AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಿಫ್ಟ್​​ ಮುಗಿಯಿತೆಂದು ಎಮರ್ಜೆನ್ಸಿ ಲ್ಯಾಂಡ್​ ಆದ ವಿಮಾನವನ್ನು ಚಲಾಯಿಸಲು ನಿರಾಕರಿಸಿದ ಪೈಲಟ್​

ಪಾಕಿಸ್ತಾನದ ಪೈಲೆಟ್​ ಒಬ್ಬ ತನ್ನ ಶಿಪ್ಟ್​ ಮುಗಿಯಿತು ಎಂದು ಎಮೆರ್ಜೆನ್ಸಿ ಲ್ಯಾಂಡ್​ ಆದ ವಿಮಾನವನ್ನು ಚಲಾಯಿಸಲು ನಿರಾಕರಿಸಿದ ಘಟನೆ ನಡೆದಿದೆ. ಇದೀಗ ಈ ಸುದ್ದಿ ಜಗತ್ತಿನಾದ್ಯಂತ ವೈರಲ್​ ಆಗಿದೆ.

ಶಿಫ್ಟ್​​ ಮುಗಿಯಿತೆಂದು ಎಮರ್ಜೆನ್ಸಿ ಲ್ಯಾಂಡ್​ ಆದ ವಿಮಾನವನ್ನು ಚಲಾಯಿಸಲು ನಿರಾಕರಿಸಿದ ಪೈಲಟ್​
ಪಾಕಿಸ್ತಾನ ವಿಮಾನ
TV9 Web
| Updated By: Pavitra Bhat Jigalemane|

Updated on:Jan 21, 2022 | 2:52 PM

Share

ಶಿಫ್ಟ್​​ ಅವಧಿ ಮುಗಿದ ಮೇಲೆ ಸಾಮಾನ್ಯವಾಗಿ ಕೆಲಸ ಮಾಡಲು ಯಾರಿಗೂ ಮನಸಿರುವುದಿಲ್ಲ. ಆದರೆ ಕೆಲವೊಮ್ಮೆ ಇತರರ ಸುರಕ್ಷತೆ ದೃಷ್ಟಿಯಿಂದ ಕೆಲಸ ಮಾಡುವ ಅನಿವಾರ್ಯತೆ ಇರುತ್ತದೆ. ಅಂತಹ ಉದ್ಯೋಗಗಳಲ್ಲಿ ಪ್ರಯಾಣಿಕರ ಸುರಕ್ಷತೆ ಕಾಪಾಡುವ ಪೈಲಟ್ (Pilot)  ​ಗಳ ಕೆಲಸವೂ ಒಂದು. ಇತ್ತೀಚೆಗೆ ಪಾಕಿಸ್ತಾನದ ಪೈಲಟ್​ ಒಬ್ಬ ತನ್ನ ಶಿಪ್ಟ್(Shift)​ ಮುಗಿಯಿತು ಎಂದು ಎಮೆರ್ಜೆನ್ಸಿ ಲ್ಯಾಂಡ್ (Emergency Landing)​ ಆದ ವಿಮಾನವನ್ನು ಚಲಾಯಿಸಲು ನಿರಾಕರಿಸಿದ ಘಟನೆ ನಡೆದಿದೆ. ಇದೀಗ ಈ ಸುದ್ದಿ ಜಗತ್ತಿನಾದ್ಯಂತ ವೈರಲ್​ ಆಗಿದೆ.

ರಿಯಾದ್​ನಿಂದ ಪಾಕಿಸ್ತಾನದ ರಾಜಧಾನಿ ಇಸ್ಲಾಮಾಬಾದ್​ಗೆ ಹೊರಟಿದ್ದ ಪಾಕಿಸ್ತಾನ ಏರ್​ಲೈನ್ಸ್​​ನ (Pakistan International Airlines)  PK-9754 ​ ವಿಮಾನ ಸೌದಿ ಅರೇಬಿಯಾದ ದಮ್ಮಂನಲ್ಲಿ ಹವಾಮಾನ ವೈಪರಿತ್ಯದಿಂದ ತುರ್ತು ಭೂ ಸ್ಷರ್ಶ ಮಾಡಿತ್ತು. ವಿಮಾನವನ್ನು ಪೈಲೆಟ್​ ಸುರಕ್ಷಿತವಾಗಿ ಲ್ಯಾಂಡ್​ ಮಾಡಿದ್ದನು. ನಂತರ ಮತ್ತೆ ಪ್ರಯಾಣವನ್ನು ಆರಂಭಿಸುವ ಹೊತ್ತಿನಲ್ಲಿ ಪೈಲಟ್​ ನನ್ನ ಶಿಪ್ಟ್​ ಮುಗಿದಿದೆ ಎಂದು ವಿಮಾನವನ್ನು ಮುಂದೆ ತೆಗೆದುಕೊಂಡು ಹೋಗಲು ನಿರಾಕರಿಸಿದ್ದಾನೆ. ಇದರಿಂದ ಕೋಪಗೊಂಡ ಪ್ರಯಾಣಿಕರು ಗಲಾಟೆ  ಎಬ್ಬಿಸಿದ್ದರು. ಪರಿಸ್ಥಿತಿ ಕೈಮೀರುತ್ತಿದ್ದಂತೆ ಏರ್​ಪೋರ್ಟ್​ ಸೆಕ್ಯುರಿಟೊ ಸ್ಥಳಕ್ಕಾಗಮಸಿ ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತಂದು ಪ್ರಯಾಣಿಕರಿಗೆ ಹೊಟೇಲ್​ವೊಂದರಲ್ಲಿ ವಾಸ್ತವ್ಯದ ವ್ಯವಸ್ಥೆ ಮಾಡಿದ್ದರು.

ಘಟನೆಯ ಬಳಿಕ ಪಾಕಿಸ್ತಾನ ಏರ್​ಲೈನ್ಸ್​ ಬದಲಿ ಪೈಲಟ್​ಅನ್ನು ವ್ಯವಸ್ಥೆ ಮಾಡುವುದಾಗ ಹೇಳಿತ್ತು. ಆದರೆ ಅದು ಸಾಧ್ಯವಾಗದೆ, ಅಂತಿಮವಾಗಿ ಬೇರೆ ವಿಮಾನದ ವ್ಯವಸ್ಥೆ ಮಾಡಿ ಪ್ರಯಾಣಿಕರನ್ನು ಸುರಕ್ಷಿತವಾಗಿ ಕರೆದೊಯ್ಯಲಾಗಿದೆ ಎಂದು ವರದಿಯಾಗಿದೆ. ಈ ಹಿಂದೆ ಪಾಕಿಸ್ತಾನಿದ ಪೈಲಟ್​ ಒಬ್ಬರು ನಕಲಿಪ್ರಮಾಣಪತ್ರ ನೀಡಿ ಸುದ್ದಿಯಾಗಿದ್ದರು. ಇದೀಗ ಶಿಪ್ಟ್​ ವಿಷಯದಲ್ಲಿ ಮತ್ತೆ ಸುದ್ದಿಯಲ್ಲಿದ್ದಾರೆ.

ಇದನ್ನೂ ಓದಿ;

ಕಾರ್​ ಖರೀದಿಸಿ ಶೋ ರೂಮ್​ನಲ್ಲೇ ಅಪಘಾತ ಮಾಡಿಕೊಂಡ ವ್ಯಕ್ತಿ: ವೈರಲ್​ ಆದ ಜಖಂಗೊಂಡ ಕಾರಿನ ಫೋಟೊ

Published On - 2:51 pm, Fri, 21 January 22

ವರಿಷ್ಠರ ಮಟ್ಟದಲ್ಲಿ ನಡೆಯುವ ಚರ್ಚೆ ಬಿಎಸ್​ವೈ ಗೊತ್ತಿಲ್ಲದಿರುತ್ತದೆಯೇ?
ವರಿಷ್ಠರ ಮಟ್ಟದಲ್ಲಿ ನಡೆಯುವ ಚರ್ಚೆ ಬಿಎಸ್​ವೈ ಗೊತ್ತಿಲ್ಲದಿರುತ್ತದೆಯೇ?
ಕೋರ್ಟ್​ ಎದುರು ನೆರೆದ ದರ್ಶನ್ ಫ್ಯಾನ್ಸ್; ನಟನಿಗೆ ಜೈಕಾರ
ಕೋರ್ಟ್​ ಎದುರು ನೆರೆದ ದರ್ಶನ್ ಫ್ಯಾನ್ಸ್; ನಟನಿಗೆ ಜೈಕಾರ
ದೆಹಲಿಯಲ್ಲಿ ಸಿಎಂ ಸಿದ್ದರಾಮಯ್ಯ ಮಹತ್ವದ ಸುದ್ದಿಗೋಷ್ಠಿ: ಇಲ್ಲಿದೆ ಲೈವ್​
ದೆಹಲಿಯಲ್ಲಿ ಸಿಎಂ ಸಿದ್ದರಾಮಯ್ಯ ಮಹತ್ವದ ಸುದ್ದಿಗೋಷ್ಠಿ: ಇಲ್ಲಿದೆ ಲೈವ್​
ರೈಲ್ವೆ ಹಳಿ ಪಕ್ಕ ಮರಿಗೆ ಜನ್ಮ ನೀಡಿದ ಆನೆ, ಎರಡು ಗಂಟೆಗಳ ಕಾಲ ನಿಂತ ರೈಲು
ರೈಲ್ವೆ ಹಳಿ ಪಕ್ಕ ಮರಿಗೆ ಜನ್ಮ ನೀಡಿದ ಆನೆ, ಎರಡು ಗಂಟೆಗಳ ಕಾಲ ನಿಂತ ರೈಲು
ಹೃದಯಾಘಾತಗಳ ಹೆಚ್ಚಳಕ್ಕೆ ನಿಖರವಾದ ಕಾರಣ ವೈದ್ಯರಿಗೆ ಗೊತ್ತಾಗುತ್ತಿಲ್ಲ
ಹೃದಯಾಘಾತಗಳ ಹೆಚ್ಚಳಕ್ಕೆ ನಿಖರವಾದ ಕಾರಣ ವೈದ್ಯರಿಗೆ ಗೊತ್ತಾಗುತ್ತಿಲ್ಲ
ಮಾವಿನ ಹಣ್ಣೆಂದು ಬೈಕ್ ಮೇಲೆ ಮಹಿಳೆಯ ಶವ ಸಾಗಿಸುತ್ತಿದ್ದ ವ್ಯಕ್ತಿ
ಮಾವಿನ ಹಣ್ಣೆಂದು ಬೈಕ್ ಮೇಲೆ ಮಹಿಳೆಯ ಶವ ಸಾಗಿಸುತ್ತಿದ್ದ ವ್ಯಕ್ತಿ
ಟೀಮ್ ಇಂಡಿಯಾವನ್ನು ಕೂಡಿಕೊಂಡ ಮುಂಬೈ ಇಂಡಿಯನ್ಸ್ ವೇಗಿ
ಟೀಮ್ ಇಂಡಿಯಾವನ್ನು ಕೂಡಿಕೊಂಡ ಮುಂಬೈ ಇಂಡಿಯನ್ಸ್ ವೇಗಿ
ಮಧ್ಯಾಹ್ನ ರಾಹುಲ್ ಗಾಂಧಿಯನ್ನು ಭೇಟಿಯಾಗಲಿರುವ ಸಿಎಂ, ಡಿಸಿಎಂ
ಮಧ್ಯಾಹ್ನ ರಾಹುಲ್ ಗಾಂಧಿಯನ್ನು ಭೇಟಿಯಾಗಲಿರುವ ಸಿಎಂ, ಡಿಸಿಎಂ
ಮನೆ ಎದುರು ಆಟವಾಡುತ್ತಿದ್ದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ಮನೆ ಎದುರು ಆಟವಾಡುತ್ತಿದ್ದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ದರ್ಶನ್​ಗೆ ದೇವರ ಮೇಲೆ ಎಷ್ಟು ಭಕ್ತಿ ನೋಡಿ; ಇಲ್ಲಿದೆ ವಿಡಿಯೋ ಸಾಕ್ಷಿ
ದರ್ಶನ್​ಗೆ ದೇವರ ಮೇಲೆ ಎಷ್ಟು ಭಕ್ತಿ ನೋಡಿ; ಇಲ್ಲಿದೆ ವಿಡಿಯೋ ಸಾಕ್ಷಿ