AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Pune Horror: ಪತ್ನಿಯ ಗುಪ್ತಾಂಗಕ್ಕೆ ಮೊಳೆ ಚುಚ್ಚಿ ಬೀಗ ಹಾಕಿ ವಿಕೃತಿ ಮೆರೆದ ಪತಿ !

ಪತ್ನಿ ಪರ ಪುರುಷರ ಜೊತೆ ಸಂಬಂಧ ಇಟ್ಟುಕೊಳ್ಳಬಹುದು ಎಂಬ ಭಯದಲ್ಲಿ ಪಾಪಿ ಪತಿ ಪತ್ನಿಯ ಜನನಾಂಗದ ಮೇಲೆ ಎರಡು ಮೊಳೆ ಹೊಡೆದು ಆಕೆಯ ಖಾಸಗಿ ಭಾಗಗಳಿಗೆ ಬೀಗ ಹಾಕಿದ್ದಾನೆ. ಬಳಿಕ ಬೀಗವನ್ನು ಬಿಸಾಕಿದ್ದಾನೆ. ಪತ್ನಿಯ ನರಳಾಟ ಕೇಳಿ ನೆರೆಹೊರೆಯವರು ಧಾವಿಸಿದ್ದು, ಆಕೆಯನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿದ್ದಾರೆ.

Pune Horror: ಪತ್ನಿಯ ಗುಪ್ತಾಂಗಕ್ಕೆ ಮೊಳೆ ಚುಚ್ಚಿ ಬೀಗ ಹಾಕಿ ವಿಕೃತಿ ಮೆರೆದ ಪತಿ !
ಸಾಂದರ್ಭಿಕ ಚಿತ್ರ
ಅಕ್ಷತಾ ವರ್ಕಾಡಿ
|

Updated on: May 19, 2024 | 4:09 PM

Share

ಪತ್ನಿಯ ಚಾರಿತ್ರ್ಯದ ಮೇಲೆ ಅನುಮಾನಗೊಂಡು ಪತಿ ಅಮಾನುಷ ಕೃತ್ಯ ಎಸಗಿರುವ ಘಟನೆ ಪುಣೆಯಲ್ಲಿ ನಡೆದಿದೆ. ಇದೀಗ ಪತಿಯನ್ನು ವಕಾಡ್ ಪೊಲೀಸರು ಬಂಧಿಸಿದ್ದು, ಆತನ ಪತ್ನಿಯ ದೂರಿನ ಆಧಾರದ ಮೇಲೆ ಎಫ್​​ ಐ ಆರ್​​ ದಾಖಲಾಗಿದೆ. ಪತ್ನಿ ಇನ್ನೊಬ್ಬನ ಜೊತೆ ಸಂಬಂಧ ಇಟ್ಟುಕೊಳ್ಳಬಹುದು ಎಂಬ ಭಯದಲ್ಲಿ ಆರೋಪಿ ಉಪೇಂದ್ರ ಬಲ್ಬಹದ್ದೂರ್ ಹುಡ್ಕೆ (30) ಪತ್ನಿಯ ಜನನಾಂಗದ ಮೇಲೆ ಎರಡು ರಂಧ್ರಗಳನ್ನು ಕೊರೆದು ಮೊಳೆ ಹೊಡೆದು ಆಕೆಯ ಖಾಸಗಿ ಭಾಗಗಳಿಗೆ ಬೀಗ ಹಾಕಿದ್ದಾನೆ. ಬಳಿಕ ಬೀಗವನ್ನು ಬಿಸಾಕಿದ್ದಾನೆ.

ಮೇ 11 ರಂದು ರಾತ್ರಿ 10 ಗಂಟೆಯ ವೇಳೆ ಈ ವಿಕೃತ ಘಟನೆ ನಡೆದಿದ್ದು, ಮಹಿಳೆಯ ಕಿರುಚಾಟ ಕೇಳಿದ ತಕ್ಷಣ ಸ್ಥಳೀಯರು ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಬಳಿಕ ಶಸ್ತ್ರ ಚಿಕಿತ್ಸೆ ನಡೆಸಲಾಗಿದ್ದು, ಮಹಿಳೆ ಚೇತರಿಸಿಕೊಳ್ಳುತ್ತಿದ್ದಾಳೆ ಎಂದು ಪೊಲೀಸರು ತಿಳಿಸಿದ್ದಾರೆ.

ಪತ್ನಿಯ ದೂರಿನ ಪ್ರಕಾರ ” ಆತ ತನ್ನನ್ನು ದುಪಟ್ಟಾದಿಂದ ಕಟ್ಟಿಹಾಕಿ ಅಡುಗೆಮನೆಯ ಚಾಕುವಿನಿಂದ ತನ್ನಖಾಸಗಿ ಭಾಗಗಳ ಮೇಲೆ ಎರಡು ರಂಧ್ರಗಳನ್ನು ಕೊರೆದಿದ್ದಾನೆ. ಬಳಿಕ ಜನನಾಂಗದ ಪ್ರದೇಶಕ್ಕೆ ಬೀಗ ಹಾಕಿದ್ದಾನೆ” ಎಂದು ಹೇಳಿಕೊಂಡಿದ್ದಾಳೆ.

ಇದನ್ನೂ ಓದಿ: ಸೋಶಿಯಲ್​​ ಮೀಡಿಯಾದಲ್ಲಿ ಪರಿಚಯವಾಗಿದ್ದ ವ್ಯಕ್ತಿಯೊಂದಿಗೆ ಪರಾರಿಯಾಗಿದ್ದ ಯುವತಿಯ ಶವ ಪತ್ತೆ

ಪೊಲೀಸರು ಭಾರತೀಯ ದಂಡ ಸಂಹಿತೆಯ (ಐಪಿಸಿ) ಸೆಕ್ಷನ್ 326, 506 (2) (ಕ್ರಿಮಿನಲ್ ಬೆದರಿಕೆಗೆ ಶಿಕ್ಷೆ) ಮತ್ತು 323 (ಅಪಾಯಕಾರಿ ಶಸ್ತ್ರಾಸ್ತ್ರಗಳು ಅಥವಾ ವಿಧಾನಗಳ ಬಳಕೆಯಿಂದ ಸ್ವಯಂಪ್ರೇರಿತವಾಗಿ ಗಾಯಗೊಳಿಸುವುದು) ಅಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ.

ಮತ್ತಷ್ಟು ವೈರಲ್​ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Follow Us
Akshatha Vorkady
Akshatha Vorkady

ಅಕ್ಷತಾ ವರ್ಕಾಡಿ- ಹುಟ್ಟೂರು ಕಾಸರಗೋಡು ಜಿಲ್ಲೆಯ ಮಂಜೇಶ್ವರದ ವರ್ಕಾಡಿ. ಸಮೂಹ ಸಂವಹನ ಮತ್ತು ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವೀಧರೆ. ಕಳೆದ ಮೂರು ವರ್ಷಗಳಿಂದ ‘ಉತ್ತಮ ಸಮಾಜಕ್ಕಾಗಿ’ ಟಿವಿ9 ಡಿಜಿಟಲ್​ನಲ್ಲಿ ಕೆಲಸ ಮಾಡುತ್ತಿದ್ದೇನೆ. ವೈರಲ್ ಸುದ್ದಿಗಳು, ಆಧ್ಯಾತ್ಮ, ಉದ್ಯೋಗವಕಾಶ, ಶಿಕ್ಷಣ, ಆರೋಗ್ಯ ಮತ್ತು ಪ್ರಯಾಣದ ಬಗ್ಗೆ ಬರೆಯುವುದರಲ್ಲಿ ಆಸಕ್ತಿಹೊಂದಿದ್ದು, ಓದುಗರಿಗೆ ಉತ್ತಮ ಲೇಖನಗಳನ್ನು ಒದಗಿಸುತ್ತಿದ್ದೇನೆ.

Read More
CLP Meeting: ಡಿಕೆಶಿ ಹೆಸರು ಘೋಷಿಸಿದ ಸಿದ್ರಾಮಯ್ಯ Exclusive ವಿಡಿಯೋ
CLP Meeting: ಡಿಕೆಶಿ ಹೆಸರು ಘೋಷಿಸಿದ ಸಿದ್ರಾಮಯ್ಯ Exclusive ವಿಡಿಯೋ
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!