AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಲ್ಯಾಂಡ್ ಆಗುವ ಮುನ್ನ ವಿಮಾನದ ವಿಂಡ್​ಸ್ಕ್ರೀನ್​ಗೆ ಡಿಕ್ಕಿ ಹೊಡೆದ ಪಕ್ಷಿಗಳ ಹಿಂಡು; ಬೆಂಕಿ ಕಿಡಿ ಹೊತ್ತಿದ ವಿಡಿಯೋ ವೈರಲ್

ಲಂಡನ್ ಮತ್ತು ಬೊಲೊಗ್ನಾ ನಡುವೆ ಮಾಲ್ಟಾ ಏರ್ ಬೋಯಿಂಗ್ 737-800 ವಿಮಾನ ನವೆಂಬರ್ 24ರಂದು ಹಾರಾಟ ನಡೆಸುತ್ತಿದ್ದಾಗ ಲ್ಯಾಂಡಿಂಗ್ ಪ್ರಕ್ರಿಯೆ ನಡೆಸುವಾಗ ಪಕ್ಷಿಗಳು ಬೃಹತ್ ಹಿಂಡುಗಳಾಗಿ ಬಂದು ಡಿಕ್ಕಿ ಹೊಡೆದಿವೆ.

ಲ್ಯಾಂಡ್ ಆಗುವ ಮುನ್ನ ವಿಮಾನದ ವಿಂಡ್​ಸ್ಕ್ರೀನ್​ಗೆ ಡಿಕ್ಕಿ ಹೊಡೆದ ಪಕ್ಷಿಗಳ ಹಿಂಡು; ಬೆಂಕಿ ಕಿಡಿ ಹೊತ್ತಿದ ವಿಡಿಯೋ ವೈರಲ್
ವಿಮಾನಕ್ಕೆ ಡಿಕ್ಕಿ ಹೊಡೆದ ಪಕ್ಷಿಗಳು
TV9 Web
| Edited By: |

Updated on: Nov 29, 2021 | 3:23 PM

Share

ವಿಮಾನ ಲ್ಯಾಂಡ್ ಆಗುವಾಗ ಪಕ್ಷಿಗಳು ವಿಮಾನದ ಮುಂದಿನ ಭಾಗದಲ್ಲಿರುವ ವಿಂಡ್​ಸ್ಕ್ರೀನ್ ಮೇಲೆ ಡಿಕ್ಕಿ ಹೊಡೆದಿದ್ದರಿಂದ ಇಟಲಿಯಲ್ಲಿ ವಿಮಾನವನ್ನು ಲ್ಯಾಂಡ್ ಮಾಡಲು ಪೈಲಟ್​ಗಳು ಪರದಾಡುವಂತಾಯಿತು. ವಿಂಡ್​ಸ್ಕ್ರೀನ್​ಗೆ ಪಕ್ಷಗಳು ಡಿಕ್ಕಿ ಹೊಡೆದು, ಅಲ್ಲೇ ಸತ್ತು ಅವುಗಳ ರಕ್ತ ಅಂಟಿದ್ದರೂ ಇಬ್ಬರು ಪೈಲಟ್‌ಗಳು ಬೋಯಿಂಗ್ 737-800 ಅನ್ನು ಇಟಲಿಯಲ್ಲಿ ಸುರಕ್ಷಿತವಾಗಿ ಇಳಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಲಂಡನ್ ಮತ್ತು ಬೊಲೊಗ್ನಾ ನಡುವೆ ಮಾಲ್ಟಾ ಏರ್ ಬೋಯಿಂಗ್ 737-800 ವಿಮಾನ ನವೆಂಬರ್ 24ರಂದು ಹಾರಾಟ ನಡೆಸುತ್ತಿದ್ದಾಗ ಲ್ಯಾಂಡಿಂಗ್ ಪ್ರಕ್ರಿಯೆ ನಡೆಸುವಾಗ ಪಕ್ಷಿಗಳು ಬೃಹತ್ ಹಿಂಡುಗಳಾಗಿ ಬಂದು ಡಿಕ್ಕಿ ಹೊಡೆದಿವೆ. ಪಕ್ಷಿಗಳು ವಿಮಾನದ ಮುಂಭಾಗಕ್ಕೆ ಡಿಕ್ಕಿ ಹೊಡೆದು, ವಿಂಡ್​ಸ್ಕ್ರೀನ್​ ಮೇಲೆ ಬಿದ್ದಿವೆ. ಹಾಗೇ, ವಿಮಾನದ ರೆಕ್ಕೆಗಳು ಮತ್ತು ಇಂಜಿನ್​ನಲ್ಲೂ ಸಿಲುಕಿಕೊಂಡಿವೆ. ಅದರ ಸಣ್ಣ ವಿಡಿಯೋ ತುಣುಕು ವೈರಲ್ ಆಗಿದೆ.

ಆನ್​ಲೈನ್​ನಲ್ಲಿ ವೈರಲ್ ಆಗಿರುವ ಈ ವಿಡಿಯೋದಲ್ಲಿ ಬೊಲೊಗ್ನಾ ವಿಮಾನ ನಿಲ್ದಾಣದಲ್ಲಿ ವಿಮಾನವು ಇಳಿಯುತ್ತಿದ್ದಂತೆ ಎಂಜಿನ್‌ನಿಂದ ಕಿಡಿಗಳು ಹಾರುತ್ತಿರುವುದನ್ನು ನೋಡಬಹುದು. ಅದೃಷ್ಟವಶಾತ್ ವಿಮಾನದಲ್ಲಿದ್ದ ಪ್ರತಿಯೊಬ್ಬರನ್ನೂ ಪೈಲಟ್‌ಗಳು ಸುರಕ್ಷಿತವಾಗಿ ಲ್ಯಾಂಡ್ ಮಾಡುವಲ್ಲಿ ಯಶಸ್ವಿಯಾಗಿದ್ದಾರೆ.

ಹಕ್ಕಿಯ ಹೊಡೆತದಿಂದಾಗಿ ಬಲ ಇಂಜಿನ್ ಸಂಪೂರ್ಣವಾಗಿ ಹಾನಿಗೊಳಗಾಗಿದೆ ಎಂದು ಏವಿಯೇಷನ್ 24 ವರದಿ ಮಾಡಿದೆ. ಇನ್ನೊಂದು ಎಂಜಿನ್‌ಗೂ ಸ್ವಲ್ಪ ಹಾನಿಯಾಗಿದೆ. ನಂತರ ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡ ಫೋಟೋಗಳಲ್ಲಿ ಕೆಲವು ಪಕ್ಷಿಗಳು ವಿಮಾನದ ರೆಕ್ಕೆಗಳ ಫ್ಲಾಪ್‌ಗಳಲ್ಲಿ ಸಿಕ್ಕಿಹಾಕಿಕೊಂಡಿರುವುದನ್ನು ನೋಡಬಹುದು. ಅಪಾಯಕಾರಿ ಲ್ಯಾಂಡಿಂಗ್ ಮಾಡಿದರೂ ಈ ಘಟನೆಯಲ್ಲಿ ಯಾರೂ ಗಾಯಗೊಂಡಿಲ್ಲ.

ಇದನ್ನೂ ಓದಿ: ಸ್ಕರ್ಟ್​, ಹೈ ಹೀಲ್ಸ್​ ಹಾಕ್ಕೊಂಡು ರಸ್ತೆಯಲ್ಲಿ ಪಲ್ಟಿ ಹೊಡೆದ ಯುವತಿ; ವಿಡಿಯೊ ವೈರಲ್​

ನಾನು ಬೇಕಾದ್ರೆ ಈಗ್ಲೇ ಸಾಯಲಿ, ಲಸಿಕೆ ಮಾತ್ರ ಹಾಕಿಸಿಕೊಳ್ಳಲ್ಲ ಎಂದ ಅಜ್ಜಿ; ವಿಡಿಯೋ ನೋಡಿ

Follow Us
ದಿಲೀಪ್ ರಾಜ್ ನಿಧನ: ಅಂತಿಮ ದರ್ಶನ ಪಡೆದು ಕಂಬನಿ ಮಿಡಿದ ಸೆಲೆಬ್ರಿಟಿಗಳು
ದಿಲೀಪ್ ರಾಜ್ ನಿಧನ: ಅಂತಿಮ ದರ್ಶನ ಪಡೆದು ಕಂಬನಿ ಮಿಡಿದ ಸೆಲೆಬ್ರಿಟಿಗಳು
Live: ತಮಿಳುನಾಡು ಸಿಎಂ ವಿಜಯ್ ವಿಶ್ವಾಸಮತ ಯಾಚನೆ ನೇರಪ್ರಸಾರ
Live: ತಮಿಳುನಾಡು ಸಿಎಂ ವಿಜಯ್ ವಿಶ್ವಾಸಮತ ಯಾಚನೆ ನೇರಪ್ರಸಾರ
ಹಗಲು ರಾತ್ರಿ ಹಣದ ಚಿಂತೆ ಮಾಡುತ್ತಿದ್ದೀರಾ? ಇದರಿಂದ ಯಾವ ದೋಷ ಬರುತ್ತೆ?
ಹಗಲು ರಾತ್ರಿ ಹಣದ ಚಿಂತೆ ಮಾಡುತ್ತಿದ್ದೀರಾ? ಇದರಿಂದ ಯಾವ ದೋಷ ಬರುತ್ತೆ?
ಇಂದು ಈ ರಾಶಿಯವರು ಅತಿಯಾದ ಕೋಪವನ್ನು ಕೈಬಿಡಿ
ಇಂದು ಈ ರಾಶಿಯವರು ಅತಿಯಾದ ಕೋಪವನ್ನು ಕೈಬಿಡಿ
ಬೆಳಗಾವಿಯಲ್ಲಿ ಭಾರಿ ಗಾಳಿ ಮಳೆಗೆ ಧರೆಗುರುಳಿದ ಮರಗಳು: ಸಂಚಾರ ಅಸ್ತವ್ಯಸ್ತ
ಬೆಳಗಾವಿಯಲ್ಲಿ ಭಾರಿ ಗಾಳಿ ಮಳೆಗೆ ಧರೆಗುರುಳಿದ ಮರಗಳು: ಸಂಚಾರ ಅಸ್ತವ್ಯಸ್ತ
ಪ್ರಧಾನಿ ಮೋದಿ ಹಾಸನದ ಮೆಗಾ ಡೇರಿ ಉದ್ಘಾಟನೆ ಮಾಡುತ್ತಾರೆ; ಹೆಚ್​ಡಿ ದೇವೇಗೌಡ
ಪ್ರಧಾನಿ ಮೋದಿ ಹಾಸನದ ಮೆಗಾ ಡೇರಿ ಉದ್ಘಾಟನೆ ಮಾಡುತ್ತಾರೆ; ಹೆಚ್​ಡಿ ದೇವೇಗೌಡ
ಸರ್ಕಾರಿ ನ್ಯಾಯಬೆಲೆ ಅಂಗಡಿ ಸಿನಿಮಾ: ಸಿಎಂ ಸಹಕಾರ ನೆನೆದ ಕುಮಾರ್ ಬಂಗಾರಪ್ಪ
ಸರ್ಕಾರಿ ನ್ಯಾಯಬೆಲೆ ಅಂಗಡಿ ಸಿನಿಮಾ: ಸಿಎಂ ಸಹಕಾರ ನೆನೆದ ಕುಮಾರ್ ಬಂಗಾರಪ್ಪ
ಮಳೆ ಕೊರತೆ ಮಧ್ಯೆ ತೀವ್ರ ಬಿಸಿಲು: ಬರಿದಾಗುತ್ತಿದೆ ಜೀವನಾಡಿ ಕೆಆರ್‌ಎಸ್
ಮಳೆ ಕೊರತೆ ಮಧ್ಯೆ ತೀವ್ರ ಬಿಸಿಲು: ಬರಿದಾಗುತ್ತಿದೆ ಜೀವನಾಡಿ ಕೆಆರ್‌ಎಸ್
ತಾಂಡಾ, ಹಾಡಿ ನಿವಾಸಿಗಳ ದಶಕಗಳ ಕನಸು ನನಸು
ತಾಂಡಾ, ಹಾಡಿ ನಿವಾಸಿಗಳ ದಶಕಗಳ ಕನಸು ನನಸು
ಮತ್ತೆ ಸನಾತನ ನಿರ್ಮೂಲನೆಯ ಹೇಳಿಕೆ ನೀಡಿ ವಿವಾದಕ್ಕೀಡಾದ ಉದಯನಿಧಿ ಸ್ಟಾಲಿನ್
ಮತ್ತೆ ಸನಾತನ ನಿರ್ಮೂಲನೆಯ ಹೇಳಿಕೆ ನೀಡಿ ವಿವಾದಕ್ಕೀಡಾದ ಉದಯನಿಧಿ ಸ್ಟಾಲಿನ್