AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ನಾಯಿ ಮರಿಗೆ ವಿಸ್ಕಿ ಕುಡಿಸಿದ ವ್ಯಕ್ತಿ; ನೆಟ್ಟಿಗರಿಂದ ಭಾರಿ ಆಕ್ರೋಶ

ಹಸಿದು ಬಂದಂತಹ ಪ್ರಾಣಿ ಪಕ್ಷಿಗಳಿಗೆ ಹೊಟ್ಟೆ ತುಂಬಾ ಊಟವನ್ನು ನೀಡ್ಬೇಕು, ಇದರಿಂದ ನಮಗೆ ಪುಣ್ಯ ಲಭಿಸುತ್ತದೆ ಅಂತ ಹಿರಿಯರು ಆಗಾಗ್ಗೆ ಹೇಳ್ತಾ ಇರ್ತಾರೆ. ಈ ಮಾತಿನಂತೆ ಅದೆಷ್ಟೋ ಪ್ರಾಣಿ ಪ್ರಿಯರು ಬಿಡಾಡಿ ಪ್ರಾಣಿಗಳಿಗೆ ಪ್ರತಿನಿತ್ಯ ಊಟ ಹಾಕ್ತಾರೆ. ಆದ್ರೆ ಇಲ್ಲೊಬ್ಬ  ಯುವಕ ಮಾತ್ರ ಹಸಿದು ಬಂದಂತಹ ನಾಯಿ ಮರಿಗೆ ವಿಸ್ಕಿಯನ್ನು ಕುಡಿಸಿ ಅಮಾನವೀಯ ಕೃತ್ಯ ಮೆರೆದಿದ್ದಾನೆ.  ಈ ಕುರಿತ ವಿಡಿಯೋ ಇದೀಗ ವೈರಲ್ ಆಗಿದ್ದು, ಆತನ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವಂತೆ ನೆಟ್ಟಿಗರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

Viral Video: ನಾಯಿ ಮರಿಗೆ ವಿಸ್ಕಿ ಕುಡಿಸಿದ ವ್ಯಕ್ತಿ; ನೆಟ್ಟಿಗರಿಂದ ಭಾರಿ ಆಕ್ರೋಶ
ಮಾಲಾಶ್ರೀ ಅಂಚನ್​
| Edited By: |

Updated on:Jan 06, 2024 | 6:58 PM

Share

ನಾವು  ಒಬ್ರಿಗೆ ಉಪಕಾರ ಮಾಡಬೇಕೆ ಹೊರತು ಯಾವತ್ತೂ ಯಾರಿಗೂ ತೊಂದ್ರೆ ಕೊಡಬಾರದು,  ಅದರಲ್ಲೂ ಮೂಕ ಪ್ರಾಣಿಗಳಿಗೆ ನಮ್ಮ ಕೈಲಾದಷ್ಟು   ಆಹಾರವನ್ನು ನೀಡಬೇಕು,  ಇದರಿಂದ ಪುಣ್ಯ ಲಭಿಸುತ್ತೆ ಅಂತ ಹಿರಿಯರು ಹೇಳುವ ಮಾತೊಂದಿದೆ. ಈ ಮಾತಿಗೆ ಅನುಗುಣವಾಗಿ ಅದೆಷ್ಟೋ ಪ್ರಾಣಿಪ್ರಿಯರು ಪ್ರತಿನಿತ್ಯ ಬಿಡಾಡಿ ಪ್ರಾಣಿಗಳಿಗೆ ಊಟವನ್ನು ಹಾಕುವಂತಹ ಪುಣ್ಯದ ಕೆಸಲವನ್ನು ಮಾಡ್ತಿದ್ದಾರೆ.  ಇಂತಹ ಒಳ್ಳೆಯ ಮನಸ್ಸುಗಳ ಮಧ್ಯೆ, ಇಲ್ಲೊಬ್ಬ ಯುವಕ ತನ್ನ ಮೋಜಿಗಾಗಿ ಹಸಿದು, ಆಹಾರವನ್ನರಸುತ್ತಾ, ಬಂದಂತಹ ನಾಯಿ ಮರಿಗೆ ಹೆಂಡವನ್ನು ಕುಡಿಸಿದ್ದಾನೆ. ಈ ಕುರಿತ ವಿಡಿಯೋ ಇದೀಗ ವೈರಲ್ ಆಗಿದ್ದು, ನೆಟ್ಟಿಗರು ಆ ಯುವಕನ ವಿರುದ್ಧ ಭಾರಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಈ ಅಮಾನವೀಯ ಘಟನೆ ರಾಜಸ್ಥಾನದ ಮಧೋಪುರದಲ್ಲಿ ನಡೆದಿದ್ದು, ರಾತ್ರಿಯ ವೇಳೆಯಲ್ಲಿ ಯುವಕರ ತಂಡವೊಂದು ತಮ್ಮ ಬಳಿಗೆ ಆಹಾರವನ್ನರಸುತ್ತಾ ಬಂದಂತಹ ಪುಟ್ಟ ನಾಯಿ ಮರಿಗೆ  ವಿಸ್ಕಿ ಕುಡಿಸಿದ್ದಾರೆ. ಈ ಘಟನೆಯ ವಿಡಿಯೋ ಇದೀಗ ವೈರಲ್ ಆಗಿದ್ದು,  ಸಾರ್ವಜನಿಕರು ಮತ್ತು ಪ್ರಾಣಿ ದಯಾ ಸಂಘದ ಕಾರ್ಯಕರ್ತರು ಅಮಾನವೀಯ ವರ್ತನೆಯನ್ನು ತೋರಿದ  ಆ ಯುವಕರ  ವಿರುದ್ಧ ಸೂಕ್ತ ಕ್ರಮವನ್ನು ಕೈಗೊಳ್ಳಬೇಕು ಎಂದು ರಾಜಸ್ಥಾನದ ಪೋಲಿಸರನ್ನು ಒತ್ತಾಯಿಸಿದ್ದಾರೆ.

@voiceforanimals11 ಎಂಬ X ಖಾತೆಯಲ್ಲಿ ಈ ವಿಡಿಯೋವನ್ನು ಹಂಚಿಕೊಳ್ಳಲಾಗಿದ್ದು, ʼನಾಯಿ ಮರಿಗೆ ಹೆಂಡ ಕುಡಿಸಿದ ಈ ಯುವಕರ ಸೂಕ್ತ ಕ್ರಮವನ್ನು ತೆಗೆದುಕೊಳ್ಳಬೇಕುʼ ಎಂಬ  ಶೀರ್ಷಿಕೆಯನ್ನು ಬರೆದುಕೊಂಡು, ರಾಜಸ್ಥಾನ ಪೋಲಿಸ್ ಹೆಲ್ಪ್ ಡೆಸ್ಕ್ ಅನ್ನು ಟ್ಯಾಗ್ ಮಾಡಲಾಗಿದೆ.  ವಿಡಿಯೋದಲ್ಲಿ ಯುವಕರ ತಂಡವೊಂದು ಪ್ಲಾಸ್ಟಿಕ್ ಲೋಟದಲ್ಲಿ ವಿಸ್ಕಿಯನ್ನು ಸುರಿದು ಅದನ್ನು ನಾಯಿ ಮರಿಗೆ ಕುಡಿಸುವ  ಅಮಾನವೀಯ ದೃಶ್ಯವನ್ನು ಕಾಣಬಹುದು.

ವೈರಲ್ ವಿಡಿಯೋದಲ್ಲಿ ರಾತ್ರಿಯ ವೇಳೆಯಲ್ಲಿ  ನಾಯಿ ಮರಿಯೊಂದು ಹೊಟ್ಟೆ ಹಸಿವಾಗಿದೆ, ಯಾರಾದ್ರೂ ಹೊಟ್ಟೆ ತುಂಬಾ ಊಟ ಹಾಕಬಹುದು ಎಂದು ಆಹಾರವನ್ನರಸುತ್ತಾ, ಮೋಜು ಮಸ್ತಿಯಲ್ಲಿ ತೊಡಗಿದ್ದ ಯುವಕರ ಗುಂಪಿನ ಕಡೆಗೆ ಬರುತ್ತೆ. ಆದ್ರೆ ಈ ಪುಂಡ ಯುವಕರು ತಮ್ಮ ಮೋಜಿಗಾಗಿ ಪ್ಲಾಸ್ಟಿಕ್ ಲೋಟದಲ್ಲಿ ವಿಸ್ಕಿಯನ್ನು ಸುರಿದು ಅದನ್ನು ನಾಯಿ ಮರಿಗೆ ಕುಡಿಸಿದ್ದಾರೆ. ಈ ವಿಡಿಯೋ ವೈರಲ್ ಆಗುತ್ತಿದ್ದಂತೆ, ರಾಜಸ್ಥಾನ ಪೋಲೀಸ್ ಹೆಲ್ಪ್ಡೆಸ್ಕ್ ಸ್ಥಳೀಯ ಪೋಲಿಸರಿಗೆ ಕರೆ ಮಾಡಿ ಆ ಯುವಕರ ವಿರುದ್ಧ ಸೂಕ್ತ ಕ್ರಮವನ್ನು ಕೈಗೊಳ್ಳುವಂತೆ ಹೇಳಿದೆ.

ಇದನ್ನೂ ಓದಿ: ಈ ಪುಟಾಣಿ ಬ್ಯಾಗ್ ಖರೀದಿಸುವ ಹಣದಲ್ಲಿ ಸುಂದರವಾದ ಮನೆ ಕಟ್ಟಬಹುದು

ಜನವರಿ 05 ರಂದು ಹಂಚಿಕೊಳ್ಳಲಾದ ಈ ಪೋಸ್ಟ್  ನಾಲ್ಕು ಸಾವಿರಕ್ಕೂ ಅಧಿಕ ವೀಕ್ಷಣೆಗಳನ್ನು ಪಡೆದುಕೊಂಡಿದೆ.  ಹಾಗೂ ನೆಟ್ಟಿಗರು ಕಮೆಂಟ್ ಸೆಕ್ಷನ್ ಅಲ್ಲಿ ಆ ಯುವಕರ ವಿರುದ್ಧ ಆಕ್ರೋಶವನ್ನು ವ್ಯಕ್ತಪಡಿಸಿದ್ದಾರೆ. ಒಬ್ಬ ಬಳಕೆದಾರರು ʼಕೂಡಲೇ ಆತನನ್ನು ಬಂಧಿಸಿ, ಕಠಿಣ ಕಾರಾಗೃಹ ಶಿಕ್ಷೆಯನ್ನು ವಿಧಿಸಬೇಕುʼ ಎಂದು ಹೇಳಿದ್ದಾರೆ.  ಇನ್ನೊಬ್ಬ ಬಳಕೆದಾರರು ʼಆ ಬಡ ಜೀವಕ್ಕೆ ಈ ರೀತಿ ತೊಂದರೆ ಕೊಡಲು ಈ ಪಾಪಿಗಳಿಗೆ ಹೇಗಾದರೂ ಮನಸ್ಸು ಬರುತ್ತೋʼ ಅಂತ ಕಿಡಿ ಕಾರಿದ್ದಾರೆ. ಮತ್ತೊಬ್ಬ ಬಳಕೆದಾರರು ʼಆಲ್ಕೋಹಾಲ್ ಪ್ರಾಣಿಗಳಿಗೆ ತುಂಬಾ ಹಾನಿಕಾರಕವಾದದ್ದು, ಆ ನಾಯಿ ಮರಿಯ ಪ್ರಾಣದ ಜೊತೆಗೆ ಆಟವಾಡಿದ ಆ ಯುವಕರನ್ನು ಕೂಡಲೆ ಬಂಧಿಸಬೇಕುʼ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಮತ್ತಷ್ಟು ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 6:57 pm, Sat, 6 January 24

Follow Us
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ