AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ರಾಮಾಯಣದ ತೊಗಲು ಗೊಂಬೆಯಾಟ ವೀಕ್ಷಿಸಿದ ಮೋದಿ, ಇದು ಕರ್ನಾಟಕದ ಶ್ರೀಮಂತ ಕಲೆ

ಅಯೋಧ್ಯೆಯಲ್ಲಿ ರಾಮ ಮಂದಿರದ ಉದ್ಘಾಟನೆಗೂ ಮುನ್ನ ಪ್ರಧಾನಿ ಮೋದಿ ಮಂಗಳವಾರ  ಆಂಧ್ರಪ್ರದೇಶದ ಲೇಪಾಕ್ಷಿಯಲ್ಲಿರುವ ವೀರಭದ್ರ ದೇವಸ್ಥಾನಕ್ಕೆ ಭೇಟಿ ನೀಡಿದ್ದರು.  ಈ ಸಂದರ್ಭದಲ್ಲಿ ಅವರು ದೇವರಿಗೆ ವಿಶೇಷ ಪೂಜೆಯನ್ನು  ಸಲ್ಲಿಸಿ, ಬಳಿಕ ರಾಮಾಯಣ ಮಹಾಕಾವ್ಯದ ತೊಗಲು ಗೊಂಬೆಯಾಟವನ್ನು ವೀಕ್ಷಿಸಿದ್ದಾರೆ.  ಈ ಕುರಿತ ವಿಡಿಯೋವೊಂದು ಇದೀಗ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. 

Viral Video: ರಾಮಾಯಣದ ತೊಗಲು ಗೊಂಬೆಯಾಟ ವೀಕ್ಷಿಸಿದ ಮೋದಿ, ಇದು ಕರ್ನಾಟಕದ ಶ್ರೀಮಂತ ಕಲೆ
Follow us
ಮಾಲಾಶ್ರೀ ಅಂಚನ್​
| Updated By: ಅಕ್ಷಯ್​ ಪಲ್ಲಮಜಲು​​

Updated on: Jan 17, 2024 | 7:13 PM

ಅಯೋಧ್ಯೆಯ ರಾಮ ಮಂದಿರದ ಉದ್ಘಾಟನೆಗೂ ಮುನ್ನ ಪ್ರಧಾನಿ ಮೋದಿ ರಾಮಾಯಣದ ಮಹತ್ವ ಮತ್ತು ಹಿನ್ನೆಲೆ ಹೊಂದಿದಂತಹ ದೇವಾಲಯಗಳಿಗೆ ಭೇಟಿ ನೀಡುತ್ತಿದ್ದಾರೆ. ಮಂಗಳವಾರದಂದು ಪ್ರಧಾನಿ ಮೋದಿ ಆಂಧ್ರ ಪ್ರದೇಶದ ಲೇಪಾಕ್ಷಿಯಲ್ಲಿರುವ  ವೀರಭದ್ರ ದೇವಸ್ಥಾನಕ್ಕೆ ಭೇಟಿ ನೀಡಿ, ದೇವರಿಗೆ ವಿಶೇಷ ಪೂಜೆ ಸಲ್ಲಿಸಿ, ಬಳಿಕ ತೆಳುಗಿನಲ್ಲಿರುವ  ರಂಗನಾಥ ರಾಮಾಯಣದ ಪದ್ಯಗಳನ್ನೂ ಆಲಿಸಿದರು. ಅಲ್ಲದೆ ದೇವಾಲಯದಲ್ಲಿ ರಾಮಾಯಣ ಮಹಾಕಾವ್ಯದ ತೊಗಲು ಗೊಂಬೆಯಾಟವನ್ನು ಸಹ ವೀಕ್ಷಿಸಿದ್ದಾರೆ. ಪ್ರಧಾನಿ ಮೋದಿಯವರು ತೊಗಲು ಗೊಂಬೆಯಾಟವನ್ನು ವೀಕ್ಷಿಸುತ್ತಿರುವ ವೀಡಿಯೋ ತುಣುಕುಗಳು ಸಾಮಾಜಿಕ  ಜಾಲತಾಣದಲ್ಲಿ ವೈರಲ್ ಆಗುತ್ತಿವೆ.

ರಾಮಾಯಣ ಹಾಗೂ ಶಿವನ  ಕಥೆಗಳಿಗೆ ಕುರುಹಾಗಿ ನಿಂತಿರುವ ಲೇಪಾಕ್ಷಿ  ರಾಮಾಯಣಕ್ಕೆ ಸಂಬಂಧಿಸಿದ ಪ್ರಾಚೀನ ಗ್ರಾಮವಾಗಿದೆ. ಪುರಾತನ ಗ್ರಂಥಗಳ ಪ್ರಕಾರ,  ರಾವಣನಿಂದ ಅಪಹರಿಸ್ಪಟ್ಟ ಸೀತಾ ದೇವಿಯನ್ನು ರಕ್ಷಿಸಲು  ಜಟಾಯು ಹೊರಟಾಗ, ರಾವಣನ ಮೋಸದಾಟಕ್ಕೆ ತನ್ನ ರೆಕ್ಕೆಗಳನ್ನು ಕಳೆದುಕೊಂಡು  ಹಾರಲು ಕಷ್ಟವಾಗಿ ಜಟಾಯು  ಬಿದ್ದಂತಹ  ಸ್ಥಳವೇ ಲೇಪಾಕ್ಷಿ ಎಂದು ಹೇಳಲಾಗುತ್ತದೆ.

ಪ್ರಧಾನಿ ಮೋದಿಯವರು ಮಾತ್ರವಲ್ಲದೆ @BJPIndia ಕೂಡಾ X ನಲ್ಲಿ ಪ್ರಧಾನಿ ಮೋದಿಯವರು ಮಹಾಕಾವ್ಯ ರಾಮಾಯಣದ ತೊಗಲು ಗೊಂಬೆಯಾಟವನ್ನು ವೀಕ್ಷಿಸುತ್ತಿರುವ ವಿಡಿಯೋವನ್ನು ಹಂಚಿಕೊಂಡಿದ್ದು, ಪ್ರಧಾನಿ ನರೇಂದ್ರ ಮೋದಿಯವರು ಆಂಧ್ರಪ್ರದೇಶದ ಲೇಪಾಕ್ಷಿಯಲ್ಲಿ ರಾಮಾಯಣದ ತೊಗಲು ಗೊಂಬೆಯಾಟವನ್ನು ವೀಕ್ಷಿಸುತ್ತಿರುವ ಕ್ಷಣಎಂಬ ಶೀರ್ಷಿಕೆಯನ್ನು ಬರೆದುಕೊಳ್ಳಲಾಗಿದೆ.

ಇದನ್ನೂ ಓದಿ:  ಅಯೋಧ್ಯೆ ತಲುಪಿದ ರಾಮ, ಸೀತೆ ಮತ್ತು ಲಕ್ಷ್ಮಣ

ತೊಗಲು ಗೊಂಬೆಯಾಟದ ಹಿನ್ನಲೆ:

ಕರ್ನಾಟಕದ ಶ್ರೀಮಂತ ಕಲೆಗಳಲ್ಲಿ ಗೊಂಬೆಯಾಟವು ಒಂದು. ಈ ಗೊಂಬೆಯಾಟದ  ಪ್ರಕಾರಗಳಲ್ಲಿ ತೊಗಲು ಗೊಂಬೆಯಾಟಕ್ಕೆ ವಿಶಿಷ್ಟ ಸ್ಥಾನವಿದೆ. ಇದನ್ನು ನೆರಳು ಗೊಂಬೆಯಾಟವೆಂದೂ ಕರೆಯುತ್ತಾರೆ.  ಒಂದು ಕಾಲದಲ್ಲಿ ತೊಗಲು ಗೊಂಬೆಯಾಟ ಸಿನಿಮಾದಷ್ಟೇ ಆಕರ್ಷಣೆ ಹೊಂದಿದ್ದ ಜಾನಪದ ಕಲೆಯಾಗಿತ್ತು. ಆಗಿನ ಕಾಲದಲ್ಲಿ ಗೊಂಬೆಯಾಡಿಸುವ ಗೊಂಬೆರಾಮರು ಸುಗ್ಗಿಯ ಸಮಯದಲ್ಲಿ ಹೆಚ್ಚಾಗಿ ಹಳ್ಳಿಗಳ ಕಡೆಗಳಲ್ಲಿ ಗೊಂಬೆಯಾಟದ ಪ್ರದರ್ಶನವನ್ನು ನೀಡುತ್ತಿದ್ದರು.

ಮೊದಮೊದಲು ಗೊಂಬೆರಾಮರು ಗೊಂಬೆಗಳನ್ನು ಜಿಂಕೆಯ ಚರ್ಮದಿಂದ ಮಾಡುತ್ತಿದ್ದರು, ಆದರೆ ನಂತರದಲ್ಲಿ ಮೇಕೆಯ ಚರ್ಮಗಳನ್ನು ಬಳಸಲು ಆಂಭಿಸಿದರು. ತೊಗಲು ಗೊಂಬೆ ಆಡಿಸುವುದು ಒಂದು ಕಲೆಯಾದರೆ,  ಆ ಗೊಂಬೆಯನ್ನು ಮಾಡುವುದು ಕೂಡಾ ಒಂದು ಕುಶಲ ಕಲೆಯಾಗಿದೆ. ಗೊಂಬೆರಾಮರು  ಮೇಕೆ ಚರ್ಮವನ್ನು ಹದ ಮಾಡಿ ಒಣಗಿಸಿ, ಪಾತ್ರಗಳಿಗೆ ತಕ್ಕಂತೆ ತೊಗಲನ್ನು ಕತ್ತರಿಸಿ,  ಯಾವ ಪಾತ್ರಗಳಿಗೆ ಯಾವ ಬಣ್ಣ ಹಾಕಬೇಕು ಎಂಬುದನ್ನು ನೋಡಿಕೊಂಡು ಬಣ್ಣ ಹಚ್ಚುತ್ತಿದ್ದರು. ಮತ್ತು ಬಿದಿರಿನ ಕಡ್ಡಿಯನ್ನು ಬಳಸಿಕೊಂಡ ಚಿತ್ರಗಳ ರೂಪವನ್ನು ರಚಿಸುತ್ತಿದ್ದರು. ಒಂದು ಕಾಲದಲ್ಲಿ ರಾಮಾಯಣ ಮತ್ತು ಮಹಾಭಾರತದಂತಹ ಪ್ರಸಂಗಗಳನ್ನು ಜನರಿಗೆ ತಲುಪಿಸುವಲ್ಲಿ ತೊಗಲು ಗೊಂಬೆಯಾಟ ಅಗ್ರ ಪಂಕ್ತಿಯಲ್ಲಿತ್ತು. ಆದರೆ ಇಂದು ತಂತ್ರಜ್ಞಾನ, ಆಧುನಿಕತೆಯ ನಾಗಾಲೋಟಕ್ಕೆ ಸಿಲುಕಿ  ತೊಗಲು ಗೊಂಬೆಯಾಟ ಅಸ್ತಿತ್ವವನ್ನೇ ಕಳೆದುಕೊಳ್ಳುವ ಅಪಾಯದಲ್ಲಿದೆ.

ಮತ್ತಷ್ಟು ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಧುಮ್ಮುಕ್ಕುತ್ತಿರುವ ವಿಶ್ವ ವಿಖ್ಯಾತ ಜಲಪಾತ, ಜೋಗದ ಸಿರಿಯ ನಯನ ಮನೋಹರ ದೃಶ್ಯ
ಧುಮ್ಮುಕ್ಕುತ್ತಿರುವ ವಿಶ್ವ ವಿಖ್ಯಾತ ಜಲಪಾತ, ಜೋಗದ ಸಿರಿಯ ನಯನ ಮನೋಹರ ದೃಶ್ಯ
ದಾವಣಗೆರೆಗೆ ಕಾರಲ್ಲಿ ಬಂದಿದ್ದಕ್ಕೆ ತಡವಾಯ್ತು ಎಂದ ಸಿಎಂ ಸಿದ್ದರಾಮಯ್ಯ
ದಾವಣಗೆರೆಗೆ ಕಾರಲ್ಲಿ ಬಂದಿದ್ದಕ್ಕೆ ತಡವಾಯ್ತು ಎಂದ ಸಿಎಂ ಸಿದ್ದರಾಮಯ್ಯ
ನೈಟ್ ರೈಡರ್ಸ್ ವಿರುದ್ಧ 4 ವಿಕೆಟ್ ಉರುಳಿಸಿದ ನೂರ್ ಅಹ್ಮದ್
ನೈಟ್ ರೈಡರ್ಸ್ ವಿರುದ್ಧ 4 ವಿಕೆಟ್ ಉರುಳಿಸಿದ ನೂರ್ ಅಹ್ಮದ್
ಅಕ್ರಮ ಗಣಿಗಾರಿಕೆ ಆರೋಪಗಳಿಂದ ಮುಕ್ತನಾಗಿದ್ದೇನೆ: ಜನಾರ್ಧನ ರೆಡ್ಡಿ
ಅಕ್ರಮ ಗಣಿಗಾರಿಕೆ ಆರೋಪಗಳಿಂದ ಮುಕ್ತನಾಗಿದ್ದೇನೆ: ಜನಾರ್ಧನ ರೆಡ್ಡಿ
ಮುಂಬರುವ ದಿನಗಳಲ್ಲಿ ಇನ್ನಷ್ಟು ಹೆಚ್ಚಲಿದೆ ಬುಲಿಯನ್ ದರ: ಸರವಣ
ಮುಂಬರುವ ದಿನಗಳಲ್ಲಿ ಇನ್ನಷ್ಟು ಹೆಚ್ಚಲಿದೆ ಬುಲಿಯನ್ ದರ: ಸರವಣ
ಯಾವುದೇ ಕಾರಣಕ್ಕೂ ವೃಕ್ಷಮಾತೆ ಸಿನಿಮಾ ಮಾಡೋಕೆ ಆಗಲ್ಲ: ವಾಣಿಜ್ಯ ಮಂಡಳಿ
ಯಾವುದೇ ಕಾರಣಕ್ಕೂ ವೃಕ್ಷಮಾತೆ ಸಿನಿಮಾ ಮಾಡೋಕೆ ಆಗಲ್ಲ: ವಾಣಿಜ್ಯ ಮಂಡಳಿ
ಉತ್ತರ ಪ್ರದೇಶದ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; 4 ಮಹಿಳೆಯರು ಸಾವು
ಉತ್ತರ ಪ್ರದೇಶದ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; 4 ಮಹಿಳೆಯರು ಸಾವು
ಯುವತಿಯೇ ಮೊದಲು ತನಗೆ ಹೊಡೆದಿದ್ದು ಎನ್ನುತ್ತಾನೆ ರ‍್ಯಾಪಿಡೋ ರೈಡರ್
ಯುವತಿಯೇ ಮೊದಲು ತನಗೆ ಹೊಡೆದಿದ್ದು ಎನ್ನುತ್ತಾನೆ ರ‍್ಯಾಪಿಡೋ ರೈಡರ್
ಯುವತಿ ಮೇಲೆ ರ‍್ಯಾಪಿಡೊ ಚಾಲಕ ಹಲ್ಲೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್‌..!
ಯುವತಿ ಮೇಲೆ ರ‍್ಯಾಪಿಡೊ ಚಾಲಕ ಹಲ್ಲೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್‌..!
ಇಂದ್ರಯಾಣಿ ಸೇತುವೆ ಶಿಥಿಲವಾಗಿತ್ತು; ಸಿಎಂ ಫಡ್ನವೀಸ್
ಇಂದ್ರಯಾಣಿ ಸೇತುವೆ ಶಿಥಿಲವಾಗಿತ್ತು; ಸಿಎಂ ಫಡ್ನವೀಸ್