Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ದೂಧಸಾಗರ; ರೈಲ್ವೆ ಹಳಿ ದಾಟಿದ್ದಕ್ಕೆ ಚಾರಣಿಗರಿಂದ ಬಸ್ಕಿ ಹೊಡೆಸಿದ ಪೊಲೀಸರು

Punishment : 1,017 ಅಡಿಯಿಂದ ಧುಮುಕುವ ಈ ಹಾಲಿನ ಸಮುದ್ರವನ್ನು ಮಳೆಗಾಲದಲ್ಲಿ ನೋಡುವುದೇ ಛಂದ. ಆದರೆ ಇತ್ತೀಚೆಗೆ ಸಂಭವಿಸಿದ ಅಪಘಾತದಿಂದಾಗಿ ಗೋವಾ ಸರ್ಕಾರ ಇಲ್ಲಿ ಚಾರಣವನ್ನು ನಿಷೇಧಿಸಿದೆ. ಆದರೂ ಈ ತಂಡ...

Viral Video: ದೂಧಸಾಗರ; ರೈಲ್ವೆ ಹಳಿ ದಾಟಿದ್ದಕ್ಕೆ ಚಾರಣಿಗರಿಂದ ಬಸ್ಕಿ ಹೊಡೆಸಿದ ಪೊಲೀಸರು
ದೂಧಸಾಗರಕ್ಕೆ ಹೊರಟಿದ್ದ ಚಾರಣಿಗರ ದಂಡನ್ನು ಪೊಲೀಸರು ಬಸ್ಕಿ ಹೊಡೆಸುತ್ತಿರುವುದು.
Follow us
ಶ್ರೀದೇವಿ ಕಳಸದ
|

Updated on:Jul 18, 2023 | 11:28 AM

Dudhsagar : ಗೋವಾ-ಕರ್ನಾಟಕ ಗಡಿಯಲ್ಲಿರುವ ದೂಧಸಾಗರ್ ಜಲಪಾತದ ಮನೋಹರ ದೃಶ್ಯವನ್ನು ನೋಡಲು ಮಳೆಗಾಲದ ಈ ಸಮಯ ಅತ್ಯಂತ ಪ್ರಶಸ್ತ. ಹಾಗಾಗಿ ಇಲ್ಲಿ ಪ್ರವಾಸಿಗರ ದಂಡೇ ನೆರೆದಿರುತ್ತದೆ. ಇದೀಗ ಇಂಥದೊಂದು ಚಾರಣಿಗರ ಗುಂಪಿಗೆ (Trekking Group) ಪೊಲೀಸರು ದಂಡಿಸಿದ ವಿಡಿಯೋ ವೈರಲ್ ಆಗಿದೆ. ಜಲಪಾತವನ್ನು ನೋಡಲು ಈ ಚಾರಣಿಗರು ನಿಗದಿತ ಸ್ಥಳಕ್ಕಿಂತ ಮೊದಲೇ ರೈಲಿನಿಂದ ಇಳಿದಿದ್ದಕ್ಕಾಗಿ ಪೊಲೀಸರು ಈ ಕ್ರಮ ಕೈಗೊಂಡಿದ್ದಾರೆ ಎಂದು ವರದಿಯಾಗಿದೆ. ಚಾರಣಿಗರು ಮಾಡಿದ ತಪ್ಪಿಗೆ ಸಾಲಾಗಿ ನಿಂತು ಬಸ್ಕಿ ಹೊಡೆಯುತ್ತಿರುವ ಈ ವಿಡಿಯೋ ಇಲ್ಲಿದೆ.

ಇದನ್ನೂ ಓದಿ
Image
Viral Video: ಭಾರತಕ್ಕೆ ಶುಭಕೋರಿದ ಪಾಕಿಸ್ತಾನದ ರಬಾಬ್ ಕಲಾವಿದ
Image
Viral Post: ವಿಶಿಷ್ಟ ಚೇತನ ಕೃಷ್ಣಪ್ಪ ರಾಥೋಡ್​ಗೆ ಸಹಾಯ ಹಸ್ತ ಚಾಚಿರುವ ಲಿಂಕ್​ಡಿನ್ನಿಗರು
Image
Viral Post : ಪಿಝಾ ಹಿಟ್ಟಿನ ಮೇಲೆ ನೇತಾಡುತ್ತಿರುವ ಶೌಚಾಲಯದ ಬ್ರಷ್!
Image
Viral Video: ನಾನೇ ನಾಳಿನ ನಂಬರ್ ಒನ್ ಮಿಸ್ಟರ್ ಶೆಫ್ ಮಿಯಾಂವ್!

Railway Police Punish Trekkers at Dudhsagar Waterfall. #Dudhsagar #travel pic.twitter.com/hM94awOmcy

ಬೆಂಗಳೂರು, ಮಂಗಳೂರು, ಬೆಳಗಾವಿ, ಉತ್ತರ ಕನ್ನಡ, ಹುಬ್ಬಳ್ಳಿ, ಧಾರವಾಡ, ಬಾಗಲಕೋಟೆ ಮತ್ತು ಮಹಾರಾಷ್ಟ್ರದ ಅನೇಕ ಜಿಲ್ಲೆಗಳಿಂದ ಚಾರಣಿಗರ ದಂಡು ಈ ಜಲಪಾತವನ್ನು ನೋಡಲು ಬರುತ್ತದೆ. ಸಾಮಾನ್ಯವಾಗಿ ಚಾರಣಿಗರು ಗೋವಾದ ಕೊಲ್ಲಮ್​ ನಿಲ್ದಾಣದಲ್ಲಿ ಇಳಿದು ನೈಋತ್ಯ ರೈಲ್ವೆ ಹಳಿಗುಂಟ ನಡೆದುಕೊಂಡು ದೂಧಸಾಗರವನ್ನು ತಲುಪುವುದು ವಾಡಿಕೆ.

ಇದನ್ನೂ ಓದಿ : Viral Video: ಬಸ್ಸಿಗೆ ಹಾಯ್ದು ಆತ್ಮಹತ್ಯೆ ಮಾಡಿಕೊಂಡ ಮಹಿಳೆಯ ವಿಡಿಯೋ ವೈರಲ್

ಆದರೆ ಇತ್ತೀಚೆಗೆ ಸಂಗೂಯೆಮ್ ತಾಲೂಕಿನ ಮೈನಾಪಿ ಜಲಪಾತದಲ್ಲಿ ಇತ್ತೀಚೆಗೆ ಇಬ್ಬರು ಮುಳುಗಿ ಸಾವನ್ನಪ್ಪಿರುವ ಹಿನ್ನೆಲೆಯಲ್ಲಿ ಗೋವಾ ಸರ್ಕಾರ, ಅರಣ್ಯ ಇಲಾಖೆ ಮತ್ತು ಪೊಲೀಸ್​ ಇಲಾಖೆಯು ಮಳೆಗಾಲದ ಸಂದರ್ಭದಲ್ಲಿ ಜಲಪಾತಗಳಿಗೆ ಪ್ರವಾಸಿಗರು ಭೇಟಿ ನೀಡುವುದನ್ನು ನಿಷೇಧಿಸಿದೆ. ಈ ಹಿನ್ನೆಲೆಯಲ್ಲಿ ಪ್ರಸ್ತುತ ಚಾರಣಿಗರನ್ನು ರೈಲ್ವೆ ಹಳಿ ಬಳಿ ಪೊಲೀಸರು ತಡೆದು, ಪರಿಣಾಮದ ಬಗ್ಗೆ ವಿವರಿಸಿ, ದಂಡಿಸಿ ವಾಪಾಸು ಕಳಿಸಿದ್ದಾರೆ.

ಹಾಗಾಗಿ ಪ್ರವಾಸಿಗರು ದೂಧಸಾಗರ್​ ಜಲಪಾತದ ಸೌಂದರ್ಯವನ್ನು ರೈಲಿನೊಳಗೇ ಕುಳಿತು ಆಸ್ವಾದಿಸಬೇಕು ಎಂಬ ಕಟ್ಟಾಜ್ಞೆಯನ್ನು ಪಾಲಿಸುವುದು ಅನಿವಾರ್ಯ. ಇಲ್ಲವಾದಲ್ಲಿ ಪ್ರವಾಸಿಗರು ಮತ್ತು ರೈಲು ಪ್ರಯಾಣಿಕರು ಪರಸ್ಪರ ಅಪಾಯಕ್ಕೆ ಒಳಗಾಗಬೇಕಾಗುತ್ತದೆ. ಅಲ್ಲದೆ ಈ ನಿಯಮವನ್ನು ಉಲ್ಲಂಘಿಸಿದವರ ವಿರುದ್ಧ ರೈಲ್ವೇ ಕಾಯಿದೆ ಸೆಕ್ಷನ್​ 147 ಮತ್ತು 159 ಅನ್ವಯ ಕ್ರಮ ಕೈಗೊಳ್ಳಲಾಗುತ್ತದೆ. ಆದ್ದರಿಂದ ಪ್ರವಾಸಿಗರು ಸುರಕ್ಷತೆಗಾಗಿ ನಿಯಮಗಳನ್ನು ಪಾಲಿಸಲೇಬೇಕು ಎಂದು ನೈಋತ್ಯ ರೈಲ್ವೆ ಟ್ವೀಟ್ ಮಾಡಿದೆ.

ಮತ್ತಷ್ಟು ವೈರಲ್ ನ್ಯೂಸ್​ಗಾಗಿ ಕ್ಲಿಕ್ ಮಾಡಿ

Published On - 11:26 am, Tue, 18 July 23

ಬುಡಕಟ್ಟು ನೃತ್ಯದ ಮೂಲಕ ಛತ್ತೀಸ್​ಗಢದಲ್ಲಿ ಮೋದಿಗೆ ಸಾಂಪ್ರದಾಯಿಕ ಸ್ವಾಗತ
ಬುಡಕಟ್ಟು ನೃತ್ಯದ ಮೂಲಕ ಛತ್ತೀಸ್​ಗಢದಲ್ಲಿ ಮೋದಿಗೆ ಸಾಂಪ್ರದಾಯಿಕ ಸ್ವಾಗತ
ಬೌಂಡರಿ ಬಳಿ ಅತ್ಯದ್ಭುತ ಕ್ಯಾಚ್ ಹಿಡಿದ ಜ್ಯಾಕ್ ಫ್ರೇಸರ್
ಬೌಂಡರಿ ಬಳಿ ಅತ್ಯದ್ಭುತ ಕ್ಯಾಚ್ ಹಿಡಿದ ಜ್ಯಾಕ್ ಫ್ರೇಸರ್
ಚೊಚ್ಚಲ ಐಪಿಎಲ್ ಅರ್ಧಶತಕ ಸಿಡಿಸಿದ ಅನಿಕೇತ್ ವರ್ಮಾ
ಚೊಚ್ಚಲ ಐಪಿಎಲ್ ಅರ್ಧಶತಕ ಸಿಡಿಸಿದ ಅನಿಕೇತ್ ವರ್ಮಾ
ಮೋದಿ ಭೇಟಿಗೂ ಕೆಲವೇ ಗಂಟೆ ಮೊದಲು ಛತ್ತೀಸ್‌ಗಢದಲ್ಲಿ 50 ನಕ್ಸಲರ ಶರಣಾಗತಿ
ಮೋದಿ ಭೇಟಿಗೂ ಕೆಲವೇ ಗಂಟೆ ಮೊದಲು ಛತ್ತೀಸ್‌ಗಢದಲ್ಲಿ 50 ನಕ್ಸಲರ ಶರಣಾಗತಿ
ನಾಗ್ಪುರದಲ್ಲಿ ರೋಡ್ ಶೋ ನಡೆಸಿದ ಮೋದಿ; ಜೈ ಶ್ರೀರಾಮ್ ಘೋಷಣೆ ಕೂಗಿದ ಜನರು
ನಾಗ್ಪುರದಲ್ಲಿ ರೋಡ್ ಶೋ ನಡೆಸಿದ ಮೋದಿ; ಜೈ ಶ್ರೀರಾಮ್ ಘೋಷಣೆ ಕೂಗಿದ ಜನರು
ಟ್ರಕ್​ ಕದ್ದವನ ಅತಿಯಾದ ವೇಗವೇ ಸಿಕ್ಕಿಬೀಳಲು ಕಾರಣವಾಯ್ತು
ಟ್ರಕ್​ ಕದ್ದವನ ಅತಿಯಾದ ವೇಗವೇ ಸಿಕ್ಕಿಬೀಳಲು ಕಾರಣವಾಯ್ತು
ಭಟ್ಕಳದಲ್ಲಿ ಬಾಂಬ್ ಸ್ಕ್ವಾಡ್​​ ಹಾಗೂ ಶ್ವಾನದಳದಿಂದ ಪರಿಶೀಲನೆ
ಭಟ್ಕಳದಲ್ಲಿ ಬಾಂಬ್ ಸ್ಕ್ವಾಡ್​​ ಹಾಗೂ ಶ್ವಾನದಳದಿಂದ ಪರಿಶೀಲನೆ
ವಿಜಯದಶಮಿಗೆ ಹೊಸ ಪಕ್ಷ ಕಟ್ಟುವ ಸುಳಿವು ನೀಡಿದ ಬಸನಗೌಡ ಪಾಟೀಲ್​ ಯತ್ನಾಳ್​
ವಿಜಯದಶಮಿಗೆ ಹೊಸ ಪಕ್ಷ ಕಟ್ಟುವ ಸುಳಿವು ನೀಡಿದ ಬಸನಗೌಡ ಪಾಟೀಲ್​ ಯತ್ನಾಳ್​
Video: ಒಡಿಶಾದಲ್ಲಿ ಹಳಿ ತಪ್ಪಿದ ಬೆಂಗಳೂರು- ಕಾಮಾಖ್ಯ ಎಕ್ಸ್​ಪ್ರೆಸ್ ರೈಲು
Video: ಒಡಿಶಾದಲ್ಲಿ ಹಳಿ ತಪ್ಪಿದ ಬೆಂಗಳೂರು- ಕಾಮಾಖ್ಯ ಎಕ್ಸ್​ಪ್ರೆಸ್ ರೈಲು
IPL 2025: ಆಶಿಶ್ ನೆಹ್ರಾ ಆಕ್ರೋಶಕ್ಕೆ ಇದುವೇ ಅಸಲಿ ಕಾರಣ
IPL 2025: ಆಶಿಶ್ ನೆಹ್ರಾ ಆಕ್ರೋಶಕ್ಕೆ ಇದುವೇ ಅಸಲಿ ಕಾರಣ