AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral News: ಫಸ್ಟ್​​​ ಟೈಮ್​​​ ವಿಮಾನ ಪ್ರಯಾಣ, ಟಾಯ್ಲೆಟ್‌ ಎಂದು ಎಮರ್ಜೆನ್ಸಿ ಎಕ್ಸಿಟ್ ಬಾಗಿಲು ತೆರೆದ ಮಹಿಳೆ

ಮೊದಲ ವಿಮಾನ ಪ್ರಯಾಣದ ವೇಳೆ ಮಹಿಳೆಯೊಬ್ಬರು ಟಾಯ್ಲೆಟ್‌ ಬಾಗಿಲು ಎಂದು ಭಾವಿಸಿ ಎಮರ್ಜೆನ್ಸಿ ಎಕ್ಸಿಟ್ ಡೋರ್​ ತೆಗೆದು ಎಡವಟ್ಟು ಮಾಡಿಕೊಂಡಿರುವ ಘಟನೆ ಚೀನಾದಲ್ಲಿ ನಡೆದಿದೆ. ಸದ್ಯ ಈ ಘಟನೆ ಸೋಶಿಯಲ್​​ ಮೀಡಿಯಾಗಳಲ್ಲಿ ಭಾರೀ ವೈರಲ್​​ ಆಗಿದೆ.

Viral News: ಫಸ್ಟ್​​​ ಟೈಮ್​​​ ವಿಮಾನ ಪ್ರಯಾಣ, ಟಾಯ್ಲೆಟ್‌ ಎಂದು ಎಮರ್ಜೆನ್ಸಿ ಎಕ್ಸಿಟ್ ಬಾಗಿಲು ತೆರೆದ ಮಹಿಳೆ
ಅಕ್ಷತಾ ವರ್ಕಾಡಿ
|

Updated on: Jul 10, 2024 | 5:27 PM

Share

ಮೊದಲ ಬಾರಿಗೆ ವಿಮಾನದಲ್ಲಿ ಪ್ರಯಾಣಿಸುವಾಗ ಸ್ವಲ್ಪ ಭಯ, ಗೊಂದಲ ಆಗುವುದು ಸಹಜ. ಅದರಂತೆ ಇಲ್ಲೊಬ್ಬಳು ಮಹಿಳೆ ತನ್ನ ಮೊದಲ ವಿಮಾನ ಪ್ರಯಾಣದ ವೇಳೆ ಎಡವಟ್ಟು ಮಾಡಿಕೊಂಡಿದ್ದು, ಸದ್ಯ ಘಟನೆ ಸೋಶಿಯಲ್​​ ಮೀಡಿಯಾಗಳಲ್ಲಿ ಭಾರೀ ವೈರಲ್​​ ಆಗಿದೆ. ಮಹಿಳೆ ವಿಮಾನದಲ್ಲಿ ಟಾಯ್ಲೆಟ್​​​​ ಬಾಗಿಲು ಎಂದು ಭಾವಿಸಿ ಎಮರ್ಜೆನ್ಸಿ ಎಕ್ಸಿಟ್ ಬಾಗಿಲು ತೆರೆದಿದ್ದಾಳೆ.

ಸೌತ್ ಚೀನಾ ಮಾರ್ನಿಂಗ್ ಪೋಸ್ಟ್ ವರದಿಯ ಪ್ರಕಾರ, ಜುಲೈ 4 ರಂದು ಚೀನಾದ ಪೂರ್ವ ನಗರವಾದ ಕುಝೌದಿಂದ ಏರ್ ಚೀನಾ ವಿಮಾನವು ದೇಶದ ನೈಋತ್ಯ ಭಾಗದಲ್ಲಿರುವ ಚೆಂಗ್ಡುವಿಗೆ ಹಾರಬೇಕಿತ್ತು, ಆದರೆ ಮಹಿಳಾ ಪ್ರಯಾಣಿಕರೊಬ್ಬರು ಆಕಸ್ಮಿಕವಾಗಿ ವಿಮಾನದ ತುರ್ತು ನಿರ್ಗಮನ ಬಾಗಿಲನ್ನು ತೆರೆದಿದ್ದಾರೆ. ಇದರಿಂದಾಗಿ ವಿಮಾನದಿಂದ ಪ್ರಯಾಣಿಕರನ್ನು ಹೊರತಂದು ವಿಮಾನ ಹಾರಾಟವನ್ನೂ ರದ್ದುಗೊಳಿಸಲಾಗಿದೆ. ಅದೃಷ್ಟವಶಾತ್ ಈ ಘಟನೆಯಿಂದಾಗಿ ಭಾರೀ ಅನಾಹುತ ತಪ್ಪಿದೆ.

ಇದನ್ನೂ ಓದಿ: Joseph Radhik: ಅಂಬಾನಿ ಮಗನ ಮದುವೆಯ ಫೋಟೋಗ್ರಾಫರ್ ಯಾರು ಗೊತ್ತಾ? ಅವರು ಪಡೆಯುವ ಸಂಭಾವನೆ ಎಷ್ಟು?

ವರದಿಗಳ ಪ್ರಕಾರ, ವಿಮಾನದ ಸಿಬ್ಬಂದಿಗಳನ್ನು ಕೇಳದೆ ಏಕಾಏಕಿ ತುರ್ತುನಿರ್ಗಮನದ ಬಾಗಿಲು ತೆರೆದ ಮಹಿಳೆಯನ್ನು ಪೊಲೀಸರು ವಿಚಾರಣೆಗೆ ಕರೆದೊಯ್ದಿದ್ದಾರೆ. ಈ ಘಟನೆ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ವೈರಲ್ ಆಗುತ್ತಿದೆ. “ಶೌಚಾಲಯ ಎಲ್ಲಿದೆ” ಎಂದು ಸಿಬ್ಬಂದಿಯನ್ನು ಕೇಳಬಹುದಿತ್ತು’ ಎಂದು ಸಾಕಷ್ಟು ನೆಟ್ಟಿಗರು ಕಾಮೆಂಟ್​ನಲ್ಲಿ ತಿಳಿಸಿದ್ದಾರೆ.

ಮತ್ತಷ್ಟು ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಚಪ್ಪಾಳೆ ತಟ್ಟುವುದು ಯಾಕೆ? ಇದರ ಹಿಂದಿನ ರಹಸ್ಯವೇನು?
ಚಪ್ಪಾಳೆ ತಟ್ಟುವುದು ಯಾಕೆ? ಇದರ ಹಿಂದಿನ ರಹಸ್ಯವೇನು?
ಇಂದು ಈ ರಾಶಿಯವರ ಪ್ರೇಮ ವ್ಯವಹಾರಗಳಲ್ಲಿ ಮನ್ನಣೆ
ಇಂದು ಈ ರಾಶಿಯವರ ಪ್ರೇಮ ವ್ಯವಹಾರಗಳಲ್ಲಿ ಮನ್ನಣೆ
‘ಸೀತಾ ಪಯಣ’ ಸಿನಿಮಾ ನೋಡಿ ಎಳೆಎಳೆಯಾಗಿ ವಿಮರ್ಶೆ ತಿಳಿಸಿದ ಶಿವಣ್ಣ
‘ಸೀತಾ ಪಯಣ’ ಸಿನಿಮಾ ನೋಡಿ ಎಳೆಎಳೆಯಾಗಿ ವಿಮರ್ಶೆ ತಿಳಿಸಿದ ಶಿವಣ್ಣ
ಕನ್ನಡ ಚಿತ್ರರಂಗಕ್ಕೆ ಹೊಸ ವಿಲನ್ ಕಾರ್ತಿಕ್ ಮಹೇಶ್; ತನಿಷಾಗೆ ಖುಷಿಯೋ ಖುಷಿ
ಕನ್ನಡ ಚಿತ್ರರಂಗಕ್ಕೆ ಹೊಸ ವಿಲನ್ ಕಾರ್ತಿಕ್ ಮಹೇಶ್; ತನಿಷಾಗೆ ಖುಷಿಯೋ ಖುಷಿ
ಮುಡಾ ಬೆನ್ನತ್ತಿದ್ದ ಸ್ನೇಹಮಯಿ ಕೃಷ್ಣ ಅರೆಸ್ಟ್: ಮನೆಯಲ್ಲಿ ಏನೇನು ಸಿಕ್ತು?
ಮುಡಾ ಬೆನ್ನತ್ತಿದ್ದ ಸ್ನೇಹಮಯಿ ಕೃಷ್ಣ ಅರೆಸ್ಟ್: ಮನೆಯಲ್ಲಿ ಏನೇನು ಸಿಕ್ತು?
ಸಿಗರೇಟ್ ಸೇದಬೇಡಿ ಎಂದಿದ್ದಕ್ಕೆ ತನ್ನ ಬೈಕ್​​ಗೇ ಬೆಂಕಿ ಹಚ್ಚಿದ ಯುವಕ!
ಸಿಗರೇಟ್ ಸೇದಬೇಡಿ ಎಂದಿದ್ದಕ್ಕೆ ತನ್ನ ಬೈಕ್​​ಗೇ ಬೆಂಕಿ ಹಚ್ಚಿದ ಯುವಕ!
ವಿಧವೆ ಮಹಿಳೆ ನೇಣಿಗೆ ಶರಣು, ಡೆತ್​​ನೋಟ್​​​ನಲ್ಲಿ ಪೊಲೀಸಪ್ಪನ ಕೃತ್ಯ ಬಯಲು
ವಿಧವೆ ಮಹಿಳೆ ನೇಣಿಗೆ ಶರಣು, ಡೆತ್​​ನೋಟ್​​​ನಲ್ಲಿ ಪೊಲೀಸಪ್ಪನ ಕೃತ್ಯ ಬಯಲು
ಟ್ರಂಪ್ 'ಸ್ಟಾಂಡ್​ಅಪ್' ಕಾಮಿಡಿ; ಮುಜುಗರಕ್ಕೀಡಾದ ಪಾಕಿಸ್ತಾನದ ಪ್ರಧಾನಿ
ಟ್ರಂಪ್ 'ಸ್ಟಾಂಡ್​ಅಪ್' ಕಾಮಿಡಿ; ಮುಜುಗರಕ್ಕೀಡಾದ ಪಾಕಿಸ್ತಾನದ ಪ್ರಧಾನಿ
ಪುತ್ರಿಯ ಸಿನಿಮಾ ನೋಡಿ ಖುಷಿ ಪಟ್ಟ ಅರ್ಜುನ್ ಸರ್ಜಾ ದಂಪತಿ: ವಿಡಿಯೋ
ಪುತ್ರಿಯ ಸಿನಿಮಾ ನೋಡಿ ಖುಷಿ ಪಟ್ಟ ಅರ್ಜುನ್ ಸರ್ಜಾ ದಂಪತಿ: ವಿಡಿಯೋ
ಶಿವಾಜಿ ಜಯಂತಿಯಲ್ಲಿ ಕಲ್ಲು ತೂರಾಟ: ಶಾಂತಿ ಸಭೆಗೆ ಬಾರದ ಮುಸ್ಲಿಂ ಮುಖಂಡರು
ಶಿವಾಜಿ ಜಯಂತಿಯಲ್ಲಿ ಕಲ್ಲು ತೂರಾಟ: ಶಾಂತಿ ಸಭೆಗೆ ಬಾರದ ಮುಸ್ಲಿಂ ಮುಖಂಡರು