AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral: ರಕ್ಷಾ ಬಂಧನದಂದು ರಜೆ ತೆಗೆದುಕೊಂಡ್ರೆ 7 ದಿನದ ಸಂಬಳ ಕಟ್​​​, ಇದನ್ನು ವಿರೋಧಿಸಿದ HR, ಮ್ಯಾನೇಜರ್‌ ಕೆಲಸದಿಂದ ವಜಾ

ರಕ್ಷಾಬಂಧನದಂದು ರಜೆ ತೆಗೆದುಕೊಳ್ಳುವವರಿಗೆ ಏಳು ದಿನಗಳ ಸಂಬಳವನ್ನು ಕಡಿತಗೊಳಿಸುವ ಕಂಪೆನಿಯ ನಿರ್ಧಾರವನ್ನು ವಿರೋಧಿಸಿದ ಕಾರಣ ತನ್ನ ಬಾಸ್‌ ತನ್ನನ್ನು ಕೆಲಸದಿಂದ ವಜಾಗೊಳಿಸಿದ್ದಾರೆ ಎಂದು ಮಹಿಳೆಯೊಬ್ಬರು ಲಿಂಕ್ಡ್‌ ಇನ್‌ನಲ್ಲಿ ಪೋಸ್ಟ್‌ ಒಂದನ್ನು ಮಾಡಿದ್ದರು. ಈ ಪೋಸ್ಟ್‌ ಇದೀಗ ಸೋಷಿಯಲ್‌ ಮೀಡಿಯಾದಲ್ಲಿ ಭಾರೀ ವೈರಲ್‌ ಆಗುತ್ತಿದೆ.

Viral: ರಕ್ಷಾ ಬಂಧನದಂದು ರಜೆ ತೆಗೆದುಕೊಂಡ್ರೆ 7 ದಿನದ ಸಂಬಳ ಕಟ್​​​, ಇದನ್ನು ವಿರೋಧಿಸಿದ HR, ಮ್ಯಾನೇಜರ್‌ ಕೆಲಸದಿಂದ ವಜಾ
ಮಾಲಾಶ್ರೀ ಅಂಚನ್​
| Edited By: |

Updated on: Aug 14, 2024 | 3:10 PM

Share

ಇನ್ನೇನೂ ರಕ್ಷಾ ಬಂಧನ ಬಂದೇ ಬಿಟ್ತು. ಈ ಹಬ್ಬಕ್ಕೆ ರಜಾ ತೆಗೆದುಕೊಳ್ಳುವ ಉದ್ಯೋಗಿಗಳಿಗೆ 7 ದಿನಗಳ ಸಂಬಳ ಕಟ್‌ ಮಾಡುವುದಾಗಿ ಇಲ್ಲೊಂದು ಕಂಪೆನಿ ಹೇಳಿಕೊಂಡಿದ್ದು, ಕಂಪೆನಿಯ ಈ ನಿರ್ಧಾರವನ್ನು ವಿರೋಧಿಸಿದ್ದಕ್ಕಾಗಿ ಕಂಪೆನಿಯ ಬಾಸ್‌ ಹೆಚ್.ಆರ್‌ ಮ್ಯಾನೇಜರ್‌ ಒಬ್ಬರನ್ನು ಕೆಲಸದಿಂದ ವಜಾಗೊಳಿಸಿದ್ದಾರೆ. ಈ ಬಗ್ಗೆ ಮಹಿಳೆ ಲಿಂಕ್ಡ್‌ ಇನ್‌ನಲ್ಲಿ ಒಂದು ಪೋಸ್ಟ್‌ ಹಂಚಿಕೊಂಡಿದ್ದು, ಈ ಪೋಸ್ಟ್ ಇದೀಗ ಭಾರೀ ವೈರಲ್‌ ಆಗುತ್ತಿದೆ.

ಪಂಜಾಬ್‌ನ ಕಂಪೆನಿಯೊಂದು ಮಹಿಳೆಯನ್ನು ಕೆಲಸದಿಂದ ವಜಾಗೊಳಿಸಿದೆ. ಹೆಚ್.‌ಆರ್ ಮ್ಯಾನೇಜರ್‌ ಆಗಿ ನಾನು ನೌಕಕರ ಹಕ್ಕುಗಳನ್ನು ರಕ್ಷಿಸಲು ನಿಂತಿದ್ದರಿಂದ ತನ್ನ ಕಂಪೆನಿಯು ತನ್ನನ್ನು ವಜಾಗೊಳಿಸಿದೆ ಎಂದು ಮಹಿಳೆ ಹೇಳಿಕೊಂಡಿದ್ದಾರೆ. ಜೊತೆಗೆ ಬಾಸ್‌ ಮತ್ತು ಆ ಮಹಿಳೆಯ ವಾಟ್ಸ್‌ಆಪ್‌ ಚಾಟ್‌ ಸ್ಕ್ರೀನ್‌ ಶಾಟ್‌ ಅನ್ನು ಕೂಡಾ ಆಕೆ ಲಿಂಕ್ಡ್‌ಇನ್‌ನಲ್ಲಿ ಹಂಚಿಕೊಂಡಿದ್ದಾರೆ.

ಆಗಸ್ಟ್‌ 15 ಸ್ವಾತಂತ್ರ್ಯ ದಿನದಂದು ಕಂಪೆನಿಗೆ ರಜೆ ಇರುವ ಕಾರಣ, ಆಗಸ್ಟ್‌ 19 ರಂದು ರಕ್ಷಾ ಬಂಧನಕ್ಕೆ ಆಫ್‌ ಡೇ ಅಥವಾ ಫುಲ್‌ ಡೇ ರಜೆ ಇರುವುದಿಲ್ಲ. ಪ್ರತಿಯೊಬ್ಬರು ಕಡ್ಡಾಯವಾಗಿ ಕೆಲಸಕ್ಕೆ ಹಾಜರಾಗಬೇಕು. ಆ ದಿನ ಯಾರಾದರೂ ಕೆಲಸಕ್ಕೆ ರಜೆ ಮಾಡಿದ್ರೆ ಅವರ 7 ದಿನಗಳ ಸಂಬಳವನ್ನು ಕಟ್‌ ಮಾಡುವುದು. ಈ ನಿರ್ಧಾರವನ್ನು ಒಪ್ಪದಿದ್ದರೆ, ಧಾರಾಳವಾಗಿ ಅಂತಹವರು ಕೆಲಸಕ್ಕೆ ರಾಜೀನಾಮೆಯನ್ನು ಸಲ್ಲಿಸಬಹುದು ಬಾಸ್‌ ಹೇಳಿಕೊಂಡಿದ್ದಾರೆ. ಆದರೆ ಕಾನೂನಿನ ಪ್ರಕಾರ ಹೀಗೆ ಸರಿಯಾದ ನಿರ್ಧಾರವಲ್ಲ ಎಂದು ಈ ಮಹಿಳೆ ಕಂಪೆನಿಯ ಉದ್ಯೋಗಿಗಳ ಪರ ನಿಂತು ಮಾತನಾಡಿದ್ದಾರೆ. ಇದಕ್ಕಾಗಿ ಆ ಮಹಿಳೆಯನ್ನೇ ಕೆಲಸದಿಂದ ವಜಾಗೊಳಿಸಿದ್ದಾರೆ.

ಇದನ್ನೂ ಓದಿ: ಖಾಸಗಿ ಅಂಗ ಪ್ರದರ್ಶಿಸಿ ವೈದ್ಯೆಯೊಂದಿಗೆ ಅಸಭ್ಯವಾಗಿ ವರ್ತಿಸಿದ ಕಾಮುಕ, ಬಂಗಾಳದಲ್ಲಿ ಮಹಿಳೆಯರಿಗೆ ಸುರಕ್ಷತೆ ಇಲ್ವಾ?

ಮಹಿಳೆಯ ಈ ಪೋಸ್ಟ್‌ಗೆ ಪ್ರತಿಕ್ರಿಯಿಸಿರುವ ಕಂಪೆನಿ ʼಇದೆಲ್ಲಾ ಸುಳ್ಳು. ಇಲ್ಲಿ ವಿಕ್ಟಿಮ್‌ ಕಾರ್ಡ್‌ ಮತ್ತು ಸಿಂಪತಿಯನ್ನು ಪಡೆದುಕೊಳ್ಳುವುದು ತುಂಬಾ ಸುಲಭವಾಗಿದೆ. ನಿಜವಾದ ಸತ್ಯವೆಂದರೆ ಆ ಮಹಿಳೆಗೆ ಕೆಲಸದಲ್ಲಿ ಶ್ರದ್ಧೆ ಎಂಬುದೇ ಇಲ್ಲ, ಮಗಳ ಹೋಮ್‌ ವರ್ಕ್‌ ಮಾಡಲು ಆಫೀಸ್‌ ಸಮಯವನ್ನು ತೆಗೆದುಕೊಳ್ಳುತ್ತಿದ್ದಳುʼ ಎಂದು ಆರೋಪಿಸಿದೆ. ಆದರೆ ಲಿಂಕ್ಡ್‌ಇನ್‌ ಬಳಕೆದಾರರು ಈ ಮಹಿಳೆಗೆ ಬೆಂಬಲವನ್ನು ಸೂಚಿಸಿದ್ದಾರೆ.

ಇನ್ನಷ್ಟು ವೈರಲ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಸೇತುವೆಯಿಂದ ಕೆಳಗೆ ಬಿದ್ದರೂ ಯುವಕನ ಜೀವ ಉಳಿಸಿತು ಲೈಟ್ ಕಂಬ!
ಸೇತುವೆಯಿಂದ ಕೆಳಗೆ ಬಿದ್ದರೂ ಯುವಕನ ಜೀವ ಉಳಿಸಿತು ಲೈಟ್ ಕಂಬ!
ಗಿಲ್ಲಿ ಮೇಲೆ ರಕ್ಷಿತಾ ಶೆಟ್ಟಿಗೆ ಲವ್ ಇದ್ಯಾ? ಅಸಲಿ ವಿಷಯ ತೆರೆದಿಟ್ಟ ರಜತ್
ಗಿಲ್ಲಿ ಮೇಲೆ ರಕ್ಷಿತಾ ಶೆಟ್ಟಿಗೆ ಲವ್ ಇದ್ಯಾ? ಅಸಲಿ ವಿಷಯ ತೆರೆದಿಟ್ಟ ರಜತ್
ಶಿವ ಶಿವ..ಮಠದಲ್ಲಿ ಇದೆಂತಾ ಅನಾಚಾರ: ಕುಡಿದು ತೂರಾಡಿದ ಸ್ವಾಮೀಜಿ!
ಶಿವ ಶಿವ..ಮಠದಲ್ಲಿ ಇದೆಂತಾ ಅನಾಚಾರ: ಕುಡಿದು ತೂರಾಡಿದ ಸ್ವಾಮೀಜಿ!
ಚೈತ್ರಾ ಕುಂದಾಪುರ ಯಾರು ಅಂತ ನನಗೆ ಗೊತ್ತಿಲ್ಲ, ಅವರ ಬಗ್ಗೆ ಮಾತು ಬೇಡ: ರಜತ್
ಚೈತ್ರಾ ಕುಂದಾಪುರ ಯಾರು ಅಂತ ನನಗೆ ಗೊತ್ತಿಲ್ಲ, ಅವರ ಬಗ್ಗೆ ಮಾತು ಬೇಡ: ರಜತ್
ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ
ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಗಿಲ್ಲಿ ನಟ ದೊಡ್ಡ ಕುತಂತ್ರಿ: ಬಿಗ್​ ಬಾಸ್ ಮನೆಯಲ್ಲಿ ರಾಶಿಕಾ ಶೆಟ್ಟಿ ಆರೋಪ
ಗಿಲ್ಲಿ ನಟ ದೊಡ್ಡ ಕುತಂತ್ರಿ: ಬಿಗ್​ ಬಾಸ್ ಮನೆಯಲ್ಲಿ ರಾಶಿಕಾ ಶೆಟ್ಟಿ ಆರೋಪ
ಇಂಗ್ಲೆಂಡ್ ತಂಡವನ್ನು ಬಹಿರಂಗವಾಗಿ ಅಣಕಿಸಿದ ರೋಹಿತ್ ಶರ್ಮಾ
ಇಂಗ್ಲೆಂಡ್ ತಂಡವನ್ನು ಬಹಿರಂಗವಾಗಿ ಅಣಕಿಸಿದ ರೋಹಿತ್ ಶರ್ಮಾ