AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral: ಬಾಳೆಗಿಡ ನೆಟ್ಟು ಪುತ್ತೂರು ರಸ್ತೆ ಗುಂಡಿ ಮುಚ್ಚಿದ ಜನ; ವಿಡಿಯೋ ವೈರಲ್‌

ಎಲ್ಲಿ ನೋಡಿದ್ರೂ ಈ ರಸ್ತೆ ಗುಂಡಿಗಳದ್ದೇ ಸಮಸ್ಯೆ. ಇದಕ್ಕೆ ಸಂಬಂಧಪಟ್ಟ ಅಧಿಕಾರಿಗಳಂತೂ ಮೃತ್ಯು ಕೂಪದಂತಿರುವ ಗುಂಡಿಗಳನ್ನು ಸರಿಪಡಿಸುವ ಪ್ರಯತ್ನವನ್ನೇ ಮಾಡುವುದಿಲ್ಲ. ಇದೇ ಕಾರಣದಿಂದ ಜನರೇ ವಿವಿಧ ರೀತಿಯಲ್ಲಿ ಪ್ರತಿಭಟನೆ ಮಾಡುವ ಮೂಲಕ ರಸ್ತೆ ಗುಂಡಿ ಮುಚ್ಚಿಸುವ ಕಾರ್ಯವನ್ನು ಮಾಡುತ್ತಿರುತ್ತಾರೆ. ಅದೇ ರೀತಿ ಇಲ್ಲೊಂದು ಕಡೆ ರಸ್ತೆ ಗುಂಡಿಯಲ್ಲಿ ಬಾಳೆ ಗಿಡ ನೆಡುವ ಮೂಲಕ ಜನರೇ ರಸ್ತೆ ಗುಂಡಿಯನ್ನು ಮುಚ್ಚಿದ್ದಾರೆ. ಈ ವಿಡಿಯೋ ಇದೀಗ ಭಾರೀ ವೈರಲ್‌ ಆಗಿದೆ.

ಮಾಲಾಶ್ರೀ ಅಂಚನ್​
| Updated By: ಅಕ್ಷಯ್​ ಪಲ್ಲಮಜಲು​​|

Updated on:Nov 13, 2024 | 11:37 AM

Share

ಕಳಪೆ ಕಾಮಗಾರಿಯ ಕಾರಣದಿಂದ ಬಹುತೇಕ ಹೆಚ್ಚಿನ ಕಡೆಗಳಲ್ಲಿ ರಸ್ತೆ ಗುಂಡಿಗಳದ್ದೇ ಸಮಸ್ಯೆ. ಹದಗೆಟ್ಟ ರಸ್ತೆಗಳ ಕಾರಣದಿಂದ ಸಾವು, ನೋವುಗಳು ಸಂಭವಿಸಿದರೂ ಇದಕ್ಕೆ ಸಂಬಂಧಪಟ್ಟವರಂತೂ ರಸ್ತೆ ದುರಸ್ತಿ ಮಾಡುವ ಕಾರ್ಯಕ್ಕೆ ಕೈ ಕೂಡಾ ಹಾಕಲ್ಲ. ಇದರಿಂದ ರೋಸಿ ಹೋಗಿ ಜನರೇ ಈ ಗುಂಡಿಗಳಲ್ಲಿ ಗಿಡ ನೆಟ್ಟು, ಗುಂಡಿಗಳಲ್ಲಿ ಕುಳಿತು ಮೃತ್ಯುಕೂಪದಂತಿರುವ ರಸ್ತೆ ಗುಂಡಿಗಳನ್ನು ಸರಿ ಮಾಡುವಂತೆ ವಿನೂತನ ಮಾದರಿಯಲ್ಲಿ ಪ್ರತಿಭಟನೆಗಳನ್ನು ಮಾಡುತ್ತಿರುತ್ತಾರೆ. ಇಂತಹ ಘಟನೆಗಳನ್ನು ನೀವು ಕೂಡಾ ನೋಡಿರಬಹುದು. ಇದೀಗ ಅಂತಹದ್ದೇ ಘಟನೆಯೊಂದು ನಡೆದಿದ್ದು, ಬಲಿಗಾಗಿ ಕಾದಿರುವ ರಸ್ತೆಗುಂಡಿಯಲ್ಲಿ ಬಾಳೆ ಗಿಡ ನೆಡುವ ಮೂಲಕ ಜನರೇ ರಸ್ತೆ ಗುಂಡಿಯನ್ನು ಮುಚ್ಚಿ ಆಕ್ರೋಶವನ್ನು ಹೊರಹಾಕಿದ್ದಾರೆ. ಈ ಕುರಿತ ವಿಡಿಯೋವೊಂದು ಇದೀಗ ವೈರಲ್‌ ಆಗಿದೆ.

ಈ ಘಟನೆ ಪುತ್ತೂರಿನಲ್ಲಿ ನಡೆದಿದ್ದು, ಇಲ್ಲಿನ ವಿವೇಕಾನಂದ ಕಾಲೇಜು ಕ್ಯಾಂಪಸ್‌ ರಸ್ತೆಯಲ್ಲಿ, ರೋಡ್‌ ಮಧ್ಯದಲ್ಲಿ ಮೃತ್ಯು ಕೂಪದಂತಿದ್ದ ಹೊಂಡವನ್ನು ಸಂಬಂಧಪಟ್ಟ ಅದಿಕಾರಿಗಳು ಸರಿಪಡಿಸದೇ ಇದ್ದ ಕಾರಣ ಸ್ಥಳೀಯರು ಆ ಗುಂಡಿಯಲ್ಲಿ ಬಾಳೆ ಗಿಡ ನೆಟ್ಟು, ಗುಂಡಿಯನ್ನು ಸಂಪೂರ್ಣವಾಗಿ ಮುಚ್ಚಿ ಹಾಕಿ ಆಕ್ರೋಶವನ್ನು ವ್ಯಕ್ತಪಡಿಸಿದ್ದಾರೆ. ಬಳಿಕ ಜೆಸಿಬಿ ಮೂಲಕ ಬಾಳೆ ಗಿಡವನ್ನು ತೆರವು ಗೊಳಿಸಿ ಅಲ್ಲಿಂದಲ್ಲಿಗೆ ಗುಂಡಿ ಮುಚ್ಚುವ ಕಾರ್ಯ ನಡೆದಿದೆ.

ಇದನ್ನೂ ಓದಿ: ಸೌದಿ ಅರೇಬಿಯಾದ ʼರಿಯಾದ್‌ ಮೆಟ್ರೋʼ ಓಡಿಸಲಿದ್ದಾರೆ ಹೈದರಾಬಾದ್‌ ಮಹಿಳೆ

ಹರೀಶ್‌ ಬಂಗೇರ (Harish Bangera) ಎಂಬವರು ಈ ಕುರಿತ ವಿಡಿಯೋವನ್ನು ತಮ್ಮ ಫೇಸ್‌ಬುಕ್‌ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ವೈರಲ್‌ ಆಗುತ್ತಿರುವ ವಿಡಿಯೋದಲ್ಲಿ ರಸ್ತೆಗುಂಡಿಯಲ್ಲಿ ಬಾಳೆ ಗಿಡ ನೆಟ್ಟಿದ್ದನ್ನು ಜೆಸಿಬಿ ಸಹಾಯದಿಂದ ತೆರವು ಗೊಳಿಸುತ್ತಿರುವಂತಹ ದೃಶ್ಯವನ್ನು ಕಾಣಬಹುದು. ರಸ್ತೆ ಗುಂಡಿಯಲ್ಲಿ ಗಿಡ ನೆಟ್ಟ ಸ್ಥಳೀಯರ ಈ ಕಾರ್ಯಕ್ಕೆ ಭಾರೀ ಮೆಚ್ಚುಗೆ ಕೂಡಾ ವ್ಯಕ್ತವಾಗಿದೆ.

ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 6:23 pm, Tue, 12 November 24

ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ