AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Video: ರಸ್ತೆಯಲ್ಲಿ ಬಿದ್ದಿದ್ದ ಗುಬ್ಬಚ್ಚಿಗೆ ನೀರು ಕುಡಿಸಿ ಬಾಯಾರಿಕೆ ನೀಗಿಸಿದ ಕರ್ತವ್ಯ ನಿರತ ಪೊಲೀಸ್

ಯಾವುದೇ ಸ್ವಾರ್ಥವಿಲ್ಲದೇ ಸಹಾಯ ಮಾಡುವ ಒಳ್ಳೆಯ ಮನಸ್ಸಿನ ವ್ಯಕ್ತಿಗಳನ್ನು ಕಂಡಾಗ ನಿಜಕ್ಕೂ ಖುಷಿಯಾಗುತ್ತದೆ. ಕೆಲವರು ಈ ಮೂಕ ಪ್ರಾಣಿ ಪಕ್ಷಿಗಳ ಹಸಿವನ್ನು ನೀಗಿಸುತ್ತಾರೆ. ಸಂಕಷ್ಟದಲ್ಲಿ ಸಿಲುಕಿದ ಪ್ರಾಣಿ ಪಕ್ಷಿಗಳನ್ನು ರಕ್ಷಿಸಿ ಅವುಗಳ ಜೀವ ಉಳಿಸುತ್ತಾರೆ. ಇದಕ್ಕೆ ಸಾಕ್ಷಿಯಾಗಿದೆ ಈ ದೃಶ್ಯ. ಬಿಸಿಲಿನ ಝಳಕ್ಕೆ ರಸ್ತೆಗೆ ಬಿದ್ದಿದ್ದ ಗುಬ್ಬಚ್ಚಿಯನ್ನು ಪೊಲೀಸಬ್ಬರು ರಕ್ಷಿಸಿದ್ದಾರೆ. ಈ ವಿಡಿಯೋ ನೋಡಿದ ನೆಟ್ಟಿಗರು ಕರ್ತವ್ಯದಲ್ಲಿದ್ದ ಪೊಲೀಸರ ಒಳ್ಳೆಯ ಮನಸ್ಸಿಗೆ ಫಿದಾ ಆಗಿದ್ದಾರೆ. ಈ ಕುರಿತಾದ ಸ್ಟೋರಿ ಇಲ್ಲಿದೆ.

Video: ರಸ್ತೆಯಲ್ಲಿ ಬಿದ್ದಿದ್ದ ಗುಬ್ಬಚ್ಚಿಗೆ ನೀರು ಕುಡಿಸಿ ಬಾಯಾರಿಕೆ ನೀಗಿಸಿದ ಕರ್ತವ್ಯ ನಿರತ ಪೊಲೀಸ್
ವೈರಲ್ ವಿಡಿಯೋImage Credit source: Facebook
ಸಾಯಿನಂದಾ
|

Updated on: Feb 13, 2026 | 12:04 PM

Share

ನಮ್ಮಲ್ಲಿ ಕೆಲವರಿಗೆ ಈ ಪ್ರಾಣಿ (Animal), ಪಕ್ಷಿಗಳೆಂದರೆ ಎಲ್ಲಿಲ್ಲದ ಪ್ರೀತಿ. ಅವುಗಳಿಗೆ ಆಹಾರ ಹಾಕುವುದು, ನೀರು ಕುಡಿಯಲು ಇಡುವುದು ಹೀಗೆ ಅವುಗಳ ಹಸಿವು ನೀಗಿಸುವಂತಹ ಪ್ರಯತ್ನ ಮಾಡ್ತಾರೆ. ಈ ಮೂಕ ಪ್ರಾಣಿ ಪಕ್ಷಿಗಳು ಸಂಕಷ್ಟಕ್ಕೆ ಸಿಲುಕಿದೆ ಎಂದರೆ ತಮ್ಮ ಪ್ರಾಣ ಒತ್ತೆ ಇಟ್ಟು ಅವುಗಳನ್ನು ರಕ್ಷಿಸುತ್ತಾರೆ. ಈ ವಿಡಿಯೋ ನೋಡಿದರೆ ಪೊಲೀಸಪ್ಪನ ಒಳ್ಳೆಯ ಮನಸ್ಸಿಗೆ ನೀವು ಕರಗಿ ಹೋಗ್ತೀರಾ. ಬಿಸಿಲಿನ ಝಳಕ್ಕೆ ರಸ್ತೆಯಲ್ಲಿ ಬಿದ್ದಿದ್ದ ಗುಬ್ಬಚ್ಚಿಗೆ ನೀರು ಕೊಟ್ಟು ಪೊಲೀಸರೊಬ್ಬರು ಬಾಯಾರಿಕೆ ನೀಗಿಸಿದ್ದಾರೆ. ಈ ಹೃದಯಸ್ಪರ್ಶಿ ವಿಡಿಯೋ ಸದ್ಯ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.

Prakash Gadivaddar ಹೆಸರಿನ ಫೇಸ್ ಬುಕ್ ಖಾತೆಯಲ್ಲಿ ವಿಡಿಯೋ ಹಂಚಿಕೊಳ್ಳಲಾಗಿದೆ. ಈ ವಿಡಿಯೋದಲ್ಲಿ ಕರ್ತವ್ಯ ನಿರತರಾಗಿದ್ದ ಪೊಲೀಸರು ವಾಹನದಲ್ಲಿ ಹೋಗುತ್ತಿದ್ದ ವೇಳೆ ಗುಬ್ಬಚ್ಚಿಯೊಂದು ವಾಹನದೊಳಗೆ ಬಂದು ಏನೋ ಸೂಚನೆ ನೀಡಿದೆ. ಇದನ್ನು ಗಮನಿಸಿದ ಪೊಲೀಸರು ವಾಹನ ನಿಲ್ಲಿಸಿದ್ದಾರೆ. ಈ ವೇಳೆ ರಸ್ತೆಯಲ್ಲಿ ಗುಬ್ಬಚ್ಚಿ ಮರಿಯೊಂದು ಬಿಸಿಲಿನ ಝಳಕ್ಕೆ ರಸ್ತೆಗೆ ಬಿದ್ದಿದೆ. ಕೊನೆಗೆ  ಗುಬ್ಬಚ್ಚಿಯನ್ನು ಮೆಲ್ಲನೆ ಮೇಲಕ್ಕೆತ್ತಿ ಅದಕ್ಕೆ ನೀರು ಕುಡಿಸಿದ್ದಾರೆ.

ವೈರಲ್ ವಿಡಿಯೋ ಇಲ್ಲಿದೆ

ಇದನ್ನೂ ಓದಿ: ಕಾಡುಕೋಣ ಹೇಗೆ ಘೀಳಿಡುತ್ತಿದೆ ಗೊತ್ತಾ? ಈ ವಿಡಿಯೋ ನೋಡಿ

ಈ ವಿಡಿಯೋ ಅಧಿಕ ವೀಕ್ಷಣೆ ಪಡೆದುಕೊಂಡಿದ್ದು, ಒಬ್ಬ ಬಳಕೆ ನಿಮ್ಮ ಒಳ್ಳೆಯ ಮನಸ್ಸು ಕಂಡು ಖುಷಿಯಾಯ್ತು ಎಂದಿದ್ದಾರೆ. ಇನ್ನೊಬ್ಬರು, ಮಾಡರ್ನ್ ಪಕ್ಷಿ ಪ್ರೇಮಿ ಸಲಿಂಅಲಿ ಸರ್ ನೀವು. ವೃತ್ತಿ ಜೀವನದ ಜೊತೆಯಲ್ಲಿಯೇ ಪ್ರಾಣಿ ಪಕ್ಷಗಳನ್ನು ಸಂರಕ್ಷಿಸುವಲ್ಲಿ ನಿಮ್ಮ ಪಾತ್ರ ಅಪಾರ ಸರ್.. ಸಾಮಾಜಿಕ ಜಾಲತಾಣದಲ್ಲಿ ನೋಡ್ತಿರ್ತೀವಿ ಸರ್ ಆ ದೇವರು ನಿಮಗೆ ಆಯುಶ್ಯ ಆರೋಗ್ಯಸ್ಥೆ ಕೊಟ್ಟು ಕಾಪಾಡಲಿ ಸರ್ ಜೀ ಎಂದು ಹೇಳಿದ್ದಾರೆ. ಮತ್ತೊಬ್ಬರು, ಮೂಕ ಪಕ್ಷಿಗಳ ಹಿತೈಷಿಗೆ ನಮನಗಳು ಎಂದು ಕಾಮೆಂಟ್ ಮಾಡಿದ್ದಾರೆ.

ಇನ್ನಷ್ಟು ವೈರಲ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಬುರ್ಖಾ ಧರಿಸಿ ಹೋಳಿ ಆಚರಣೆ: ಅಪಮಾನ ಮಾಡಿದ್ದಾರೆಂದು ದಲಿತ ಮುಖಂಡ ದೂರು
ಬುರ್ಖಾ ಧರಿಸಿ ಹೋಳಿ ಆಚರಣೆ: ಅಪಮಾನ ಮಾಡಿದ್ದಾರೆಂದು ದಲಿತ ಮುಖಂಡ ದೂರು
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾಗೆ ಆಸ್ಪತ್ರೆಯಲ್ಲಿ ಮೆಡಿಕಲ್ ಟೆಸ್ಟ್
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾಗೆ ಆಸ್ಪತ್ರೆಯಲ್ಲಿ ಮೆಡಿಕಲ್ ಟೆಸ್ಟ್
ಅಜೆರ್ಬೈಜಾನ್ ವಿಮಾನ ನಿಲ್ದಾಣದ ಮೇಲೆ ಇರಾನ್​ನ ಡ್ರೋನ್ ದಾಳಿ
ಅಜೆರ್ಬೈಜಾನ್ ವಿಮಾನ ನಿಲ್ದಾಣದ ಮೇಲೆ ಇರಾನ್​ನ ಡ್ರೋನ್ ದಾಳಿ
ಪತಿ, ಅತ್ತೆ-ಮಾವನಿಗೆ ಪತ್ನಿಯಿಂದ ಕಿರುಕುಳ
ಪತಿ, ಅತ್ತೆ-ಮಾವನಿಗೆ ಪತ್ನಿಯಿಂದ ಕಿರುಕುಳ
ಜನ ಮನೆಯಲ್ಲಿ ಕಾಯುತ್ತಿದ್ದರೆ, ಇತ್ತ ನದಿಯಲ್ಲಿ ತೇಲಿಬಂದವು ಆಧಾರ್ ಕಾರ್ಡ್
ಜನ ಮನೆಯಲ್ಲಿ ಕಾಯುತ್ತಿದ್ದರೆ, ಇತ್ತ ನದಿಯಲ್ಲಿ ತೇಲಿಬಂದವು ಆಧಾರ್ ಕಾರ್ಡ್
ವಿಷ್ಣುವರ್ಧನ್ ಅವರ ‘ಸೂರ್ಯವಂಶ’ ಪಾತ್ರ ನೆನಪಿಸಿಕೊಂಡ ಎಸ್ ನಾರಾಯಣ್
ವಿಷ್ಣುವರ್ಧನ್ ಅವರ ‘ಸೂರ್ಯವಂಶ’ ಪಾತ್ರ ನೆನಪಿಸಿಕೊಂಡ ಎಸ್ ನಾರಾಯಣ್
ವಿಷಕಾರಿ ಅಂಶ ಪತ್ತೆ: ಮಕ್ಕಳಿಗೆ ತಂಪು ಪಾನೀಯ ಕುಡಿಯುವವರೇ ಎಚ್ಚರ!
ವಿಷಕಾರಿ ಅಂಶ ಪತ್ತೆ: ಮಕ್ಕಳಿಗೆ ತಂಪು ಪಾನೀಯ ಕುಡಿಯುವವರೇ ಎಚ್ಚರ!
ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ ಆರತಕ್ಷತೆ ಬಂದ ಅತಿಥಿಗಳು: ವಿಡಿಯೋ
ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ ಆರತಕ್ಷತೆ ಬಂದ ಅತಿಥಿಗಳು: ವಿಡಿಯೋ
ಲೋಕಾ ರೈಡ್ ವೇಳೆ AEE ಮನೆಯಲ್ಲಿ ಸಿಕ್ತು ಚಿನ್ನ, ಬೆಳ್ಳಿ , ಕಂತೆ ಕಂತೆ ನಗದು
ಲೋಕಾ ರೈಡ್ ವೇಳೆ AEE ಮನೆಯಲ್ಲಿ ಸಿಕ್ತು ಚಿನ್ನ, ಬೆಳ್ಳಿ , ಕಂತೆ ಕಂತೆ ನಗದು
ರಾಜ್ಯಸಭಾ ಚುನಾವಣೆಗೆ ಬಿಹಾರ ಸಿಎಂ ನಿತೀಶ್ ಕುಮಾರ್ ನಾಮಪತ್ರ ಸಲ್ಲಿಕೆ
ರಾಜ್ಯಸಭಾ ಚುನಾವಣೆಗೆ ಬಿಹಾರ ಸಿಎಂ ನಿತೀಶ್ ಕುಮಾರ್ ನಾಮಪತ್ರ ಸಲ್ಲಿಕೆ