AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Pune: ಆಟವಾಡುತ್ತಿದ್ದಾಗ ಮೈ ಮೇಲೆ ಬಿದ್ದ ಕಬ್ಬಿಣದ ಗೇಟ್, ಮಗು ಸ್ಥಳದಲ್ಲೇ ಸಾವು; ಭೀಕರ ದೃಶ್ಯ ಸಿಸಿಟಿವಿಯಲ್ಲಿ ಸೆರೆ

ಮಕ್ಕಳು ಆಟವಾಡುತ್ತಾ ಕಬ್ಬಿಣದ ಗೇಟ್ ಬಳಿ ಬಂದಿರುವುದು ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಒಂದು ಮಗು ಕಬ್ಬಿಣದ ಗೇಟನ್ನು ಏರಿ ಆಡಲು ಪ್ರಯತ್ನಿಸಿದೆ. ಸಾಕಷ್ಟು ವರ್ಷಗಳಿಂದ ತುಕ್ಕು ಹಿಡಿದು ಹಾಳಾಗಿದ್ದ ಗೇಟು, ಮಗು ಏರಿ ಆಟವಾಡಲು ಪ್ರಾರಂಭಿಸುತ್ತಿದ್ದಂತೆ, ಮಗುವಿನ ಮೈ ಮೇಲೆ ಬಿದ್ದಿದೆ. ಘಟನೆಗೆ ಸಂಬಂಧಿಸಿದ ಭೀಕರ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.

ಅಕ್ಷತಾ ವರ್ಕಾಡಿ
|

Updated on:Aug 02, 2024 | 4:19 PM

Share

ಪುಣೆ: ಮನೆಯ ಹೊರಗೆ ಆಟವಾಡುತ್ತಿದ್ದಾಗ ಕಬ್ಬಿಣದ ಗೇಟ್ ಮೈ ಮೇಲೆ ಬಿದ್ದು ಮೂರೂವರೆ ವರ್ಷದ ಮಗು ಸಾವನ್ನಪ್ಪಿರುವ ಘಟನೆ ಮಹಾರಾಷ್ಟ್ರದ ಪುಣೆಯಲ್ಲಿ ನಡೆದಿದೆ. ಪಿಂಪ್ರಿ ಚಿಂಚ್‌ವಾಡ್‌(Pimpri-Chinchwad)ನ ಬೊಪ್ಖೇಲ್ ಪ್ರದೇಶದ ಗಣೇಶ್ ನಗರದ ಕಟ್ಟಡವೊಂದರ ಕಬ್ಬಿಣದ ಗೇಟಿನಲ್ಲಿ ಮಗು ನೇತಾಡುತ್ತಾ ಆಟವಾಡುತ್ತಿರುವ ವೇಳೆ ಗೇಟ್​​ ಮೈ ಮೇಲೆ ಬಿದ್ದ ಪರಿಣಾಮ ಮಗು ಸ್ಥಳದಲ್ಲೇ ಸಾವನ್ನಪ್ಪಿದೆ. ಘಟನೆಗೆ ಸಂಬಂಧಿಸಿದ ಭೀಕರ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.

ಮಕ್ಕಳು ಆಟವಾಡುತ್ತಾ ಕಬ್ಬಿಣದ ಗೇಟ್ ಬಳಿ ಬಂದಿರುವುದು ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಒಂದು ಮಗು ಕಬ್ಬಿಣದ ಗೇಟನ್ನು ಏರಿ ಆಡಲು ಪ್ರಯತ್ನಿಸಿದೆ. ಸಾಕಷ್ಟು ವರ್ಷಗಳಿಂದ ತುಕ್ಕು ಹಿಡಿದು ಹಾಳಾಗಿದ್ದ ಗೇಟು, ಮಗು ಏರಿ ನೇತಾಡಲು ಪ್ರಾರಂಭಿಸುತ್ತಿದ್ದಂತೆ, ಭಾರವಾದ ಕಬ್ಬಿಣದ ಗೇಟು ಮಗುವಿನ ಮೈ ಮೇಲೆ ಬಿದ್ದಿದೆ. ಮಗುವಿನ ಕಿರುಚಾಟ ಕೇಳುತ್ತಿದ್ದಂತೆ ಸ್ಥಳೀಯರು ಓಡೋಡಿ ಬಂದಿದ್ದು, ತಕ್ಷಣ ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಆದರೆ ಅದಾಗಲೇ ಮಗು ಸಾವನ್ನಪ್ಪಿರುವುದಾಗಿ ವೈದ್ಯರು ಧೃಡಪಡಿಸಿದ್ದಾರೆ.

ಇದನ್ನೂ ಓದಿ: 25 ಲಕ್ಷ ರೂ. ಸಂಬಳದ ಕೆಲಸ ಬಿಟ್ಟು UPSC ಗೆ ತಯಾರಿ ನಡೆಸುತ್ತಿದ್ದ ಯುವಕ ವಿಷ ಸೇವಿಸಿ ಆತ್ಮಹತ್ಯೆ

ಪೊಲೀಸರಿಂದ ಬಂದ ಮಾಹಿತಿ ಪ್ರಕಾರ ಶಿಂಧೆ ಕುಟುಂಬದಲ್ಲಿ ಈ ಅವಘಡ ಸಂಭವಿಸಿದೆ. ಮೃತ ಮಗುವಿನ ಹೆಸರು ಗಿರಿಜಾ, ತಂದೆ ಗಣೇಶ ಶಿಂಧೆ. ಕಬ್ಬಿಣದ ಗೇಟ್ ಹಾಳಾಗಿರುವುದು ಕಟ್ಟಡದ ಮಾಲೀಕರಿಗೂ ತಿಳಿದಿತ್ತು ಎಂದು ಹೇಳಲಾಗುತ್ತಿದೆ. ಆದರೆ ಅವರು ದುರಸ್ತಿಗೆ ಬಂದಿಲ್ಲ. ಇದರಿಂದಾಗಿ ಅವಘಡ ಸಂಭವಿಸಿದೆ ಎಂದು ದೂರಲಾಗಿದೆ. ಈ ಬಗ್ಗೆ ತನಿಖೆ ನಡೆಸಲಾಗುತ್ತಿದೆ. ತಪ್ಪಿತಸ್ಥರು ಯಾರೇ ಆಗಿದ್ದರೂ ಅವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.

ಇನ್ನಷ್ಟು ವೈರಲ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 3:01 pm, Fri, 2 August 24

VIDEO: 6 ಎಸೆತಗಳಲ್ಲಿ 7 ರನ್​: ಡೆಲ್ಲಿ ಕ್ಯಾಪಿಟಲ್ಸ್​ಗೆ ಇದೆಂಥ ಸೋಲು..!
VIDEO: 6 ಎಸೆತಗಳಲ್ಲಿ 7 ರನ್​: ಡೆಲ್ಲಿ ಕ್ಯಾಪಿಟಲ್ಸ್​ಗೆ ಇದೆಂಥ ಸೋಲು..!
ನಂದಿ ಹಿಲ್ಸ್ ರಸ್ತೆ ಬಳಿ ಚಿರತೆ ಪ್ರತ್ಯಕ್ಷ: ಪ್ರವಾಸಿಗರೇ ಎಚ್ಚರ
ನಂದಿ ಹಿಲ್ಸ್ ರಸ್ತೆ ಬಳಿ ಚಿರತೆ ಪ್ರತ್ಯಕ್ಷ: ಪ್ರವಾಸಿಗರೇ ಎಚ್ಚರ
ಜಮ್ಮು-ಕಾಶ್ಮೀರದ ಗಡಿಯಲ್ಲಿ 5 ಪಾಕಿಸ್ತಾನಿ ಡ್ರೋನ್​ಗಳು ಪತ್ತೆ, ಹೈ ಅಲರ್ಟ್​
ಜಮ್ಮು-ಕಾಶ್ಮೀರದ ಗಡಿಯಲ್ಲಿ 5 ಪಾಕಿಸ್ತಾನಿ ಡ್ರೋನ್​ಗಳು ಪತ್ತೆ, ಹೈ ಅಲರ್ಟ್​
ಪತಿಯ ಅಂತ್ಯಕ್ರಿಯೆಗೆ ಕಂದನ ಜತೆ ಸ್ಟ್ರೆಚರ್​ನಲ್ಲಿ ಬಂದ ಸೈನಿಕನ ಪತ್ನಿ
ಪತಿಯ ಅಂತ್ಯಕ್ರಿಯೆಗೆ ಕಂದನ ಜತೆ ಸ್ಟ್ರೆಚರ್​ನಲ್ಲಿ ಬಂದ ಸೈನಿಕನ ಪತ್ನಿ
ಶುಕ್ರವಾರದಂದು ಹುಳಿ ಪದಾರ್ಥ ತಿನ್ನಲೇಬಾರದು ಯಾಕೆ ಗೊತ್ತಾ?
ಶುಕ್ರವಾರದಂದು ಹುಳಿ ಪದಾರ್ಥ ತಿನ್ನಲೇಬಾರದು ಯಾಕೆ ಗೊತ್ತಾ?
ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!
ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!
ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರ ಬಂಧನ
ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರ ಬಂಧನ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್