AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅನಂತ್ ಅಂಬಾನಿ ನೀಡಿದ್ದ ಲವ್‌ ಲೆಟರನ್ನೇ ಪ್ರಿಂಟ್​​ ಮಾಡಿಸಿ ಗೌನ್‌ ಹೊಲಿಸಿದ ರಾಧಿಕಾ ಮರ್ಚೆಂಟ್

ಬಾಲ್ಯದ ಸ್ನೇಹಿತರಾಗಿದ್ದ ಅನಂತ್​ ಹಾಗೂ ರಾಧಿಕಾ ಹಲವು ವರ್ಷಗಳಿಂದ ಪರಸ್ಪರ ಪ್ರೀತಿಸುತ್ತಿದ್ದಾರೆ. ಇದೀಗ ರಾಧಿಕಾ ತಮ್ಮ 2ನೇ ಪ್ರೀ ವೆಡ್ಡಿಂಗ್ ಕಾರ್ಯಕ್ರಮದಲ್ಲಿ ಅನಂತ್ ಅಂಬಾನಿ ನೀಡಿದ್ದ ಲವ್‌ ಲೆಟರನ್ನೇ ಪ್ರಿಂಟ್​​ ಮಾಡಿಸಿದ ಗೌನ್‌ ತೊಟ್ಟು ಮಿಂಚಿದ್ದಾರೆ. ಸದ್ಯ ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್​​ ಆಗುತ್ತಿದೆ.

ಅನಂತ್ ಅಂಬಾನಿ ನೀಡಿದ್ದ ಲವ್‌ ಲೆಟರನ್ನೇ ಪ್ರಿಂಟ್​​ ಮಾಡಿಸಿ ಗೌನ್‌ ಹೊಲಿಸಿದ ರಾಧಿಕಾ ಮರ್ಚೆಂಟ್
ಅನಂತ್ ಅಂಬಾನಿ- ರಾಧಿಕಾ ಮರ್ಚೆಂಟ್
ಅಕ್ಷತಾ ವರ್ಕಾಡಿ
|

Updated on:Jun 14, 2024 | 4:08 PM

Share

ರಿಲಯನ್ಸ್‌ ಇಂಡಸ್ಟ್ರೀಸ್‌ ಮುಖ್ಯಸ್ಥ ಮುಖೇಶ್ ಅಂಬಾನಿ ಅವರ ಕಿರಿಯ ಪುತ್ರ ಅನಂತ್ ಅಂಬಾನಿ 2ನೇ ಪ್ರೀ ವೆಡ್ಡಿಂಗ್ ಸಂಭ್ರಮ ಇತ್ತೀಚಿಗಷ್ಟೇ ಅದ್ಧೂರಿಯಾಗಿ ನಡೆದಿತ್ತು. ಈ ಸಮಾರಂಭದಲ್ಲಿ ರಾಧಿಕಾ ಮರ್ಚೆಂಟ್ ಒಂದು ವಿಶೇಷವಾದ ಗೌನ್​​ ತೊಟ್ಟಿದ್ದು, ಸದ್ಯ ಸಾಮಾಜಿಕ ಜಾಲತಾಣದಲ್ಲಿ ಚರ್ಚೆಗೆ ಕಾರಣವಾಗಿದೆ. ಬಾಲ್ಯದ ಸ್ನೇಹಿತರಾಗಿದ್ದ ಅನಂತ್​ ಹಾಗೂ ರಾಧಿಕಾ ಹಲವು ವರ್ಷಗಳಿಂದ ಪರಸ್ಪರ ಪ್ರೀತಿಸುತ್ತಿದ್ದಾರೆ. ಅನಂತ್ ಅಂಬಾನಿ ಹಲವಾರು ಆರೋಗ್ಯ ಸಮಸ್ಯೆಗಳನ್ನು ಎದುರಿಸಿದ್ದರು, ಈ ಎಲ್ಲಾ ಸಂದರ್ಭದಲ್ಲಿ ರಾಧಿಕಾ ಜೊತೆಯಾಗಿದ್ದರು. ಇದೀಗ ರಾಧಿಕಾ ತಮ್ಮ 2ನೇ ಪ್ರೀ ವೆಡ್ಡಿಂಗ್ ಕಾರ್ಯಕ್ರಮದಲ್ಲಿ ಅನಂತ್ ಅಂಬಾನಿ ನೀಡಿದ್ದ ಲವ್‌ ಲೆಟರನ್ನೇ ಪ್ರಿಂಟ್​​ ಮಾಡಿಸಿದ ಗೌನ್‌ ತೊಟ್ಟು ಮಿಂಚಿದ್ದಾರೆ.

ಸದ್ಯ ಈ ಕ್ಯೂಟ್​ ಜೋಡಿಯ ಫೋಟೋ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ವೈರಲ್​ ಆಗುತ್ತಿದೆ. ವರದಿ ಪ್ರಕಾರ, ಅನಂತ್ ಮತ್ತು ರಾಧಿಕಾ ಬಾಲ್ಯದ ಸ್ನೇಹಿತರು. ಅವರ ಸಂಬಂಧವು 2018 ರಲ್ಲಿ ಬೆಳಕಿಗೆ ಬಂದಿತು.ಇಶಾ ಅಂಬಾನಿಯ ಮದುವೆಯಿಂದ ಹಿಡಿದು ಅಂಬಾನಿ ಕುಟುಂಬದ ಪ್ರತಿಯೊಂದು ವಿಶೇಷ ಸಮಾರಂಭಗಳಲ್ಲಿ ಭಾಗಿಯಾಗುತ್ತಿದ್ದ ರಾಧಿಕಾ ಮರ್ಚೆಂಟ್​​.

ಇದನ್ನೂ ಓದಿ: ಅಂಬಾನಿ ಕುಟುಂಬದ ಸದಸ್ಯರು ಕುಡಿಯುವ 1 ಲೀ. ಹಾಲಿನ ಬೆಲೆ 152 ರೂ. ;ಯಾಕಿಷ್ಟು ದುಬಾರಿ ಗೊತ್ತಾ?

2023ರ ಜನವರಿ 19ರಂದು ಅನಂತ್​​ ಅಂಬಾನಿ ಮತ್ತು ರಾಧಿಕ ಮರ್ಚೆಂಟ್​​ ಮುಂಬೈನಲ್ಲಿ ನಿಶ್ಚಿತಾರ್ಥ ಮಾಡಿಕೊಂಡಿದ್ದರು. ಈ ಜೋಡಿಯ ಅದ್ಧೂರಿ ವಿವಾಹ ಕಾರ್ಯಕ್ರಮವು ಜುಲೈ 12 ರಂದು ಮುಂಬೈನ ಬಾಂದ್ರಾ ಕುರ್ಲಾ ಕಾಂಪ್ಲೆಕ್ಸ್‌ನಲ್ಲಿರುವ (ಬಿಕೆಸಿ) ಜಿಯೋ ವರ್ಲ್ಡ್‌ ಕನ್ವೆನ್ಷನ್‌ ಸೆಂಟರ್‌ನಲ್ಲಿ ಹಿಂದೂ ಸಂಪ್ರದಾಯದಂತೆ ನಡೆಯಲಿದೆ ಎಂದು ವರದಿಯಾಗಿದೆ.

ಮತ್ತಷ್ಟು ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 4:03 pm, Fri, 14 June 24

Follow Us
ತಾತನಾಗಿ ಬಡ್ತಿ ಪಡೆದ ಡಿಕೆ ಶಿವಕುಮಾರ್ ಫಸ್ಟ್ ರಿಯಾಕ್ಷನ್ ಹೇಗಿತ್ತು ನೋಡಿ
ತಾತನಾಗಿ ಬಡ್ತಿ ಪಡೆದ ಡಿಕೆ ಶಿವಕುಮಾರ್ ಫಸ್ಟ್ ರಿಯಾಕ್ಷನ್ ಹೇಗಿತ್ತು ನೋಡಿ
ಜಮ್ಮುವಿನ ಬಂಟ್ಲಾಬ್‌ನಲ್ಲಿ ಭೀಕರ ಅಪಘಾತ; ಸೇತುವೆ ಕುಸಿದು 7 ಜನ ಸಾವು
ಜಮ್ಮುವಿನ ಬಂಟ್ಲಾಬ್‌ನಲ್ಲಿ ಭೀಕರ ಅಪಘಾತ; ಸೇತುವೆ ಕುಸಿದು 7 ಜನ ಸಾವು
ದಂಡ ಕಟ್ಟಿದ ಬಳಿಕ ಫಾರ್ಮ್​ಗೆ ಮರಳಿದ ರಿಯಾನ್ ಪರಾಗ್
ದಂಡ ಕಟ್ಟಿದ ಬಳಿಕ ಫಾರ್ಮ್​ಗೆ ಮರಳಿದ ರಿಯಾನ್ ಪರಾಗ್
ಇರಾನ್​ ಪರಿಸ್ಥಿತಿ ಹೇಗಿದೆ?ಯುದ್ಧದ ನೆಲದಿಂದ ವರದಿ ಮಾಡಿದ ಟಿವಿ9 ರಿಪೋರ್ಟರ್
ಇರಾನ್​ ಪರಿಸ್ಥಿತಿ ಹೇಗಿದೆ?ಯುದ್ಧದ ನೆಲದಿಂದ ವರದಿ ಮಾಡಿದ ಟಿವಿ9 ರಿಪೋರ್ಟರ್
ಡೆಲ್ಲಿ ವಿರುದ್ಧ ಐದೇ ಎಸೆತಗಳಿಗೆ ಸುಸ್ತಾದ ಜೈಸ್ವಾಲ್, ವೈಭವ್
ಡೆಲ್ಲಿ ವಿರುದ್ಧ ಐದೇ ಎಸೆತಗಳಿಗೆ ಸುಸ್ತಾದ ಜೈಸ್ವಾಲ್, ವೈಭವ್
RV ರಸ್ತೆ-ಸಿಲ್ಕ್ ಬೋರ್ಡ್ ಡಬಲ್‌ ಡೆಕ್ಕರ್‌ ಫ್ಲೈಓವರ್​​​ಗೆ ಚಾಲನೆ
RV ರಸ್ತೆ-ಸಿಲ್ಕ್ ಬೋರ್ಡ್ ಡಬಲ್‌ ಡೆಕ್ಕರ್‌ ಫ್ಲೈಓವರ್​​​ಗೆ ಚಾಲನೆ
ಅವನ ಮರ್ಯಾದೆ ತೆಗೆಯದೇ ಬಿಡಲ್ಲ: ನಿರ್ಮಾಪಕನ ವಿರುದ್ಧ ಕಿಡಿಕಾರಿದ ಹಂಸಾ
ಅವನ ಮರ್ಯಾದೆ ತೆಗೆಯದೇ ಬಿಡಲ್ಲ: ನಿರ್ಮಾಪಕನ ವಿರುದ್ಧ ಕಿಡಿಕಾರಿದ ಹಂಸಾ
ಇರಾನ್​ ಯುದ್ಧಭೂಮಿಯಲ್ಲಿ ಟಿವಿ9; ಟೆಹ್ರಾನ್​ನ ನೈಜ ಚಿತ್ರಣ ಇಲ್ಲಿದೆ
ಇರಾನ್​ ಯುದ್ಧಭೂಮಿಯಲ್ಲಿ ಟಿವಿ9; ಟೆಹ್ರಾನ್​ನ ನೈಜ ಚಿತ್ರಣ ಇಲ್ಲಿದೆ
ಹಿಡಕಲ್ ಜಲಾಶಯದಲ್ಲಿ ಮುಳುಗಿ ಹೋಗಿದ್ದ ದೇಗುಲ ಗೋಚರ
ಹಿಡಕಲ್ ಜಲಾಶಯದಲ್ಲಿ ಮುಳುಗಿ ಹೋಗಿದ್ದ ದೇಗುಲ ಗೋಚರ
ಲಂಚದ ಬೇಡಿಕೆಯಿಟ್ಟ ಟಿಕೆಟ್​ ಇನ್​ಸ್ಪೆಕ್ಟರ್ ಮೈಚಳಿ ಬಿಡಿಸಿದ ಪ್ರಯಾಣಿಕ
ಲಂಚದ ಬೇಡಿಕೆಯಿಟ್ಟ ಟಿಕೆಟ್​ ಇನ್​ಸ್ಪೆಕ್ಟರ್ ಮೈಚಳಿ ಬಿಡಿಸಿದ ಪ್ರಯಾಣಿಕ