AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ಯಾಲೆಸ್ಟೈನ್, ಪಾಕ್ ಬೆಂಬಲಿಸಿ ಕರಪತ್ರ ಹಂಚಿದ ದೇಶದ್ರೋಹಿಗಳಿಗೆ ಹಿಗ್ಗಾಮುಗ್ಗ ಥಳಿಸಿದ ಸ್ಥಳೀಯ ನಾಗರಿಕರು

ಪಹಲ್ಗಾಮ್‌ ನಲ್ಲಿ ನಡೆದ ಪಾಕಿಸ್ತಾನ ಬೆಂಬಲಿತ ಉಗ್ರರ ದಾಳಿಗೆ ಪ್ರತಿಯಾಗಿ ಭಾರತ ಪ್ರತೀಕಾರ ತೀರಿಸಿಕೊಂಡಿದೆ. ಆದರೆ ಈ ವೇಳೆ ಯಲ್ಲಿ ಭಾರತದಲ್ಲಿರುವ ಕೆಲವರು ಪಾಕಿಸ್ತಾನಕ್ಕೆ ಬೆಂಬಲ ನೀಡುವ ಪೋಸ್ಟ್ ಗಳನ್ನು ಹಾಕುತ್ತಿದ್ದಾರೆ. ಆದರೆ ಇದೀಗ ಪ್ಯಾಲೆಸ್ಟೈನ್ ಮತ್ತು ಪಾಕಿಸ್ತಾನಕ್ಕೆ ಬೆಂಬಲ ನೀಡಿದ ಇಬ್ಬರು ದೇಶದ್ರೋಹಿಗಳನ್ನು ನಡು ರಸ್ತೆಯಲ್ಲಿ ನಾಗರಿಕರು ಥಳಿಸಿದ್ದು ಈ ವಿಡಿಯೋವೊಂದು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.

ಪ್ಯಾಲೆಸ್ಟೈನ್, ಪಾಕ್ ಬೆಂಬಲಿಸಿ ಕರಪತ್ರ ಹಂಚಿದ ದೇಶದ್ರೋಹಿಗಳಿಗೆ ಹಿಗ್ಗಾಮುಗ್ಗ ಥಳಿಸಿದ ಸ್ಥಳೀಯ ನಾಗರಿಕರು
ಸಾಂದರ್ಭಿಕ ಚಿತ್ರ Image Credit source: Twitter
ಸಾಯಿನಂದಾ
| Edited By: |

Updated on: May 12, 2025 | 5:04 PM

Share

ಪುಣೆ, ಮೇ 12: ಪಹಲ್ಗಾಮ್ (pahalgam) ಕೃತ್ಯಕ್ಕೆ ಪ್ರತೀಕಾರವಾಗಿ ಯೋಧರು ‘ಆಪರೇಷನ್ ಸಿಂಧೂರ’ (operation sindoor) ನಡೆಸಿ ಉಗ್ರರ ನೆಲೆ ನಾಶ‌ ಮಾಡಿದ್ದಾರೆ. ಆದರೆ ಈ ಬೆನ್ನಲೇ ಭಾರತ-ಪಾಕಿಸ್ತಾನ ನಡುವೆ ಉದ್ವಿಗ್ನ ವಾತಾವರಣ ಉಂಟಾಗಿದ್ದು, ಭಾರತದಲ್ಲಿ ನೆಲೆಸಿರುವ ಕೆಲವರು ಪಾಕ್ ಗೆ ಬೆಂಬಲ ಸೂಚಿಸುತ್ತಿದ್ದಾರೆ. ಭಾರತ ಮತ್ತು ಪಾಕಿಸ್ತಾನ ಮಧ್ಯೆ ಉದ್ವಿಗ್ನ ಸ್ಥಿತಿ ನಿರ್ಮಾಣವಾಗಿರುವ ಸಂದರ್ಭದಲ್ಲಿ ಪುಣೆಯ ಕರ್ವೆ ನಗರದಲ್ಲಿ ಪ್ಯಾಲೆಸ್ಟೈನ್ ಮತ್ತು ಪಾಕಿಸ್ತಾನ (palestine and pakistan) ವನ್ನು ಬೆಂಬಲಿಸುವ ಇಬ್ಬರು ದೇಶದ್ರೋಹಿಗಳನ್ನು ಸ್ಥಳೀಯ ನಾಗರಿಕರು ಥಳಿಸಿದ್ದಾರೆ. ಹೌದು, ಪ್ಯಾಲೆಸ್ಟೈನ್ ಹಾಗೂ ಪಾಕಿಸ್ತಾನವನ್ನು ಬೆಂಬಲಿಸುವ ಮೂಲಕ ಕರಪತ್ರಗಳನ್ನು ವಿತರಿಸುತ್ತಿದ್ದರು ಎನ್ನಲಾಗಿದೆ. ಇದಕ್ಕೆ ಸಂಬಂಧ ಪಟ್ಟ ವಿಡಿಯೋವೊಂದು ಸೋಶಿಯಲ್ ಮೀಡಿಯಾದಲ್ಲಿ ಸಿಕ್ಕಾಪಟ್ಟೆ ವೈರಲ್ ಆಗಿದೆ.

Meghaupadates ಹೆಸರಿನ ಖಾತೆಯಲ್ಲಿ ಈ ವಿಡಿಯೋವನ್ನು ಶೇರ್ ಮಾಡಿಕೊಳ್ಳಲಾಗಿದ್ದು, ಇದರಲ್ಲಿ ಪುಣೆಯ ಕರ್ವೆ ನಗರದಲ್ಲಿ ಪ್ಯಾಲೆಸ್ಟೈನ್ ಮತ್ತು ಪಾಕಿಸ್ತಾನವನ್ನು ಬೆಂಬಲಿಸುವ ಮೂಲಕ ಕರಪತ್ರಗಳನ್ನು ಸಹ ವಿತರಿಸುತ್ತಿದ್ದು ಈ ಇಬ್ಬರು ದೇಶದ್ರೋಹಿಗಳನ್ನು ಸ್ಥಳೀಯ ನಾಗರಿಕರು ಥಳಿಸುತ್ತಿರುವುದನ್ನು ಈ ವಿಡಿಯೋದಲ್ಲಿ ನೋಡಬಹುದು. ಅದೇ ಸಮಯದಲ್ಲಿ ಇಬ್ಬರು ಮಹಿಳಾ ಸಹಚರರು ಅವರ ರಕ್ಷಣೆಗೆ ಧಾವಿಸಿದ್ದು ಅವರಿಗೂ ಕೂಡ ಸ್ಥಳೀಯ ನಾಗರಿಕರು ಥಳಿಸಿದ್ದಾರೆ.

ಇದನ್ನೂ ಓದಿ
Image
ನಿಮ್ಮ ಪಾದದ ಆಕಾರದಿಂದಲೂ ತಿಳಿಯಬಹುದು ನಿಮ್ಮ ವ್ಯಕ್ತಿತ್ವದ ರಹಸ್ಯ
Image
ಪಾಕ್‌ ಡ್ರೋನ್‌ ದಾಳಿಯ ನಡುವೆ ವೈರಲ್‌ ಆಗ್ತಿದೆ ಡ್ರೋನ್‌ ಪಕೋಡಾ
Image
ತೂಕ ಇಳಿಸ್ಬೇಕು ಅಂದ್ರೆ ಮನೆಯಲ್ಲಿ ಈ ಕೆಲಸಗಳನ್ನು ಮಾಡಿದ್ರೆ ಸಾಕು
Image
ದ್ರಾಕ್ಷಿ ಬೀಜದ ಎಣ್ಣೆಯಲ್ಲಿ ಅಡಗಿದೆ ಹೆಣ್ಣಿನ ಕೇಶದ ಸೌಂದರ್ಯ!

ಇದನ್ನೂ ಓದಿ : ಕಲಿಸುವುದು ಒಂದು, ಪ್ರದರ್ಶಿಸುವುದು ಇನ್ನೊಂದು : ಇದು ನಮ್ಮ ಶಿಕ್ಷಣದ ಸ್ಥಿತಿ ನೋಡಿ

ವೈರಲ್ ವಿಡಿಯೋ ಇಲ್ಲಿದೆ ನೋಡಿ:

ಈ ವಿಡಿಯೋವೊಂದನ್ನು ಶೇರ್ ಮಾಡಿಕೊಳ್ಳಲಾಗುತ್ತಿದ್ದಂತೆ ಈಗಾಗಲೇ ಎರಡೂವರೆ ಲಕ್ಷಕ್ಕೂ ಅಧಿಕ ವೀಕ್ಷಣೆಗಳನ್ನು ಕಂಡುಕೊಂಡಿದ್ದು ಬಳಕೆದಾರರು ಈ ರೀತಿ ಕೃತ್ಯ ಎಸಗಿದ್ದವರ ವಿರುದ್ಧ ಗರಂ ಆಗಿದ್ದಾರೆ. ಬಳಕೆದಾರರೊಬ್ಬರು, ಅತಿರೇಕದ ವರ್ತನೆ ಎಂದಿದ್ದಾರೆ. ಇನ್ನೊಬ್ಬರು, ಈ ದೇಶದಲ್ಲಿದ್ದುಕೊಂಡೆ ದೇಶದ್ರೋಹದಂತಹ ಕೃತ್ಯದಲ್ಲಿ ಎಸಗುತ್ತಿರುವ ವ್ಯಕ್ತಿಗಳನ್ನು ಬೆಂಬಲಿಸಬೇಡಿ. ಅವರಿಗೆ ತಕ್ಕ ಪಾಠ ಕಲಿಸಬೇಕು ಎಂದು ಕಾಮೆಂಟ್ ಮಾಡಿದ್ದಾರೆ. ಮತ್ತೊಬ್ಬರು, ‘ಈ ವ್ಯಕ್ತಿಗಳು ನಿಜವಾದ ದೇಶದ್ರೋಹಿಗಳು, ಇವರನ್ನು ಇಷ್ಟಕ್ಕೆ ಸುಮ್ಮನೆ ಬಿಡಬಾರದು’ ಎಂದು ಖಾರವಾಗಿಯೇ ಕಾಮೆಂಟ್ ಮಾಡಿದ್ದಾರೆ.

ಇನ್ನಷ್ಟು ವೈರಲ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Sainandha P
Sainandha P

ಮೂಲತಃ ಉಡುಪಿಯವರು. ಪ್ರತಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿಯನ್ನು ಪಡೆದಿದ್ದಾರೆ. ಪ್ರತಿಷ್ಠಿತ ಕಾಲೇಜುಗಳಲ್ಲಿ ಉಪನ್ಯಾಸಕಿಯಾಗಿ ಕೆಲಸ ಮಾಡಿದ ಅನುಭವ ಇದೆ. ಪ್ರಾರಂಭದಿಂದಲೂ ಬರವಣಿಗೆಯಲ್ಲಿ ಒಲವು ಹೆಚ್ಚಿರುವ ಇವರು ಕರ್ನಾಟಕ ಟೈಮ್ ವೆಬ್ ಸೈಟ್ ನಲ್ಲಿ ಕೆಲಸ ಮಾಡಿದ ಅನುಭವವಿದೆ. ಬಿಡುವು ಸಿಕ್ಕಾಗಲೆಲ್ಲಾ ಸಿನಿಮಾ ನೋಡುವುದು ಹಾಗೂ ಓದುವುದು ಇವರ ಹವ್ಯಾಸ

Read More
ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ‘ಶಿವ ತಾಂಡವ’ ರಂಗು!
ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ‘ಶಿವ ತಾಂಡವ’ ರಂಗು!
ಐಪಿಎಲ್ ಫೈನಲ್: ಬೆಂಗಳೂರಿನಲ್ಲಿ ಖಾಕಿ ಸರ್ಪಗಾವಲು; ತೀವ್ರ ಕಟ್ಟೆಚ್ಚರ
ಐಪಿಎಲ್ ಫೈನಲ್: ಬೆಂಗಳೂರಿನಲ್ಲಿ ಖಾಕಿ ಸರ್ಪಗಾವಲು; ತೀವ್ರ ಕಟ್ಟೆಚ್ಚರ
ಬಾಗೇಪಲ್ಲಿ ಭೀಕರ ರಸ್ತೆ ಅಪಘಾತ ಪ್ರಕರಣ: ಎಸ್‌ಪಿ ಬಿಗ್ ಸ್ಟೇಟ್‌ಮೆಂಟ್
ಬಾಗೇಪಲ್ಲಿ ಭೀಕರ ರಸ್ತೆ ಅಪಘಾತ ಪ್ರಕರಣ: ಎಸ್‌ಪಿ ಬಿಗ್ ಸ್ಟೇಟ್‌ಮೆಂಟ್
ಪ್ರಮಾಣವಚನ ದಿನವೇ ಕಾಂಗ್ರೆಸ್ ಭವನ ಶಂಕುಸ್ಥಾಪನೆಗೆ ಡಿಕೆಶಿ ಪ್ಲ್ಯಾನ್​
ಪ್ರಮಾಣವಚನ ದಿನವೇ ಕಾಂಗ್ರೆಸ್ ಭವನ ಶಂಕುಸ್ಥಾಪನೆಗೆ ಡಿಕೆಶಿ ಪ್ಲ್ಯಾನ್​
ಪವರ್​ ಪ್ಲೇನಲ್ಲೇ ಗುಜರಾತ್ ಪವರ್ ಕಸಿದ ಆರ್​ಸಿಬಿ
ಪವರ್​ ಪ್ಲೇನಲ್ಲೇ ಗುಜರಾತ್ ಪವರ್ ಕಸಿದ ಆರ್​ಸಿಬಿ
ಆರ್​​ಸಿಬಿ ಫ್ಯಾನ್ಸ್‌ಗೆ ಬೆಂಗಳೂರು ಕಮಿಷನರ್ ಕಠಿಣ ವಾರ್ನಿಂಗ್!
ಆರ್​​ಸಿಬಿ ಫ್ಯಾನ್ಸ್‌ಗೆ ಬೆಂಗಳೂರು ಕಮಿಷನರ್ ಕಠಿಣ ವಾರ್ನಿಂಗ್!
ಸಿದ್ ಶ್ರೀರಾಮ್ ಗಾಯನಕ್ಕೆ ಹಿನ್ನೆಲೆ ಸಂಗೀತದ ಅವಶ್ಯಕತೆಯೇ ಇಲ್ಲ: ವಿಡಿಯೋ
ಸಿದ್ ಶ್ರೀರಾಮ್ ಗಾಯನಕ್ಕೆ ಹಿನ್ನೆಲೆ ಸಂಗೀತದ ಅವಶ್ಯಕತೆಯೇ ಇಲ್ಲ: ವಿಡಿಯೋ
ಸಚಿವ ಸ್ಥಾನದ ಆಕಾಂಕ್ಷಿಗಳಿಗೆ ಬಿಗ್​​ ಅಪ್ಡೇಡ್​​ ನೀಡಿದ ಡಿ.ಕೆ ಶಿವಕುಮಾರ್
ಸಚಿವ ಸ್ಥಾನದ ಆಕಾಂಕ್ಷಿಗಳಿಗೆ ಬಿಗ್​​ ಅಪ್ಡೇಡ್​​ ನೀಡಿದ ಡಿ.ಕೆ ಶಿವಕುಮಾರ್
ಶ್ರೀ ಕೃಷ್ಣನ ಸನ್ನಿಧಾನದಲ್ಲಿ ವಸಿಷ್ಠ ಸಿಂಹ, ಹರಿಪ್ರಿಯ ದಂಪತಿ: ವಿಡಿಯೋ
ಶ್ರೀ ಕೃಷ್ಣನ ಸನ್ನಿಧಾನದಲ್ಲಿ ವಸಿಷ್ಠ ಸಿಂಹ, ಹರಿಪ್ರಿಯ ದಂಪತಿ: ವಿಡಿಯೋ
ಪುತ್ರಿ ರೂಪಾ ಶಶಿಧರ್ ಸಚಿವ ಸ್ಥಾನ ನೀಡುವ ಬಗ್ಗೆ ಮಹತ್ವದ ಹೇಳಿಕೆ
ಪುತ್ರಿ ರೂಪಾ ಶಶಿಧರ್ ಸಚಿವ ಸ್ಥಾನ ನೀಡುವ ಬಗ್ಗೆ ಮಹತ್ವದ ಹೇಳಿಕೆ