Sign In

By signing in or creating an account, you agree with Associated Broadcasting Company's Terms & Conditions and Privacy Policy.

ಟ್ರಾಫಿಕ್​ನಿಂದ ಬೇಸತ್ತ ರಾಹುಲ್​ ದ್ರಾವಿಡ್​; ಬ್ಯಾಟ್​ನಿಂದ ಎದುರು ಬದಿ ಕಾರಿನ ಗಾಜು ಪುಡಿಪುಡಿ; ವಿಡಿಯೋ ವೈರಲ್​

Rahul Dravid Viral Video: ರಾಹುಲ್​ ದ್ರಾವಿಡ್​ ಇಷ್ಟೆಲ್ಲಾ ಸಿಟ್ಟಾಗಲು ಕಾರಣವೇನು? ಏಕೆ ಅವರು ಈ ರೀತಿ ಮಾಡಿದರು ಎಂದು ನೀವು ಕೇಳಬಹುದು. ಅದಕ್ಕೂ ಉತ್ತರವಿದೆ.

ಟ್ರಾಫಿಕ್​ನಿಂದ ಬೇಸತ್ತ ರಾಹುಲ್​ ದ್ರಾವಿಡ್​; ಬ್ಯಾಟ್​ನಿಂದ ಎದುರು ಬದಿ ಕಾರಿನ ಗಾಜು ಪುಡಿಪುಡಿ; ವಿಡಿಯೋ ವೈರಲ್​
ವೈರಲ್​ ಆದ ವಿಡಿಯೋ
Follow us
ರಾಜೇಶ್ ದುಗ್ಗುಮನೆ
|

Updated on: Apr 09, 2021 | 6:10 PM

ರಾಹುಲ್​ ದ್ರಾವಿಡ್​ ಎಂದಾಕ್ಷಣ ನೆನಪಿಗೆ ಬರೋದು ಅವರ ಶಾಂತ ಸ್ವಭಾವದ ಮುಖ ಹಾಗೂ ಸೌಮ್ಯ ಮಾತುಗಳು. ಮೈದಾನದಲ್ಲಾಗಲೀ, ಮೈದಾನದ ಹೊರಗಾಗಲೀ ರಾಹುಲ್​ ದ್ರಾವಿಡ್​ ಸಿಟ್ಟಾಗಿದ್ದು ತುಂಬಾನೇ ಕಡಿಮೆ. ಆದರೆ, ದ್ರಾವಿಡ್​ ಈಗ ಬೆಂಗಳೂರು ಟ್ರಾಫಿಕ್​ ಬಗ್ಗೆ ತುಂಬಾನೇ ಸಿಟ್ಟಾಗಿದ್ದಾರೆ. ಅಷ್ಟೇ ಅಲ್ಲ, ಟ್ರಾಫಿಕ್​ನಲ್ಲಿ ಸಿಲುಕಿ ಸಿಟ್ಟಿಗೆದ್ದ ಅವರು ಎದುರು ನಿಂತಿದ್ದ ಕಾರಿನ ಕನ್ನಡಿಯನ್ನೇ ಒಡೆದು ಹಾಕಿದ್ದಾರೆ. ಸದ್ಯ ಈ ವಿಡಿಯೋ ಸಾಕಷ್ಟು ವೈರಲ್​ ಆಗಿದೆ. ಅರೆ, ರಾಹುಲ್​ ದ್ರಾವಿಡ್​ ಇಷ್ಟೆಲ್ಲಾ ಸಿಟ್ಟಾಗಲು ಕಾರಣವೇನು? ಏಕೆ ಅವರು ಈ ರೀತಿ ಮಾಡಿದರು ಎಂದು ನೀವು ಕೇಳಬಹುದು. ಅದಕ್ಕೂ ಉತ್ತರವಿದೆ. ಇದು ಜಾಹೀರಾತಿಗಾಗಿ ಮಾಡಿದ ವಿಡಿಯೋ. ಜಾಹೀರಾತಿನ ಕ್ರಿಯೇಟಿವಿಟಿ ನೋಡಿ ಎಲ್ಲರೂ ನಿಬ್ಬೆರಗಾಗಿದ್ದಾರೆ.

ಕ್ರೆಡಿಟ್​ ಕಾರ್ಡ್​ ಬಿಲ್​ ಪೇ ಮಾಡುವ ಕ್ರೆಡ್​ ಕಂಪೆನಿ ಕಳೆದ ಐಪಿಎಲ್​ ಸೀಸನ್​ನಲ್ಲಿ ಸಾಕಷ್ಟು ಆಸಕ್ತಿದಾಯಕ ಜಾಹೀರಾತುಗಳನ್ನು ಪರಿಚಯಿಸಿತ್ತು. ಆ್ಯಡ್​ಗಳು ಪ್ರಸಾರವಾದರೆ ಚಾನೆಲ್​ ಬದಲಿಸುವವರು ಕೂಡ ಒಂದು ಕ್ಷಣ ಈ ಜಾಹೀರಾತುಗಳನ್ನು ಕಣ್ತುಂಬಿಕೊಂಡ ಉದಾಹರಣೆ ಇದೆ. ಅದೇ ರೀತಿ, ಈ ಬಾರಿಯ ಐಪಿಎಲ್​ ಸೀಸನ್​ಗೂ ಮೊದಲು ಹೊಸ ವಿಧವಾದ ಆ್ಯಡ್​ನೊಂದಿಗೆ ಕ್ರೆಡ್​ ಬಂದಿದೆ.

ಜಾಹೀರಾತಿನ ವಿಡಿಯೋವನ್ನು ವಿರಾಟ್ ಕೊಹ್ಲಿ ತಮ್ಮ ಸಾಮಾಜಿಕ ಜಾಲತಾಣದಲ್ಲಿ ಈಗ ಹಂಚಿಕೊಂಡಿದ್ದಾರೆ. ಜಾಹೀರಾತಿನಲ್ಲಿ ದ್ರಾವಿಡ್​ ಟ್ರಾಫಿಕ್​ನಲ್ಲಿ ಸಿಲುಕಿರುತ್ತಾರೆ. ಅಷ್ಟೇ ಅಲ್ಲ, ಒತ್ತಡಕ್ಕೆ ಒಳಗಾಗಿ ಅಕ್ಕ ಪಕ್ಕದಲ್ಲಿ ನಿಂತಿರುವ ಕಾರು ಚಾಲಕರ ಮೇಲೆ ಸಿಟ್ಟಿಗೆ ಒಳಗಾಗಿದ್ದಾರೆ. ಎದುರು ನಿಂತಿರುವ ಕಾರು ಗಾಜನ್ನು ಬ್ಯಾಟ್​​ನಿಂದ ಒಡೆದು ಹಾಕಿದ್ದಾರೆ. ರಾಹುಲ್​ ಅವರ ಈ ರೀತಿಯ ಮುಖವನ್ನು ನಾನು ಎಂದಿಗೂ ನೋಡಿಲ್ಲ ಎಂದು ವಿರಾಟ್​ ಕೊಹ್ಲಿ ಕ್ಯಾಪ್ಶನ್​ ನೀಡಿದ್ದಾರೆ. ಈ ವಿಡಿಯೋ ನೋಡಿದ ಸಾಕಷ್ಟು ಮಂದಿ ಹೊಟ್ಟೆ ಹುಣ್ಣಾಗುವಂತೆ ನಕ್ಕಿದ್ದಾರೆ. ಸದ್ಯ, ಈ ವಿಡಿಯೋ ಸಾಕಷ್ಟು ವೈರಲ್​ ಆಗಿದೆ.

ಇದನ್ನೂ ಓದಿ: Virat Kohli IPL 2021 RCB Team Player: ಆರ್​ಸಿಬಿ ರನ್ ಮಷಿನ್ ವಿರಾಟ್​ ಕೊಹ್ಲಿ ಈ ಬಾರಿಯಾದರೂ ತಂಡವನ್ನು ಚಾಂಪಿಯನ್ ಮಾಡ್ತಾರಾ?

ಉತ್ತರ ಕರ್ನಾಟಕದಲ್ಲಿ ನೀರಿಗಾಗಿ ಹಾಹಾಕಾರ ಈಗಾಗಲೇ ಶುರುವಾಗಿದೆ
ಉತ್ತರ ಕರ್ನಾಟಕದಲ್ಲಿ ನೀರಿಗಾಗಿ ಹಾಹಾಕಾರ ಈಗಾಗಲೇ ಶುರುವಾಗಿದೆ
ಪೊಲೀಸ್ ತಂಡದ ಕಾರ್ಯಕ್ಷಮತೆಗೆ ವ್ಯಾಪಕ ಮೆಚ್ಚುಗೆ, ಅಭಿನಂದಿಸಿದ ಐಜಿಪಿ
ಪೊಲೀಸ್ ತಂಡದ ಕಾರ್ಯಕ್ಷಮತೆಗೆ ವ್ಯಾಪಕ ಮೆಚ್ಚುಗೆ, ಅಭಿನಂದಿಸಿದ ಐಜಿಪಿ
ಸಚಿವ ಎಂಪಿ ಪಾಟೀಲ್​ಗೆ ಚಿನ್ನದ ಉಂಗುರ ತೊಡಿಸಿ ಆಶೀರ್ವದಿಸಿದ ಸ್ವಾಮೀಜಿ
ಸಚಿವ ಎಂಪಿ ಪಾಟೀಲ್​ಗೆ ಚಿನ್ನದ ಉಂಗುರ ತೊಡಿಸಿ ಆಶೀರ್ವದಿಸಿದ ಸ್ವಾಮೀಜಿ
ಪಕ್ಷದ ಸಂಘಟನೆ ವಿಜಯೇಂದ್ರ ನೇತೃತ್ವದಲ್ಲಿ ನಮ್ಮಆದ್ಯತೆಯಾಗಿದೆ: ಶ್ರೀರಾಮುಲು
ಪಕ್ಷದ ಸಂಘಟನೆ ವಿಜಯೇಂದ್ರ ನೇತೃತ್ವದಲ್ಲಿ ನಮ್ಮಆದ್ಯತೆಯಾಗಿದೆ: ಶ್ರೀರಾಮುಲು
ದೇಗುಲದ ಭಕ್ತಿಗೀತೆ ಸೌಂಡ್ ಕಡಿಮೆ ಮಾಡುವಂತೆ ಮುಸ್ಲಿಂ ಯುವಕರಿಂದ ಅವಾಜ್
ದೇಗುಲದ ಭಕ್ತಿಗೀತೆ ಸೌಂಡ್ ಕಡಿಮೆ ಮಾಡುವಂತೆ ಮುಸ್ಲಿಂ ಯುವಕರಿಂದ ಅವಾಜ್
ನೋಯ್ಡಾದಲ್ಲಿ ಬೆಂಕಿ ಅವಘಡ; 3 ಕಾರ್ಖಾನೆಗಳು ಸ್ಥಳದಲ್ಲೇ ಸುಟ್ಟು ಭಸ್ಮ
ನೋಯ್ಡಾದಲ್ಲಿ ಬೆಂಕಿ ಅವಘಡ; 3 ಕಾರ್ಖಾನೆಗಳು ಸ್ಥಳದಲ್ಲೇ ಸುಟ್ಟು ಭಸ್ಮ
ಅಬ್ಬಬ್ಬಾ ಚಿನ್ನವೋ ಚಿನ್ನ...ಬಂಗಾರದಂಗಡಿಯಾದ ದಾವಣಗೆರೆ ಎಸ್ಪಿ ಕಚೇರಿ!
ಅಬ್ಬಬ್ಬಾ ಚಿನ್ನವೋ ಚಿನ್ನ...ಬಂಗಾರದಂಗಡಿಯಾದ ದಾವಣಗೆರೆ ಎಸ್ಪಿ ಕಚೇರಿ!
ರಾಜ್ಯ ಘಟಕವನ್ನು ಯಡಿಯೂರಪ್ಪ ಕುಟುಂಬಕ್ಕೆ ಲೀಸ್​ಗೆ ನೀಡಿರುವಂತಿದೆ:ಯತ್ನಾಳ್
ರಾಜ್ಯ ಘಟಕವನ್ನು ಯಡಿಯೂರಪ್ಪ ಕುಟುಂಬಕ್ಕೆ ಲೀಸ್​ಗೆ ನೀಡಿರುವಂತಿದೆ:ಯತ್ನಾಳ್
ನಿವೃತ್ತಿ ಪ್ಲಾನ್ ಘೋಷಿಸಲು ಮೋದಿ ಆರ್‌ಎಸ್‌ಎಸ್ ಕಚೇರಿಗೆ ಭೇಟಿ;ಸಂಜಯ್ ರಾವತ್
ನಿವೃತ್ತಿ ಪ್ಲಾನ್ ಘೋಷಿಸಲು ಮೋದಿ ಆರ್‌ಎಸ್‌ಎಸ್ ಕಚೇರಿಗೆ ಭೇಟಿ;ಸಂಜಯ್ ರಾವತ್
ಮೊದಲ ಬಾರಿ ಶಾಸಕನಾದಾಗಿನಿಂದ ನಾನು ಪಕ್ಷದ ಶಿಸ್ತಿನ ಸಿಪಾಯಿ: ತುಕಾರಾಂ
ಮೊದಲ ಬಾರಿ ಶಾಸಕನಾದಾಗಿನಿಂದ ನಾನು ಪಕ್ಷದ ಶಿಸ್ತಿನ ಸಿಪಾಯಿ: ತುಕಾರಾಂ