AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ಲೀಸ್​​​ ಸರ್​ ಪಾಸ್ ಮಾಡಿ, ಇಲ್ಲಾಂದ್ರೆ ಮನೇಲಿ ನನ್ಗೆ ಮದ್ವೆ ಮಾಡ್ತಾರೆ, ಉತ್ತರ ಪತ್ರಿಕೆಯಲ್ಲಿ ವಿದ್ಯಾರ್ಥಿನಿಯ ಕೋರಿಕೆ 

ವಿದ್ಯಾರ್ಥಿಗಳ ಉತ್ತರ ಪತ್ರಿಕೆ ಮೌಲ್ಯ ಮಾಪನದ ಸಂದರ್ಭದಲ್ಲಿ ವಿದ್ಯಾರ್ಥಿಗಳು ಬರೆದಿರುವ ಕೆಲವು ತರ್ಲೆ ಉತ್ತರಗಳ ಸುದ್ದಿಗಳು, ಹೇಗಾದರೂ ಮಾಡಿ ನನ್ನನ್ನು ಪಾಸ್ ಮಾಡಿ ಎಂದು ಮೌಲ್ಯ ಮಾಪಕರಿಗೆ ಮನವಿ ಮಾಡುವಂತಹ  ಸುದ್ದಿಗಳು ಆಗಾಗ್ಗೆ ಕೇಳಿಬರುತ್ತಿರುತ್ತವೆ. ಈಗ ಅದೇ ರೀತಿಯ ಸುದ್ದಿಯೊಂದು ವೈರಲ್  ಆಗಿದ್ದು, ವಿದ್ಯಾರ್ಥಿನಿಯೊಬ್ಬಳು “ಸರ್ ದಯವಿಟ್ಟು ನನ್ನನ್ನು ಪಾಸ್ ಮಾಡಿ ಇಲ್ಲಾಂದ್ರೆ ಮನೆಯಲ್ಲಿ ನನ್ಗೆ  ಮದ್ವೆ ಮಾಡಿಬಿಡುತ್ತಾರೆ” ಎಂಬ ಬರಹವನ್ನು ಉತ್ತರ ಪತ್ರಿಕೆಯಲ್ಲಿ ಬರೆದು ಆಕೆಯನ್ನು ಪಾಸ್ ಮಾಡುವಂತೆ ಮೌಲ್ಯಮಾಪಕರಲ್ಲಿ ಮನವಿ ಸಲ್ಲಿಸಿದ್ದಾಳೆ. 

ಪ್ಲೀಸ್​​​ ಸರ್​ ಪಾಸ್ ಮಾಡಿ, ಇಲ್ಲಾಂದ್ರೆ ಮನೇಲಿ ನನ್ಗೆ ಮದ್ವೆ ಮಾಡ್ತಾರೆ, ಉತ್ತರ ಪತ್ರಿಕೆಯಲ್ಲಿ ವಿದ್ಯಾರ್ಥಿನಿಯ ಕೋರಿಕೆ 
ವೈರಲ್​​​​ ಸ್ಟೋರಿ
ಮಾಲಾಶ್ರೀ ಅಂಚನ್​
| Updated By: ಅಕ್ಷಯ್​ ಪಲ್ಲಮಜಲು​​|

Updated on: Mar 12, 2024 | 2:26 PM

Share

ಮಾರ್ಚ್, ಏಪ್ರಿಲ್ ತಿಂಗಳೆಂದರೆ ಅದು ಪರೀಕ್ಷೆ ಮತ್ತು ಮೌಲ್ಯ ಮಾಪನದ ಸಮಯ. ವಿದ್ಯಾರ್ಥಿಗಳಿಗೆ ಪರೀಕ್ಷೆ ಬರೆಯುವ ಸಂದರ್ಭದಲ್ಲಿ ಭಯ ಇರುತ್ತದೆಯೋ ಗೊತ್ತಿಲ್ಲ, ಆದರೆ ಎಕ್ಸಾಂ ರಿಸಲ್ಟ್ ದಿನದಂದು ಅವರಿಗೆ ಸ್ವಲ್ಪ ಮನದಲ್ಲಿ ಕೊಂಚ ಭಯ ಇದ್ದೇ ಇರುತ್ತೆ. ಇದೇ ಭಯದ ಕಾರಣದಿಂದ ಪರೀಕ್ಷೆ ಚೆನ್ನಾಗಿ ಬರೆದ್ರೂ ಕೂಡಾ ಕೆಲು ವಿದ್ಯಾರ್ಥಿಗಳು ಉತ್ತರ ಪತ್ರಿಕೆಯ ಕೊನೆಯಲ್ಲಿ ದಯವಿಟ್ಟು ನನ್ನನ್ನು ಪಾಸ್ ಮಾಡಿ ಎಂಬ   ಬರಹಗಳನ್ನು ಬರೆಯುತ್ತಾರೆ. ಪ್ರತಿವರ್ಷ ಕೂಡಾ  ಉತ್ತರ ಪತ್ರಿಕೆಯ ಮೌಲ್ಯ ಮಾಪನದ ಸಂದರ್ಭದಲ್ಲಿ ಇಂತಹ ಕೆಲವೊಂದು ಪ್ರಕರಣಗಳು ಸಿಕ್ಕೇ ಸಿಗುತ್ತದೆ. ಕೆಲವೊಂದು ತರ್ಲೆ ಉತ್ತರಗಳನ್ನು ಬರೆದಿರುವ ಉತ್ತರ ಪತ್ರಿಕೆಗಳು ಸಿಕ್ಕರೆ, ಇನ್ನೂ ಕೆಲವು ನೂರು ರೂಪಾಯಿ ನೋಟನ್ನು ಉತ್ತರ ಪತ್ರಿಕೆಯಲ್ಲಿ ಅಂಟಿಸಿ ದಯವಿಟ್ಟು ನನ್ನನ್ನು ಪಾಸ್ ಮಾಡಿ ಎಂದು ಮೌಲ್ಯಮಾಪಕರಿಗೆ ಮನವಿ ಸಲ್ಲಿಸಿದ ವಿದ್ಯಾರ್ಥಿಗಳ ಉತ್ತರ ಪತ್ರಿಕೆಗಳ ಫೋಟೋಗಳು, ಸುದ್ದಿಗಳು ಈ ಹಿಂದೆ  ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದವು.  ಇದೀಗ ಅಂತಹದೊಂದು ಸುದ್ದಿ ಹರಿದಾಡುತ್ತಿದ್ದು, ವಿದ್ಯಾರ್ಥಿನಿಯೊಬ್ಬಳು “ಸರ್ ದಯವಿಟ್ಟು ನನ್ನನ್ನು ಪಾಸ್ ಮಾಡಿ ಇಲ್ಲಾಂದ್ರೆ ಮನೆಯಲ್ಲಿ ನನಗೆ ಮದ್ವೆ ಮಾಡ್ತಾರೆ” ಎಂಬ ಬರಹವನ್ನು ಉತ್ತರ ಪತ್ರಿಕೆಯಲ್ಲಿ ಬರೆದು ಆಕೆಯನ್ನು ಪಾಸ್ ಮಾಡುವಂತೆ ಮೌಲ್ಯಮಾಪಕರಲ್ಲಿ ಮನವಿ ಸಲ್ಲಿಸಿದ್ದಾಳೆ. ಈ ಉತ್ತರ ಪತ್ರಿಕೆಯ ಫೋಟೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ.

ಮೌಲ್ಯ ಮಾಪಕರಿಗೆ ವಿದ್ಯಾರ್ಥಿನಿಯ ಮನವಿ:

ಈ ಘಟನೆ ಬಿಹಾರದಲ್ಲಿ ನಡೆದಿದ್ದು, ಬಿಹಾರದ  ಬೋರ್ಡ್  ಪರೀಕ್ಷೆಯಲ್ಲಿ ವಿದ್ಯಾರ್ಥಿನಿಯೊಬ್ಬಳು ʼದಯವಿಟ್ಟು ನನ್ನನ್ನು ಪಾಸ್ ಮಾಡಿ ಸರ್, ಇಲ್ಲಾಂದ್ರೆ  ನನ್ನ ತಂದೆ ನನಗೆ ಮದುವೆ ಮಾಡ್ತಾರೆʼ ಎಂದು ಉತ್ತರ ಪತ್ರಿಕೆಯಲ್ಲಿ ಬರೆದು ಆಕೆಯನ್ನು ಹೇಗಾದರೂ ಪರೀಕ್ಷೆಯಲ್ಲಿ ಪಾಸ್ ಮಾಡುವಂತೆ ಮೌಲ್ಯ ಮಾಪಕರಿಗೆ ಮನವಿಯನ್ನು ಮಾಡಿದ್ದಾಳೆ.

ಇದನ್ನೂ ಓದಿ: ಮಾತ್ರೆ ಪ್ಯಾಕೆಟ್​​ ಮೇಲೆ ಕೆಂಪು ಗೆರೆ ಏಕೆ ಇರುತ್ತದೆ? ಇದರ ಅರ್ಥವೇನು?

12 ನೇ ತರಗತಿಯ ಬೋರ್ಡ್ ಪರೀಕ್ಷೆಯ  ಮೌಲ್ಯ ಮಾಪನದ ಸಂದರ್ಭದಲ್ಲಿ ಈ ಉತ್ತರ ಪತ್ರಿಕೆ ಸಿಕ್ಕಿದ್ದು,  ವಿದ್ಯಾರ್ಥಿನಿ ಉತ್ತರ ಪತ್ರಿಕೆಯಲ್ಲಿ “ನಾನು ಬಡ ಕುಟುಂಬದ ಹುಡುಗಿ. ನನ್ನ ತಂದೆ ಕೃಷಿಕರಾಗಿದ್ದು, ನನ್ನ ವಿದ್ಯಾಭ್ಯಾಸದ ಹೊರೆಯನ್ನು ಅವರಿಗೆ ಹೊರಲು ಸಾಧ್ಯವಾಗುತ್ತಿಲ್ಲ.  ಹಾಗಾಗಿ 318  ಕ್ಕಿಂತ ಕಡಿಮೆ ಅಂಕ ತೆಗೆದರೆ ಮದುವೆ ಮಾಡುವುದಾಗಿ ನನ್ನ ತಂದೆ ಹೇಳಿದ್ದಾರೆ. ಆದರೆ ನನಗೆ ಇಷ್ಟು ಬೇಗ ಮದುವೆಯಾಗಲು ಇಷ್ಟವಿಲ್ಲ. ಸರ್ ದಯವಿಟ್ಟು ನನ್ನನ್ನು ಪಾಸ್ ಮಾಡಿ” ಎಂದು ಉತ್ತರ ಪತ್ರಿಕೆಯಲ್ಲಿ ಮೌಲ್ಯ ಮಾಪಕರಿಗೆ ಮನವಿಯನ್ನು ಮಾಡಿದ್ದಾಳೆ. ಈ ಕುರಿತ ಫೋಟೋವೊಂದು ಇದೀಗ ವೈರಲ್ ಆಗುತ್ತಿದೆ.

ಇನ್ನಷ್ಟು ವೈರಲ್ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?