AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಕರುವಿನ ಮುಖ ಕಚ್ಚಿ ಎಳೆದಾಡಿದ ಪಿಟ್‌ ಬುಲ್ ಶ್ವಾನ ;ವಿಡಿಯೋ ವೈರಲ್​​

ಅಂಗಳದಲ್ಲಿ ಕಟ್ಟಿದ್ದ ಕರುವಿನ ಮೇಲೆ ಪಿಟ್ ಬುಲ್ ಶ್ವಾನ ಏಕಾಏಕಿ ದಾಳಿ ಮಾಡಿದ್ದು, ನಾಯಿಯ ಆಕ್ರಮಣಕಾರಿ ವರ್ತನೆಯನ್ನು ಕಂಡು ಕುಟುಂಬ ಸದಸ್ಯರು ಆಘಾತಕ್ಕೊಳಗಾಗಿದ್ದಾರೆ. ಕುಟುಂಬಸ್ಥರು ಮಧ್ಯಪ್ರವೇಶಿಸಿ ಪಿಟ್ ಬುಲ್ ಅನ್ನು ಓಡಿಸಿ ಕರುವನ್ನು ಉಳಿಸಲು ಪ್ರಯತ್ನಿಸಿರುವುದು ವಿಡಿಯೋದಲ್ಲಿ ಸೆರೆಯಾಗಿದೆ. ವಿಡಿಯೋ ಇಲ್ಲಿದೆ ನೋಡಿ.

Viral Video: ಕರುವಿನ ಮುಖ ಕಚ್ಚಿ ಎಳೆದಾಡಿದ ಪಿಟ್‌ ಬುಲ್ ಶ್ವಾನ ;ವಿಡಿಯೋ ವೈರಲ್​​
Pit Bull Attacks Calf
ಅಕ್ಷತಾ ವರ್ಕಾಡಿ
|

Updated on: Sep 25, 2024 | 5:18 PM

Share

ದೆಹಲಿ: ಅಂಗಳದಲ್ಲಿ ಕಟ್ಟಿದ್ದ ಕರುವಿನ ಮೇಲೆ ಪಿಟ್ ಬುಲ್ ಶ್ವಾನ ದಾಳಿ ಮಾಡಿರುವ ಘಟನೆ ದೆಹಲಿಯ ಬುರಾರಿ ಪ್ರದೇಶದಲ್ಲಿ ನಡೆದಿದೆ. ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ. ಪಿಟ್ ಬುಲ್ ಕರುವಿನ ಮುಖವನ್ನು ತೀವ್ರವಾಗಿ ಗಾಯಗೊಳಿಸಿದ್ದು, ಕರುವಿನ ಮುಖದಿಂದ ತೀವ್ರ ರಕ್ತಸ್ರಾವವಾಗುತ್ತಿರುವುದು ವಿಡಿಯೋದಲ್ಲಿ ಸೆರೆಯಾಗಿದೆ.

ಇತ್ತೀಚಿಗಷ್ಟೇ ದೇಶಾದ್ಯಂತ ನಾಯಿಗಳಿಂದ ಜನರ ಮೇಲೆ ದಾಳಿ ಹಾಗೂ ವಿದೇಶಿ ತಳಿಗಳ ಅಕ್ರಮ ವ್ಯಾಪಾರ ದಂಧೆಗೆ ಕಡಿವಾಣ ಹಾಕುವ ಉದ್ದೇಶದಿಂದ ಪಿಟ್‌ಬುಲ್‌ ಟೆರಿಯರ್‌, ಅಮೆರಿಕನ್‌ ಬುಲ್‌ಡಾಗ್‌, ಕಂಗಾಲ್‌, ರಷ್ಯನ್‌ ಶೆಫರ್ಡ್‌ ಸೇರಿದಂತೆ 23 ಬಗೆಯ ಅಪಾಯಕಾರಿ ವಿದೇಶಿ ಶ್ವಾನ ತಳಿಗಳನ್ನು ಕೇಂದ್ರ ಸರಕಾರ ನಿರ್ಬಂಧ ಹೇರಿತ್ತು.

ಇದೀಗ ಅಂಗಳದಲ್ಲಿ ಕಟ್ಟಿದ್ದ ಕರುವಿನ ಮೇಲೆ ಪಿಟ್ ಬುಲ್ ಶ್ವಾನ ಏಕಾಏಕಿ ದಾಳಿ ಮಾಡಿದ್ದು, ನಾಯಿಯ ಆಕ್ರಮಣಕಾರಿ ವರ್ತನೆಯನ್ನು ಕಂಡು ಕುಟುಂಬ ಸದಸ್ಯರು ಆಘಾತಕ್ಕೊಳಗಾಗಿದ್ದಾರೆ. ಕುಟುಂಬಸ್ಥರು ಮಧ್ಯಪ್ರವೇಶಿಸಿ ಪಿಟ್ ಬುಲ್ ಅನ್ನು ಓಡಿಸಿ ಕರುವನ್ನು ಉಳಿಸಲು ಪ್ರಯತ್ನಿಸಿರುವುದು ವಿಡಿಯೋದಲ್ಲಿ ಸೆರೆಯಾಗಿದೆ.

ವಿಡಿಯೋ ಇಲ್ಲಿದೆ ನೋಡಿ:

ಇದನ್ನೂ ಓದಿ: ಆನ್‌ಲೈನ್ ಗೇಮಿಂಗ್ ಮೂಲಕ 15 ಲಕ್ಷ ರೂ. ಕಳೆದುಕೊಂಡು ಆತ್ಮಹತ್ಯೆಗೆ ಯತ್ನಿಸಿದ ಕಾನ್‌ಸ್ಟೆಬಲ್

ಸದ್ಯ ವಿಡಿಯೋ ಎಲ್ಲೆಡೆ ವೈರಲ್​​ ಆಗುತ್ತಿದ್ದಂತೆ ನೆಟ್ಟಿಗರಿಂದ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಶ್ವಾನದ ಮಾಲೀಕನ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವಂತೆ ಸಾಕಷ್ಟು ನೆಟ್ಟಿಗರು ಪೊಲೀಸರಿಗೆ ಆಗ್ರಹಿಸಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಯಾವುದೇ ಪೊಲೀಸ್ ಕ್ರಮದ ವರದಿಯಾಗಿಲ್ಲ.

ಮತ್ತಷ್ಟು ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Akshatha Vorkady
Akshatha Vorkady

ಅಕ್ಷತಾ ವರ್ಕಾಡಿ- ಹುಟ್ಟೂರು ಕಾಸರಗೋಡು ಜಿಲ್ಲೆಯ ಮಂಜೇಶ್ವರದ ವರ್ಕಾಡಿ. ಸಮೂಹ ಸಂವಹನ ಮತ್ತು ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವೀಧರೆ. ಕಳೆದ ಮೂರು ವರ್ಷಗಳಿಂದ ‘ಉತ್ತಮ ಸಮಾಜಕ್ಕಾಗಿ’ ಟಿವಿ9 ಡಿಜಿಟಲ್​ನಲ್ಲಿ ಕೆಲಸ ಮಾಡುತ್ತಿದ್ದೇನೆ. ವೈರಲ್ ಸುದ್ದಿಗಳು, ಆಧ್ಯಾತ್ಮ, ಉದ್ಯೋಗವಕಾಶ, ಶಿಕ್ಷಣ, ಆರೋಗ್ಯ ಮತ್ತು ಪ್ರಯಾಣದ ಬಗ್ಗೆ ಬರೆಯುವುದರಲ್ಲಿ ಆಸಕ್ತಿಹೊಂದಿದ್ದು, ಓದುಗರಿಗೆ ಉತ್ತಮ ಲೇಖನಗಳನ್ನು ಒದಗಿಸುತ್ತಿದ್ದೇನೆ.

Read More
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!