AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಊಟ ಕೊಡಲು ನಿರಾಕರಿಸಿದ್ದಕ್ಕೆ ಎಣ್ಣೆ ಏಟಲ್ಲಿ ರೆಸ್ಟೋರೆಂಟ್‌ಗೆ ಟ್ರಕ್‌ ನುಗ್ಗಿಸಿದ ಚಾಲಕ; ವಿಡಿಯೋ ವೈರಲ್

ಎಣ್ಣೆ ಏಟಲ್ಲಿ ಕುಡಿದವನು ಏನ್‌ ಮಾಡ್ತಾನೆ ಅನ್ನೋದು ಅವನಿಗೆನೇ ಗೊತ್ತಾಗಲ್ಲ ಅಂತಾರೆ. ಅದು ನಿಜವೋ ಸುಳ್ಳೋ ಗೊತ್ತಿಲ್ಲ. ಆದ್ರೆ ಇಲ್ಲೊಂದು ಘಟನೆ ಮಾತ್ರ ಅದನ್ನು ನಿಜ ಎಂದು ಸಾಬೀತು ಮಾಡಿದೆ. ಹೌದು ಟ್ರಕ್‌ ಚಾಲಕನೊಬ್ಬ ಊಟ ಆರ್ಡರ್‌ ಮಾಡಲು ಬಂದಾಗ ರೆಸ್ಟೋರೆಂಟ್‌ ಸಿಬ್ಬಂದಿ ಊಟ ಕೊಡಲು ನಿರಾಕರಿಸಿದ್ದು, ಮೊದಲೇ ಎಣ್ಣೆ ಏಟಲ್ಲಿ ಇದ್ದ ಚಾಲಕ ಇದರಿಂದ ಕೋಪಗೊಂಡು ತನ್ನ ಟ್ರಕ್‌ ಅನ್ನೇ ರೆಸ್ಟೋರೆಂಟ್‌ ಒಳಗೆ ನುಗ್ಗಿಸಿದ್ದಾನೆ. ಈ ವಿಡಿಯೋ ಇದೀಗ ಸಖತ್‌ ವೈರಲ್‌ ಆಗುತ್ತಿದೆ.

Viral Video: ಊಟ ಕೊಡಲು ನಿರಾಕರಿಸಿದ್ದಕ್ಕೆ ಎಣ್ಣೆ ಏಟಲ್ಲಿ ರೆಸ್ಟೋರೆಂಟ್‌ಗೆ ಟ್ರಕ್‌ ನುಗ್ಗಿಸಿದ ಚಾಲಕ; ವಿಡಿಯೋ ವೈರಲ್
ಮಾಲಾಶ್ರೀ ಅಂಚನ್​
| Edited By: |

Updated on: Sep 08, 2024 | 12:39 PM

Share

ಕುಡಿದ ಮತ್ತಿನಲ್ಲಿ ಕುಡುಕರು ಮಾಡುವ ಮಾಡುವ ಎಡವಟ್ಟುಗಳು, ಅವಾಂತರಗಳು ಒಂದೆರಡಲ್ಲ. ಹೊಟ್ಟೆಗೆ ಒಂದಿಷ್ಟು ಸಾರಾಯಿ ಇಳಿದರೆ ಸಾಕು ಕೆಲವರಿಗೆ ತಾವೇನು ಮಾಡ್ತಿದ್ದೇವೆ ಎಂಬುದು ಕೂಡಾ ಅರಿವಿಗೆ ಬರೋಲ್ಲ. ಹೀಗೆ ಕುಡುಕರು ನಶೆಯಲ್ಲಿ ಬೀದಿ ರಂಪ ಮಾಡುವ, ಎಡವಟ್ಟು ಮಾಡಿ ಪ್ರಾಣಕ್ಕೆ ಕುತ್ತು ತರುವ ಕೆಲಸಗಳನ್ನು ಮಾಡುವ ಸುದ್ದಿಗಳ ಬಗ್ಗೆ ಕೇಳುತ್ತಲೇ ಇರುತ್ತೇವೆ. ಇದೀಗ ಅಂತಹದ್ದೇ ಘಟನೆಯೊಂದು ನಡೆದಿದ್ದು, ಊಟ ಕೊಡಲು ನಿರಾಕರಿಸಿದ್ದಕ್ಕೆ ಕಂಠ ಪೂರ್ತಿ ಕುಡಿದಿದ್ದ ಟ್ರಕ್‌ ಡ್ರೈವರ್‌, ಕೋಪದಲ್ಲಿ ತನ್ನ ಟ್ರಕ್‌ ಅನ್ನು ರೆಸ್ಟೋರೆಂಟ್‌ಗೆ ನುಗ್ಗಿಸಿದ್ದಾನೆ. ಈ ವಿಡಿಯೋ ಇದೀಗ ಸಿಕ್ಕಾಪಟ್ಟೆ ವೈರಲ್‌ ಆಗುತ್ತಿದೆ.

ಈ ಘಟನೆ ಪುಣೆಯಲ್ಲಿ ನಡೆದಿದ್ದು, ಆಹಾರ ಸಿಗದಿದ್ದಾಗ ಪ್ರಾಣಿಗಳು ಉಗ್ರ ರೂಪ ತಾಳುವಂತೆ, ಇಲ್ಲೊಬ್ಬ ಡ್ರೈವರ್‌ ಕೂಡಾ ಉಗ್ರ ರೂಪ ತಾಳಿ ಊಟ ಕೊಡಲು ನಿರಾಕರಿಸಿದ ರೆಸ್ಟೋರೆಂಟಿಗೆ ಟ್ರಕ್‌ ನುಗ್ಗಿಸಿದ್ದಾನೆ. ಈ ಡ್ರೈವರ್‌ ಸೊಲ್ಲಾಪುರದಿಂದ ಪುಣೆಗೆ ಹೋಗುವ ಮಾರ್ಗದಲ್ಲಿ ಗೋಕುಲ್‌ ರೆಸ್ಟೋರೆಂಟ್‌ ಅಲ್ಲಿ ಊಟ ಮಾಡಲು ಟ್ರಕ್‌ ನಿಲ್ಲಿಸಿದ್ದಾನೆ. ಮತ್ತು ರೆಸ್ಟೋರೆಂಟಿಗೆ ಪ್ರವೇಶಿಸಿದಾಗ ಮಾಲೀಕರು ಊಟ ಕೊಡಲು ನಿರಾಕರಿಸಿದ್ದಾರೆ. ಮೊದಲೇ ಕುಡಿದ ಅಮಲಿನಲ್ಲಿದ್ದ ಆತ ಇದರಿಂದ ಕೋಪಗೊಂಡು ತನ್ನ ಟ್ರಕ್‌ ಅನ್ನೇ ರೆಸ್ಟೋರೆಂಟ್‌ ಒಳಗೆ ನುಗ್ಗಿಸಿದ್ದಾನೆ. ಈ ಬಗ್ಗೆ ಯಾರೋ ಪೊಲೀಸರಿಗೆ ಮಾಹಿತಿಯನ್ನು ನೀಡಿದ್ದು, ತಕ್ಷಣ ಸ್ಥಳಕ್ಕಾಗಮಿಸಿದ ಪೊಲೀಸರು ಚಾಲಕನನ್ನು ಬಂಧಿಸಿದ್ದಾರೆ.

ಈ ಕುರಿತ ಪೋಸ್ಟ್‌ ಒಂದನ್ನು Press Trust of India ತನ್ನ ಅಧೀಕೃತ ಎಕ್ಸ್‌ ಖಾತೆಯಲ್ಲಿ ಹಂಚಿಕೊಂಡಿದೆ. ಸೋಷಿಯಲ್‌ ಮೀಡಿಯಾದಲ್ಲಿ ವೈರಲ್‌ ಆಗಿರುವ ವಿಡಿಯೋದಲ್ಲಿ ಕುಡಿದ ಮತ್ತಿನಲ್ಲಿ ಚಾಲಕ ಪದೇ ಪದೇ ಟ್ರಕ್‌ನಿಂದ ರೆಸ್ಟೋರೆಂಟ್‌ ಬಾಗಿಲು ಮತ್ತು ಗೋಡೆಗೆ ಡಿಕ್ಕಿ ಹೊಡೆಯುತ್ತಿರುವ ದೃಶ್ಯವನ್ನು ಕಾಣಬಹುದು. ಪರಿಣಾಮ ಅಲ್ಲಿದ್ದ ಕೆಲ ವಾಹನಗಳಿಗೂ ಹಾನಿಯಾಗಿದೆ.

ಇದನ್ನೂ ಓದಿ: ಎಂಥಾ ಕಾಲ ಬಂತು ನೋಡಿ…. ಸಾವಿನ ಮನೆಯಲ್ಲಿ ಹೆಣದ ಜೊತೆಯೂ ರೀಲ್ಸ್‌

ಸೆಪ್ಟೆಂಬರ್‌ 7 ರಂದು ಹಂಚಿಕೊಳ್ಳಲಾದ ಈ ವಿಡಿಯೋ 19 ಸಾವಿರ ವೀಕ್ಷಣೆಗಳನ್ನು ಹಾಗೂ ಹಲವಾರು ಕಾಮೆಂಟ್ಸ್‌ಗಳನ್ನು ಪಡೆದುಕೊಂಡಿದೆ. ʼಈ ಘಟನೆ ನಿಜಕ್ಕೂ ಭಯಾನಕವಾಗಿದೆʼ ಎಂಬ ಕಾಮೆಂಟ್‌ ಬರೆದುಕೊಂಡಿದ್ದಾರೆ. ಮತ್ತೊಬ್ಬ ಬಳಕೆದಾರರು ʼಹೀಗೆ ಕುಡಿದು ಗಾಡಿ ಓಡಿಸುವವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕುʼ ಎಂದು ಹೇಳಿದ್ದಾರೆ.

ಮತ್ತಷ್ಟು ವೈರಲ್​​​ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Malashree anchan
Malashree anchan

ಮಾಲಾಶ್ರೀ ಅಂಚನ್- ಮೂಲತಃ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದವಳು. ಸಮೂಹ ಸಂವಹನ ಮತ್ತು ಪತ್ರಿಕೋದ್ಯಮದಲ್ಲಿ (MCJ) ಸ್ನಾತಕೋತ್ತರ ಪದವಿಧರೆ. ಪ್ರಾರಂಭದಿಂದಲೂ ಬರವಣಿಗೆಯಲ್ಲಿ ಹೆಚ್ಚಿನ ಒಲವನ್ನು ಹೊಂದಿದ್ದು, ಪತ್ರಿಕಾ ರಂಗದಲ್ಲಿ 2 ವರ್ಷಗಳ ಅನುಭವವಿದೆ. ಜೀವನಶೈಲಿ, ವೈರಲ್ ಸುದ್ದಿಗಳನ್ನು ಬರೆಯುವುದರಲ್ಲಿ ಆಸಕ್ತಿಯನ್ನು ಹೊಂದಿದ್ದು, ಓದುಗರಿಗೆ ಉತ್ತಮ ಲೇಖನಗಳನ್ನು ಒದಗಿಸುತ್ತಿದ್ದೇನೆ.

Read More
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ