AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಿಫ್ಟ್​​ ಮುಗಿಯಿತೆಂದು ಎಮರ್ಜೆನ್ಸಿ ಲ್ಯಾಂಡ್​ ಆದ ವಿಮಾನವನ್ನು ಚಲಾಯಿಸಲು ನಿರಾಕರಿಸಿದ ಪೈಲಟ್​

ಪಾಕಿಸ್ತಾನದ ಪೈಲೆಟ್​ ಒಬ್ಬ ತನ್ನ ಶಿಪ್ಟ್​ ಮುಗಿಯಿತು ಎಂದು ಎಮೆರ್ಜೆನ್ಸಿ ಲ್ಯಾಂಡ್​ ಆದ ವಿಮಾನವನ್ನು ಚಲಾಯಿಸಲು ನಿರಾಕರಿಸಿದ ಘಟನೆ ನಡೆದಿದೆ. ಇದೀಗ ಈ ಸುದ್ದಿ ಜಗತ್ತಿನಾದ್ಯಂತ ವೈರಲ್​ ಆಗಿದೆ.

ಶಿಫ್ಟ್​​ ಮುಗಿಯಿತೆಂದು ಎಮರ್ಜೆನ್ಸಿ ಲ್ಯಾಂಡ್​ ಆದ ವಿಮಾನವನ್ನು ಚಲಾಯಿಸಲು ನಿರಾಕರಿಸಿದ ಪೈಲಟ್​
ಪಾಕಿಸ್ತಾನ ವಿಮಾನ
TV9 Web
| Edited By: |

Updated on:Jan 21, 2022 | 2:52 PM

Share

ಶಿಫ್ಟ್​​ ಅವಧಿ ಮುಗಿದ ಮೇಲೆ ಸಾಮಾನ್ಯವಾಗಿ ಕೆಲಸ ಮಾಡಲು ಯಾರಿಗೂ ಮನಸಿರುವುದಿಲ್ಲ. ಆದರೆ ಕೆಲವೊಮ್ಮೆ ಇತರರ ಸುರಕ್ಷತೆ ದೃಷ್ಟಿಯಿಂದ ಕೆಲಸ ಮಾಡುವ ಅನಿವಾರ್ಯತೆ ಇರುತ್ತದೆ. ಅಂತಹ ಉದ್ಯೋಗಗಳಲ್ಲಿ ಪ್ರಯಾಣಿಕರ ಸುರಕ್ಷತೆ ಕಾಪಾಡುವ ಪೈಲಟ್ (Pilot)  ​ಗಳ ಕೆಲಸವೂ ಒಂದು. ಇತ್ತೀಚೆಗೆ ಪಾಕಿಸ್ತಾನದ ಪೈಲಟ್​ ಒಬ್ಬ ತನ್ನ ಶಿಪ್ಟ್(Shift)​ ಮುಗಿಯಿತು ಎಂದು ಎಮೆರ್ಜೆನ್ಸಿ ಲ್ಯಾಂಡ್ (Emergency Landing)​ ಆದ ವಿಮಾನವನ್ನು ಚಲಾಯಿಸಲು ನಿರಾಕರಿಸಿದ ಘಟನೆ ನಡೆದಿದೆ. ಇದೀಗ ಈ ಸುದ್ದಿ ಜಗತ್ತಿನಾದ್ಯಂತ ವೈರಲ್​ ಆಗಿದೆ.

ರಿಯಾದ್​ನಿಂದ ಪಾಕಿಸ್ತಾನದ ರಾಜಧಾನಿ ಇಸ್ಲಾಮಾಬಾದ್​ಗೆ ಹೊರಟಿದ್ದ ಪಾಕಿಸ್ತಾನ ಏರ್​ಲೈನ್ಸ್​​ನ (Pakistan International Airlines)  PK-9754 ​ ವಿಮಾನ ಸೌದಿ ಅರೇಬಿಯಾದ ದಮ್ಮಂನಲ್ಲಿ ಹವಾಮಾನ ವೈಪರಿತ್ಯದಿಂದ ತುರ್ತು ಭೂ ಸ್ಷರ್ಶ ಮಾಡಿತ್ತು. ವಿಮಾನವನ್ನು ಪೈಲೆಟ್​ ಸುರಕ್ಷಿತವಾಗಿ ಲ್ಯಾಂಡ್​ ಮಾಡಿದ್ದನು. ನಂತರ ಮತ್ತೆ ಪ್ರಯಾಣವನ್ನು ಆರಂಭಿಸುವ ಹೊತ್ತಿನಲ್ಲಿ ಪೈಲಟ್​ ನನ್ನ ಶಿಪ್ಟ್​ ಮುಗಿದಿದೆ ಎಂದು ವಿಮಾನವನ್ನು ಮುಂದೆ ತೆಗೆದುಕೊಂಡು ಹೋಗಲು ನಿರಾಕರಿಸಿದ್ದಾನೆ. ಇದರಿಂದ ಕೋಪಗೊಂಡ ಪ್ರಯಾಣಿಕರು ಗಲಾಟೆ  ಎಬ್ಬಿಸಿದ್ದರು. ಪರಿಸ್ಥಿತಿ ಕೈಮೀರುತ್ತಿದ್ದಂತೆ ಏರ್​ಪೋರ್ಟ್​ ಸೆಕ್ಯುರಿಟೊ ಸ್ಥಳಕ್ಕಾಗಮಸಿ ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತಂದು ಪ್ರಯಾಣಿಕರಿಗೆ ಹೊಟೇಲ್​ವೊಂದರಲ್ಲಿ ವಾಸ್ತವ್ಯದ ವ್ಯವಸ್ಥೆ ಮಾಡಿದ್ದರು.

ಘಟನೆಯ ಬಳಿಕ ಪಾಕಿಸ್ತಾನ ಏರ್​ಲೈನ್ಸ್​ ಬದಲಿ ಪೈಲಟ್​ಅನ್ನು ವ್ಯವಸ್ಥೆ ಮಾಡುವುದಾಗ ಹೇಳಿತ್ತು. ಆದರೆ ಅದು ಸಾಧ್ಯವಾಗದೆ, ಅಂತಿಮವಾಗಿ ಬೇರೆ ವಿಮಾನದ ವ್ಯವಸ್ಥೆ ಮಾಡಿ ಪ್ರಯಾಣಿಕರನ್ನು ಸುರಕ್ಷಿತವಾಗಿ ಕರೆದೊಯ್ಯಲಾಗಿದೆ ಎಂದು ವರದಿಯಾಗಿದೆ. ಈ ಹಿಂದೆ ಪಾಕಿಸ್ತಾನಿದ ಪೈಲಟ್​ ಒಬ್ಬರು ನಕಲಿಪ್ರಮಾಣಪತ್ರ ನೀಡಿ ಸುದ್ದಿಯಾಗಿದ್ದರು. ಇದೀಗ ಶಿಪ್ಟ್​ ವಿಷಯದಲ್ಲಿ ಮತ್ತೆ ಸುದ್ದಿಯಲ್ಲಿದ್ದಾರೆ.

ಇದನ್ನೂ ಓದಿ;

ಕಾರ್​ ಖರೀದಿಸಿ ಶೋ ರೂಮ್​ನಲ್ಲೇ ಅಪಘಾತ ಮಾಡಿಕೊಂಡ ವ್ಯಕ್ತಿ: ವೈರಲ್​ ಆದ ಜಖಂಗೊಂಡ ಕಾರಿನ ಫೋಟೊ

Published On - 2:51 pm, Fri, 21 January 22

Follow Us
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?
ವಿಜಯ್​​ರನ್ನು ದೇವರೇ ಕಾಪಾಡಬೇಕು ಎಂದ ಹೆಚ್​​ಡಿಕೆ: ಕಾರಣ ಇಲ್ಲಿದೆ
ವಿಜಯ್​​ರನ್ನು ದೇವರೇ ಕಾಪಾಡಬೇಕು ಎಂದ ಹೆಚ್​​ಡಿಕೆ: ಕಾರಣ ಇಲ್ಲಿದೆ
ಅಂಜನಾದ್ರಿ ಹನುಮನಿಗೆ 2.5 ಕೋಟಿ ರೂ. ಮೌಲ್ಯದ ಚಿನ್ನದ ಕಿರೀಟ!
ಅಂಜನಾದ್ರಿ ಹನುಮನಿಗೆ 2.5 ಕೋಟಿ ರೂ. ಮೌಲ್ಯದ ಚಿನ್ನದ ಕಿರೀಟ!