AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ದೂಧಸಾಗರ; ರೈಲ್ವೆ ಹಳಿ ದಾಟಿದ್ದಕ್ಕೆ ಚಾರಣಿಗರಿಂದ ಬಸ್ಕಿ ಹೊಡೆಸಿದ ಪೊಲೀಸರು

Punishment : 1,017 ಅಡಿಯಿಂದ ಧುಮುಕುವ ಈ ಹಾಲಿನ ಸಮುದ್ರವನ್ನು ಮಳೆಗಾಲದಲ್ಲಿ ನೋಡುವುದೇ ಛಂದ. ಆದರೆ ಇತ್ತೀಚೆಗೆ ಸಂಭವಿಸಿದ ಅಪಘಾತದಿಂದಾಗಿ ಗೋವಾ ಸರ್ಕಾರ ಇಲ್ಲಿ ಚಾರಣವನ್ನು ನಿಷೇಧಿಸಿದೆ. ಆದರೂ ಈ ತಂಡ...

Viral Video: ದೂಧಸಾಗರ; ರೈಲ್ವೆ ಹಳಿ ದಾಟಿದ್ದಕ್ಕೆ ಚಾರಣಿಗರಿಂದ ಬಸ್ಕಿ ಹೊಡೆಸಿದ ಪೊಲೀಸರು
ದೂಧಸಾಗರಕ್ಕೆ ಹೊರಟಿದ್ದ ಚಾರಣಿಗರ ದಂಡನ್ನು ಪೊಲೀಸರು ಬಸ್ಕಿ ಹೊಡೆಸುತ್ತಿರುವುದು.
ಶ್ರೀದೇವಿ ಕಳಸದ
|

Updated on:Jul 18, 2023 | 11:28 AM

Share

Dudhsagar : ಗೋವಾ-ಕರ್ನಾಟಕ ಗಡಿಯಲ್ಲಿರುವ ದೂಧಸಾಗರ್ ಜಲಪಾತದ ಮನೋಹರ ದೃಶ್ಯವನ್ನು ನೋಡಲು ಮಳೆಗಾಲದ ಈ ಸಮಯ ಅತ್ಯಂತ ಪ್ರಶಸ್ತ. ಹಾಗಾಗಿ ಇಲ್ಲಿ ಪ್ರವಾಸಿಗರ ದಂಡೇ ನೆರೆದಿರುತ್ತದೆ. ಇದೀಗ ಇಂಥದೊಂದು ಚಾರಣಿಗರ ಗುಂಪಿಗೆ (Trekking Group) ಪೊಲೀಸರು ದಂಡಿಸಿದ ವಿಡಿಯೋ ವೈರಲ್ ಆಗಿದೆ. ಜಲಪಾತವನ್ನು ನೋಡಲು ಈ ಚಾರಣಿಗರು ನಿಗದಿತ ಸ್ಥಳಕ್ಕಿಂತ ಮೊದಲೇ ರೈಲಿನಿಂದ ಇಳಿದಿದ್ದಕ್ಕಾಗಿ ಪೊಲೀಸರು ಈ ಕ್ರಮ ಕೈಗೊಂಡಿದ್ದಾರೆ ಎಂದು ವರದಿಯಾಗಿದೆ. ಚಾರಣಿಗರು ಮಾಡಿದ ತಪ್ಪಿಗೆ ಸಾಲಾಗಿ ನಿಂತು ಬಸ್ಕಿ ಹೊಡೆಯುತ್ತಿರುವ ಈ ವಿಡಿಯೋ ಇಲ್ಲಿದೆ.

ಇದನ್ನೂ ಓದಿ
Image
Viral Video: ಭಾರತಕ್ಕೆ ಶುಭಕೋರಿದ ಪಾಕಿಸ್ತಾನದ ರಬಾಬ್ ಕಲಾವಿದ
Image
Viral Post: ವಿಶಿಷ್ಟ ಚೇತನ ಕೃಷ್ಣಪ್ಪ ರಾಥೋಡ್​ಗೆ ಸಹಾಯ ಹಸ್ತ ಚಾಚಿರುವ ಲಿಂಕ್​ಡಿನ್ನಿಗರು
Image
Viral Post : ಪಿಝಾ ಹಿಟ್ಟಿನ ಮೇಲೆ ನೇತಾಡುತ್ತಿರುವ ಶೌಚಾಲಯದ ಬ್ರಷ್!
Image
Viral Video: ನಾನೇ ನಾಳಿನ ನಂಬರ್ ಒನ್ ಮಿಸ್ಟರ್ ಶೆಫ್ ಮಿಯಾಂವ್!

Railway Police Punish Trekkers at Dudhsagar Waterfall. #Dudhsagar #travel pic.twitter.com/hM94awOmcy

ಬೆಂಗಳೂರು, ಮಂಗಳೂರು, ಬೆಳಗಾವಿ, ಉತ್ತರ ಕನ್ನಡ, ಹುಬ್ಬಳ್ಳಿ, ಧಾರವಾಡ, ಬಾಗಲಕೋಟೆ ಮತ್ತು ಮಹಾರಾಷ್ಟ್ರದ ಅನೇಕ ಜಿಲ್ಲೆಗಳಿಂದ ಚಾರಣಿಗರ ದಂಡು ಈ ಜಲಪಾತವನ್ನು ನೋಡಲು ಬರುತ್ತದೆ. ಸಾಮಾನ್ಯವಾಗಿ ಚಾರಣಿಗರು ಗೋವಾದ ಕೊಲ್ಲಮ್​ ನಿಲ್ದಾಣದಲ್ಲಿ ಇಳಿದು ನೈಋತ್ಯ ರೈಲ್ವೆ ಹಳಿಗುಂಟ ನಡೆದುಕೊಂಡು ದೂಧಸಾಗರವನ್ನು ತಲುಪುವುದು ವಾಡಿಕೆ.

ಇದನ್ನೂ ಓದಿ : Viral Video: ಬಸ್ಸಿಗೆ ಹಾಯ್ದು ಆತ್ಮಹತ್ಯೆ ಮಾಡಿಕೊಂಡ ಮಹಿಳೆಯ ವಿಡಿಯೋ ವೈರಲ್

ಆದರೆ ಇತ್ತೀಚೆಗೆ ಸಂಗೂಯೆಮ್ ತಾಲೂಕಿನ ಮೈನಾಪಿ ಜಲಪಾತದಲ್ಲಿ ಇತ್ತೀಚೆಗೆ ಇಬ್ಬರು ಮುಳುಗಿ ಸಾವನ್ನಪ್ಪಿರುವ ಹಿನ್ನೆಲೆಯಲ್ಲಿ ಗೋವಾ ಸರ್ಕಾರ, ಅರಣ್ಯ ಇಲಾಖೆ ಮತ್ತು ಪೊಲೀಸ್​ ಇಲಾಖೆಯು ಮಳೆಗಾಲದ ಸಂದರ್ಭದಲ್ಲಿ ಜಲಪಾತಗಳಿಗೆ ಪ್ರವಾಸಿಗರು ಭೇಟಿ ನೀಡುವುದನ್ನು ನಿಷೇಧಿಸಿದೆ. ಈ ಹಿನ್ನೆಲೆಯಲ್ಲಿ ಪ್ರಸ್ತುತ ಚಾರಣಿಗರನ್ನು ರೈಲ್ವೆ ಹಳಿ ಬಳಿ ಪೊಲೀಸರು ತಡೆದು, ಪರಿಣಾಮದ ಬಗ್ಗೆ ವಿವರಿಸಿ, ದಂಡಿಸಿ ವಾಪಾಸು ಕಳಿಸಿದ್ದಾರೆ.

ಹಾಗಾಗಿ ಪ್ರವಾಸಿಗರು ದೂಧಸಾಗರ್​ ಜಲಪಾತದ ಸೌಂದರ್ಯವನ್ನು ರೈಲಿನೊಳಗೇ ಕುಳಿತು ಆಸ್ವಾದಿಸಬೇಕು ಎಂಬ ಕಟ್ಟಾಜ್ಞೆಯನ್ನು ಪಾಲಿಸುವುದು ಅನಿವಾರ್ಯ. ಇಲ್ಲವಾದಲ್ಲಿ ಪ್ರವಾಸಿಗರು ಮತ್ತು ರೈಲು ಪ್ರಯಾಣಿಕರು ಪರಸ್ಪರ ಅಪಾಯಕ್ಕೆ ಒಳಗಾಗಬೇಕಾಗುತ್ತದೆ. ಅಲ್ಲದೆ ಈ ನಿಯಮವನ್ನು ಉಲ್ಲಂಘಿಸಿದವರ ವಿರುದ್ಧ ರೈಲ್ವೇ ಕಾಯಿದೆ ಸೆಕ್ಷನ್​ 147 ಮತ್ತು 159 ಅನ್ವಯ ಕ್ರಮ ಕೈಗೊಳ್ಳಲಾಗುತ್ತದೆ. ಆದ್ದರಿಂದ ಪ್ರವಾಸಿಗರು ಸುರಕ್ಷತೆಗಾಗಿ ನಿಯಮಗಳನ್ನು ಪಾಲಿಸಲೇಬೇಕು ಎಂದು ನೈಋತ್ಯ ರೈಲ್ವೆ ಟ್ವೀಟ್ ಮಾಡಿದೆ.

ಮತ್ತಷ್ಟು ವೈರಲ್ ನ್ಯೂಸ್​ಗಾಗಿ ಕ್ಲಿಕ್ ಮಾಡಿ

Published On - 11:26 am, Tue, 18 July 23

ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ಮಳೆ, ರಾಜ್ಯಕಾರಣದ ಬಗ್ಗೆ ಬಬಲಾದಿ ಕಾಲಜ್ಞಾನ ಸ್ಫೋಟಕ ಭವಿಷ್ಯ
ಮಳೆ, ರಾಜ್ಯಕಾರಣದ ಬಗ್ಗೆ ಬಬಲಾದಿ ಕಾಲಜ್ಞಾನ ಸ್ಫೋಟಕ ಭವಿಷ್ಯ
ಶೆಟ್ಟಿ ಗ್ಯಾಂಗ್ ಮೆರೆತ ರಶ್ಮಿಕಾ ಮಂದಣ್ಣ: ಬಂದಿಲ್ಲ ಮದುವೆ ಆಹ್ವಾನ
ಶೆಟ್ಟಿ ಗ್ಯಾಂಗ್ ಮೆರೆತ ರಶ್ಮಿಕಾ ಮಂದಣ್ಣ: ಬಂದಿಲ್ಲ ಮದುವೆ ಆಹ್ವಾನ
ಮೈಸೂರು: ಡಾ ಯತೀಂದ್ರ ಕಟೌಟ್ ನಿಲ್ಲಿಸಲು ರಸ್ತೆ ಬ್ಲಾಕ್; ಸವಾರರು ಆಕ್ರೋಶ
ಮೈಸೂರು: ಡಾ ಯತೀಂದ್ರ ಕಟೌಟ್ ನಿಲ್ಲಿಸಲು ರಸ್ತೆ ಬ್ಲಾಕ್; ಸವಾರರು ಆಕ್ರೋಶ
KSRTC, BMTC ಸಾರಿಗೆ ನೌಕರರ ಮುಷ್ಕರ ಏನಾಯ್ತು? ನಾಳೆ ಬಸ್ ಸಂಚಾರ ಇರುತ್ತಾ?
KSRTC, BMTC ಸಾರಿಗೆ ನೌಕರರ ಮುಷ್ಕರ ಏನಾಯ್ತು? ನಾಳೆ ಬಸ್ ಸಂಚಾರ ಇರುತ್ತಾ?
ವಿದ್ಯಾರ್ಥಿಗಳೇ ಪರೀಕ್ಷೆ ಹೊತ್ತಲ್ಲಿ ಭಯ ಬೇಡ.. ನಿಮಗಾಗಿ ಸಿಂಪಲ್ ಟಿಪ್ಸ್
ವಿದ್ಯಾರ್ಥಿಗಳೇ ಪರೀಕ್ಷೆ ಹೊತ್ತಲ್ಲಿ ಭಯ ಬೇಡ.. ನಿಮಗಾಗಿ ಸಿಂಪಲ್ ಟಿಪ್ಸ್
ಯುವತಿಯರಿಗೆ ಪ್ಲೈಯಿಂಗ್ ಕಿಸ್:ಬೀದಿ ಕಾಮಣ್ಣರ ವಿಡಿಯೋ ವೈರಲ್
ಯುವತಿಯರಿಗೆ ಪ್ಲೈಯಿಂಗ್ ಕಿಸ್:ಬೀದಿ ಕಾಮಣ್ಣರ ವಿಡಿಯೋ ವೈರಲ್
ಮಂಗಳೂರಿಗೆ ಹೂಡಿಕೆದಾರರು ಬರುತ್ತಿಲ್ಲ ಎಂದ ಖರ್ಗೆ ವಿರುದ್ಧ ಪೈ ಕಿಡಿ
ಮಂಗಳೂರಿಗೆ ಹೂಡಿಕೆದಾರರು ಬರುತ್ತಿಲ್ಲ ಎಂದ ಖರ್ಗೆ ವಿರುದ್ಧ ಪೈ ಕಿಡಿ