AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ದೂಧಸಾಗರ; ರೈಲ್ವೆ ಹಳಿ ದಾಟಿದ್ದಕ್ಕೆ ಚಾರಣಿಗರಿಂದ ಬಸ್ಕಿ ಹೊಡೆಸಿದ ಪೊಲೀಸರು

Punishment : 1,017 ಅಡಿಯಿಂದ ಧುಮುಕುವ ಈ ಹಾಲಿನ ಸಮುದ್ರವನ್ನು ಮಳೆಗಾಲದಲ್ಲಿ ನೋಡುವುದೇ ಛಂದ. ಆದರೆ ಇತ್ತೀಚೆಗೆ ಸಂಭವಿಸಿದ ಅಪಘಾತದಿಂದಾಗಿ ಗೋವಾ ಸರ್ಕಾರ ಇಲ್ಲಿ ಚಾರಣವನ್ನು ನಿಷೇಧಿಸಿದೆ. ಆದರೂ ಈ ತಂಡ...

Viral Video: ದೂಧಸಾಗರ; ರೈಲ್ವೆ ಹಳಿ ದಾಟಿದ್ದಕ್ಕೆ ಚಾರಣಿಗರಿಂದ ಬಸ್ಕಿ ಹೊಡೆಸಿದ ಪೊಲೀಸರು
ದೂಧಸಾಗರಕ್ಕೆ ಹೊರಟಿದ್ದ ಚಾರಣಿಗರ ದಂಡನ್ನು ಪೊಲೀಸರು ಬಸ್ಕಿ ಹೊಡೆಸುತ್ತಿರುವುದು.
ಶ್ರೀದೇವಿ ಕಳಸದ
ಶ್ರೀದೇವಿ ಕಳಸದ|

Updated on:Jul 18, 2023 | 11:28 AM

Share

Dudhsagar : ಗೋವಾ-ಕರ್ನಾಟಕ ಗಡಿಯಲ್ಲಿರುವ ದೂಧಸಾಗರ್ ಜಲಪಾತದ ಮನೋಹರ ದೃಶ್ಯವನ್ನು ನೋಡಲು ಮಳೆಗಾಲದ ಈ ಸಮಯ ಅತ್ಯಂತ ಪ್ರಶಸ್ತ. ಹಾಗಾಗಿ ಇಲ್ಲಿ ಪ್ರವಾಸಿಗರ ದಂಡೇ ನೆರೆದಿರುತ್ತದೆ. ಇದೀಗ ಇಂಥದೊಂದು ಚಾರಣಿಗರ ಗುಂಪಿಗೆ (Trekking Group) ಪೊಲೀಸರು ದಂಡಿಸಿದ ವಿಡಿಯೋ ವೈರಲ್ ಆಗಿದೆ. ಜಲಪಾತವನ್ನು ನೋಡಲು ಈ ಚಾರಣಿಗರು ನಿಗದಿತ ಸ್ಥಳಕ್ಕಿಂತ ಮೊದಲೇ ರೈಲಿನಿಂದ ಇಳಿದಿದ್ದಕ್ಕಾಗಿ ಪೊಲೀಸರು ಈ ಕ್ರಮ ಕೈಗೊಂಡಿದ್ದಾರೆ ಎಂದು ವರದಿಯಾಗಿದೆ. ಚಾರಣಿಗರು ಮಾಡಿದ ತಪ್ಪಿಗೆ ಸಾಲಾಗಿ ನಿಂತು ಬಸ್ಕಿ ಹೊಡೆಯುತ್ತಿರುವ ಈ ವಿಡಿಯೋ ಇಲ್ಲಿದೆ.

ಇದನ್ನೂ ಓದಿ
Image
Viral Video: ಭಾರತಕ್ಕೆ ಶುಭಕೋರಿದ ಪಾಕಿಸ್ತಾನದ ರಬಾಬ್ ಕಲಾವಿದ
Image
Viral Post: ವಿಶಿಷ್ಟ ಚೇತನ ಕೃಷ್ಣಪ್ಪ ರಾಥೋಡ್​ಗೆ ಸಹಾಯ ಹಸ್ತ ಚಾಚಿರುವ ಲಿಂಕ್​ಡಿನ್ನಿಗರು
Image
Viral Post : ಪಿಝಾ ಹಿಟ್ಟಿನ ಮೇಲೆ ನೇತಾಡುತ್ತಿರುವ ಶೌಚಾಲಯದ ಬ್ರಷ್!
Image
Viral Video: ನಾನೇ ನಾಳಿನ ನಂಬರ್ ಒನ್ ಮಿಸ್ಟರ್ ಶೆಫ್ ಮಿಯಾಂವ್!

Railway Police Punish Trekkers at Dudhsagar Waterfall. #Dudhsagar #travel pic.twitter.com/hM94awOmcy

ಬೆಂಗಳೂರು, ಮಂಗಳೂರು, ಬೆಳಗಾವಿ, ಉತ್ತರ ಕನ್ನಡ, ಹುಬ್ಬಳ್ಳಿ, ಧಾರವಾಡ, ಬಾಗಲಕೋಟೆ ಮತ್ತು ಮಹಾರಾಷ್ಟ್ರದ ಅನೇಕ ಜಿಲ್ಲೆಗಳಿಂದ ಚಾರಣಿಗರ ದಂಡು ಈ ಜಲಪಾತವನ್ನು ನೋಡಲು ಬರುತ್ತದೆ. ಸಾಮಾನ್ಯವಾಗಿ ಚಾರಣಿಗರು ಗೋವಾದ ಕೊಲ್ಲಮ್​ ನಿಲ್ದಾಣದಲ್ಲಿ ಇಳಿದು ನೈಋತ್ಯ ರೈಲ್ವೆ ಹಳಿಗುಂಟ ನಡೆದುಕೊಂಡು ದೂಧಸಾಗರವನ್ನು ತಲುಪುವುದು ವಾಡಿಕೆ.

ಇದನ್ನೂ ಓದಿ : Viral Video: ಬಸ್ಸಿಗೆ ಹಾಯ್ದು ಆತ್ಮಹತ್ಯೆ ಮಾಡಿಕೊಂಡ ಮಹಿಳೆಯ ವಿಡಿಯೋ ವೈರಲ್

ಆದರೆ ಇತ್ತೀಚೆಗೆ ಸಂಗೂಯೆಮ್ ತಾಲೂಕಿನ ಮೈನಾಪಿ ಜಲಪಾತದಲ್ಲಿ ಇತ್ತೀಚೆಗೆ ಇಬ್ಬರು ಮುಳುಗಿ ಸಾವನ್ನಪ್ಪಿರುವ ಹಿನ್ನೆಲೆಯಲ್ಲಿ ಗೋವಾ ಸರ್ಕಾರ, ಅರಣ್ಯ ಇಲಾಖೆ ಮತ್ತು ಪೊಲೀಸ್​ ಇಲಾಖೆಯು ಮಳೆಗಾಲದ ಸಂದರ್ಭದಲ್ಲಿ ಜಲಪಾತಗಳಿಗೆ ಪ್ರವಾಸಿಗರು ಭೇಟಿ ನೀಡುವುದನ್ನು ನಿಷೇಧಿಸಿದೆ. ಈ ಹಿನ್ನೆಲೆಯಲ್ಲಿ ಪ್ರಸ್ತುತ ಚಾರಣಿಗರನ್ನು ರೈಲ್ವೆ ಹಳಿ ಬಳಿ ಪೊಲೀಸರು ತಡೆದು, ಪರಿಣಾಮದ ಬಗ್ಗೆ ವಿವರಿಸಿ, ದಂಡಿಸಿ ವಾಪಾಸು ಕಳಿಸಿದ್ದಾರೆ.

ಹಾಗಾಗಿ ಪ್ರವಾಸಿಗರು ದೂಧಸಾಗರ್​ ಜಲಪಾತದ ಸೌಂದರ್ಯವನ್ನು ರೈಲಿನೊಳಗೇ ಕುಳಿತು ಆಸ್ವಾದಿಸಬೇಕು ಎಂಬ ಕಟ್ಟಾಜ್ಞೆಯನ್ನು ಪಾಲಿಸುವುದು ಅನಿವಾರ್ಯ. ಇಲ್ಲವಾದಲ್ಲಿ ಪ್ರವಾಸಿಗರು ಮತ್ತು ರೈಲು ಪ್ರಯಾಣಿಕರು ಪರಸ್ಪರ ಅಪಾಯಕ್ಕೆ ಒಳಗಾಗಬೇಕಾಗುತ್ತದೆ. ಅಲ್ಲದೆ ಈ ನಿಯಮವನ್ನು ಉಲ್ಲಂಘಿಸಿದವರ ವಿರುದ್ಧ ರೈಲ್ವೇ ಕಾಯಿದೆ ಸೆಕ್ಷನ್​ 147 ಮತ್ತು 159 ಅನ್ವಯ ಕ್ರಮ ಕೈಗೊಳ್ಳಲಾಗುತ್ತದೆ. ಆದ್ದರಿಂದ ಪ್ರವಾಸಿಗರು ಸುರಕ್ಷತೆಗಾಗಿ ನಿಯಮಗಳನ್ನು ಪಾಲಿಸಲೇಬೇಕು ಎಂದು ನೈಋತ್ಯ ರೈಲ್ವೆ ಟ್ವೀಟ್ ಮಾಡಿದೆ.

ಮತ್ತಷ್ಟು ವೈರಲ್ ನ್ಯೂಸ್​ಗಾಗಿ ಕ್ಲಿಕ್ ಮಾಡಿ

Published On - 11:26 am, Tue, 18 July 23

Follow Us
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್