AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಚಿಂಪಾಂಜಿಯು ಈತನ ಬೊಗಸೆಯಿಂದ ನೀರು ಕುಡಿದದ್ದಲ್ಲದೆ ತೊಳೆಯುವುದು ಬೇರೆ!

Animals : ಮುಂದಿನ ದಿನಗಳಲ್ಲಿ ಮನುಷ್ಯರು ಕಾಡಿಗೆ ಹೋಗಿ, ಪ್ರಾಣಿಗಳು ನಾಡಿಗೆ ಬಂದು ನಾಗರಿಕತೆ ರೂಢಿಸಿಕೊಂಡರೆ ಅಚ್ಚರಿ ಪಡಬೇಕಿಲ್ಲ. ಈ ಆಪ್ತವಾದ ವಿಡಿಯೋ ಲಕ್ಷಾಂತರ ಜನರ ಮನಸ್ಸನ್ನು ಹಿಡಿದಿಡುತ್ತಿದೆ.

Viral Video: ಚಿಂಪಾಂಜಿಯು ಈತನ ಬೊಗಸೆಯಿಂದ ನೀರು ಕುಡಿದದ್ದಲ್ಲದೆ ತೊಳೆಯುವುದು ಬೇರೆ!
ಚಿಂಪಾಜಿಯು ಈತನ ಬೊಗಸೆಯಿಂದ ನೀರು ಕುಡಿದ ನಂತರ ಈತನ ಕೈ ತೊಳೆಯುತ್ತಿರುವುದು
ಶ್ರೀದೇವಿ ಕಳಸದ
|

Updated on: Jul 26, 2023 | 1:43 PM

Share

Chimpanzee : ಪ್ರಾಣಿಸಂಗ್ರಹಾಲಯದಲ್ಲಿ ಚಿಂಪಾಂಜಿಯೊಂದನ್ನು ನೋಡಲು ಬಂದ ಮಹಿಳೆಗೆ, ಆಕೆಯ ಮಗುವನ್ನು ಹತ್ತಿರ ತಂದು ತೋರಿಸುವಂತೆ ಸನ್ನೆ ಮಾಡುತ್ತದೆ. ಮಗುವನ್ನು ಹತ್ತಿರದಿಂದ ತೋರಿಸಿದಾಗ, ಗಾಜಿನಗೋಡೆಯಿಂದಲೇ ಅದರ ಗಲ್ಲಕ್ಕೆ ಅದು ಮುತ್ತಿಡಲು (Kiss) ಪ್ರಯತ್ನಿಸುತ್ತದೆ. ಈ ಆಪ್ತವಾದ ವಿಡಿಯೋ ಕೆಲ ದಿನಗಳ ಹಿಂದೆ ವೈರಲ್ ಆಗಿದ್ದನ್ನು ನೋಡಿದ್ದಿರಿ. ಇದೀಗ ಈ ವಿಡಿಯೋದಲ್ಲಿರುವ ಚಿಂಪಾಂಜಿಯು ತನ್ನ ಬಳಿ ಬಂದ ಮನುಷ್ಯನೊಂದಿಗೆ ನಡೆದುಕೊಂಡ ರೀತಿ ಎಷ್ಟು ಆಪ್ತವಾಗಿದೆ ನೋಡಿ.

ಈ ಚಿಂಪಾಂಜಿಯ ಬಳಿ ಹೋಗಿ ಈತ ಕುಳಿತುಕೊಳ್ಳುತ್ತಾನೆ. ಈತನ ಎರಡೂ ಕೈಗಳನ್ನು ಹಿಡಿದು ನೀರಿನೊಳಗೆ ಮುಳುಗಿಸುತ್ತದೆ. ನಂತರ ಈತನ ಬೊಗಸೆಯೊಳಗಿನ ನೀರನ್ನು ಕುಡಿಯುತ್ತದೆ. ನೀರು ಸಾಕೆನ್ನಿಸುತ್ತಿದ್ದಂತೆ ಈತನ ಕೈಗಳನ್ನು ಅದೇ ನೀರಿನಿಂದ ತೊಳೆಯುತ್ತದೆ. ಚಿಂಪಾಂಜಿಯ ಈ ವಿಶೇಷ ವರ್ತನೆ ನೆಟ್ಟಿಗರ ಗಮನ ಸೆಳೆದಿದೆ. ಅದು ಯಾಕೆ ತನ್ನ ಬೊಗಸೆಯಿಂದ ನೀರು ಕುಡಿಯುವುದಿಲ್ಲ ಎಂಬ ಪ್ರಶ್ನೆಯನ್ನು ಹುಟ್ಟುಹಾಕಿದೆ. ಅಲ್ಲದೆ, ಕುಡಿದ ಮೇಲೆ ಅದು ಕೈಯನ್ನು ತೊಳೆಯುತ್ತದೆಯಲ್ಲ ಎಂದು ಅಚ್ಚರಿಯನ್ನೂ ಉಂಟು ಮಾಡಿದೆ.

ಇದನ್ನೂ ಓದಿ : Viral Video: ‘ಅಪ್ಪಾ ನಾ ಡಿಪ್ರೆಷನ್​ಗೆ ಹೋಗ್ತಿದೀನಿ’ ಮನೆಬಿಟ್ಟು ಎಲ್ಲಿಯೂ ಹೋಗಕೂಡದು!

ಛಾಯಾಗ್ರಾಹಕ ಜೆ ಸಿ ಪಿಯರಿ (JC Pieri) ಎನ್ನುವವರು ಕ್ಯಾಮರೂನ್​ನಲ್ಲಿ ಅಪರೂಪದ ವಿಡಿಯೋ ಅನ್ನು ಸೆರೆಹಿಡಿದಿದ್ದಾರೆ. ಅನೇಕರು ಈ ವಿಡಿಯೋಗೆ ಪ್ರತಿಕ್ರಿಯಿಸಿದ್ದಾರೆ. ಈ ತನಕ ಈ ವಿಡಿಯೋ ಅನ್ನು 1 ಲಕ್ಷಕ್ಕಿಂತಲೂ ಹೆಚ್ಚು ಜನರು ನೋಡಿದ್ದಾರೆ. 1,000ಕ್ಕಿಂತಲೂ ಹೆಚ್ಚು ಜನರು ಲೈಕ್ ಮಾಡಿದ್ದಾರೆ. 160 ಜನರು ರೀಟ್ವೀಟ್ ಮಾಡಿದ್ದಾರೆ.

ಇದನ್ನೂ ನೋಡಿ : Viral Video: ಪಾಕಿಸ್ತಾನ; 103 ವರ್ಷದ ‘ಮಾಯೀ ಧಾಯೀ’ ಕೋಕ್​ ಸ್ಟುಡಿಯೋದಲ್ಲಿ ಇದನ್ನು ಹಾಡಿದ್ದು 96ರ ಹರೆಯದಲ್ಲಿ

ನಾವು ಯಾರು? ನಮ್ಮ ಮೂಲ ಏನು? ಜಗತ್ತಿನೊಂದಿಗೆ ನಮ್ಮ ಸ್ಪಂದನೆ ಹೇಗಿರಬೇಕು ಎನ್ನುವುದನ್ನು ನಾವು ಆಗಾಗ ನೆನಪಿಸಿಕೊಳ್ಳಲು ಸಹಾಯ ಮಾಡುತ್ತವೆ ಇಂಥ ವಿಡಿಯೋಗಳು. ಈ ವಿಡಿಯೋ ನೋಡಿದ ನಿಮ್ಮ ಅಭಿಪ್ರಾಯವೇನು?

ಮತ್ತಷ್ಟು ವೈರಲ್ ನ್ಯೂಸ್​​ಗಾಗಿ ಕ್ಲಿಕ್ ಮಾಡಿ

ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ