AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Shocking Video: ಚಲಿಸುತ್ತಿರುವ ರೈಲು ಹತ್ತಲು ಹೋಗಿ ಜಾರಿ ಬಿದ್ದ 8 ತಿಂಗಳ ಗರ್ಭಿಣಿ

Viral Video: ಗಡಿಬಿಡಿಯಲ್ಲಿ ಚಲಿಸುತ್ತಿರುವ ರೈಲು ಹತ್ತಲು ಮುಂದಾಗಿದ್ದ ಗರ್ಭಿಣಿ ಕಾಲು ಜಾರಿ ಕೆಳಕ್ಕೆ ಬಿದ್ದಿದ್ದಾರೆ. ಘಟನೆ ಗಮನಿಸಿದ ಆರ್​ಪಿಎಫ್​ ಕಾನ್ಸ್ಟೇಬಲ್​ ತಡಮಾಡದೇಮಹಿಳೆಯನ್ನು ಪ್ರಾಣಾಪಾಯದಿಂದ ರಕ್ಷಿಸಿದ್ದಾರೆ.

Shocking Video: ಚಲಿಸುತ್ತಿರುವ ರೈಲು ಹತ್ತಲು ಹೋಗಿ ಜಾರಿ ಬಿದ್ದ 8 ತಿಂಗಳ ಗರ್ಭಿಣಿ
ಚಲಿಸುತ್ತಿರುವ ರೈಲು ಹತ್ತಲು ಹೋಗಿ ಜಾರಿ ಬಿದ್ದ 8 ತಿಂಗಳ ಗರ್ಭಿಣಿ
TV9 Web
| Edited By: |

Updated on:Oct 19, 2021 | 11:02 AM

Share

ಮುಂಬೈ: ರೈಲು ಹತ್ತಲು ಪ್ರಯತ್ನಿಸುತ್ತಿದ್ದ ಗರ್ಭಿಣಿ ಮಹಿಳೆ ಕಾಲು ಜಾರಿ ಕೆಳಕ್ಕೆ ಬಿದ್ದಿದ್ದಾರೆ. ತಕ್ಷಣವೇ ಗಮನಿಸಿದ ಆರ್​ಪಿಎಫ್​ ಕಾನ್ಸ್ಟೇಬಲ್ ಅವರನ್ನು ಪ್ರಾಣಾಪಾಯದಿಂದ ರಕ್ಷಿಸಿದ್ದಾರೆ. ಘಟನೆ ಸೋಮವಾರ (ಅ.18) ಕಲ್ಯಾಣ್​ ರೈಲ್ವೆ ಸ್ಟೇಷನ್​ನಲ್ಲಿ ನಡೆದಿದೆ. ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದ್ದು ಸಾಮಾಜಿಕ ಜಾಲತಾಣದಲ್ಲಿ ಫುಲ್ ವೈರಲ್ ಆಗಿದೆ. ಕಲ್ಯಾಣ್​ ರೈಲ್ವೆ ಸ್ಟೇಷನ್ ಪ್ಲಾಟ್ ಫಾರ್ಮ್​ ನಂಬರ್ 4ರಲ್ಲಿ ಘಟನೆ ನಡೆದಿದೆ. ಪ್ಲಾಟ್ ಫಾರ್ಮ್ ಮತ್ತು ರೈಲಿನ ನಡುವಿನ ಅಂತರದಲ್ಲಿ ಗರ್ಭಿಣಿ ಮಹಿಳೆ ಸಿಕ್ಕಿಹಾಕಿಕೊಳ್ಳುತ್ತಿದ್ದರು. ತಡಮಾಡದೇ ಆರ್​ಪಿಎಫ್​ ಕಾನ್ಸ್ಟೇಬಲ್ ಮಹಿಳೆಯನ್ನು ರಕ್ಷಿಸಿದ್ದಾರೆ.

21 ವರ್ಷದ ವಂದನಾ ಅವರ ಪತಿ ಚಂದ್ರೇಶ್ ಅವರ ಜತೆ ಕಲ್ಯಾಣದಿಂದ ಗೋರಖ್​ಪುರಕ್ಕೆ ತೆರಳಬೇಕಿತ್ತು. ಆಗಲೇ ಅವರಿಗೆ ತಡವಾಗಿತ್ತು. ಇನ್ನೇನು ರೈಲು ಹೊರಟಿತ್ತು. ಆ ವೇಳೆ ಗಡಿಬಿಡಿಯಲ್ಲಿ ರೈಲು ಹತ್ತಲು ಮುಂದಾದಾಗ ಘಟನೆ ನಡೆದಿದೆ. 8 ತಿಂಗಳ ಗರ್ಭಿಣಿ ವಂದನಾ ರೈಲು ಹೊರಟಿದೆ ಎಂಬ ಗಡಿಬಿಡಿಯಲ್ಲಿ ರೈಲು ಹತ್ತಲು ಮುಂದಾಗಿದ್ದಾರೆ. ಈ ಸಮಯದಲ್ಲಿ ಹಿಡಿತ ತಪ್ಪಿ ಜಾರಿ ಕೆಳಕ್ಕೆ ಬಿದ್ದಿದ್ದಾರೆ. ಘಟನೆ ಗಮನಿಸಿದ ಆರ್​ಪಿಎಫ್​ ಕಾನ್ಸ್ಟೇಬಲ್ ಮಹಿಳೆಯನ್ನು ರಕ್ಷಿಸಿದ್ದಾರೆ.

ಮುಂಬೈನ ಸೆಂಟ್ರಲ್ ರೈಲ್ವೇಯ ಮುಖ್ಯ ಸಾರ್ವಜನಿಕ ಸಂಪರ್ಕ ಅಧಿಕಾರಿ ಶಿವಾಜಿ ಸುತಾರ್ ಅವರು ಸಿಸಿಟಿವಿ ದೃಶ್ಯವನ್ನು ಟ್ವೀಟರ್​ನಲ್ಲಿ ಹಂಚಿಕೊಂಡಿದ್ದಾರೆ. ಕಲ್ಯಾಣ್ ರೈಲ್ವೇ ಸ್ಟೇಷನ್​ನ ಆರ್​ಪಿಎಫ್​ ಅಧಿಕಾರಿ ಎಸ್.ಆರ್ ಖಂದೇಕರ್ ಮಹಿಳೆಯನ್ನು ಪ್ರಾಣಾಪಾಯದಿಂದ ರಕ್ಷಿಸಿದ್ದಾರೆ. ಚಲಿಸುತ್ತಿರುವ ರೈಲನ್ನು ಹತ್ತುವುದು ಅಥವಾ ಇಳಿಯುವ ಸಾಹಸ ಮಾಡಬೇಡಿ ಎಂದು ಪ್ರಯಾಣಿಕರಲ್ಲಿ ಮನವಿ ಮಾಡಿದ್ದಾರೆ. ಇತರರು ಖಂದೇಕರ್ ಅವರ ಕೆಲಸಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಜತೆಗೆ ಸ್ಥಳದಲ್ಲಿ ಗಾಬರಿಯಾಗಿದ್ದ ಮಹಿಳೆಯನ್ನು ಸಮಾಧಾನಪಡಿಸಲು ಮುಂದಾಗಿದ್ದಾರೆ.

ಇದನ್ನೂ ಓದಿ:

Shocking Video: ಬೀಳುತ್ತಿದ್ದ ಗೋಡೆಯನ್ನು ತಡೆದು ಮಗುವನ್ನು ರಕ್ಷಿಸಿದ ಮಹಿಳೆ; ವಿಡಿಯೊ‌ ನೋಡಿ

Shocking Video: ಚಲಿಸುತ್ತಿರುವ ರೈಲು ಹತ್ತಲು ಹೋಗಿ ಜಾರಿ ಬಿದ್ದ ಮಹಿಳೆಯ ಪರಿಸ್ಥಿತಿ ಏನಾಗಿದೆ ನೋಡಿ! ಭಯಾನಕ ದೃಶ್ಯವಿದು

Published On - 11:01 am, Tue, 19 October 21

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ