Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೇಂದ್ರ ಕಾನೂನು ಸಚಿವ ಕಿರಣ್ ರಿಜಿಜು ಭರ್ಜರಿ ಡಾನ್ಸ್; ಅದಕ್ಕೆ ಪ್ರಧಾನಿ ಮೋದಿ ಪ್ರತಿಕ್ರಿಯೆ ಏನು?

ಸಚಿವ ಕಿರಣ್ ರಿಜಿಜು ನೃತ್ಯ ಮಾಡುವ ವಿಡಿಯೋವನ್ನು ಸ್ವತಃ ಟ್ವಿಟರ್​ ಖಾತೆಯಲ್ಲಿ ಹಂಚಿಕೊಂಡಿದ್ದರು. ಈ ಕುರಿತಾಗಿ ಪ್ರಧಾನಿ ನರೇಂದ್ರ ಮೋದಿ ಪ್ರತಿಕ್ರಿಯೆ ಏನಿತ್ತು ನೋಡಿ.

ಕೇಂದ್ರ ಕಾನೂನು ಸಚಿವ ಕಿರಣ್ ರಿಜಿಜು ಭರ್ಜರಿ ಡಾನ್ಸ್; ಅದಕ್ಕೆ ಪ್ರಧಾನಿ ಮೋದಿ ಪ್ರತಿಕ್ರಿಯೆ ಏನು?
ಕೇಂದ್ರ ಕಾನೂನು ಸಚಿವ ಕಿರಣ್ ರಿಜಿಜು ಭರ್ಜರಿ ಡಾನ್ಸ್
Follow us
TV9 Web
| Updated By: shruti hegde

Updated on: Sep 30, 2021 | 4:25 PM

ಕೇಂದ್ರ ಕಾನೂನು ಸಚಿವ ಕಿರಣ್ ರಿಜಿಜು ಅವರು ಬುಧವಾರ ಯೋಜನೆಯೊಂದರ ಪ್ರಗತಿ ಪರಿಶೀಲಿಸಲು ಅರುಣಾಚಲ ಪ್ರದೇಶಕ್ಕೆ ತೆರಳಿದ್ದರು. ಹಳ್ಳಿಯ ನಿವಾಸಿಗಳು ನೃತ್ಯ ಮಾಡುತ್ತಾ ಅವರನ್ನು ಬರಮಾಡಿಕೊಂಡಿದ್ದರು. ಆ ವೇಳೆ ಹಳ್ಳಿ ಜನರೊಂದಿಗೆ ಕಿರಣ್ ರಿಜಿಜು ಅವರು ಸಹ ನೃತ್ಯ ಮಾಡಿದ್ದರು. ಈ ವಿಡಿಯೋವನ್ನು ಅವರು ಸ್ವತಃ ತಮ್ಮ ಟ್ವಿಟರ್ ಖಾತೆಯಲ್ಲಿ ಹಂಚಿಕೊಂಡಿದ್ದರು. ಇದಕ್ಕೆ ಪ್ರಧಾನಿ ಮೋದಿ ‘ಒಳ್ಳೆಯ ನೃತ್ಯಗಾರ’ ಎಂದು ಟ್ವೀಟ್ ಮಾಡುವ ಮೂಲಕ ಪ್ರತಿಕ್ರಿಯಿಸಿದ್ದಾರೆ.

ಈಶಾನ್ಯ ಕನಲಾಂಗ್ ಹಳ್ಳಿಯ ವಿಜಿ ಎಂದೂ ಕರೆಯಲ್ಪಡುವ ಸ್ಥಳೀಯ ಸಜೋಲಂಗ್ ಜನರು ತಮ್ಮ ಸಾಂಪ್ರದಾಯಿಕ ಹಾಡು ಮತ್ತು ನೃತ್ಯದೊಂದಿಗೆ ಸಚಿವರನ್ನು ಸ್ವಾಗತಿಸಿದ್ದರು. ಸಚಿವ ಕಿರಣ್ ರಿಜಿಜು ಅವರು ಹಳ್ಳಿಯ ಜನರೊಂದಿಗೆ ಸಂತೋಷದಿಂದ ನತ್ಯ ಮಾಡುತ್ತಿರುವುದನ್ನು ವಿಡಿಯೋದಲ್ಲಿ ನೋಡಬಹುದು.

ವಿವೇಕಾನಂದ ಕೇಂದ್ರ ವಿದ್ಯಾಲಯ ಯೋಜನೆಯ ಮೇಲ್ವಿಚಾರಣೆಯ ಸಲುವಾಗಿ ನಾನು ಕಜಲಾಂಗ್ ಗ್ರಾಮಕ್ಕೆ ಭೇಟಿ ನೀಡಿದ್ದಾಗ, ಅಲ್ಲಿನ ಜನರ ಸಾಂಪ್ರದಾಯಿಕ ಹಾಡು ಮತ್ತು ನೃತ್ಯ ಇದಾಗಿದೆ. ಮೂಲ ಜಾನಪದ ಹಾಡುಗಳು ಮತ್ತು ನೃತ್ಯಗಳು ಅರುಣಾಚಲ ಪ್ರದೇಶದ ಸಮುದಾಯದ ಜನರ ಶೈಲಿಯಿದು ಎಂದು ಸಚಿವ ಕಿರಣ್ ರಿಜಿಜು ಹೇಳಿದ್ದಾರೆ.

ಇದಕ್ಕೆ ಪ್ರತಿಕ್ರಿಯಿಸಿದ ಪ್ರಧಾನಿ ನರೇಂದ್ರ ಮೋದಿ, ನಮ್ಮ ಕಾನೂನು ಸಚಿವ ಕಿರಣ್ ರಿಜಿಜು ಕೂಡಾ ‘ಒಳ್ಳೆಯ ನೃತ್ಯಗಾರ’ ಎಂದು ಹೇಳಿದ್ದಾರೆ.

ಸಚಿವ ಕಿರಣ್ ರಿಜಿಜು ಅವರು ಸಾಮಾಜಿಕ ಜಾಲತಾಣದಲ್ಲಿ ಯಾವಾಗಲೂ ಸಕ್ರಿಯರಾಗಿರುತ್ತಾರೆ. ಆಗಾಗ ಆರೋಗ್ಯ ಸಂಬಂಧಿತ ಹಾಗೂ ಫಿಟ್ನೆಸ್ ಕುರಿತಾದ ವಿಡಿಯೋಗಳನ್ನು ಹಂಚಿಕೊಳ್ಳುತ್ತಿರುತ್ತಾರೆ. ಜತೆಗೆ ಹಾಡುವ ಕೌಶಲ್ಯವನ್ನೂ ಸಹ ಈ ಹಿಂದೆ ಟ್ವೀಟ್ ಮೂಲಕ ಹಂಚಿಕೊಂಡಿದ್ದರು.

ಮಿಜಿ ಎಂಬ ಸಮುದಾಯವು ಅರುಣಾಚಲ ಪ್ರದೇಶದ ಪಶ್ಚಿಮ ಮತ್ತು ಪೂರ್ವ ಕಾಮೆಂಗ್ ಜಿಲ್ಲೆಯಲ್ಲಿ ವಾಸಿಸುವ ಸಮುದಾಯ. ಮಿಜಿ ಪದದಲ್ಲಿ ಮಿ ಎಂದರೆ ಬೆಂಕಿ ಮತ್ತು ಜೀ ಎಂದರೆ ಕೊಡುವವರು ಎಂಬ ಅರ್ಥವನ್ನು ಹೊಂದಿದೆ.

ಇದನ್ನೂ ಓದಿ:

PM Modi in UNGA Summit: ವಿಶ್ವಸಂಸ್ಥೆ ಸಾಮಾನ್ಯ ಸಭೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಭಾಷಣ ಆರಂಭ

ಶರದ್ ಪವಾರ್ ಸೇರಿದಂತೆ ವಿಐಪಿಗಳ ಕಾರು ಅಥ್ಲೆಟಿಕ್ ಟ್ರ್ಯಾಕ್​​ನಲ್ಲಿ ನಿಲುಗಡೆ; ಇದು ದುಃಖದ ಸಂಗತಿ ಎಂದ ಕಿರಣ್ ರಿಜಿಜು

ಲಾರಿಯನ್ನು ಓವರ್ ಟೇಕ್ ಮಾಡುವ ಭರದಲ್ಲಿ ಹಿಂದಿನಿಂದ ಗುದ್ದಿದ ಮಿನಿಬಸ್ ಚಾಲಕ
ಲಾರಿಯನ್ನು ಓವರ್ ಟೇಕ್ ಮಾಡುವ ಭರದಲ್ಲಿ ಹಿಂದಿನಿಂದ ಗುದ್ದಿದ ಮಿನಿಬಸ್ ಚಾಲಕ
ಧನ್ವೀರ್ ಮದುವೆಗೆ ಯಾವ ಬಟ್ಟೆ ಧರಿಸಬೇಕು? ಪ್ಲ್ಯಾನ್ ರಿವೀಲ್ ಮಾಡಿದ ದಾಸ
ಧನ್ವೀರ್ ಮದುವೆಗೆ ಯಾವ ಬಟ್ಟೆ ಧರಿಸಬೇಕು? ಪ್ಲ್ಯಾನ್ ರಿವೀಲ್ ಮಾಡಿದ ದಾಸ
VIDEO: ರಶೀದ್ ಖಾನ್ ವಿಚಿತ್ರ ಶಾಟ್, ಯಶಸ್ವಿ ಜೈಸ್ವಾಲ್ ಅದ್ಭುತ ಕ್ಯಾಚ್
VIDEO: ರಶೀದ್ ಖಾನ್ ವಿಚಿತ್ರ ಶಾಟ್, ಯಶಸ್ವಿ ಜೈಸ್ವಾಲ್ ಅದ್ಭುತ ಕ್ಯಾಚ್
ಅತಿಥಿಗಳಿಗೆ ನೀಡುವ ಆಹಾರದ ಪುಣ್ಯ ಹೇಗೆ ಸಿಗುತ್ತೆ ಗೊತ್ತಾ?
ಅತಿಥಿಗಳಿಗೆ ನೀಡುವ ಆಹಾರದ ಪುಣ್ಯ ಹೇಗೆ ಸಿಗುತ್ತೆ ಗೊತ್ತಾ?
Daily Horoscope: ಈ ರಾಶಿಯವರಿಗೆ ವಿವಾಹ ಯೋಗ ಕೂಡಿಬರಲಿದೆ
Daily Horoscope: ಈ ರಾಶಿಯವರಿಗೆ ವಿವಾಹ ಯೋಗ ಕೂಡಿಬರಲಿದೆ
ಬೆನ್ನು ನೋವಿದ್ದರೂ ಕುಂಟುತ್ತಾ ಬಂದು ‘ವಾಮನ’ ಸಿನಿಮಾ ನೋಡಿದ ದರ್ಶನ್
ಬೆನ್ನು ನೋವಿದ್ದರೂ ಕುಂಟುತ್ತಾ ಬಂದು ‘ವಾಮನ’ ಸಿನಿಮಾ ನೋಡಿದ ದರ್ಶನ್
ಈ ಸಿನಿಮಾ ಒಪ್ಪಿಕೊಳ್ಳಲು ಭಯವಾಯ್ತು; ಅಜ್ಞಾತವಾಸಿ ಬಗ್ಗೆ ರಂಗಾಯಣ ರಘು ಮಾತು
ಈ ಸಿನಿಮಾ ಒಪ್ಪಿಕೊಳ್ಳಲು ಭಯವಾಯ್ತು; ಅಜ್ಞಾತವಾಸಿ ಬಗ್ಗೆ ರಂಗಾಯಣ ರಘು ಮಾತು
ಹಣ ಗಳಿಸುತ್ತಿಲ್ಲವೆಂದು ಗಂಡನಿಗೆ ಹೆಂಡತಿಯಿಂದ ಕಪಾಳಮೋಕ್ಷ; ಆಮೇಲೇನಾಯ್ತು?
ಹಣ ಗಳಿಸುತ್ತಿಲ್ಲವೆಂದು ಗಂಡನಿಗೆ ಹೆಂಡತಿಯಿಂದ ಕಪಾಳಮೋಕ್ಷ; ಆಮೇಲೇನಾಯ್ತು?
‘ವಾಮನ’ ಸಿನಿಮಾ ನೋಡಲು ಬಂದ ದರ್ಶನ್; ಚಿಕ್ಕಣ್ಣ, ಧನ್ವೀರ್ ಜತೆ ಕುಶಲೋಪರಿ
‘ವಾಮನ’ ಸಿನಿಮಾ ನೋಡಲು ಬಂದ ದರ್ಶನ್; ಚಿಕ್ಕಣ್ಣ, ಧನ್ವೀರ್ ಜತೆ ಕುಶಲೋಪರಿ
ವಾಹನ ಹತ್ತದೆ ಕಾರ್ಯಕರ್ತರೊಂದಿಗೆ ರ‍್ಯಾಲಿಯಲ್ಲಿ ನಡೆದ ವಿಜಯೇಂದ್ರ
ವಾಹನ ಹತ್ತದೆ ಕಾರ್ಯಕರ್ತರೊಂದಿಗೆ ರ‍್ಯಾಲಿಯಲ್ಲಿ ನಡೆದ ವಿಜಯೇಂದ್ರ