AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೇಂದ್ರ ಕಾನೂನು ಸಚಿವ ಕಿರಣ್ ರಿಜಿಜು ಭರ್ಜರಿ ಡಾನ್ಸ್; ಅದಕ್ಕೆ ಪ್ರಧಾನಿ ಮೋದಿ ಪ್ರತಿಕ್ರಿಯೆ ಏನು?

ಸಚಿವ ಕಿರಣ್ ರಿಜಿಜು ನೃತ್ಯ ಮಾಡುವ ವಿಡಿಯೋವನ್ನು ಸ್ವತಃ ಟ್ವಿಟರ್​ ಖಾತೆಯಲ್ಲಿ ಹಂಚಿಕೊಂಡಿದ್ದರು. ಈ ಕುರಿತಾಗಿ ಪ್ರಧಾನಿ ನರೇಂದ್ರ ಮೋದಿ ಪ್ರತಿಕ್ರಿಯೆ ಏನಿತ್ತು ನೋಡಿ.

ಕೇಂದ್ರ ಕಾನೂನು ಸಚಿವ ಕಿರಣ್ ರಿಜಿಜು ಭರ್ಜರಿ ಡಾನ್ಸ್; ಅದಕ್ಕೆ ಪ್ರಧಾನಿ ಮೋದಿ ಪ್ರತಿಕ್ರಿಯೆ ಏನು?
ಕೇಂದ್ರ ಕಾನೂನು ಸಚಿವ ಕಿರಣ್ ರಿಜಿಜು ಭರ್ಜರಿ ಡಾನ್ಸ್
TV9 Web
| Updated By: shruti hegde|

Updated on: Sep 30, 2021 | 4:25 PM

Share

ಕೇಂದ್ರ ಕಾನೂನು ಸಚಿವ ಕಿರಣ್ ರಿಜಿಜು ಅವರು ಬುಧವಾರ ಯೋಜನೆಯೊಂದರ ಪ್ರಗತಿ ಪರಿಶೀಲಿಸಲು ಅರುಣಾಚಲ ಪ್ರದೇಶಕ್ಕೆ ತೆರಳಿದ್ದರು. ಹಳ್ಳಿಯ ನಿವಾಸಿಗಳು ನೃತ್ಯ ಮಾಡುತ್ತಾ ಅವರನ್ನು ಬರಮಾಡಿಕೊಂಡಿದ್ದರು. ಆ ವೇಳೆ ಹಳ್ಳಿ ಜನರೊಂದಿಗೆ ಕಿರಣ್ ರಿಜಿಜು ಅವರು ಸಹ ನೃತ್ಯ ಮಾಡಿದ್ದರು. ಈ ವಿಡಿಯೋವನ್ನು ಅವರು ಸ್ವತಃ ತಮ್ಮ ಟ್ವಿಟರ್ ಖಾತೆಯಲ್ಲಿ ಹಂಚಿಕೊಂಡಿದ್ದರು. ಇದಕ್ಕೆ ಪ್ರಧಾನಿ ಮೋದಿ ‘ಒಳ್ಳೆಯ ನೃತ್ಯಗಾರ’ ಎಂದು ಟ್ವೀಟ್ ಮಾಡುವ ಮೂಲಕ ಪ್ರತಿಕ್ರಿಯಿಸಿದ್ದಾರೆ.

ಈಶಾನ್ಯ ಕನಲಾಂಗ್ ಹಳ್ಳಿಯ ವಿಜಿ ಎಂದೂ ಕರೆಯಲ್ಪಡುವ ಸ್ಥಳೀಯ ಸಜೋಲಂಗ್ ಜನರು ತಮ್ಮ ಸಾಂಪ್ರದಾಯಿಕ ಹಾಡು ಮತ್ತು ನೃತ್ಯದೊಂದಿಗೆ ಸಚಿವರನ್ನು ಸ್ವಾಗತಿಸಿದ್ದರು. ಸಚಿವ ಕಿರಣ್ ರಿಜಿಜು ಅವರು ಹಳ್ಳಿಯ ಜನರೊಂದಿಗೆ ಸಂತೋಷದಿಂದ ನತ್ಯ ಮಾಡುತ್ತಿರುವುದನ್ನು ವಿಡಿಯೋದಲ್ಲಿ ನೋಡಬಹುದು.

ವಿವೇಕಾನಂದ ಕೇಂದ್ರ ವಿದ್ಯಾಲಯ ಯೋಜನೆಯ ಮೇಲ್ವಿಚಾರಣೆಯ ಸಲುವಾಗಿ ನಾನು ಕಜಲಾಂಗ್ ಗ್ರಾಮಕ್ಕೆ ಭೇಟಿ ನೀಡಿದ್ದಾಗ, ಅಲ್ಲಿನ ಜನರ ಸಾಂಪ್ರದಾಯಿಕ ಹಾಡು ಮತ್ತು ನೃತ್ಯ ಇದಾಗಿದೆ. ಮೂಲ ಜಾನಪದ ಹಾಡುಗಳು ಮತ್ತು ನೃತ್ಯಗಳು ಅರುಣಾಚಲ ಪ್ರದೇಶದ ಸಮುದಾಯದ ಜನರ ಶೈಲಿಯಿದು ಎಂದು ಸಚಿವ ಕಿರಣ್ ರಿಜಿಜು ಹೇಳಿದ್ದಾರೆ.

ಇದಕ್ಕೆ ಪ್ರತಿಕ್ರಿಯಿಸಿದ ಪ್ರಧಾನಿ ನರೇಂದ್ರ ಮೋದಿ, ನಮ್ಮ ಕಾನೂನು ಸಚಿವ ಕಿರಣ್ ರಿಜಿಜು ಕೂಡಾ ‘ಒಳ್ಳೆಯ ನೃತ್ಯಗಾರ’ ಎಂದು ಹೇಳಿದ್ದಾರೆ.

ಸಚಿವ ಕಿರಣ್ ರಿಜಿಜು ಅವರು ಸಾಮಾಜಿಕ ಜಾಲತಾಣದಲ್ಲಿ ಯಾವಾಗಲೂ ಸಕ್ರಿಯರಾಗಿರುತ್ತಾರೆ. ಆಗಾಗ ಆರೋಗ್ಯ ಸಂಬಂಧಿತ ಹಾಗೂ ಫಿಟ್ನೆಸ್ ಕುರಿತಾದ ವಿಡಿಯೋಗಳನ್ನು ಹಂಚಿಕೊಳ್ಳುತ್ತಿರುತ್ತಾರೆ. ಜತೆಗೆ ಹಾಡುವ ಕೌಶಲ್ಯವನ್ನೂ ಸಹ ಈ ಹಿಂದೆ ಟ್ವೀಟ್ ಮೂಲಕ ಹಂಚಿಕೊಂಡಿದ್ದರು.

ಮಿಜಿ ಎಂಬ ಸಮುದಾಯವು ಅರುಣಾಚಲ ಪ್ರದೇಶದ ಪಶ್ಚಿಮ ಮತ್ತು ಪೂರ್ವ ಕಾಮೆಂಗ್ ಜಿಲ್ಲೆಯಲ್ಲಿ ವಾಸಿಸುವ ಸಮುದಾಯ. ಮಿಜಿ ಪದದಲ್ಲಿ ಮಿ ಎಂದರೆ ಬೆಂಕಿ ಮತ್ತು ಜೀ ಎಂದರೆ ಕೊಡುವವರು ಎಂಬ ಅರ್ಥವನ್ನು ಹೊಂದಿದೆ.

ಇದನ್ನೂ ಓದಿ:

PM Modi in UNGA Summit: ವಿಶ್ವಸಂಸ್ಥೆ ಸಾಮಾನ್ಯ ಸಭೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಭಾಷಣ ಆರಂಭ

ಶರದ್ ಪವಾರ್ ಸೇರಿದಂತೆ ವಿಐಪಿಗಳ ಕಾರು ಅಥ್ಲೆಟಿಕ್ ಟ್ರ್ಯಾಕ್​​ನಲ್ಲಿ ನಿಲುಗಡೆ; ಇದು ದುಃಖದ ಸಂಗತಿ ಎಂದ ಕಿರಣ್ ರಿಜಿಜು

ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!