AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾಣೆಯಾದ ಮಗುವನ್ನು ಹುಡುಕಲು ಪೊಲೀಸರಿಗೆ ಸಹಾಯವಾದ ಕಾರ್ಟೂನ್‌ ಮ್ಯೂಸಿಕ್

"ದುರದೃಷ್ಟವಶಾತ್ ಕಟ್ಟಡಕ್ಕೆ ಹಾಗೂ ಲಿಫ್ಟ್‌ಗೆ ಅಳವಡಿಸಲಾಗಿದ್ದ ಕ್ಯಾಮೆರಾಗಳು ಕಾರ್ಯನಿರ್ವಹಿಸುತ್ತಿರಲ್ಲಿಲ್ಲ. ಆದ್ದರಿಂದ ಮಗು ಹೊರಗೆ ಹೋಗಿದ್ದಾನೆಯೇ ಅಥವಾ ಮನೆಯೊಳಗೆಯೇ ಇದ್ದಾನೆಯೇ? ಎಂದು ನಮಗೆ ತಿಳಿಯಲು ಸಾಧ್ಯವಾಗಲಿಲ್ಲ" ಎಂದು ಪೊಲೀಸ್​​ ಅಧಿಕಾರಿ ಕ್ಸು ಹೇಳಿದ್ದಾರೆ.

ಕಾಣೆಯಾದ ಮಗುವನ್ನು ಹುಡುಕಲು ಪೊಲೀಸರಿಗೆ ಸಹಾಯವಾದ ಕಾರ್ಟೂನ್‌ ಮ್ಯೂಸಿಕ್
ಪೆಪ್ಪಾ ಪಿಗ್ ಕಾರ್ಟೂನ್‌Image Credit source: Pinterest
ಅಕ್ಷತಾ ವರ್ಕಾಡಿ
|

Updated on: Mar 02, 2024 | 3:33 PM

Share

ಆಗ್ನೇಯ ಚೀನಾದ ಜಿಯಾಂಗ್ಕ್ಸಿ ಪ್ರಾಂತ್ಯದ ‘ಲು’ ಎಂಬ ಹೆಸರಿನ ಎಂಟು ವರ್ಷದ ಮಗು ಫೆಬ್ರವರಿ 16 ರಂದು ಕಾಣೆಯಾಗಿತ್ತು. ಆಟಿಸಂನಿಂದ (ಬೆಳವಣಿಗೆಯ ಅಸ್ವಸ್ಥತೆಯಾಗಿದ್ದು ಅದು ಸಂವಹನ ಮತ್ತು ನಡವಳಿಕೆಯ ಮೇಲೆ ಪರಿಣಾಮ ಬೀರುತ್ತದೆ) ಬಳಲುತ್ತಿದ್ದ ಈ ಮಗುವನ್ನು ಪೋಷಕರು ಸಾಕಷ್ಟು ಸಮಯದ ವರೆಗೆ ಇಡೀ ಮನೆಯೆಲ್ಲಾ ಹುಡುಕಾಡಿದ್ದಾರೆ. ಆದರೆ ಏನೂ ಪ್ರಯೋಜನವಾಗಿಲ್ಲ. ಗಾಬರಿಗೊಂಡ ಪೋಷಕರು ಪೊಲೀಸ್​​ ಠಾಣೆಯಲ್ಲಿ ದೂರು ನೀಡಿದ್ದಾರೆ. ಆದರೆ ವಿಶೇಷತೆ ಏನೆಂದರೆ ಪೆಪ್ಪಾ ಪಿಗ್ ಕಾರ್ಟೂನ್‌ ಮ್ಯೂಸಿಕ್ ಮೂಲಕ ಪೊಲೀಸರು ಸಲೀಸಾಗಿ ಮಗು ಇರುವ ಜಾಗವನ್ನು ಪತ್ತೆ ಹಚ್ಚಿದ್ದಾರೆ.

ಕಾಣೆಯಾಗಿರುವ ಮಗುವನ್ನು ಪತ್ತೆ ಹಚ್ಚಲು ಪೊಲೀಸರ ತಂಡವೊಂದನ್ನು ರಚಿಸಿ, ಪ್ರಾರಂಭದಲ್ಲಿ ಮನೆಯೆಲ್ಲಾ ಹುಡುಕಿದ್ದಾರೆ. ಆದರೆ ಏನು ಪ್ರಯೋಜನವಾಗಿಲ್ಲ. “ದುರದೃಷ್ಟವಶಾತ್ ಕಟ್ಟಡಕ್ಕೆ ಹಾಗೂ ಲಿಫ್ಟ್‌ಗೆ ಅಳವಡಿಸಲಾಗಿದ್ದ ಕ್ಯಾಮೆರಾಗಳು ಕಾರ್ಯನಿರ್ವಹಿಸುತ್ತಿರಲ್ಲಿಲ್ಲ. ಆದ್ದರಿಂದ ಮಗು ಹೊರಗೆ ಹೋಗಿದ್ದಾನೆಯೇ ಅಥವಾ ಮನೆಯೊಳಗೆಯೇ ಇದ್ದಾನೆಯೇ? ಎಂದು ನಮಗೆ ತಿಳಿಯಲು ಸಾಧ್ಯವಾಗಲಿಲ್ಲ” ಎಂದು ಪೊಲೀಸ್​​ ಅಧಿಕಾರಿ ಕ್ಸು ಹೇಳಿದ್ದಾರೆ.

ಇದನ್ನೂ ಓದಿ: ತಮ್ಮನಿಗೆ ಲಾಲಿ ಹಾಡುತ್ತಾ ಪುಟ್ಟ ಕೈಗಳಿಂದ ತೊಟ್ಟಿಲು ತೂಗಿದ ಧ್ರುವ ಸರ್ಜಾ ಪುತ್ರಿ

ಕಡೆಗೆ ಪೋಷಕರಿಂದ ಮಗುವಿಗೆ ಪೆಪ್ಪಾ ಪಿಗ್ ಕಾರ್ಟೂನ್‌ ನೋಡುವುದು ತುಂಬಾ ಇಷ್ಟ ಎಂದು ಪೊಲೀಸರಿಗೆ ತಿಳಿದುಬಂದಿದೆ. ಇದರಿಂದ ಮನೆಯ ಮಹಡಿಯ ಮೇಲೆ ಪೆಪ್ಪಾ ಪಿಗ್ ಕಾರ್ಟೂನ್‌ ಥೀಮ್ ಸಾಂಗ್​​ ಅನ್ನು ಪ್ಲೇ ಮಾಡಲಾಗಿದೆ. ಸ್ವಲ್ಪ ಸಮಯದಲ್ಲೇ ಮಗುವಿನ ಧ್ವನಿ ಕೇಳಿಸಿದೆ. ಮೆಟ್ಟಿಲುಗಳ ಹತ್ತಿರದ ಮೂರು ಮೀಟರ್ ಎತ್ತರದ ಗೋಡೆಯ ಹಿಂದೆ ಮಗು ಸಿಕ್ಕಿ ಬಿದ್ದಿರುವುದನ್ನು ಪೊಲೀಸರು ಸುರಕ್ಷಿತವಾಗಿ ಪತ್ತೆ ಹಚ್ಚಿದ್ದಾರೆ.

ಇನ್ನಷ್ಟು ವೈರಲ್ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಸಿಕ್ಕ ಸಿಕ್ಕ ಜಾನುವಾರುಗಳನ್ನು ತಿಂದು ತೇಗಿದ ಚಿರತೆ ಬೋನಿಗೆ ಬಿತ್ತು
ಸಿಕ್ಕ ಸಿಕ್ಕ ಜಾನುವಾರುಗಳನ್ನು ತಿಂದು ತೇಗಿದ ಚಿರತೆ ಬೋನಿಗೆ ಬಿತ್ತು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಪ್ರೇಮ್ ಕಹಾನಿ: 19 ವರ್ಷದ ಯುವತಿ ಹಿಂದೆ ಬಿದ್ದು ದುರಂತ ಅಂತ್ಯಕಂಡ 40 ಅಂಕಲ್
ಪ್ರೇಮ್ ಕಹಾನಿ: 19 ವರ್ಷದ ಯುವತಿ ಹಿಂದೆ ಬಿದ್ದು ದುರಂತ ಅಂತ್ಯಕಂಡ 40 ಅಂಕಲ್
ಬೇರೆ ಮಹಿಳೆ ಜತೆ ಲವ್ವಿಡವ್ವಿ: ಹೆಂಡ್ತಿ ಹತ್ಯೆಗೆ ಸುಪಾರಿ ಕೊಟ್ಟ ಪತಿ
ಬೇರೆ ಮಹಿಳೆ ಜತೆ ಲವ್ವಿಡವ್ವಿ: ಹೆಂಡ್ತಿ ಹತ್ಯೆಗೆ ಸುಪಾರಿ ಕೊಟ್ಟ ಪತಿ
ಡಿಕೆಶಿ ಪ್ರಾರ್ಥನೆಗೆ ಅಸ್ತು ಎಂದಳಾ ಶಕ್ತಿದೇವಿ? ಅರ್ಚಕರು ಹೇಳಿದ್ದಿಷ್ಟು
ಡಿಕೆಶಿ ಪ್ರಾರ್ಥನೆಗೆ ಅಸ್ತು ಎಂದಳಾ ಶಕ್ತಿದೇವಿ? ಅರ್ಚಕರು ಹೇಳಿದ್ದಿಷ್ಟು
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ