AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Sachin@50: ಅಭಿಮಾನಿಯ ಪ್ರೀತಿಗೆ ತಕ್ಷಣ ಪ್ರತಿಕ್ರಿಯಿಸಿದ ಮಾಸ್ಟರ್ ಬ್ಲಾಸ್ಟರ್ ತೆಂಡುಲ್ಕರ್

'ಕ್ರಿಕೆಟ್‌ ದೇವರು' ಎಂದು ಕರೆಸಿಕೊಳ್ಳುವ ಮಾಸ್ಟರ್ ಬ್ಲಾಸ್ಟರ್ ತೆಂಡುಲ್ಕರ್ ನಾಳೆ(ಏ. 24)ರಂದು ತನ್ನ 50ನೇ ವರ್ಷಕ್ಕೆ ಕಾಲಿಡುತ್ತಿದ್ದು, ಕ್ರಿಕೆಟ್​​ ದೇವರ ಹುಟ್ಟುಹಬ್ಬದ ಸಲುವಾಗಿ ಅಭಿಮಾನಿಯೊಬ್ಬರು ವಿಶೇಷವಾಗಿ ಶುಭಾಶಯ ತಿಳಿಸಿದ್ದಾರೆ.

Sachin@50: ಅಭಿಮಾನಿಯ ಪ್ರೀತಿಗೆ ತಕ್ಷಣ ಪ್ರತಿಕ್ರಿಯಿಸಿದ ಮಾಸ್ಟರ್ ಬ್ಲಾಸ್ಟರ್ ತೆಂಡುಲ್ಕರ್
Sachin Tendulkar 50th BirthdayImage Credit source: Twitter
ಅಕ್ಷತಾ ವರ್ಕಾಡಿ
|

Updated on:Apr 23, 2023 | 1:04 PM

Share

ವಿಶ್ವದ ಶ್ರೇಷ್ಠ ಬ್ಯಾಟ್ಸ್‌ಮನ್‌ಗಳಲ್ಲಿ ಒಬ್ಬರಾದ ಸಚಿನ್ ತೆಂಡೂಲ್ಕರ್ (Sachin Tendulkar) ತಮ್ಮ ವೃತ್ತಿ ಜೀವನದಿಂದ ನಿವೃತ್ತಿ ಹೊಂದಿದ್ದರೂ ಕೂಡ ಅಭಿಮಾನಿಗಳ ಪ್ರೀತಿಯನ್ನು ಇನ್ನೂ ಹಾಗೆಯೇ ಉಳಿಸಿಕೊಂಡು ಬಂದಿದ್ದಾರೆ. ಇನ್ನೂ ಕೂಡ ಸಚಿನ್​​ ಎಂಬ ಹೆಸರಿನ ಕ್ರೇಜ್​ ಫ್ಯಾನ್ಸ್​​ನ್ನು ಬಿಟ್ಟಿಲ್ಲ. ಇದಕ್ಕೊಂದು ಉತ್ತಮ ನಿದರ್ಶನವೆಂಬಂತೆ ವಿಡಿಯೋ ಒಂದು ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್​​ ಆಗಿದೆ. ಆಭಿಮಾನಿಯ ಅಭಿಮಾನಕ್ಕೆ ಮೆಚ್ಚಿ ಸ್ವತಃ ಸಚಿನ್ ತೆಂಡೂಲ್ಕರ್ ಅವರೇ ತಮ್ಮ ಟ್ವಿಟರ್​​ ಖಾತೆಯಲ್ಲಿ ರೀ ಟ್ವೀಟ್​​ ಮಾಡಿದ್ದಾರೆ.

‘ಕ್ರಿಕೆಟ್‌ ದೇವರು’ ಎಂದು ಕರೆಸಿಕೊಳ್ಳುವ ಮಾಸ್ಟರ್ ಬ್ಲಾಸ್ಟರ್ ತೆಂಡುಲ್ಕರ್ ನಾಳೆ(ಏ. 24)ರಂದು ತನ್ನ 50ನೇ ವರ್ಷಕ್ಕೆ ಕಾಲಿಡುತ್ತಿದ್ದು, ಕ್ರಿಕೆಟ್​​ ದೇವರ ಹುಟ್ಟುಹಬ್ಬದ ಸಲುವಾಗಿ ಅಭಿಮಾನಿಯೊಬ್ಬರು ವಿಶೇಷವಾಗಿ ಶುಭಾಶಯ ತಿಳಿಸಿದ್ದಾರೆ. ಹೌದು ಅಭಿಮಾನಿಯೊಬ್ಬರು ತನ್ನ ಎಡಗೈಯ ಮೇಲೆ ತೆಂಡುಲ್ಕರ್ ಅವರ ಹಚ್ಚೆ ಹಾಕಿಸಿಕೊಂಡಿದ್ದಾರೆ. ಜೊತೆಗೆ ಈ ಪೋಟೋ ಮತ್ತು ಹಚ್ಚೆ ಹಾಕಿಸಿಕೊಳ್ಳುತ್ತಿರುವ ವಿಡಿಯೋವನ್ನು ಸೋಶಿಯಲ್​ ಮೀಡಿಯಾಗಳಲ್ಲಿ ಹಂಚಿಕೊಂಡಿದ್ದಾರೆ. ಜೊತೆಗೆ ‘ದಯವಿಟ್ಟು ನನ್ನ ಟ್ಯಾಟೂ ನೋಡಿ ದೇವರೇ..’ ಎಂದು ಕ್ಯಾಷ್ಟನ್​​ ಬರೆದುಕೊಂಡಿದ್ದಾರೆ. ಆ ಪೋಸ್ಟ್​​​ ಇಲ್ಲಿದೆ ನೋಡಿ.

ಇದನ್ನೂ ಓದಿ: ಲೇಡಿ ಬ್ರೂಸ್ ಲೀ ಎಂದೇ ಸೋಶಿಯಲ್​​ ಮೀಡಿಯಾಗಳಲ್ಲಿ ವೈರಲ್ ಆದ ಮಹಿಳೆ

ಅಭಿಮಾನಿಯ ಅಭಿಮಾನಕ್ಕೆ ತಕ್ಷಣವೇ ಸಚಿನ್ ತೆಂಡೂಲ್ಕರ್ ಟ್ವಿಟರ್‌ನಲ್ಲಿ ಪ್ರತಿಕ್ರಿಯಿಸಿದ್ದಾರೆ. ’10/10! ‘ಎಂದು ರೀಟ್ವೀಟ್​​ ಮಾಡಿದ್ದಾರೆ. ಆ ಪೋಸ್ಟ್​​ ಇಲ್ಲಿದೆ ನೋಡಿ.

100 ಶತಕಗಳನ್ನು ಗಳಿಸಿದ ಮೊದಲ ಆಟಗಾರ ಎಂಬ ಹೆಗ್ಗಳಿಕೆಗೆ ಪಾತ್ರರಾದ ಸಚಿನ್, 2013 ರಲ್ಲಿ ಅಂತರಾಷ್ಟ್ರೀಯ ಕ್ರಿಕೆಟ್‌ನಿಂದ ನಿವೃತ್ತಿ ಹೊಂದಿದ್ದರು. ಸಚಿನ್ ತಮ್ಮ ನಿವೃತ್ತಿಯ ನಂತರ ಸಾಮಾಜಿಕ ಮಾಧ್ಯಮದಲ್ಲಿ ತುಂಬಾ ಸಕ್ರಿಯರಾಗಿದ್ದಾರೆ. ಹೊಸ ಹೊಸ ಪೋಸ್ಟ್​​ಗಳನ್ನು ಹಂಚಿಕೊಳ್ಳುತ್ತಿರುತ್ತಾರೆ. ಪ್ರಸ್ತುತ ಇಂಡಿಯನ್ ಪ್ರೀಮಿಯರ್ ಲೀಗ್‌ನಲ್ಲಿ ಮುಂಬೈ ಇಂಡಿಯನ್ಸ್‌ಗೆ ಮಾರ್ಗದರ್ಶಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.

ಮತ್ತಷ್ಟು ವೈರಲ್​ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ: 

Published On - 1:04 pm, Sun, 23 April 23

Follow Us
ರಾಷ್ಟ್ರಪತಿಗಳ ಗಮನಸೆಳೆದ ಕರಗ: ದ್ರೌಪದಿ ಮುರ್ಮು ಹೇಳಿದ್ದೇನು ಗೊತ್ತಾ?
ರಾಷ್ಟ್ರಪತಿಗಳ ಗಮನಸೆಳೆದ ಕರಗ: ದ್ರೌಪದಿ ಮುರ್ಮು ಹೇಳಿದ್ದೇನು ಗೊತ್ತಾ?
ಮೊದಲ ಪಂದ್ಯದಲ್ಲಿ ಗೋಲ್ಡನ್ ಡಕ್​ಗೆ ಬಲಿಯಾದ ಕೆಎಲ್ ರಾಹುಲ್
ಮೊದಲ ಪಂದ್ಯದಲ್ಲಿ ಗೋಲ್ಡನ್ ಡಕ್​ಗೆ ಬಲಿಯಾದ ಕೆಎಲ್ ರಾಹುಲ್
ಚಂಡೀಗಢದ ಬಿಜೆಪಿ ಕಚೇರಿಯ ಹೊರಗೆ ಗ್ರೆನೇಡ್ ಸ್ಫೋಟ; ವಿಡಿಯೋ ಇಲ್ಲಿದೆ
ಚಂಡೀಗಢದ ಬಿಜೆಪಿ ಕಚೇರಿಯ ಹೊರಗೆ ಗ್ರೆನೇಡ್ ಸ್ಫೋಟ; ವಿಡಿಯೋ ಇಲ್ಲಿದೆ
ನೀವು ಯಾಕೆ ಚುನಾವಣೆಯಲ್ಲಿ ಸ್ಪರ್ಧಿಸಲ್ಲ? ನೇರವಾಗಿ ಉತ್ತರಿಸಿದ ಉಪೇಂದ್ರ
ನೀವು ಯಾಕೆ ಚುನಾವಣೆಯಲ್ಲಿ ಸ್ಪರ್ಧಿಸಲ್ಲ? ನೇರವಾಗಿ ಉತ್ತರಿಸಿದ ಉಪೇಂದ್ರ
ಮೊದಲ ಪಂದ್ಯದಲ್ಲೇ ರಿಷಭ್ ಪಂತ್​ಗೆ ಕೈಕೊಟ್ಟ ಅದೃಷ್ಟ
ಮೊದಲ ಪಂದ್ಯದಲ್ಲೇ ರಿಷಭ್ ಪಂತ್​ಗೆ ಕೈಕೊಟ್ಟ ಅದೃಷ್ಟ
ದಾವಣಗೆರೆಗೆ ಬಂದ ಸಿದ್ದರಾಮಯ್ಯಗೆ ಪ್ರೀತಿಯಿಂದ ಕ್ಲಾಸ್ ತೆಗೆದುಕೊಂಡ ಅಭಿಮಾನಿ
ದಾವಣಗೆರೆಗೆ ಬಂದ ಸಿದ್ದರಾಮಯ್ಯಗೆ ಪ್ರೀತಿಯಿಂದ ಕ್ಲಾಸ್ ತೆಗೆದುಕೊಂಡ ಅಭಿಮಾನಿ
ಟೋಲ್‌ನಲ್ಲಿ ಹೊಸ ನಿಯಮ ಪರಿಣಾಮ: ಫಾಸ್ಟ್‌ಟ್ಯಾಗ್​ಗೆ ಹೆಚ್ಚಿದ ಬೇಡಿಕೆ
ಟೋಲ್‌ನಲ್ಲಿ ಹೊಸ ನಿಯಮ ಪರಿಣಾಮ: ಫಾಸ್ಟ್‌ಟ್ಯಾಗ್​ಗೆ ಹೆಚ್ಚಿದ ಬೇಡಿಕೆ
ಯಮರಾಜನನ್ನು ಭೇಟಿಯಾದ ರಾಹುಲ್ ಗಾಂಧಿ
ಯಮರಾಜನನ್ನು ಭೇಟಿಯಾದ ರಾಹುಲ್ ಗಾಂಧಿ
ಜನಗಣತಿ: ಸ್ವಯಂ ಗಣತಿ ಹೇಗೆ ಮಾಡುವುದು? ಸಾರ್ವಜನಿಕರು ಭಾಗಿಯಾಗೋದು ಹೇಗೆ?
ಜನಗಣತಿ: ಸ್ವಯಂ ಗಣತಿ ಹೇಗೆ ಮಾಡುವುದು? ಸಾರ್ವಜನಿಕರು ಭಾಗಿಯಾಗೋದು ಹೇಗೆ?
ಜಾತ್ರೆಯಲ್ಲಿ ಯುವತಿಯರನ್ನು ಹಿಂಬಾಲಿಸಿ ಖಾಸಗಿ ಭಾಗ ಮುಟ್ಟಿ ಹಿಂಸೆ
ಜಾತ್ರೆಯಲ್ಲಿ ಯುವತಿಯರನ್ನು ಹಿಂಬಾಲಿಸಿ ಖಾಸಗಿ ಭಾಗ ಮುಟ್ಟಿ ಹಿಂಸೆ