AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Pune: ಆಟವಾಡುತ್ತಿದ್ದಾಗ ಮೈ ಮೇಲೆ ಬಿದ್ದ ಕಬ್ಬಿಣದ ಗೇಟ್, ಮಗು ಸ್ಥಳದಲ್ಲೇ ಸಾವು; ಭೀಕರ ದೃಶ್ಯ ಸಿಸಿಟಿವಿಯಲ್ಲಿ ಸೆರೆ

ಮಕ್ಕಳು ಆಟವಾಡುತ್ತಾ ಕಬ್ಬಿಣದ ಗೇಟ್ ಬಳಿ ಬಂದಿರುವುದು ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಒಂದು ಮಗು ಕಬ್ಬಿಣದ ಗೇಟನ್ನು ಏರಿ ಆಡಲು ಪ್ರಯತ್ನಿಸಿದೆ. ಸಾಕಷ್ಟು ವರ್ಷಗಳಿಂದ ತುಕ್ಕು ಹಿಡಿದು ಹಾಳಾಗಿದ್ದ ಗೇಟು, ಮಗು ಏರಿ ಆಟವಾಡಲು ಪ್ರಾರಂಭಿಸುತ್ತಿದ್ದಂತೆ, ಮಗುವಿನ ಮೈ ಮೇಲೆ ಬಿದ್ದಿದೆ. ಘಟನೆಗೆ ಸಂಬಂಧಿಸಿದ ಭೀಕರ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.

ಅಕ್ಷತಾ ವರ್ಕಾಡಿ
|

Updated on:Aug 02, 2024 | 4:19 PM

Share

ಪುಣೆ: ಮನೆಯ ಹೊರಗೆ ಆಟವಾಡುತ್ತಿದ್ದಾಗ ಕಬ್ಬಿಣದ ಗೇಟ್ ಮೈ ಮೇಲೆ ಬಿದ್ದು ಮೂರೂವರೆ ವರ್ಷದ ಮಗು ಸಾವನ್ನಪ್ಪಿರುವ ಘಟನೆ ಮಹಾರಾಷ್ಟ್ರದ ಪುಣೆಯಲ್ಲಿ ನಡೆದಿದೆ. ಪಿಂಪ್ರಿ ಚಿಂಚ್‌ವಾಡ್‌(Pimpri-Chinchwad)ನ ಬೊಪ್ಖೇಲ್ ಪ್ರದೇಶದ ಗಣೇಶ್ ನಗರದ ಕಟ್ಟಡವೊಂದರ ಕಬ್ಬಿಣದ ಗೇಟಿನಲ್ಲಿ ಮಗು ನೇತಾಡುತ್ತಾ ಆಟವಾಡುತ್ತಿರುವ ವೇಳೆ ಗೇಟ್​​ ಮೈ ಮೇಲೆ ಬಿದ್ದ ಪರಿಣಾಮ ಮಗು ಸ್ಥಳದಲ್ಲೇ ಸಾವನ್ನಪ್ಪಿದೆ. ಘಟನೆಗೆ ಸಂಬಂಧಿಸಿದ ಭೀಕರ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.

ಮಕ್ಕಳು ಆಟವಾಡುತ್ತಾ ಕಬ್ಬಿಣದ ಗೇಟ್ ಬಳಿ ಬಂದಿರುವುದು ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಒಂದು ಮಗು ಕಬ್ಬಿಣದ ಗೇಟನ್ನು ಏರಿ ಆಡಲು ಪ್ರಯತ್ನಿಸಿದೆ. ಸಾಕಷ್ಟು ವರ್ಷಗಳಿಂದ ತುಕ್ಕು ಹಿಡಿದು ಹಾಳಾಗಿದ್ದ ಗೇಟು, ಮಗು ಏರಿ ನೇತಾಡಲು ಪ್ರಾರಂಭಿಸುತ್ತಿದ್ದಂತೆ, ಭಾರವಾದ ಕಬ್ಬಿಣದ ಗೇಟು ಮಗುವಿನ ಮೈ ಮೇಲೆ ಬಿದ್ದಿದೆ. ಮಗುವಿನ ಕಿರುಚಾಟ ಕೇಳುತ್ತಿದ್ದಂತೆ ಸ್ಥಳೀಯರು ಓಡೋಡಿ ಬಂದಿದ್ದು, ತಕ್ಷಣ ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಆದರೆ ಅದಾಗಲೇ ಮಗು ಸಾವನ್ನಪ್ಪಿರುವುದಾಗಿ ವೈದ್ಯರು ಧೃಡಪಡಿಸಿದ್ದಾರೆ.

ಇದನ್ನೂ ಓದಿ: 25 ಲಕ್ಷ ರೂ. ಸಂಬಳದ ಕೆಲಸ ಬಿಟ್ಟು UPSC ಗೆ ತಯಾರಿ ನಡೆಸುತ್ತಿದ್ದ ಯುವಕ ವಿಷ ಸೇವಿಸಿ ಆತ್ಮಹತ್ಯೆ

ಪೊಲೀಸರಿಂದ ಬಂದ ಮಾಹಿತಿ ಪ್ರಕಾರ ಶಿಂಧೆ ಕುಟುಂಬದಲ್ಲಿ ಈ ಅವಘಡ ಸಂಭವಿಸಿದೆ. ಮೃತ ಮಗುವಿನ ಹೆಸರು ಗಿರಿಜಾ, ತಂದೆ ಗಣೇಶ ಶಿಂಧೆ. ಕಬ್ಬಿಣದ ಗೇಟ್ ಹಾಳಾಗಿರುವುದು ಕಟ್ಟಡದ ಮಾಲೀಕರಿಗೂ ತಿಳಿದಿತ್ತು ಎಂದು ಹೇಳಲಾಗುತ್ತಿದೆ. ಆದರೆ ಅವರು ದುರಸ್ತಿಗೆ ಬಂದಿಲ್ಲ. ಇದರಿಂದಾಗಿ ಅವಘಡ ಸಂಭವಿಸಿದೆ ಎಂದು ದೂರಲಾಗಿದೆ. ಈ ಬಗ್ಗೆ ತನಿಖೆ ನಡೆಸಲಾಗುತ್ತಿದೆ. ತಪ್ಪಿತಸ್ಥರು ಯಾರೇ ಆಗಿದ್ದರೂ ಅವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.

ಇನ್ನಷ್ಟು ವೈರಲ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 3:01 pm, Fri, 2 August 24

‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಹೈಕಮಾಂಡ್ ನಮಗಿಬ್ರಿಗೂ ಏನೋ ಹೇಳಿದೆ: ಡಿಕೆಶಿ ಅಚ್ಚರಿಯ ಹೇಳಿಕೆ
ಹೈಕಮಾಂಡ್ ನಮಗಿಬ್ರಿಗೂ ಏನೋ ಹೇಳಿದೆ: ಡಿಕೆಶಿ ಅಚ್ಚರಿಯ ಹೇಳಿಕೆ
ಪಾವಗಡ ಕಡಮಲಕುಂಟೆ ಬಳಿ ಭೀಕರ ಅಪಘಾತ: ಕಾರು ಚಾಲಕ ಸಾವು
ಪಾವಗಡ ಕಡಮಲಕುಂಟೆ ಬಳಿ ಭೀಕರ ಅಪಘಾತ: ಕಾರು ಚಾಲಕ ಸಾವು
‘45’ ಶೂಟ್​​ನಲ್ಲಿ ಸಾವಿನ ಬಗ್ಗೆ ಮಾತನಾಡಿದ್ದ ಶಿವಣ್ಣ; ಜನ್ಯ, ರಾಜ್
‘45’ ಶೂಟ್​​ನಲ್ಲಿ ಸಾವಿನ ಬಗ್ಗೆ ಮಾತನಾಡಿದ್ದ ಶಿವಣ್ಣ; ಜನ್ಯ, ರಾಜ್