Viral Video: ಪ್ರಧಾನಮಂತ್ರಿ ಆವಾಸ್ ಯೋಜನೆಯ ಫಲಾನುಭವಿ ಮನೆಯಲ್ಲಿ ಟೀ ಕುಡಿದ ಪ್ರಧಾನಿ ಮೋದಿ

ಪ್ರಧಾನಿ ಮೋದಿ ಪ್ರಸ್ತುತ ಅಯೋಧ್ಯೆಯಲ್ಲಿದ್ದು, ಅಲ್ಲಿ ಇಂದು  ವಾಲ್ಮೀಕಿ ವಿಮಾನ ನಿಲ್ದಾಣ ಹಾಗೂ ಅಮೃತ್ ಭಾರತ್ ಎಕ್ಸ್​​​ಪ್ರೆಸ್​​ ಮತ್ತು   ವಂದೇ ಭಾರತ್ ರೈಲುಗಳಿಗೆ ಚಾಲನೆ ನೀಡಿದ್ದಾರೆ. ಈ ನಡುವೆ ಪ್ರಧಾನಿ ಮೋದಿಯವರು ಪಿ.ಎಂ ಆವಾಸ್ ಯೋಜನೆ ಮತ್ತು ಉಜ್ವಲ ಯೋಜನೆಯ  ಫಲಾನುಭವಿ ಮೀರಾ ಮಾಂಝಿ ಎಂಬವರ ಮನೆಗೆ ಆಚ್ಚರಿಯ ಭೇಟಿಯನ್ನು ನೀಡಿದ್ದಾರೆ. ಈ ಕುರಿತ ವಿಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ಸಖತ್ ವೈರಲ್ ಆಗಿದೆ. 

Viral Video: ಪ್ರಧಾನಮಂತ್ರಿ ಆವಾಸ್ ಯೋಜನೆಯ ಫಲಾನುಭವಿ ಮನೆಯಲ್ಲಿ ಟೀ ಕುಡಿದ ಪ್ರಧಾನಿ ಮೋದಿ
Follow us
| Updated By: ಅಕ್ಷಯ್​ ಪಲ್ಲಮಜಲು​​

Updated on: Dec 30, 2023 | 3:45 PM

ಪ್ರಧಾನಿ ಮೋದಿ ಇಂದು ಅಯೋಧ್ಯೆಗೆ ಭೇಟಿ ನೀಡಿದ್ದು, ಇಂದು ಅಯೋಧ್ಯೆಯಲ್ಲಿ   ಅಮೃತ್ ಭಾರತ್  ಎಕ್ಸ್​​​ಪ್ರೆಸ್ ಮತ್ತು ಆರು ಹೊಸ ವಂದೇ ಭಾರತ್ ರೈಲುಗಳಿಗೆ ಚಾಲನೆ ನೀಡಿದ್ದಾರೆ. ಹಾಗೂ   ಪುನರಾಭಿವೃದ್ಧಿಗೊಂಡ ಅಯೋಧ್ಯೆ ರೈಲು ನಿಲ್ದಾಣವನ್ನು ಸಹ ಉದ್ಘಾಟಿಸಿದರು.  ಈ ನಡುವೆ   ಅಯೋಧ್ಯಾ ಧಾಮ್ ರೈಲು ನಿಲ್ದಾಣದಿಂದ ವಾಪಸಾಗುತ್ತಿದ್ದ ವೇಳೆಯಲ್ಲಿ ಪ್ರಧಾನಿ ಮೋದಿ ಅವರು ಪಿ.ಎಂ ಆವಾಸ್ ಯೋಜನೆ ಮತ್ತು ಉಜ್ವಲ ಯೋಜನೆಯ ಫಲಾನುಭವಿ ಮೀರಾ ಮಾಂಝಿ ಅವರ ಮನೆಗೆ ಅಚ್ಚರಿಯ ಭೇಟಿಯನ್ನು ನೀಡಿ,  ಅಲ್ಲಿ ಚಹಾ ಕುಡಿದು, ಮೀರಾ ಮಾಂಝಿ  ಅವರನ್ನು ರಾಮ ಮಂದಿರ ಉದ್ಘಾಟನಾ ಕಾರ್ಯಕ್ರಮಕ್ಕೆ ಆಹ್ವಾನಿಸಿದ್ದಾರೆ.  ಈ ಕುರಿತ ವಿಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ.

@MeghUpdates ಎಂಬ X ಖಾತೆಯಲ್ಲಿ ಈ ವಿಡಿಯೋವನ್ನು ಹರಿಬಿಡಲಾಗಿದ್ದು, ಅಯೋಧ್ಯೆಯಲ್ಲಿರುವ ಉಜ್ವಲ ಯೋಜನೆ ಫಲಾನುಭವಿ ಮೀರಾ ಮಾಂಝಿ ಅವರ ಮನೆಗೆ ಪ್ರಧಾನಿ ಮೋದಿ ಭೇಟಿ ನೀಡಿದ್ದಾರೆ ಎಂಬ ಶೀರ್ಷಿಕೆಯನ್ನು ಬರೆದುಕೊಳ್ಳಲಾಗಿದೆ. ವಿಡಿಯೋದಲ್ಲಿ ಪ್ರಧಾನಿ ಮೋದಿ ಮೀರಾ ಮಾಂಝಿ ಅವರ ಮನೆಗೆ ಭೇಟಿ ನೀಡಿ, ಅವರನ್ನು ರಾಮ ಮಂದಿರ ಉದ್ಘಾಟನಾ ಸಮಾರಂಭಕ್ಕೆ ಆಹ್ವಾನಿಸುತ್ತಿರುವ ದೃಶ್ಯವನ್ನು ಕಾಣಬಹುದು.

ವಿಡಿಯೋ ಇಲ್ಲಿದೆ ನೋಡಿ:

ವೈರಲ್ ವಿಡಿಯೋದಲ್ಲಿ ಪ್ರಧಾನಿ ನರೇಂದ್ರ ಮೋದಿಯವರು ಮೀರಾ ಮಾಂಝಿ ಅವರ ಮನೆಗೆ ಅಚ್ಚರಿಯ ಭೇಟಿ ನೀಡಿರುವುದನ್ನು ಕಾಣಬಹುದು. ಅಲ್ಲದೆ ಅವರ ಮನೆಯಲ್ಲಿ ಚಹಾ ಕುಡಿದು, ಮೀರಾ ಮಾಂಝಿಯವರನ್ನು ಪ್ರಧಾನಿ ಮೋದಿ ಅವರು ರಾಮಮಂದಿರ ಉದ್ಘಾಟನಾ ಕಾರ್ಯಕ್ರಮಕ್ಕೆ ಆಹ್ವಾನಿಸಿದ್ದಾರೆ. ಮತ್ತು ಹೆಮ್ಮೆಯ ಪ್ರಧಾನಿಯನ್ನು ನೋಡಲೆಂದು ಅಲ್ಲಿ ಹಲವಾರು ಸಂಖ್ಯೆಯಲ್ಲಿ ಜನರೂ ನೆರೆದಿದ್ದರು. ಅಲ್ಲದೆ ಮೋದಿಯವರನ್ನು ಕಂಡು ಅಲ್ಲಿ ನೆರೆದಿದ್ದವರೆಲ್ಲ “ಜೈ ಶ್ರೀರಾಮ್” ಘೋಷಣೆಯನ್ನು ಕೂಗುವುದನ್ನು ವಿಡಿಯೋದಲ್ಲಿ ಕಾಣಬಹುದು.

ಇದನ್ನೂ ಓದಿ: ನೆಲ ಒರೆಸುವ ಮಾಪ್, ಲಟ್ಟಣಿಗೆ, ಚಪ್ಪಲಿ ಮುಂತಾದವುಗಳನ್ನು ಬಳಸಿ ಅದ್ಭುತ ಚಿತ್ರ ಬಿಡಿಸುತ್ತಾಳೆ ಈ ಮಹಿಳೆ

ಡಿಸೆಂಬರ್ 30 ರಂದು ಹಂಚಿಕೊಳ್ಳಲಾದ ಈ ವಿಡಿಯೋ 29 ಸಾವಿರಕ್ಕೂ ಅಧಿಕ ವೀಕ್ಷಣೆಗಳನ್ನು ಪಡೆದುಕೊಂಡಿದೆ. ಒಬ್ಬ ಬಳಕೆದಾರರು ʼಅಯೋಧ್ಯಾ ಧಾಮ್ ನಿಲ್ದಾಣದಿಂದ ಹಿಂದಿರುಗುವಾಗ, ಪ್ರಧಾನಿ ಮೋದಿ ಅವರು ಪ್ರಧಾನ ಮಂತ್ರಿ ಆವಾಸ್ ಯೋಜನೆಯ ಫಲಾನುಭವಿ ಮೀರಾ ಮಾಂಝಿ ಅವರನ್ನು ಭೇಟಿ ಮಾಡಿದ್ದಾರೆ. ನಿಜಕ್ಕೂ ಮೋದಿ ಜನರ ಪ್ರಧಾನಿʼ ಎಂದು ಹೊಗಳಿಕೆಯ ಮಾತುಗಳನ್ನಾಡಿದ್ದಾರೆ. ಇನ್ನೂ ಅನೇಕರು ಈ ಸುಂದರ  ವಿಡಿಯೋಗೆ ಮೆಚ್ಚುಗೆಯನ್ನು ಸೂಚಿಸಿದ್ದಾರೆ.

ಮತ್ತಷ್ಟು ವೈರಲ್​​ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ: 

ವೇದಿಕೆ ಏರುತ್ತಿದ್ದಂತೆ ಹಾಸ್ಯದ ಹೊಳೆ ಹರಿಸಿದಿ ಕಿಚ್ಚ ಸುದೀಪ್
ವೇದಿಕೆ ಏರುತ್ತಿದ್ದಂತೆ ಹಾಸ್ಯದ ಹೊಳೆ ಹರಿಸಿದಿ ಕಿಚ್ಚ ಸುದೀಪ್
Vastu Tips: ಮನೆಯಲ್ಲಿ ಆಮೆ ಇಡುವುದರ ಹಿಂದಿನ ಮಹತ್ವವೇನು?
Vastu Tips: ಮನೆಯಲ್ಲಿ ಆಮೆ ಇಡುವುದರ ಹಿಂದಿನ ಮಹತ್ವವೇನು?
ಮೈಸೂರು: ಕಾದಾಡುತ್ತಾ ಅರಮನೆ ಆವರಣದಿಂದ ರಸ್ತೆಗೆ ಬಂದ ದಸರಾ ಆನೆಗಳು
ಮೈಸೂರು: ಕಾದಾಡುತ್ತಾ ಅರಮನೆ ಆವರಣದಿಂದ ರಸ್ತೆಗೆ ಬಂದ ದಸರಾ ಆನೆಗಳು
ಇಂದು ಶಶ ರಾಜಯೋಗ, ಈ ರಾಶಿಯವರಿಗೆ ಶನಿದೇವನ ಕೃಪೆಯಿಂದ ಒಳಿತಾಗಲಿದೆ
ಇಂದು ಶಶ ರಾಜಯೋಗ, ಈ ರಾಶಿಯವರಿಗೆ ಶನಿದೇವನ ಕೃಪೆಯಿಂದ ಒಳಿತಾಗಲಿದೆ
‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
ಕನ್ನಡದಲ್ಲಿ ಔಷಧಿ ಚೀಟಿ ಬರೆದು ಗಮನಸೆಳೆದ ಮತ್ತೋರ್ವ ಡಾಕ್ಟರ್
ಕನ್ನಡದಲ್ಲಿ ಔಷಧಿ ಚೀಟಿ ಬರೆದು ಗಮನಸೆಳೆದ ಮತ್ತೋರ್ವ ಡಾಕ್ಟರ್
ಅಂತಿಂಥ ಕಳ್ಳಿ ನಾನಲ್ಲ; ಇವರು ಸೀರೆ ಕದಿಯೋದೇ ಗೊತ್ತಾಗಲ್ಲ!
ಅಂತಿಂಥ ಕಳ್ಳಿ ನಾನಲ್ಲ; ಇವರು ಸೀರೆ ಕದಿಯೋದೇ ಗೊತ್ತಾಗಲ್ಲ!
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು