AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಶಾಲಾ ಕೊಠಡಿಯಲ್ಲಿ ಹೆಡ್‌ ಮಾಸ್ಟರ್‌- ಲೇಡಿ ಟೀಚರ್‌ ರೊಮ್ಯಾನ್ಸ್‌, ವೈರಲ್‌ ಆಯ್ತು ಸರಸ ಸಲ್ಲಾಪದ ದೃಶ್ಯ

ಪ್ರತಿಷ್ಠಿತ ಶಾಲೆಯೊಂದರಲ್ಲಿ ನಾಚಿಕೆಗೇಡಿನ ಸಂಗತಿಯೊಂದು ನಡೆದಿದ್ದು, ಶಾಲಾ ಕೊಠಡಿಯಲ್ಲಿ ಹೆಡ್‌ ಮಾಸ್ಟರ್‌ ಮತ್ತು ಲೇಡಿ ಟೀಚರ್‌ ಮೈಮರೆತು ಸರಸ ಸಲ್ಲಾಪದಲ್ಲಿ ತೊಡಗಿದ್ದಾರೆ. ಇವರ ರೊಮ್ಯಾನ್ಸ್‌ ದೃಶ್ಯಗಳು ಸೋಷಿಯಲ್‌ ಮೀಡಿಯಾದಲ್ಲಿ ವೈರಲ್‌ ಆಗಿದ್ದು, ವಿದ್ಯಾ ದೇಗುಲದಲ್ಲಿ ಇಂತಹ ಹೇಯ ಕೃತ್ಯ ನಡೆಸಿರುವುದಕ್ಕೆ ನೆಟ್ಟಿಗರು ಭಾರೀ ಆಕ್ರೋಶವನ್ನು ವ್ಯಕ್ತಪಡಿಸಿದ್ದಾರೆ.

Viral Video: ಶಾಲಾ ಕೊಠಡಿಯಲ್ಲಿ ಹೆಡ್‌ ಮಾಸ್ಟರ್‌- ಲೇಡಿ ಟೀಚರ್‌ ರೊಮ್ಯಾನ್ಸ್‌, ವೈರಲ್‌ ಆಯ್ತು ಸರಸ ಸಲ್ಲಾಪದ ದೃಶ್ಯ
ಮಾಲಾಶ್ರೀ ಅಂಚನ್​
| Edited By: |

Updated on: Jul 09, 2024 | 6:09 PM

Share

ಶಾಲೆಯಲ್ಲಿ ಶಿಕ್ಷಕರು ಮಕ್ಕಳಿಗೆ ಮಾದರಿಯಾಗಬೇಕು, ವಿದ್ಯಾರ್ಥಿಗಳ ಉತ್ತಮ ಭವಿಷ್ಯಕ್ಕೆ ದಾರಿದೀಪವಾಗಬೇಕು. ಆದರೆ ಇಲ್ಲೊಂದು ಶಾಲೆಯಲ್ಲಿ ಮಕ್ಕಳಿಗೆ ಮಾದರಿಯಾಗಬೇಕಿದ್ದ ಶಿಕ್ಷಕರೇ ದಾರಿ ತಪ್ಪಿದ್ದಾರೆ. ಹೌದು ಇತ್ತೀಚಿಗೆ ಪ್ರತಿಷ್ಠಿತ ಶಾಲೆಯೊಂದರಲ್ಲಿ ನಾಚಿಕೆಗೇಡಿನ ಸಂಗತಿಯೊಂದು ನಡೆದಿದ್ದು, ಹೆಡ್‌ ಮಾಸ್ಟರ್‌ ಮತ್ತು ಲೇಡಿ ಟೀಚರ್‌ ಶಾಲಾ ಕೊಠಡಿಯಲ್ಲಿಯೇ ರೊಮ್ಯಾನ್ಸ್‌ ಮಾಡಿದ್ದಾರೆ. ಇವರ ಚಕ್ಕಂದದ ದೃಶ್ಯಗಳು ಸೋಷಿಯಲ್‌ ಮೀಡಿಯಾದಲ್ಲಿ ವೈರಲ್‌ ಆಗಿದ್ದು, ವಿದ್ಯಾ ದೇಗುಲದಲ್ಲಿ ಇಂತಹ ಹೇಯ ಕೃತ್ಯ ನಡೆಸಿರುವುದಕ್ಕೆ ನೆಟ್ಟಿಗರು ಭಾರೀ ಆಕ್ರೋಶವನ್ನು ವ್ಯಕ್ತಪಡಿಸಿದ್ದಾರೆ.

ವರದಿಗಳ ಪ್ರಕಾರ ಈ ನಾಚಿಕೆಗೇಡಿನ ಘಟನೆ ಉತ್ತರ ಪ್ರದೇಶದ ಜಾನ್‌ಪುರದಲ್ಲಿ ನಡೆದಿದ್ದು, ಇಲ್ಲಿನ ಪ್ರತಿಷ್ಠಿತ ಕಾನ್ವೆಂಟ್‌ ಶಾಲೆಯೊಂದರಲ್ಲಿ ಪ್ರಿನ್ಸಿಪಾಲ್‌ ಮತ್ತು ಶಿಕ್ಷಕಿಯೊಬ್ಬರು ಚಕ್ಕಂದವಾಡಿ ರೆಡ್‌ ಹ್ಯಾಂಡ್‌ ಆಗಿ ಸಿಕ್ಕಿ ಬಿದ್ದಿದ್ದಾರೆ. ಈ ಇಬ್ಬರೂ ಶಾಲಾ ಕೊಠಡಿಯಲ್ಲಿಯೇ ಒಬ್ಬರನ್ನೊಬ್ಬರು ತಬ್ಬಿಕೊಂಡು ಸರಸ ಸಲ್ಲಾಪದಲ್ಲಿ ತೊಡಗಿದ್ದು, ಈ ದೃಶ್ಯವನ್ನು ಕ್ಯಾಮೆರಾದಲ್ಲಿ ರೆಕಾರ್ಡ್‌ ಮಾಡಿ ಯಾರೋ ಸೋಷಿಯಲ್‌ ಮೀಡಿಯಾದಲ್ಲಿ ಹರಿಬಿಟ್ಟಿದ್ದಾರೆ. ಶಾಲೆಯಲ್ಲಿ ಮಹಾನ್‌ ವ್ಯಕ್ತಿಗಳ ಫೋಟೋಗಳ ಮುಂದೆಯೇ ಇಂತಹ ಕೃತ್ಯ ಎಸಗಿದ ಈ ಇಬ್ಬರೂ ಶಿಕ್ಷಕರ ವಿರುದ್ಧ ಭಾರಿ ಆಕ್ರೋಶ ವ್ಯಕ್ತವಾಗುತ್ತಿದೆ.

ಈ ಕುರಿತ ಪೋಸ್ಟ್‌ ಒಂದನ್ನು Hindikhabar ಹೆಸರಿನ ಎಕ್ಸ್‌ ಖಾತೆಯಲ್ಲಿ ಹಂಚಿಕೊಳ್ಳಲಾಗಿದ್ದು, ಮಹಿಳಾ ಶಿಕ್ಷಕಿಯೊಂದಿಗೆ ಪ್ರಿನ್ಸಿಪಾಲ್‌ ಚಕ್ಕಂದವಾಡಿದ ವಿಡಿಯೋ ವೈರಲ್‌ ಆಗಿದೆ, ಶಿಕ್ಷಕರು ತಮ್ಮ ಘನತೆಯನ್ನು ಮರೆತಾಗ ವಿದ್ಯಾರ್ಥಿಗಳ ಭವಿಷ್ಯ ಏನಾಗಬಹುದು?” ಎಂಬ ಶೀರ್ಷಿಕೆಯನ್ನು ಬರೆದುಕೊಳ್ಳಲಾಗಿದೆ.

ವೈರಲ್​​ ವಿಡಿಯೋ ಇಲ್ಲಿದೆ ನೋಡಿ ( ಎಕ್ಸ್​​ ಖಾತೆ)

ವೈರಲ್‌ ವಿಡಿಯೋದಲ್ಲಿ ಶಾಲಾ ಕೊಠಡಿಯೊಳಗೆ ಮಹಾನ್‌ ವ್ಯಕ್ತಿಗಳ ಫೋಟೋಗಳ ಮುಂದೆಯೇ ಹೆಡ್‌ ಮಾಸ್ಟರ್‌ ಮತ್ತು ಟೀಚರ್‌ ಒಬ್ಬರನ್ನೊಬ್ಬರು ತಬ್ಬಿಕೊಂಡು ಸರಸ ಸಲ್ಲಾಪದಲ್ಲಿ ತೊಡಗಿರುವ ದೃಶ್ಯವನ್ನು ಕಾಣಬಹುದು.

ಇದನ್ನೂ ಓದಿ: ನಡುರಸ್ತೆಯಲ್ಲಿ ಯುವತಿಯ ಖಾಸಗಿ ಅಂಗ ಸ್ಪರ್ಶಿಸಿದ ಕಾಮುಕ; ವಿಡಿಯೋ ವೈರಲ್‌

ಜೂನ್‌ 08 ರಂದು ಹಂಚಿಕೊಳ್ಳಲಾದ ಈ ವಿಡಿಯೋ 3 ಸಾವಿರಕ್ಕೂ ಅಧಿಕ ವೀಕ್ಷಣೆಗಳನ್ನು ಹಾಗೂ ಹಲವಾರು ಕಾಮೆಂಟ್ಸ್‌ಗಳನ್ನು ಪಡೆದುಕೊಂಡಿದೆ. ಒಬ್ಬ ಬಳಕೆದಾರರು ʼಅಲ್ಲಾ ಇಂತಹ ಶಿಕ್ಷಕರು ನಾಚಿಕೆ ಮತ್ತು ವಿನಯವನ್ನು ಬದಿಗಿಟ್ಟು ವಿದ್ಯಾರ್ಥಿಗಳಿಗೆ ಏನನ್ನು ಕಲಿಸುತ್ತಾರೆʼ ಎಂದು ಕಿಡಿಕಾರಿದ್ದಾರೆ. ಇನ್ನೂ ಅನೇಕರು ವಿದ್ಯಾ ದೇಗುಲದಲ್ಲಿ ಇಂತಹ ಹೇಯ ಕೃತ್ಯ ನಡೆಸಿರುವುದಕ್ಕೆ ಭಾರೀ ಆಕ್ರೋಶವನ್ನು ವ್ಯಕ್ತಪಡಿಸಿದ್ದಾರೆ.

ಮತ್ತಷ್ಟು ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Malashree anchan
Malashree anchan

ಮಾಲಾಶ್ರೀ ಅಂಚನ್- ಮೂಲತಃ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದವಳು. ಸಮೂಹ ಸಂವಹನ ಮತ್ತು ಪತ್ರಿಕೋದ್ಯಮದಲ್ಲಿ (MCJ) ಸ್ನಾತಕೋತ್ತರ ಪದವಿಧರೆ. ಪ್ರಾರಂಭದಿಂದಲೂ ಬರವಣಿಗೆಯಲ್ಲಿ ಹೆಚ್ಚಿನ ಒಲವನ್ನು ಹೊಂದಿದ್ದು, ಪತ್ರಿಕಾ ರಂಗದಲ್ಲಿ 2 ವರ್ಷಗಳ ಅನುಭವವಿದೆ. ಜೀವನಶೈಲಿ, ವೈರಲ್ ಸುದ್ದಿಗಳನ್ನು ಬರೆಯುವುದರಲ್ಲಿ ಆಸಕ್ತಿಯನ್ನು ಹೊಂದಿದ್ದು, ಓದುಗರಿಗೆ ಉತ್ತಮ ಲೇಖನಗಳನ್ನು ಒದಗಿಸುತ್ತಿದ್ದೇನೆ.

Read More
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​