Viral: ರಕ್ಷಾ ಬಂಧನದಂದು ರಜೆ ತೆಗೆದುಕೊಂಡ್ರೆ 7 ದಿನದ ಸಂಬಳ ಕಟ್​​​, ಇದನ್ನು ವಿರೋಧಿಸಿದ HR, ಮ್ಯಾನೇಜರ್‌ ಕೆಲಸದಿಂದ ವಜಾ

ರಕ್ಷಾಬಂಧನದಂದು ರಜೆ ತೆಗೆದುಕೊಳ್ಳುವವರಿಗೆ ಏಳು ದಿನಗಳ ಸಂಬಳವನ್ನು ಕಡಿತಗೊಳಿಸುವ ಕಂಪೆನಿಯ ನಿರ್ಧಾರವನ್ನು ವಿರೋಧಿಸಿದ ಕಾರಣ ತನ್ನ ಬಾಸ್‌ ತನ್ನನ್ನು ಕೆಲಸದಿಂದ ವಜಾಗೊಳಿಸಿದ್ದಾರೆ ಎಂದು ಮಹಿಳೆಯೊಬ್ಬರು ಲಿಂಕ್ಡ್‌ ಇನ್‌ನಲ್ಲಿ ಪೋಸ್ಟ್‌ ಒಂದನ್ನು ಮಾಡಿದ್ದರು. ಈ ಪೋಸ್ಟ್‌ ಇದೀಗ ಸೋಷಿಯಲ್‌ ಮೀಡಿಯಾದಲ್ಲಿ ಭಾರೀ ವೈರಲ್‌ ಆಗುತ್ತಿದೆ.

Viral: ರಕ್ಷಾ ಬಂಧನದಂದು ರಜೆ ತೆಗೆದುಕೊಂಡ್ರೆ 7 ದಿನದ ಸಂಬಳ ಕಟ್​​​, ಇದನ್ನು ವಿರೋಧಿಸಿದ HR, ಮ್ಯಾನೇಜರ್‌ ಕೆಲಸದಿಂದ ವಜಾ
Follow us
| Updated By: ಅಕ್ಷಯ್​ ಪಲ್ಲಮಜಲು​​

Updated on: Aug 14, 2024 | 3:10 PM

ಇನ್ನೇನೂ ರಕ್ಷಾ ಬಂಧನ ಬಂದೇ ಬಿಟ್ತು. ಈ ಹಬ್ಬಕ್ಕೆ ರಜಾ ತೆಗೆದುಕೊಳ್ಳುವ ಉದ್ಯೋಗಿಗಳಿಗೆ 7 ದಿನಗಳ ಸಂಬಳ ಕಟ್‌ ಮಾಡುವುದಾಗಿ ಇಲ್ಲೊಂದು ಕಂಪೆನಿ ಹೇಳಿಕೊಂಡಿದ್ದು, ಕಂಪೆನಿಯ ಈ ನಿರ್ಧಾರವನ್ನು ವಿರೋಧಿಸಿದ್ದಕ್ಕಾಗಿ ಕಂಪೆನಿಯ ಬಾಸ್‌ ಹೆಚ್.ಆರ್‌ ಮ್ಯಾನೇಜರ್‌ ಒಬ್ಬರನ್ನು ಕೆಲಸದಿಂದ ವಜಾಗೊಳಿಸಿದ್ದಾರೆ. ಈ ಬಗ್ಗೆ ಮಹಿಳೆ ಲಿಂಕ್ಡ್‌ ಇನ್‌ನಲ್ಲಿ ಒಂದು ಪೋಸ್ಟ್‌ ಹಂಚಿಕೊಂಡಿದ್ದು, ಈ ಪೋಸ್ಟ್ ಇದೀಗ ಭಾರೀ ವೈರಲ್‌ ಆಗುತ್ತಿದೆ.

ಪಂಜಾಬ್‌ನ ಕಂಪೆನಿಯೊಂದು ಮಹಿಳೆಯನ್ನು ಕೆಲಸದಿಂದ ವಜಾಗೊಳಿಸಿದೆ. ಹೆಚ್.‌ಆರ್ ಮ್ಯಾನೇಜರ್‌ ಆಗಿ ನಾನು ನೌಕಕರ ಹಕ್ಕುಗಳನ್ನು ರಕ್ಷಿಸಲು ನಿಂತಿದ್ದರಿಂದ ತನ್ನ ಕಂಪೆನಿಯು ತನ್ನನ್ನು ವಜಾಗೊಳಿಸಿದೆ ಎಂದು ಮಹಿಳೆ ಹೇಳಿಕೊಂಡಿದ್ದಾರೆ. ಜೊತೆಗೆ ಬಾಸ್‌ ಮತ್ತು ಆ ಮಹಿಳೆಯ ವಾಟ್ಸ್‌ಆಪ್‌ ಚಾಟ್‌ ಸ್ಕ್ರೀನ್‌ ಶಾಟ್‌ ಅನ್ನು ಕೂಡಾ ಆಕೆ ಲಿಂಕ್ಡ್‌ಇನ್‌ನಲ್ಲಿ ಹಂಚಿಕೊಂಡಿದ್ದಾರೆ.

ಆಗಸ್ಟ್‌ 15 ಸ್ವಾತಂತ್ರ್ಯ ದಿನದಂದು ಕಂಪೆನಿಗೆ ರಜೆ ಇರುವ ಕಾರಣ, ಆಗಸ್ಟ್‌ 19 ರಂದು ರಕ್ಷಾ ಬಂಧನಕ್ಕೆ ಆಫ್‌ ಡೇ ಅಥವಾ ಫುಲ್‌ ಡೇ ರಜೆ ಇರುವುದಿಲ್ಲ. ಪ್ರತಿಯೊಬ್ಬರು ಕಡ್ಡಾಯವಾಗಿ ಕೆಲಸಕ್ಕೆ ಹಾಜರಾಗಬೇಕು. ಆ ದಿನ ಯಾರಾದರೂ ಕೆಲಸಕ್ಕೆ ರಜೆ ಮಾಡಿದ್ರೆ ಅವರ 7 ದಿನಗಳ ಸಂಬಳವನ್ನು ಕಟ್‌ ಮಾಡುವುದು. ಈ ನಿರ್ಧಾರವನ್ನು ಒಪ್ಪದಿದ್ದರೆ, ಧಾರಾಳವಾಗಿ ಅಂತಹವರು ಕೆಲಸಕ್ಕೆ ರಾಜೀನಾಮೆಯನ್ನು ಸಲ್ಲಿಸಬಹುದು ಬಾಸ್‌ ಹೇಳಿಕೊಂಡಿದ್ದಾರೆ. ಆದರೆ ಕಾನೂನಿನ ಪ್ರಕಾರ ಹೀಗೆ ಸರಿಯಾದ ನಿರ್ಧಾರವಲ್ಲ ಎಂದು ಈ ಮಹಿಳೆ ಕಂಪೆನಿಯ ಉದ್ಯೋಗಿಗಳ ಪರ ನಿಂತು ಮಾತನಾಡಿದ್ದಾರೆ. ಇದಕ್ಕಾಗಿ ಆ ಮಹಿಳೆಯನ್ನೇ ಕೆಲಸದಿಂದ ವಜಾಗೊಳಿಸಿದ್ದಾರೆ.

ಇದನ್ನೂ ಓದಿ: ಖಾಸಗಿ ಅಂಗ ಪ್ರದರ್ಶಿಸಿ ವೈದ್ಯೆಯೊಂದಿಗೆ ಅಸಭ್ಯವಾಗಿ ವರ್ತಿಸಿದ ಕಾಮುಕ, ಬಂಗಾಳದಲ್ಲಿ ಮಹಿಳೆಯರಿಗೆ ಸುರಕ್ಷತೆ ಇಲ್ವಾ?

ಮಹಿಳೆಯ ಈ ಪೋಸ್ಟ್‌ಗೆ ಪ್ರತಿಕ್ರಿಯಿಸಿರುವ ಕಂಪೆನಿ ʼಇದೆಲ್ಲಾ ಸುಳ್ಳು. ಇಲ್ಲಿ ವಿಕ್ಟಿಮ್‌ ಕಾರ್ಡ್‌ ಮತ್ತು ಸಿಂಪತಿಯನ್ನು ಪಡೆದುಕೊಳ್ಳುವುದು ತುಂಬಾ ಸುಲಭವಾಗಿದೆ. ನಿಜವಾದ ಸತ್ಯವೆಂದರೆ ಆ ಮಹಿಳೆಗೆ ಕೆಲಸದಲ್ಲಿ ಶ್ರದ್ಧೆ ಎಂಬುದೇ ಇಲ್ಲ, ಮಗಳ ಹೋಮ್‌ ವರ್ಕ್‌ ಮಾಡಲು ಆಫೀಸ್‌ ಸಮಯವನ್ನು ತೆಗೆದುಕೊಳ್ಳುತ್ತಿದ್ದಳುʼ ಎಂದು ಆರೋಪಿಸಿದೆ. ಆದರೆ ಲಿಂಕ್ಡ್‌ಇನ್‌ ಬಳಕೆದಾರರು ಈ ಮಹಿಳೆಗೆ ಬೆಂಬಲವನ್ನು ಸೂಚಿಸಿದ್ದಾರೆ.

ಇನ್ನಷ್ಟು ವೈರಲ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಗದಗ: ಲಂಚದ ಆರೋಪ, ಅಧಿಕಾರಿಗೆ ಸಚಿವ ಎಚ್​ಕೆ ಪಾಟೀಲ್​ ಹಿಗ್ಗಾಮುಗ್ಗಾ ತರಾಟೆ
ಗದಗ: ಲಂಚದ ಆರೋಪ, ಅಧಿಕಾರಿಗೆ ಸಚಿವ ಎಚ್​ಕೆ ಪಾಟೀಲ್​ ಹಿಗ್ಗಾಮುಗ್ಗಾ ತರಾಟೆ
ಪ್ರವಾಹ ಸ್ಥಳದಲ್ಲಿ ಟಿಎಂಸಿ ಶಾಸಕರು, ಸಂಸದರಿದ್ದ ದೋಣಿ ಪಲ್ಟಿ
ಪ್ರವಾಹ ಸ್ಥಳದಲ್ಲಿ ಟಿಎಂಸಿ ಶಾಸಕರು, ಸಂಸದರಿದ್ದ ದೋಣಿ ಪಲ್ಟಿ
ಸಿಎಂ ಸಿದ್ದರಾಮಯ್ಯಗೆ ಧನ್ಯವಾದ ಹೇಳಿದ ದುನಿಯಾ ವಿಜಯ್; ಕಾರಣವೇನು?
ಸಿಎಂ ಸಿದ್ದರಾಮಯ್ಯಗೆ ಧನ್ಯವಾದ ಹೇಳಿದ ದುನಿಯಾ ವಿಜಯ್; ಕಾರಣವೇನು?
ಒಬ್ಬರೇ ಇದ್ದೀರಾ? ಭಯ ಅನಿಸುತ್ತಿದೆಯಾ? ಈ ವೇಳೆ ಜಪಿಸಬೇಕಾದ ನಾಮಗಳು ಇಲ್ಲಿವೆ
ಒಬ್ಬರೇ ಇದ್ದೀರಾ? ಭಯ ಅನಿಸುತ್ತಿದೆಯಾ? ಈ ವೇಳೆ ಜಪಿಸಬೇಕಾದ ನಾಮಗಳು ಇಲ್ಲಿವೆ
ಈ ರಾಶಿಯವರು ಗೊತ್ತಾಗದೇ ಕೆಟ್ಟವರ ಸಹವಾಸವನ್ನು ಮಾಡುವಿರಿ
ಈ ರಾಶಿಯವರು ಗೊತ್ತಾಗದೇ ಕೆಟ್ಟವರ ಸಹವಾಸವನ್ನು ಮಾಡುವಿರಿ
ಹೃದಯ ವಿದ್ರಾವಕ ಘಟನೆ: ಬೈಕ್‌ನಲ್ಲೇ ತಂದೆಯ ಶವ ಸಾಗಿಸಿದ ಮಕ್ಕಳು
ಹೃದಯ ವಿದ್ರಾವಕ ಘಟನೆ: ಬೈಕ್‌ನಲ್ಲೇ ತಂದೆಯ ಶವ ಸಾಗಿಸಿದ ಮಕ್ಕಳು
ಭಾರತದ ಷೇರುಪೇಟೆ ಇನ್ನೆಷ್ಟು ಬೇಗ ಡಬಲ್ ಆಗುತ್ತೆ?
ಭಾರತದ ಷೇರುಪೇಟೆ ಇನ್ನೆಷ್ಟು ಬೇಗ ಡಬಲ್ ಆಗುತ್ತೆ?
ಸುದ್ದಿಗೋಷ್ಠಿಗೂ ಮುನ್ನ ಸಿಎಂ- ಸಚಿವರುಗಳು ಪಿಸು ಪಿಸು ಮಾತು
ಸುದ್ದಿಗೋಷ್ಠಿಗೂ ಮುನ್ನ ಸಿಎಂ- ಸಚಿವರುಗಳು ಪಿಸು ಪಿಸು ಮಾತು
ಚಾಮುಂಡೇಶ್ವರಿ ತಾಯಿಗೆ ವಿಶೇಷ ಪೂಜೆ ಸಲ್ಲಿಸಿದ ನಿಖಿಲ್ ಕುಮಾರಸ್ವಾಮಿ
ಚಾಮುಂಡೇಶ್ವರಿ ತಾಯಿಗೆ ವಿಶೇಷ ಪೂಜೆ ಸಲ್ಲಿಸಿದ ನಿಖಿಲ್ ಕುಮಾರಸ್ವಾಮಿ
ಡ್ರೋನ್​​ನಲ್ಲಿ ಗಣಪತಿಯನ್ನು ವಿಸರ್ಜನೆ ಮಾಡಿದ ಯುವಕರು! ವಿಡಿಯೋ ನೋಡಿ
ಡ್ರೋನ್​​ನಲ್ಲಿ ಗಣಪತಿಯನ್ನು ವಿಸರ್ಜನೆ ಮಾಡಿದ ಯುವಕರು! ವಿಡಿಯೋ ನೋಡಿ