AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅನಂತ್ ಅಂಬಾನಿ ನೀಡಿದ್ದ ಲವ್‌ ಲೆಟರನ್ನೇ ಪ್ರಿಂಟ್​​ ಮಾಡಿಸಿ ಗೌನ್‌ ಹೊಲಿಸಿದ ರಾಧಿಕಾ ಮರ್ಚೆಂಟ್

ಬಾಲ್ಯದ ಸ್ನೇಹಿತರಾಗಿದ್ದ ಅನಂತ್​ ಹಾಗೂ ರಾಧಿಕಾ ಹಲವು ವರ್ಷಗಳಿಂದ ಪರಸ್ಪರ ಪ್ರೀತಿಸುತ್ತಿದ್ದಾರೆ. ಇದೀಗ ರಾಧಿಕಾ ತಮ್ಮ 2ನೇ ಪ್ರೀ ವೆಡ್ಡಿಂಗ್ ಕಾರ್ಯಕ್ರಮದಲ್ಲಿ ಅನಂತ್ ಅಂಬಾನಿ ನೀಡಿದ್ದ ಲವ್‌ ಲೆಟರನ್ನೇ ಪ್ರಿಂಟ್​​ ಮಾಡಿಸಿದ ಗೌನ್‌ ತೊಟ್ಟು ಮಿಂಚಿದ್ದಾರೆ. ಸದ್ಯ ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್​​ ಆಗುತ್ತಿದೆ.

ಅನಂತ್ ಅಂಬಾನಿ ನೀಡಿದ್ದ ಲವ್‌ ಲೆಟರನ್ನೇ ಪ್ರಿಂಟ್​​ ಮಾಡಿಸಿ ಗೌನ್‌ ಹೊಲಿಸಿದ ರಾಧಿಕಾ ಮರ್ಚೆಂಟ್
ಅನಂತ್ ಅಂಬಾನಿ- ರಾಧಿಕಾ ಮರ್ಚೆಂಟ್
ಅಕ್ಷತಾ ವರ್ಕಾಡಿ
|

Updated on:Jun 14, 2024 | 4:08 PM

Share

ರಿಲಯನ್ಸ್‌ ಇಂಡಸ್ಟ್ರೀಸ್‌ ಮುಖ್ಯಸ್ಥ ಮುಖೇಶ್ ಅಂಬಾನಿ ಅವರ ಕಿರಿಯ ಪುತ್ರ ಅನಂತ್ ಅಂಬಾನಿ 2ನೇ ಪ್ರೀ ವೆಡ್ಡಿಂಗ್ ಸಂಭ್ರಮ ಇತ್ತೀಚಿಗಷ್ಟೇ ಅದ್ಧೂರಿಯಾಗಿ ನಡೆದಿತ್ತು. ಈ ಸಮಾರಂಭದಲ್ಲಿ ರಾಧಿಕಾ ಮರ್ಚೆಂಟ್ ಒಂದು ವಿಶೇಷವಾದ ಗೌನ್​​ ತೊಟ್ಟಿದ್ದು, ಸದ್ಯ ಸಾಮಾಜಿಕ ಜಾಲತಾಣದಲ್ಲಿ ಚರ್ಚೆಗೆ ಕಾರಣವಾಗಿದೆ. ಬಾಲ್ಯದ ಸ್ನೇಹಿತರಾಗಿದ್ದ ಅನಂತ್​ ಹಾಗೂ ರಾಧಿಕಾ ಹಲವು ವರ್ಷಗಳಿಂದ ಪರಸ್ಪರ ಪ್ರೀತಿಸುತ್ತಿದ್ದಾರೆ. ಅನಂತ್ ಅಂಬಾನಿ ಹಲವಾರು ಆರೋಗ್ಯ ಸಮಸ್ಯೆಗಳನ್ನು ಎದುರಿಸಿದ್ದರು, ಈ ಎಲ್ಲಾ ಸಂದರ್ಭದಲ್ಲಿ ರಾಧಿಕಾ ಜೊತೆಯಾಗಿದ್ದರು. ಇದೀಗ ರಾಧಿಕಾ ತಮ್ಮ 2ನೇ ಪ್ರೀ ವೆಡ್ಡಿಂಗ್ ಕಾರ್ಯಕ್ರಮದಲ್ಲಿ ಅನಂತ್ ಅಂಬಾನಿ ನೀಡಿದ್ದ ಲವ್‌ ಲೆಟರನ್ನೇ ಪ್ರಿಂಟ್​​ ಮಾಡಿಸಿದ ಗೌನ್‌ ತೊಟ್ಟು ಮಿಂಚಿದ್ದಾರೆ.

ಸದ್ಯ ಈ ಕ್ಯೂಟ್​ ಜೋಡಿಯ ಫೋಟೋ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ವೈರಲ್​ ಆಗುತ್ತಿದೆ. ವರದಿ ಪ್ರಕಾರ, ಅನಂತ್ ಮತ್ತು ರಾಧಿಕಾ ಬಾಲ್ಯದ ಸ್ನೇಹಿತರು. ಅವರ ಸಂಬಂಧವು 2018 ರಲ್ಲಿ ಬೆಳಕಿಗೆ ಬಂದಿತು.ಇಶಾ ಅಂಬಾನಿಯ ಮದುವೆಯಿಂದ ಹಿಡಿದು ಅಂಬಾನಿ ಕುಟುಂಬದ ಪ್ರತಿಯೊಂದು ವಿಶೇಷ ಸಮಾರಂಭಗಳಲ್ಲಿ ಭಾಗಿಯಾಗುತ್ತಿದ್ದ ರಾಧಿಕಾ ಮರ್ಚೆಂಟ್​​.

ಇದನ್ನೂ ಓದಿ: ಅಂಬಾನಿ ಕುಟುಂಬದ ಸದಸ್ಯರು ಕುಡಿಯುವ 1 ಲೀ. ಹಾಲಿನ ಬೆಲೆ 152 ರೂ. ;ಯಾಕಿಷ್ಟು ದುಬಾರಿ ಗೊತ್ತಾ?

2023ರ ಜನವರಿ 19ರಂದು ಅನಂತ್​​ ಅಂಬಾನಿ ಮತ್ತು ರಾಧಿಕ ಮರ್ಚೆಂಟ್​​ ಮುಂಬೈನಲ್ಲಿ ನಿಶ್ಚಿತಾರ್ಥ ಮಾಡಿಕೊಂಡಿದ್ದರು. ಈ ಜೋಡಿಯ ಅದ್ಧೂರಿ ವಿವಾಹ ಕಾರ್ಯಕ್ರಮವು ಜುಲೈ 12 ರಂದು ಮುಂಬೈನ ಬಾಂದ್ರಾ ಕುರ್ಲಾ ಕಾಂಪ್ಲೆಕ್ಸ್‌ನಲ್ಲಿರುವ (ಬಿಕೆಸಿ) ಜಿಯೋ ವರ್ಲ್ಡ್‌ ಕನ್ವೆನ್ಷನ್‌ ಸೆಂಟರ್‌ನಲ್ಲಿ ಹಿಂದೂ ಸಂಪ್ರದಾಯದಂತೆ ನಡೆಯಲಿದೆ ಎಂದು ವರದಿಯಾಗಿದೆ.

ಮತ್ತಷ್ಟು ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 4:03 pm, Fri, 14 June 24

Follow Us
ಬಿಜೆಪಿ ಕಚೇರಿ ಮುತ್ತಿಗೆಗೆ ಯುವ ಕಾಂಗ್ರೆಸ್​​ ಕಾರ್ಯಕರ್ತರ ಯತ್ನ
ಬಿಜೆಪಿ ಕಚೇರಿ ಮುತ್ತಿಗೆಗೆ ಯುವ ಕಾಂಗ್ರೆಸ್​​ ಕಾರ್ಯಕರ್ತರ ಯತ್ನ
‘ಕರಾವಳಿ’ ಪ್ರೀಮಿಯರ್ ಶೋ; ರಿಲೀಸ್​​ಗೂ ಮೊದಲೇ ಮೆಚ್ಚುಗೆ
‘ಕರಾವಳಿ’ ಪ್ರೀಮಿಯರ್ ಶೋ; ರಿಲೀಸ್​​ಗೂ ಮೊದಲೇ ಮೆಚ್ಚುಗೆ
ರೌಡಿಶೀಟರ್‌ಗಳಿಗೆ ಚಳಿ ಬಿಡಿಸಿದ ದಾವಣಗೆರೆ ಎಸ್‌ಪಿ ಡಾ. H T ಶೇಖರ್‌
ರೌಡಿಶೀಟರ್‌ಗಳಿಗೆ ಚಳಿ ಬಿಡಿಸಿದ ದಾವಣಗೆರೆ ಎಸ್‌ಪಿ ಡಾ. H T ಶೇಖರ್‌
ತುಮಕೂರಲ್ಲೇ ವಿಮಾನ ನಿಲ್ದಾಣ ನಿರ್ಮಾಣಕ್ಕೆ ಪರಮೇಶ್ವರ್​​ ಆಗ್ರಹ
ತುಮಕೂರಲ್ಲೇ ವಿಮಾನ ನಿಲ್ದಾಣ ನಿರ್ಮಾಣಕ್ಕೆ ಪರಮೇಶ್ವರ್​​ ಆಗ್ರಹ
'ನಾವು ಮಾಡಿದ್ದು ತಪ್ಪು' ಎಂದು ಕೈಮುಗಿದು ಬೇಡಿಕೊಂಡ ಆರೋಪಿಗಳು!
'ನಾವು ಮಾಡಿದ್ದು ತಪ್ಪು' ಎಂದು ಕೈಮುಗಿದು ಬೇಡಿಕೊಂಡ ಆರೋಪಿಗಳು!
ತುಮಕೂರು-ಬೆಂಗಳೂರು ಹೆದ್ದಾರಿಯಲ್ಲಿ ಲಾರಿ ಪಲ್ಟಿ, ಟ್ರಾಫಿಕ್ ಜಾಮ್
ತುಮಕೂರು-ಬೆಂಗಳೂರು ಹೆದ್ದಾರಿಯಲ್ಲಿ ಲಾರಿ ಪಲ್ಟಿ, ಟ್ರಾಫಿಕ್ ಜಾಮ್
ಸ್ವದೇಶಿ ನಿರ್ಮಿತ ಮಾಲ್ವಾಣ್ ಯುದ್ಧನೌಕೆ ಹೇಗಿದೆ? ವಿಶೇಷಗಳೇನು?
ಸ್ವದೇಶಿ ನಿರ್ಮಿತ ಮಾಲ್ವಾಣ್ ಯುದ್ಧನೌಕೆ ಹೇಗಿದೆ? ವಿಶೇಷಗಳೇನು?
ಮಗ ಆಯುಷ್ ಸಿನಿಮಾ ಬಗ್ಗೆ ದೊಡ್ಡ ಅಪ್​​ಡೇಟ್ ಕೊಟ್ಟ ಪ್ರಿಯಾಂಕಾ ಉಪೇಂದ್ರ
ಮಗ ಆಯುಷ್ ಸಿನಿಮಾ ಬಗ್ಗೆ ದೊಡ್ಡ ಅಪ್​​ಡೇಟ್ ಕೊಟ್ಟ ಪ್ರಿಯಾಂಕಾ ಉಪೇಂದ್ರ
ಜಂತರ್​ ಮಂತರ್​ನಲ್ಲಿ ಪೊಲೀಸರು ಹಾಗೂ ಪ್ರತಿಭಟನಾಕಾರರ ನಡುವೆ ಜಟಾಪಟಿ
ಜಂತರ್​ ಮಂತರ್​ನಲ್ಲಿ ಪೊಲೀಸರು ಹಾಗೂ ಪ್ರತಿಭಟನಾಕಾರರ ನಡುವೆ ಜಟಾಪಟಿ
ವೃಷಭ ರಾಶಿಯಲ್ಲಿ ಕುಜ ಸಂಚಾರ: ದ್ವಾದಶ ರಾಶಿಗಳ ದಿನ ಭವಿಷ್ಯ ಇಲ್ಲಿದೆ
ವೃಷಭ ರಾಶಿಯಲ್ಲಿ ಕುಜ ಸಂಚಾರ: ದ್ವಾದಶ ರಾಶಿಗಳ ದಿನ ಭವಿಷ್ಯ ಇಲ್ಲಿದೆ