AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಬ್ಬಬ್ಬಾ! ದೆಹಲಿಯಲ್ಲಿ ಚಿಂದಿ ಆಯುವವರ ದಿನದ ಆದಾಯ 1.5 ಕೋಟಿ ರೂ. 

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಚಿಂದಿ ಆಯುವವರು ಪ್ರತಿನಿತ್ಯ ಪ್ಲಾಸ್ಟಿಕ್, ಕಬ್ಬಿಣ ಇತ್ಯಾದಿ ತ್ಯಾಜ್ಯಗಳನ್ನು ಮಾರಾಟ ಮಾಡುವ ಮೂಲಕ ದಿನಕ್ಕೆ  1.5 ಕೋಟಿ ರೂಪಾಯಿ ಆದಾಯ  ಗಳಿಸುತ್ತಾರೆ ಎಂದು  ಅಡ್ಮಿನಿಸ್ಟ್ರೇಟಿವ್ ಸ್ಟಾಫ್ ಕಾಲೇಜ್ ಆಫ್ ಇಂಡಿಯಾ (ASCI)  ನಡೆಸಿದ ವರದಿಯು  ಬಹಿರಂಗ ಪಡಿಸಿದೆ. 

ಅಬ್ಬಬ್ಬಾ! ದೆಹಲಿಯಲ್ಲಿ ಚಿಂದಿ ಆಯುವವರ ದಿನದ ಆದಾಯ 1.5 ಕೋಟಿ ರೂ. 
ಸಾಂದರ್ಭಿಕ ಚಿತ್ರ
ಮಾಲಾಶ್ರೀ ಅಂಚನ್​
| Edited By: |

Updated on: Feb 13, 2024 | 5:08 PM

Share

ಚಿಂದಿ ಆಯುವವರು ತ್ಯಾಜ್ಯ ವಸ್ತುಗಳನ್ನು ಸಂಗ್ರಹಿಸಿ,   ಅವುಗಳನ್ನು ಮಾರಾಟ ಮಾಡಿ ಅದರಿಂದ ಬರುವ ಅಲ್ಪಸ್ವಲ್ಪ ಆದಾಯದಿಂದ ಜೀವನ ಸಾಗಿಸುತ್ತಾರೆ. ಆದರೆ ದೆಹಲಿಯಲ್ಲಿ ಚಿಂದಿ ಆಯುವವರು ದಿನದಲ್ಲಿ 1.5 ಕೋಟಿ ರೂ. ಆದಾಯ ಗಳಿಸುತ್ತಾರಂತೆ.  ಹೌದು ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಚಿಂದಿ ಆಯುವವರು ದಿನಕ್ಕೆ ಬರೋಬ್ಬರಿ 1.5 ಕೋಟಿ ರೂಪಾಯಿ ಗಳಿಸುತ್ತಾರೆ ಎಂಬ ಆಘಾತಕಾರಿ ಮಾಹಿತಿಯನ್ನು ವರದಿಯೊಂದು ಬಹಿರಂಗ ಪಡಿಸಿದೆ. ಅಡ್ಮಿನಿಸ್ಟ್ರೇಟಿವ್ ಸ್ಟಾಫ್ ಕಾಲೇಜ್ ಆಫ್ ಇಂಡಿಯಾ (ASCI)  ನಡೆಸಿದ ಲೆಕ್ಕ ಪರಿಶೋಧನೆಯು ಈ ವರದಿಯನ್ನು ಬಹಿರಂಗ ಪಡಿಸಿದೆ.

ದೆಹಲಿಯಲ್ಲಿ ಪ್ರತಿದಿನ 11 ಸಾವಿರದ 30 ಮೆಟ್ರಿಕ್ ಟನ್  ಕಸ ಸಂಗ್ರಹವಾಗುತ್ತದೆ:

ಲೆಕ್ಕ ಪರಿಶೋಧನೆಯಲ್ಲಿ ಬಹಿರಂಗವಾದ ಮಾಹಿತಿಯ ಪ್ರಕಾರ ದೆಹಲಿಯಲ್ಲಿ ಪ್ರತಿದಿನ  11 ಸಾವಿರದ 30 ಮೆಟ್ರಿಕ್ ಟನ್ ಕಸ ಸಂಗ್ರಹವಾಗುತ್ತದೆ. ಇದರಲ್ಲಿ ಶೇ. 10 ರಷ್ಟು ಅಂದರೆ 1.10 ಲಕ್ಷ ಕಿಲೋ ತ್ಯಾಜ್ಯವು ಪ್ಲಾಸ್ಟಿಕ್, ಇ-ತ್ಯಾಜ್ಯ, ರಬ್ಬರ್, ಕಾಗದದ ರಟ್ಟು ಮತ್ತು ಕಬ್ಬಿಣದ ರೂಪದಲ್ಲಿದೆ. ಮತ್ತು ಇದರಲ್ಲಿ ಪ್ಲಾಸ್ಟಿಕ್ ತ್ಯಾಜ್ಯವನ್ನು ಕೆ.ಜಿಗೆ 12 ರೂ.ಗೆ ಮಾರಾಟ ಮಾಡಲಾಗುತ್ತದೆ. ಈ ಮೂಲಕ ದೆಹಲಿಯ ಚಿಂದಿ ಆಯುವವರು ಒಟ್ಟಾರೆ ಪ್ಲಾಸ್ಟಿಕ್ ತ್ಯಾಜ್ಯಗಳನ್ನು ಮಾರಾಟ ಮಾಡುವ ಮೂಲಕವೇ  ದಿನದಲ್ಲಿ 1.32 ಕೋಟಿ ರೂ. ಗಳಿಸುತ್ತಿದ್ದಾರೆ. ಇದರ ಹೊರತಾಗಿ ಕಬ್ಬಿಣ, ಪೇಪರ್ ತ್ಯಾಜ್ಯಗಳನ್ನು ಮಾರಾಟ ಮಾಡುವ ಮೂಲಕ ಬರೋಬ್ಬರಿ 5 ಕೋಟಿ ರೂ. ಆದಾಯ ಗಳಿಸುತ್ತಾರೆ ಎಂಬ ವಿಚಾರ  ASCI  ಆಡಿಟ್ ನಿಂದ ಬಹಿರಂಗವಾಗಿದೆ.

ಇದನ್ನೂ ಓದಿ: ನಡು ರಸ್ತೆಯಲ್ಲಿಯೇ ಮೂತ್ರ ವಿಸರ್ಜನೆ ಮಾಡಿದ ಆಸಾಮಿ, ಇದಕ್ಕೆ ಟ್ರಾಫಿಕ್ ಕಾರಣ

ಹೀಗೆ  ಇಲ್ಲಿನ ಚಿಂದಿ ಆಯುವ ಪ್ರತಿಯೊಬ್ಬ  ವ್ಯಕ್ತಿ ದಿನಕ್ಕೆ 14,000 ರೂ. ಗಳಿಗಿಂತಲೂ ಹೆಚ್ಚು ಹಣ ಸಂಪಾದನೆ ಮಾಡುತ್ತಿದ್ದಾರೆ ಮತ್ತು ಅವರ ಗುತ್ತಿಗೆದಾರರು ತಿಂಗಳಿಗೆ 25,000 ರೂ. ಆದಾಯ ಗಳಿಸುತ್ತಾರೆ ಎಂದು ವರದಿ ತಿಳಿಸಿದೆ.

ಇನ್ನಷ್ಟು ವೈರಲ್ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Follow Us
Malashree anchan
Malashree anchan

ಮಾಲಾಶ್ರೀ ಅಂಚನ್- ಮೂಲತಃ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದವಳು. ಸಮೂಹ ಸಂವಹನ ಮತ್ತು ಪತ್ರಿಕೋದ್ಯಮದಲ್ಲಿ (MCJ) ಸ್ನಾತಕೋತ್ತರ ಪದವಿಧರೆ. ಪ್ರಾರಂಭದಿಂದಲೂ ಬರವಣಿಗೆಯಲ್ಲಿ ಹೆಚ್ಚಿನ ಒಲವನ್ನು ಹೊಂದಿದ್ದು, ಪತ್ರಿಕಾ ರಂಗದಲ್ಲಿ 2 ವರ್ಷಗಳ ಅನುಭವವಿದೆ. ಜೀವನಶೈಲಿ, ವೈರಲ್ ಸುದ್ದಿಗಳನ್ನು ಬರೆಯುವುದರಲ್ಲಿ ಆಸಕ್ತಿಯನ್ನು ಹೊಂದಿದ್ದು, ಓದುಗರಿಗೆ ಉತ್ತಮ ಲೇಖನಗಳನ್ನು ಒದಗಿಸುತ್ತಿದ್ದೇನೆ.

Read More
CLP Meeting: ಡಿಕೆಶಿ ಹೆಸರು ಘೋಷಿಸಿದ ಸಿದ್ರಾಮಯ್ಯ Exclusive ವಿಡಿಯೋ
CLP Meeting: ಡಿಕೆಶಿ ಹೆಸರು ಘೋಷಿಸಿದ ಸಿದ್ರಾಮಯ್ಯ Exclusive ವಿಡಿಯೋ
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!