AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಿಫ್ಟ್​​ ಮುಗಿಯಿತೆಂದು ಎಮರ್ಜೆನ್ಸಿ ಲ್ಯಾಂಡ್​ ಆದ ವಿಮಾನವನ್ನು ಚಲಾಯಿಸಲು ನಿರಾಕರಿಸಿದ ಪೈಲಟ್​

ಪಾಕಿಸ್ತಾನದ ಪೈಲೆಟ್​ ಒಬ್ಬ ತನ್ನ ಶಿಪ್ಟ್​ ಮುಗಿಯಿತು ಎಂದು ಎಮೆರ್ಜೆನ್ಸಿ ಲ್ಯಾಂಡ್​ ಆದ ವಿಮಾನವನ್ನು ಚಲಾಯಿಸಲು ನಿರಾಕರಿಸಿದ ಘಟನೆ ನಡೆದಿದೆ. ಇದೀಗ ಈ ಸುದ್ದಿ ಜಗತ್ತಿನಾದ್ಯಂತ ವೈರಲ್​ ಆಗಿದೆ.

ಶಿಫ್ಟ್​​ ಮುಗಿಯಿತೆಂದು ಎಮರ್ಜೆನ್ಸಿ ಲ್ಯಾಂಡ್​ ಆದ ವಿಮಾನವನ್ನು ಚಲಾಯಿಸಲು ನಿರಾಕರಿಸಿದ ಪೈಲಟ್​
ಪಾಕಿಸ್ತಾನ ವಿಮಾನ
TV9 Web
| Edited By: |

Updated on:Jan 21, 2022 | 2:52 PM

Share

ಶಿಫ್ಟ್​​ ಅವಧಿ ಮುಗಿದ ಮೇಲೆ ಸಾಮಾನ್ಯವಾಗಿ ಕೆಲಸ ಮಾಡಲು ಯಾರಿಗೂ ಮನಸಿರುವುದಿಲ್ಲ. ಆದರೆ ಕೆಲವೊಮ್ಮೆ ಇತರರ ಸುರಕ್ಷತೆ ದೃಷ್ಟಿಯಿಂದ ಕೆಲಸ ಮಾಡುವ ಅನಿವಾರ್ಯತೆ ಇರುತ್ತದೆ. ಅಂತಹ ಉದ್ಯೋಗಗಳಲ್ಲಿ ಪ್ರಯಾಣಿಕರ ಸುರಕ್ಷತೆ ಕಾಪಾಡುವ ಪೈಲಟ್ (Pilot)  ​ಗಳ ಕೆಲಸವೂ ಒಂದು. ಇತ್ತೀಚೆಗೆ ಪಾಕಿಸ್ತಾನದ ಪೈಲಟ್​ ಒಬ್ಬ ತನ್ನ ಶಿಪ್ಟ್(Shift)​ ಮುಗಿಯಿತು ಎಂದು ಎಮೆರ್ಜೆನ್ಸಿ ಲ್ಯಾಂಡ್ (Emergency Landing)​ ಆದ ವಿಮಾನವನ್ನು ಚಲಾಯಿಸಲು ನಿರಾಕರಿಸಿದ ಘಟನೆ ನಡೆದಿದೆ. ಇದೀಗ ಈ ಸುದ್ದಿ ಜಗತ್ತಿನಾದ್ಯಂತ ವೈರಲ್​ ಆಗಿದೆ.

ರಿಯಾದ್​ನಿಂದ ಪಾಕಿಸ್ತಾನದ ರಾಜಧಾನಿ ಇಸ್ಲಾಮಾಬಾದ್​ಗೆ ಹೊರಟಿದ್ದ ಪಾಕಿಸ್ತಾನ ಏರ್​ಲೈನ್ಸ್​​ನ (Pakistan International Airlines)  PK-9754 ​ ವಿಮಾನ ಸೌದಿ ಅರೇಬಿಯಾದ ದಮ್ಮಂನಲ್ಲಿ ಹವಾಮಾನ ವೈಪರಿತ್ಯದಿಂದ ತುರ್ತು ಭೂ ಸ್ಷರ್ಶ ಮಾಡಿತ್ತು. ವಿಮಾನವನ್ನು ಪೈಲೆಟ್​ ಸುರಕ್ಷಿತವಾಗಿ ಲ್ಯಾಂಡ್​ ಮಾಡಿದ್ದನು. ನಂತರ ಮತ್ತೆ ಪ್ರಯಾಣವನ್ನು ಆರಂಭಿಸುವ ಹೊತ್ತಿನಲ್ಲಿ ಪೈಲಟ್​ ನನ್ನ ಶಿಪ್ಟ್​ ಮುಗಿದಿದೆ ಎಂದು ವಿಮಾನವನ್ನು ಮುಂದೆ ತೆಗೆದುಕೊಂಡು ಹೋಗಲು ನಿರಾಕರಿಸಿದ್ದಾನೆ. ಇದರಿಂದ ಕೋಪಗೊಂಡ ಪ್ರಯಾಣಿಕರು ಗಲಾಟೆ  ಎಬ್ಬಿಸಿದ್ದರು. ಪರಿಸ್ಥಿತಿ ಕೈಮೀರುತ್ತಿದ್ದಂತೆ ಏರ್​ಪೋರ್ಟ್​ ಸೆಕ್ಯುರಿಟೊ ಸ್ಥಳಕ್ಕಾಗಮಸಿ ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತಂದು ಪ್ರಯಾಣಿಕರಿಗೆ ಹೊಟೇಲ್​ವೊಂದರಲ್ಲಿ ವಾಸ್ತವ್ಯದ ವ್ಯವಸ್ಥೆ ಮಾಡಿದ್ದರು.

ಘಟನೆಯ ಬಳಿಕ ಪಾಕಿಸ್ತಾನ ಏರ್​ಲೈನ್ಸ್​ ಬದಲಿ ಪೈಲಟ್​ಅನ್ನು ವ್ಯವಸ್ಥೆ ಮಾಡುವುದಾಗ ಹೇಳಿತ್ತು. ಆದರೆ ಅದು ಸಾಧ್ಯವಾಗದೆ, ಅಂತಿಮವಾಗಿ ಬೇರೆ ವಿಮಾನದ ವ್ಯವಸ್ಥೆ ಮಾಡಿ ಪ್ರಯಾಣಿಕರನ್ನು ಸುರಕ್ಷಿತವಾಗಿ ಕರೆದೊಯ್ಯಲಾಗಿದೆ ಎಂದು ವರದಿಯಾಗಿದೆ. ಈ ಹಿಂದೆ ಪಾಕಿಸ್ತಾನಿದ ಪೈಲಟ್​ ಒಬ್ಬರು ನಕಲಿಪ್ರಮಾಣಪತ್ರ ನೀಡಿ ಸುದ್ದಿಯಾಗಿದ್ದರು. ಇದೀಗ ಶಿಪ್ಟ್​ ವಿಷಯದಲ್ಲಿ ಮತ್ತೆ ಸುದ್ದಿಯಲ್ಲಿದ್ದಾರೆ.

ಇದನ್ನೂ ಓದಿ;

ಕಾರ್​ ಖರೀದಿಸಿ ಶೋ ರೂಮ್​ನಲ್ಲೇ ಅಪಘಾತ ಮಾಡಿಕೊಂಡ ವ್ಯಕ್ತಿ: ವೈರಲ್​ ಆದ ಜಖಂಗೊಂಡ ಕಾರಿನ ಫೋಟೊ

Published On - 2:51 pm, Fri, 21 January 22

Follow Us
ದೇಶಾದ್ಯಂತ ಇಂದಿನಿಂದ ನಾಲ್ಕು ದಿನಗಳ ಕಾಲ ಬ್ಯಾಂಕ್​ಗಳು ಬಂದ್
ದೇಶಾದ್ಯಂತ ಇಂದಿನಿಂದ ನಾಲ್ಕು ದಿನಗಳ ಕಾಲ ಬ್ಯಾಂಕ್​ಗಳು ಬಂದ್
‘ನನ್ನತ್ರ ನಡ್ಯಲ್ಲ’; ಕಾವ್ಯಾಗೆ ಖಡಕ್ ವಾರ್ನಿಂಗ್ ಕೊಟ್ಟ ಗಗನ್ ಚಿನ್ನಪ್ಪ
‘ನನ್ನತ್ರ ನಡ್ಯಲ್ಲ’; ಕಾವ್ಯಾಗೆ ಖಡಕ್ ವಾರ್ನಿಂಗ್ ಕೊಟ್ಟ ಗಗನ್ ಚಿನ್ನಪ್ಪ
ಜಿಬಿಎ ಪೌರಕಾರ್ಮಿಕನ ಮೇಲೆ ಹಲ್ಲೆ; ಕೇರಳದ ಯುವಕ, ಯುವತಿ ಪೊಲೀಸ್ ವಶಕ್ಕೆ
ಜಿಬಿಎ ಪೌರಕಾರ್ಮಿಕನ ಮೇಲೆ ಹಲ್ಲೆ; ಕೇರಳದ ಯುವಕ, ಯುವತಿ ಪೊಲೀಸ್ ವಶಕ್ಕೆ
ದೆಹಲಿಗೆ ಆಗಮಿಸಿದ ರಷ್ಯಾ ಅಧ್ಯಕ್ಷ ಪುಟಿನ್
ದೆಹಲಿಗೆ ಆಗಮಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಇಂದು ಈ ರಾಶಿಯವರು ಹಣಕಾಸಿನ ವಿಚಾರದಲ್ಲಿ ಜಾಗೃತರಾಗಿರಿ
ಇಂದು ಈ ರಾಶಿಯವರು ಹಣಕಾಸಿನ ವಿಚಾರದಲ್ಲಿ ಜಾಗೃತರಾಗಿರಿ
ಮುಂಬೈನ ರೈಲಿನಲ್ಲಿ ನೇತಾಡುತ್ತಿದ್ದಾಗ ಕೆಳಗೆ ಬಿದ್ದ ಮಹಿಳೆ!
ಮುಂಬೈನ ರೈಲಿನಲ್ಲಿ ನೇತಾಡುತ್ತಿದ್ದಾಗ ಕೆಳಗೆ ಬಿದ್ದ ಮಹಿಳೆ!
ಬಿಜೆಪಿ ಪಾದಯಾತ್ರೆಗೆ ತೆರೆ: ಹೋರಾಟ ಅಂತ್ಯವಲ್ಲ, ಆರಂಭ ಎಂದ ಕೇಸರಿ ಪಡೆ
ಬಿಜೆಪಿ ಪಾದಯಾತ್ರೆಗೆ ತೆರೆ: ಹೋರಾಟ ಅಂತ್ಯವಲ್ಲ, ಆರಂಭ ಎಂದ ಕೇಸರಿ ಪಡೆ
ಜಾರಕಿಹೊಳಿ ಮನೆಯಲ್ಲಿ ED ಶೋಧ ಅಂತ್ಯ, 37 ಗಂಟೆಗಳ ಕಾಲ ನಡೆದ ಪರಿಶೀಲನೆ
ಜಾರಕಿಹೊಳಿ ಮನೆಯಲ್ಲಿ ED ಶೋಧ ಅಂತ್ಯ, 37 ಗಂಟೆಗಳ ಕಾಲ ನಡೆದ ಪರಿಶೀಲನೆ
ಮಂಜನ ಮಾತಿನಿಂದ ಬಿಗ್ ಬಾಸ್ ಮನೆಯಲ್ಲಿ ಕಿರಿಕಿರಿ; ಕಣ್ಣೀರು ಹಾಕಿದ ಸ್ಪರ್ಧಿ
ಮಂಜನ ಮಾತಿನಿಂದ ಬಿಗ್ ಬಾಸ್ ಮನೆಯಲ್ಲಿ ಕಿರಿಕಿರಿ; ಕಣ್ಣೀರು ಹಾಕಿದ ಸ್ಪರ್ಧಿ
'ಬ್ರಿಕ್ಸ್ ಶೃಂಗಸಭೆಗೆ ಭಾರತ ಸಿದ್ಧ'; ವಿಡಿಯೋ ಹಂಚಿಕೊಂಡ ಪ್ರಧಾನಿ ಮೋದಿ
'ಬ್ರಿಕ್ಸ್ ಶೃಂಗಸಭೆಗೆ ಭಾರತ ಸಿದ್ಧ'; ವಿಡಿಯೋ ಹಂಚಿಕೊಂಡ ಪ್ರಧಾನಿ ಮೋದಿ