್ಕಳ ಕಡೆಯವರು ಇವರ ಮಾತಿಗೆ ಯಾವುದೇ ಬೆಲೆ ಕೊಡಲೇ ಇಲ್ಲ. ಬೆಳಗ್ಗೆಯಿಂದ ನಿಂತುಕೊಂಡೆ ಫೋಟೋ ಕ್ಲಿಕಿಸಿದ ಈ ಫೋಟೋಗ್ರಾಫರ್ ಸ್ವಲ್ಪ ಸಮಯ ವಿಶ್ರಾಂತಿ ತೆಗೆದುಕೊಂಡದ್ದಕ್ಕೆ ನಿಷ್ಠುರವಾಗಿ ಮಾತನಾಡಿದ್ದಾರಂತೆ. ಇದರಿಂದ ಕೋಪಗೊಂಡ ಫೋಟೋಗ್ರಾಫರ್ ತನ್ನ ಕ್ಯಾಮೆರಾದಲ್ಲಿ ಸೆರೆ ಹಿಡಿದ ವಧುವರರ ಮದುವೆಯ ಎಲ್ಲಾ ಫೋಟೋಗಳನ್ನು ಡಿಲೀಟ್ ಮಾಡಿ ಅಲ್ಲಿಂದ ಹೊರಟು ಹೋಗಿದ್ದಾನೆ.

ಇದನ್ನೂ ಓದಿ
Image
ಐಷಾರಾಮಿ ಮನೆಗಿಂತ ಸಣ್ಣ ಅಪಾರ್ಟ್ಮೆಂಟ್ ಗಳೇ ಬೆಸ್ಟ್, ಅಸಲಿ ವಿಚಾರ ಇಲ್ಲಿದೆ
Image
ಬಾಯಿ ಚಪ್ಪರಿಸಿಕೊಂಡು ತಿನ್ನುವ ಬಿರಿಯಾನಿಗೆ ಈ ಹೆಸರು ಬಂದದ್ದು ಹೇಗೆ?
Image
ಕಲ್ಲಿನಿಂದ ನ್ಯಾಚುರಲ್‌ ಮೆಹಂದಿ ರೆಡಿ ಮಾಡಿದ ಯುವತಿ
Image
ತಾಯಿ ಶ್ವಾನದ ಕೈಕಾಲು ಹಿಡಿದು ಮರಿಗಳಿಗೆ ಎದೆ ಹಾಲು ಕುಡಿಸಿದ ಹುಡುಗ್ರು

ಇದನ್ನೂ ಓದಿ : ಕೈ ತುಂಬಾ ಸಂಬಳವಿದ್ರು ಈ ಉದ್ಯೋಗಿಗೆ ಜಾಬ್ ನಲ್ಲಿ ತೃಪ್ತಿಯೇ ಇಲ್ವಂತೆ, ಅಸಲಿ ಕಾರಣ ಇಲ್ಲಿದೆ ನೋಡಿ

ವೈರಲ್ ಪೋಸ್ಟ್ ಇಲ್ಲಿದೆ ನೋಡಿ

View this post on Instagram

A post shared by FamousPulse (@famous.pulse)

ಈ ಪೋಸ್ಟ್ ವೊಂದು ಇಪ್ಪತ್ತಾರು ಲಕ್ಷಕ್ಕೂ ಅಧಿಕ ವೀಕ್ಷಣೆಗಳನ್ನು ಕಂಡಿದ್ದು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದ್ದಂತೆ ಫೋಟೋಗ್ರಾಫರ್ ಮಾಡಿದ ಕೆಲಸ ಕಂಡು ಅಚ್ಚರಿ ವ್ಯಕ್ತಪಡಿಸಿದ್ದಾರೆ. ಬಳಕೆದಾರರೊಬ್ಬರು, ‘ಈ ಫೋಟೋಗ್ರಾಫರ್ ಈ ರೀತಿ ಮಾಡಿರುವುದು ನಿಜಕ್ಕೂ ತಪ್ಪು’ ಎಂದಿದ್ದಾರೆ. ಇನ್ನೊಬ್ಬರು, ‘ಪ್ರತಿಯೊಬ್ಬರನ್ನು ಗೌರವಿಸಿ. ಆ ವ್ಯಕ್ತಿಯು ಈ ರೀತಿ ಕೆಲಸದಿಂದ ನಿಜಕ್ಕೂ ಪಾಠವನ್ನು ಕಲಿತ’ ಎಂದು ಕಾಮೆಂಟ್ ಮಾಡಿದ್ದಾರೆ. ಮತ್ತೊಬ್ಬರು, ‘ನಾನು ಈ ಫೋಟೋ ಗ್ರಾಫರ್ ಪರ ನಿಲ್ಲುತ್ತೇನೆ’ ಎಂದಿದ್ದಾರೆ. ಕೆಲವರು ಫೋಟೋಗ್ರಾಫರ್ ಮಾಡಿದ್ದೆ ಸರಿ ಎಂದರೆ ಇನ್ನು ಕೆಲವರು ಈ ಬಗ್ಗೆ ವಿರೋಧ ವ್ಯಕ್ತಪಡಿಸಿದ್ದಾರೆ.

ಇನ್ನಷ್ಟು ವೈರಲ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ