Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚುಂಬನ ವಿದ್ ಧೂಮಪಾನ! ನವಜೋಡಿಯ ಪ್ರಿ ವೆಡ್ಡಿಂಗ್ ಫೋಟೊಶೂಟ್ ಅವತಾರಕ್ಕೆ ನೆಟ್ಟಿಗರು ಗರಂ

Smoke-themed pre-wedding photoshoot; ಕಲಿಕಾಲ. ಈ ಸಾಂಸ್ಕೃತಿಕ ವಿಘಟನೆಯ ಬಗ್ಗೆ ಏನು ಹೇಳಬೇಕು! ಇಂಥದ್ದನ್ನು ಪ್ರೋತ್ಸಾಹಿಸುವ ಹೆಂಡತಿ ಯಾರಿಗೆ ಬೇಕು... ತನ್ನ ಗಂಡನ ಆರೋಗ್ಯ ಹದಗೆಡುವುದನ್ನು ನೋಡಲು ಯಾರು ಬಯಸುತ್ತಾರೆ ಎಂದು ರಾಜೇಶ್ವರಿ ಅಯ್ಯರ್ ಎಂಬವರು ವಿಡಿಯೋ ಸಹಿತ ಟ್ವೀಟ್ ಮಾಡಿದ್ದಾರೆ.

ಚುಂಬನ ವಿದ್ ಧೂಮಪಾನ! ನವಜೋಡಿಯ ಪ್ರಿ ವೆಡ್ಡಿಂಗ್ ಫೋಟೊಶೂಟ್ ಅವತಾರಕ್ಕೆ ನೆಟ್ಟಿಗರು ಗರಂ
ವೈರಲ್ ವಿಡಿಯೋದ ಸ್ಕ್ರೀನ್​​ಗ್ರ್ಯಾಬ್Image Credit source: Twitter
Follow us
Ganapathi Sharma
|

Updated on: Aug 16, 2023 | 7:40 PM

ಬೆಂಗಳೂರು, ಆಗಸ್ಟ್ 16: ಇದು ಪ್ರಿ ವೆಡ್ಡಿಂಗ್ ಫೋಟೊಶೂಟ್ (Pre-Wedding photoshoot) ಕಾಲ. ಮದುವೆಗೆ ಮುಂಚೆ ವಧು ಹಾಗೂ ವರ ಜತೆಯಾಗಿ ಫೋಟೊಶೂಟ್ ಮಾಡಿಸುವುದು ಸಾಮಾನ್ಯ. ಪ್ರವಾಸಿ ತಾಣಗಳಲ್ಲಿಯೋ, ಪ್ರೇಕ್ಷಣೀಯ ಸ್ಥಳಗಳಲ್ಲಿಯೋ ಫೋಟೊಶೂಟ್ ಮಾಡಿಸುವುದು ಸಹಜ. ಆದರೆ, ಇಲ್ಲೊಂದು ವಿಲಕ್ಷಣ ಪ್ರಿ ವೆಡ್ಡಿಂಗ್ ಅಥವಾ ಮದುವೆಗೆ ಮುಂಚಿನ ಫೋಟೋಶೂಟ್‌ ನಡೆದಿದ್ದು, ಸಾಮಾಜಿಕ ಮಾಧ್ಯಮ ಟ್ವಿಟರ್​ನಲ್ಲಿ (Twitter) ವೈರಲ್ ಆಗಿದೆ. ಫೋಟೊಶೂಟ್​​ನಲ್ಲಿ ವರನು ಧೂಮಪಾನ ಮಾಡಿ ವಧುವಿಗೆ ಚುಂಬಿಸುವುದು ಮತ್ತು ಆಕೆ ಹೊಗೆಯನ್ನು ಹೊರಬಿಡುತ್ತಾ ಫೋಟೊಗೆ ಪೋಸ್ ನೀಡಿರುವ ವಿಡಿಯೋ ವೈರಲ್ ಆಗಿದೆ. ಈ ವಿಲಕ್ಷಣ ಫೊಟೊಶೂಟ್​ಗೆ ನೆಟ್ಟಿಗರಿಂದ ವ್ಯಾಪಕ ವಿರೋಧ ವ್ಯಕ್ತವಾಗಿದೆ.

ಕಲಿಕಾಲ. ಈ ಸಾಂಸ್ಕೃತಿಕ ವಿಘಟನೆಯ ಬಗ್ಗೆ ಏನು ಹೇಳಬೇಕು! ಇಂಥದ್ದನ್ನು ಪ್ರೋತ್ಸಾಹಿಸುವ ಹೆಂಡತಿ ಯಾರಿಗೆ ಬೇಕು… ತನ್ನ ಗಂಡನ ಆರೋಗ್ಯ ಹದಗೆಡುವುದನ್ನು ನೋಡಲು ಯಾರು ಬಯಸುತ್ತಾರೆ ಎಂದು ರಾಜೇಶ್ವರಿ ಅಯ್ಯರ್ ಎಂಬವರು ವಿಡಿಯೋ ಸಹಿತ ಟ್ವೀಟ್ ಮಾಡಿದ್ದಾರೆ.

ಈ ಪೋಸ್ಟ್‌ಗೆ ವ್ಯಕ್ತಿಯೊಬ್ಬರು ಪ್ರತಿಕ್ರಿಯಿಸಿ, ಚಲನಚಿತ್ರಗಳು ಮತ್ತು ಇಂಟರ್ನೆಟ್ ಯುವಕರ ಮೇಲೆ ಕೆಟ್ಟ ಪ್ರಭಾವ ಬೀರುತ್ತಿವೆ ಎಂದು ಉಲ್ಲೇಖಿಸಿದ್ದಾರೆ.

ಯುವಜನರಿಗೆ ಮದುವೆ ಮತ್ತು ಸಂಬಂಧಿತ ಆಚರಣೆಗಳ ಬಗ್ಗೆ ಗೌರವವಿಲ್ಲ ಎಂದು ಮತ್ತೊಬ್ಬರು ಪ್ರತಿಕ್ರಿಯಿಸಿದ್ದಾರೆ.

ಮತ್ತೊಬ್ಬ ಸಾಮಾಜಿಕ ಮಾಧ್ಯಮ ಬಳಕೆದಾರರು, ಇತ್ತೀಚಿನ ದಿನಗಳಲ್ಲಿ ಜನರು ಸಾಮಾಜಿಕ ಮಾಧ್ಯಮದಲ್ಲಿ ಜನಪ್ರಿಯರಾಗಲು ಏನು ಬೇಕಾದರೂ ಮಾಡುತ್ತಾರೆ ಎಂದು ಹೇಳಿದ್ದಾರೆ.

ಇವು ಕೇರಳದಲ್ಲಿ ಸಾಮಾನ್ಯ ಫೋಟೋಶೂಟ್ ಥೀಮ್​​ಗಳಾಗಿವೆ. ಕೇರಳದ ಎಲ್ಲಾ ಪ್ರಿ-ವೆಡ್ಡಿಂಗ್ ಫೋಟೋಶೂಟ್‌ಗಳನ್ನು ಪರಿಶೀಲಿಸಿದರೆ ಜನರು ಆಘಾತಕ್ಕೊಳಗಾಗಬಹುದು ಎಂದು ಇನ್ನೊಬ್ಬ ಬಳಕೆದಾರರು ಪ್ರತಿಕ್ರಿಯಿಸಿದ್ದಾರೆ.

ಮದುವೆಯ ಪೂರ್ವ ಮತ್ತು ನಂತರದ ಫೋಟೋಶೂಟ್‌ಗಳು ಈಗ ಸಾಮಾನ್ಯವಾಗಿದೆ. ಈ ಸಮಯದಲ್ಲಿ ನವಜೋಡಿ ವಿವಿಧ ಥೀಮ್‌ಗಳನ್ನು ಆಧರಿಸಿ ಫೋಟೋಶೂಟ್‌ಗಳಿಗೆ ಹೋಗುತ್ತಾರೆ. ಫೋಟೊಶೂಟ್​​ಗಳನ್ನು ನೆಟ್‌ನಲ್ಲಿ ಅಪ್‌ಲೋಡ್ ಮಾಡುತ್ತಾರೆ. ಕೆಲವರು ಸಾಮಾಜಿಕ ಮಾಧ್ಯಮ ಪ್ಲಾಟ್‌ಫಾರ್ಮ್‌ಗಳಲ್ಲಿ ಗಮನ ಸೆಳೆಯಲು ವಿಲಕ್ಷಣ ಸ್ಥಳಗಳನ್ನು ಮತ್ತು ವಿಲಕ್ಷಣ ಥೀಮ್‌ಗಳನ್ನು ಆಯ್ಕೆ ಮಾಡುತ್ತಾರೆ.

ಮತ್ತಷ್ಟು ವೈರಲ್ ನ್ಯೂಸ್​ಗಾಗಿ ಕ್ಲಿಕ್ ಮಾಡಿ

ಯುಗಾದಿ: ಕೆಆರ್​ ಮಾರುಕಟ್ಟೆಯಲ್ಲಿ ಗ್ರಾಹಕರಿಗೆ ಶಾಕ್, ಹೂವಿನ ದರ ಏರಿಕೆ
ಯುಗಾದಿ: ಕೆಆರ್​ ಮಾರುಕಟ್ಟೆಯಲ್ಲಿ ಗ್ರಾಹಕರಿಗೆ ಶಾಕ್, ಹೂವಿನ ದರ ಏರಿಕೆ
ಬಿಜೆಪಿ ಎಲ್ಲ ಭಾಷೆಯನ್ನೂ ಗೌರವಿಸುತ್ತದೆ;WITT ಶೃಂಗಸಭೆಯಲ್ಲಿ ಕಿಶನ್ ರೆಡ್ಡಿ
ಬಿಜೆಪಿ ಎಲ್ಲ ಭಾಷೆಯನ್ನೂ ಗೌರವಿಸುತ್ತದೆ;WITT ಶೃಂಗಸಭೆಯಲ್ಲಿ ಕಿಶನ್ ರೆಡ್ಡಿ
ಯತ್ನಾಳ್ ಒಬ್ಬ ಒಳ್ಳೆಯ ನಾಯಕ ಅನ್ನೋದ್ರಲ್ಲಿ ಎರಡು ಮಾತಿಲ್ಲ: ತಂಗಡಿಗಿ
ಯತ್ನಾಳ್ ಒಬ್ಬ ಒಳ್ಳೆಯ ನಾಯಕ ಅನ್ನೋದ್ರಲ್ಲಿ ಎರಡು ಮಾತಿಲ್ಲ: ತಂಗಡಿಗಿ
ವಿಶ್ವದ ಶೇಕಡಾ 60 ರಷ್ಟು ಖನಿಜಗಳು ನಮ್ಮ ದೇಶದಲ್ಲಿವೆ
ವಿಶ್ವದ ಶೇಕಡಾ 60 ರಷ್ಟು ಖನಿಜಗಳು ನಮ್ಮ ದೇಶದಲ್ಲಿವೆ
ಪಕ್ಷದ ಸಂದೇಶ ಮತ್ತು ಸೂಚನೆಗಷ್ಟೇ ನಾವು ಸೀಮಿತವಾಗಿರಬೇಕು: ಸೋಮಣ್ಣ
ಪಕ್ಷದ ಸಂದೇಶ ಮತ್ತು ಸೂಚನೆಗಷ್ಟೇ ನಾವು ಸೀಮಿತವಾಗಿರಬೇಕು: ಸೋಮಣ್ಣ
ಬಾಲಕನನ್ನು ಬಲಿ ಪಡೆದ ಬಿಬಿಎಂಪಿ ಲಾರಿಗೆ ಬೆಂಕಿ
ಬಾಲಕನನ್ನು ಬಲಿ ಪಡೆದ ಬಿಬಿಎಂಪಿ ಲಾರಿಗೆ ಬೆಂಕಿ
ಭಾರತಕ್ಕೆ ತಕ್ಷಣವೇ ವಿಶ್ವಸಂಸ್ಥೆಯ ಸದಸ್ಯತ್ವ ನೀಡಬೇಕು
ಭಾರತಕ್ಕೆ ತಕ್ಷಣವೇ ವಿಶ್ವಸಂಸ್ಥೆಯ ಸದಸ್ಯತ್ವ ನೀಡಬೇಕು
ಮ್ಯಾನ್ಮಾರ್​ಗೆ 15 ಟನ್ ಪರಿಹಾರ ಸಾಮಗ್ರಿ, ಮೆಡಿಕಲ್ ಕಿಟ್ ಕಳುಹಿಸಿದ ಭಾರತ
ಮ್ಯಾನ್ಮಾರ್​ಗೆ 15 ಟನ್ ಪರಿಹಾರ ಸಾಮಗ್ರಿ, ಮೆಡಿಕಲ್ ಕಿಟ್ ಕಳುಹಿಸಿದ ಭಾರತ
ಬಿಜೆಪಿ ಶಾಸಕರು ಕಮಿಟಿ ಮೀಟಿಂಗ್​​ಗಳಲ್ಲಿ ಭಾಗಿಯಾಗಲ್ಲ: ವಿಜಯೇಂದ್ರ
ಬಿಜೆಪಿ ಶಾಸಕರು ಕಮಿಟಿ ಮೀಟಿಂಗ್​​ಗಳಲ್ಲಿ ಭಾಗಿಯಾಗಲ್ಲ: ವಿಜಯೇಂದ್ರ
ಮಕ್ಕಳಿಂದ ಶುಚಿಮಾಡಿಸಿದರೆ ಕೂಡಲೇ ಕ್ರಮ ಜರುಗಿಸುತ್ತೇವೆ: ಮಧು ಬಂಗಾರಪ್ಪ
ಮಕ್ಕಳಿಂದ ಶುಚಿಮಾಡಿಸಿದರೆ ಕೂಡಲೇ ಕ್ರಮ ಜರುಗಿಸುತ್ತೇವೆ: ಮಧು ಬಂಗಾರಪ್ಪ