AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಟ್ರಾಫಿಕ್​ನಿಂದ ಬೇಸತ್ತ ರಾಹುಲ್​ ದ್ರಾವಿಡ್​; ಬ್ಯಾಟ್​ನಿಂದ ಎದುರು ಬದಿ ಕಾರಿನ ಗಾಜು ಪುಡಿಪುಡಿ; ವಿಡಿಯೋ ವೈರಲ್​

Rahul Dravid Viral Video: ರಾಹುಲ್​ ದ್ರಾವಿಡ್​ ಇಷ್ಟೆಲ್ಲಾ ಸಿಟ್ಟಾಗಲು ಕಾರಣವೇನು? ಏಕೆ ಅವರು ಈ ರೀತಿ ಮಾಡಿದರು ಎಂದು ನೀವು ಕೇಳಬಹುದು. ಅದಕ್ಕೂ ಉತ್ತರವಿದೆ.

ಟ್ರಾಫಿಕ್​ನಿಂದ ಬೇಸತ್ತ ರಾಹುಲ್​ ದ್ರಾವಿಡ್​; ಬ್ಯಾಟ್​ನಿಂದ ಎದುರು ಬದಿ ಕಾರಿನ ಗಾಜು ಪುಡಿಪುಡಿ; ವಿಡಿಯೋ ವೈರಲ್​
ವೈರಲ್​ ಆದ ವಿಡಿಯೋ
ರಾಜೇಶ್ ದುಗ್ಗುಮನೆ
|

Updated on: Apr 09, 2021 | 6:10 PM

Share

ರಾಹುಲ್​ ದ್ರಾವಿಡ್​ ಎಂದಾಕ್ಷಣ ನೆನಪಿಗೆ ಬರೋದು ಅವರ ಶಾಂತ ಸ್ವಭಾವದ ಮುಖ ಹಾಗೂ ಸೌಮ್ಯ ಮಾತುಗಳು. ಮೈದಾನದಲ್ಲಾಗಲೀ, ಮೈದಾನದ ಹೊರಗಾಗಲೀ ರಾಹುಲ್​ ದ್ರಾವಿಡ್​ ಸಿಟ್ಟಾಗಿದ್ದು ತುಂಬಾನೇ ಕಡಿಮೆ. ಆದರೆ, ದ್ರಾವಿಡ್​ ಈಗ ಬೆಂಗಳೂರು ಟ್ರಾಫಿಕ್​ ಬಗ್ಗೆ ತುಂಬಾನೇ ಸಿಟ್ಟಾಗಿದ್ದಾರೆ. ಅಷ್ಟೇ ಅಲ್ಲ, ಟ್ರಾಫಿಕ್​ನಲ್ಲಿ ಸಿಲುಕಿ ಸಿಟ್ಟಿಗೆದ್ದ ಅವರು ಎದುರು ನಿಂತಿದ್ದ ಕಾರಿನ ಕನ್ನಡಿಯನ್ನೇ ಒಡೆದು ಹಾಕಿದ್ದಾರೆ. ಸದ್ಯ ಈ ವಿಡಿಯೋ ಸಾಕಷ್ಟು ವೈರಲ್​ ಆಗಿದೆ. ಅರೆ, ರಾಹುಲ್​ ದ್ರಾವಿಡ್​ ಇಷ್ಟೆಲ್ಲಾ ಸಿಟ್ಟಾಗಲು ಕಾರಣವೇನು? ಏಕೆ ಅವರು ಈ ರೀತಿ ಮಾಡಿದರು ಎಂದು ನೀವು ಕೇಳಬಹುದು. ಅದಕ್ಕೂ ಉತ್ತರವಿದೆ. ಇದು ಜಾಹೀರಾತಿಗಾಗಿ ಮಾಡಿದ ವಿಡಿಯೋ. ಜಾಹೀರಾತಿನ ಕ್ರಿಯೇಟಿವಿಟಿ ನೋಡಿ ಎಲ್ಲರೂ ನಿಬ್ಬೆರಗಾಗಿದ್ದಾರೆ.

ಕ್ರೆಡಿಟ್​ ಕಾರ್ಡ್​ ಬಿಲ್​ ಪೇ ಮಾಡುವ ಕ್ರೆಡ್​ ಕಂಪೆನಿ ಕಳೆದ ಐಪಿಎಲ್​ ಸೀಸನ್​ನಲ್ಲಿ ಸಾಕಷ್ಟು ಆಸಕ್ತಿದಾಯಕ ಜಾಹೀರಾತುಗಳನ್ನು ಪರಿಚಯಿಸಿತ್ತು. ಆ್ಯಡ್​ಗಳು ಪ್ರಸಾರವಾದರೆ ಚಾನೆಲ್​ ಬದಲಿಸುವವರು ಕೂಡ ಒಂದು ಕ್ಷಣ ಈ ಜಾಹೀರಾತುಗಳನ್ನು ಕಣ್ತುಂಬಿಕೊಂಡ ಉದಾಹರಣೆ ಇದೆ. ಅದೇ ರೀತಿ, ಈ ಬಾರಿಯ ಐಪಿಎಲ್​ ಸೀಸನ್​ಗೂ ಮೊದಲು ಹೊಸ ವಿಧವಾದ ಆ್ಯಡ್​ನೊಂದಿಗೆ ಕ್ರೆಡ್​ ಬಂದಿದೆ.

ಜಾಹೀರಾತಿನ ವಿಡಿಯೋವನ್ನು ವಿರಾಟ್ ಕೊಹ್ಲಿ ತಮ್ಮ ಸಾಮಾಜಿಕ ಜಾಲತಾಣದಲ್ಲಿ ಈಗ ಹಂಚಿಕೊಂಡಿದ್ದಾರೆ. ಜಾಹೀರಾತಿನಲ್ಲಿ ದ್ರಾವಿಡ್​ ಟ್ರಾಫಿಕ್​ನಲ್ಲಿ ಸಿಲುಕಿರುತ್ತಾರೆ. ಅಷ್ಟೇ ಅಲ್ಲ, ಒತ್ತಡಕ್ಕೆ ಒಳಗಾಗಿ ಅಕ್ಕ ಪಕ್ಕದಲ್ಲಿ ನಿಂತಿರುವ ಕಾರು ಚಾಲಕರ ಮೇಲೆ ಸಿಟ್ಟಿಗೆ ಒಳಗಾಗಿದ್ದಾರೆ. ಎದುರು ನಿಂತಿರುವ ಕಾರು ಗಾಜನ್ನು ಬ್ಯಾಟ್​​ನಿಂದ ಒಡೆದು ಹಾಕಿದ್ದಾರೆ. ರಾಹುಲ್​ ಅವರ ಈ ರೀತಿಯ ಮುಖವನ್ನು ನಾನು ಎಂದಿಗೂ ನೋಡಿಲ್ಲ ಎಂದು ವಿರಾಟ್​ ಕೊಹ್ಲಿ ಕ್ಯಾಪ್ಶನ್​ ನೀಡಿದ್ದಾರೆ. ಈ ವಿಡಿಯೋ ನೋಡಿದ ಸಾಕಷ್ಟು ಮಂದಿ ಹೊಟ್ಟೆ ಹುಣ್ಣಾಗುವಂತೆ ನಕ್ಕಿದ್ದಾರೆ. ಸದ್ಯ, ಈ ವಿಡಿಯೋ ಸಾಕಷ್ಟು ವೈರಲ್​ ಆಗಿದೆ.

ಇದನ್ನೂ ಓದಿ: Virat Kohli IPL 2021 RCB Team Player: ಆರ್​ಸಿಬಿ ರನ್ ಮಷಿನ್ ವಿರಾಟ್​ ಕೊಹ್ಲಿ ಈ ಬಾರಿಯಾದರೂ ತಂಡವನ್ನು ಚಾಂಪಿಯನ್ ಮಾಡ್ತಾರಾ?

Follow Us
ಕಾಂಗ್ರೆಸ್ ಟಿಕೆಟ್​ ಅಸಮಾಧಾನ: ಬಿಜೆಪಿ ಸೇರಿದ 20ಕ್ಕೂ ಹೆಚ್ಚು ಮುಸ್ಲಿಮರು!
ಕಾಂಗ್ರೆಸ್ ಟಿಕೆಟ್​ ಅಸಮಾಧಾನ: ಬಿಜೆಪಿ ಸೇರಿದ 20ಕ್ಕೂ ಹೆಚ್ಚು ಮುಸ್ಲಿಮರು!
ಬಡವರಿಗೆ ‘ಸರಿಗಮಪ’ದಲ್ಲಿ ಮಣೆ ಎಂದವರಿಗೆ ಪ್ರೋಮೋದಲ್ಲೇ ಖಡಕ್ ಉತ್ತರ
ಬಡವರಿಗೆ ‘ಸರಿಗಮಪ’ದಲ್ಲಿ ಮಣೆ ಎಂದವರಿಗೆ ಪ್ರೋಮೋದಲ್ಲೇ ಖಡಕ್ ಉತ್ತರ
ತುಳಸಿ ಕಟ್ಟೆ ಪ್ರದಕ್ಷಿಣೆ ಹಾಗೂ ಇದರ ಮಹತ್ವವೇನು ಗೊತ್ತಾ?
ತುಳಸಿ ಕಟ್ಟೆ ಪ್ರದಕ್ಷಿಣೆ ಹಾಗೂ ಇದರ ಮಹತ್ವವೇನು ಗೊತ್ತಾ?
ಇಂದು ಈ ರಾಶಿಯ ಪತಿ-ಪತ್ನಿಯರಲ್ಲಿ ಭಿನ್ನಾಭಿಪ್ರಾಯ!
ಇಂದು ಈ ರಾಶಿಯ ಪತಿ-ಪತ್ನಿಯರಲ್ಲಿ ಭಿನ್ನಾಭಿಪ್ರಾಯ!
ಮೋದಿ ನೇತೃತ್ವದಲ್ಲಿ ಮಹತ್ವದ ಸಭೆ:ನಾಗರಿಕರ ಹಿತರಕ್ಷಣೆ ಮೊದಲ ಆದ್ಯತೆ
ಮೋದಿ ನೇತೃತ್ವದಲ್ಲಿ ಮಹತ್ವದ ಸಭೆ:ನಾಗರಿಕರ ಹಿತರಕ್ಷಣೆ ಮೊದಲ ಆದ್ಯತೆ
ದಾವಣಗೆರೆ ದಕ್ಷಿಣ ಉಪಚುನಾವಣೆ: ಆರಂಭದಲ್ಲೇ ಕಾಂಗ್ರೆಸ್​​​ಗೆ ಮರ್ಮಾಘಾತ
ದಾವಣಗೆರೆ ದಕ್ಷಿಣ ಉಪಚುನಾವಣೆ: ಆರಂಭದಲ್ಲೇ ಕಾಂಗ್ರೆಸ್​​​ಗೆ ಮರ್ಮಾಘಾತ
ಹಬ್ಬಕ್ಕೆ ಹೋಗಿದ್ದ ಜನ ಬೆಂಗಳೂರಿಗೆ ವಾಪಸ್: ನೆಲಮಂಗಲ ಬಳಿ ಫುಲ್ ಟ್ರಾಫಿಕ್
ಹಬ್ಬಕ್ಕೆ ಹೋಗಿದ್ದ ಜನ ಬೆಂಗಳೂರಿಗೆ ವಾಪಸ್: ನೆಲಮಂಗಲ ಬಳಿ ಫುಲ್ ಟ್ರಾಫಿಕ್
3ನೇ ವ್ಯಕ್ತಿಯ ಹಸ್ತಕ್ಷೇಪದ ಬಗ್ಗೆ ಉಮೇಶ್‌ ಮೇಟಿ ತಂಗಿ ಮಹಾದೇವಿ ಹೇಳಿದ್ದೇನು
3ನೇ ವ್ಯಕ್ತಿಯ ಹಸ್ತಕ್ಷೇಪದ ಬಗ್ಗೆ ಉಮೇಶ್‌ ಮೇಟಿ ತಂಗಿ ಮಹಾದೇವಿ ಹೇಳಿದ್ದೇನು
ಸಲ್ಮಾನ್ ಖಾನ್ ಮನೆ ಎದುರು ಅಭಿಮಾನಿಗಳ ದಂಡು: ಶುಭ ಕೋರಿದ ಸಲೀಂ ಖಾನ್
ಸಲ್ಮಾನ್ ಖಾನ್ ಮನೆ ಎದುರು ಅಭಿಮಾನಿಗಳ ದಂಡು: ಶುಭ ಕೋರಿದ ಸಲೀಂ ಖಾನ್
ದಾವಣಗೆರೆ ಬೈ ಎಲೆಕ್ಷನ್: ಕಾಂಗ್ರೆಸ್​​ ವಿರುದ್ಧವೇ ತೊಡೆತಟ್ಟಿದ ಪೈಲ್ವಾನ್
ದಾವಣಗೆರೆ ಬೈ ಎಲೆಕ್ಷನ್: ಕಾಂಗ್ರೆಸ್​​ ವಿರುದ್ಧವೇ ತೊಡೆತಟ್ಟಿದ ಪೈಲ್ವಾನ್