AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಟ್ರಾಫಿಕ್​ನಿಂದ ಬೇಸತ್ತ ರಾಹುಲ್​ ದ್ರಾವಿಡ್​; ಬ್ಯಾಟ್​ನಿಂದ ಎದುರು ಬದಿ ಕಾರಿನ ಗಾಜು ಪುಡಿಪುಡಿ; ವಿಡಿಯೋ ವೈರಲ್​

Rahul Dravid Viral Video: ರಾಹುಲ್​ ದ್ರಾವಿಡ್​ ಇಷ್ಟೆಲ್ಲಾ ಸಿಟ್ಟಾಗಲು ಕಾರಣವೇನು? ಏಕೆ ಅವರು ಈ ರೀತಿ ಮಾಡಿದರು ಎಂದು ನೀವು ಕೇಳಬಹುದು. ಅದಕ್ಕೂ ಉತ್ತರವಿದೆ.

ಟ್ರಾಫಿಕ್​ನಿಂದ ಬೇಸತ್ತ ರಾಹುಲ್​ ದ್ರಾವಿಡ್​; ಬ್ಯಾಟ್​ನಿಂದ ಎದುರು ಬದಿ ಕಾರಿನ ಗಾಜು ಪುಡಿಪುಡಿ; ವಿಡಿಯೋ ವೈರಲ್​
ವೈರಲ್​ ಆದ ವಿಡಿಯೋ
ರಾಜೇಶ್ ದುಗ್ಗುಮನೆ
|

Updated on: Apr 09, 2021 | 6:10 PM

Share

ರಾಹುಲ್​ ದ್ರಾವಿಡ್​ ಎಂದಾಕ್ಷಣ ನೆನಪಿಗೆ ಬರೋದು ಅವರ ಶಾಂತ ಸ್ವಭಾವದ ಮುಖ ಹಾಗೂ ಸೌಮ್ಯ ಮಾತುಗಳು. ಮೈದಾನದಲ್ಲಾಗಲೀ, ಮೈದಾನದ ಹೊರಗಾಗಲೀ ರಾಹುಲ್​ ದ್ರಾವಿಡ್​ ಸಿಟ್ಟಾಗಿದ್ದು ತುಂಬಾನೇ ಕಡಿಮೆ. ಆದರೆ, ದ್ರಾವಿಡ್​ ಈಗ ಬೆಂಗಳೂರು ಟ್ರಾಫಿಕ್​ ಬಗ್ಗೆ ತುಂಬಾನೇ ಸಿಟ್ಟಾಗಿದ್ದಾರೆ. ಅಷ್ಟೇ ಅಲ್ಲ, ಟ್ರಾಫಿಕ್​ನಲ್ಲಿ ಸಿಲುಕಿ ಸಿಟ್ಟಿಗೆದ್ದ ಅವರು ಎದುರು ನಿಂತಿದ್ದ ಕಾರಿನ ಕನ್ನಡಿಯನ್ನೇ ಒಡೆದು ಹಾಕಿದ್ದಾರೆ. ಸದ್ಯ ಈ ವಿಡಿಯೋ ಸಾಕಷ್ಟು ವೈರಲ್​ ಆಗಿದೆ. ಅರೆ, ರಾಹುಲ್​ ದ್ರಾವಿಡ್​ ಇಷ್ಟೆಲ್ಲಾ ಸಿಟ್ಟಾಗಲು ಕಾರಣವೇನು? ಏಕೆ ಅವರು ಈ ರೀತಿ ಮಾಡಿದರು ಎಂದು ನೀವು ಕೇಳಬಹುದು. ಅದಕ್ಕೂ ಉತ್ತರವಿದೆ. ಇದು ಜಾಹೀರಾತಿಗಾಗಿ ಮಾಡಿದ ವಿಡಿಯೋ. ಜಾಹೀರಾತಿನ ಕ್ರಿಯೇಟಿವಿಟಿ ನೋಡಿ ಎಲ್ಲರೂ ನಿಬ್ಬೆರಗಾಗಿದ್ದಾರೆ.

ಕ್ರೆಡಿಟ್​ ಕಾರ್ಡ್​ ಬಿಲ್​ ಪೇ ಮಾಡುವ ಕ್ರೆಡ್​ ಕಂಪೆನಿ ಕಳೆದ ಐಪಿಎಲ್​ ಸೀಸನ್​ನಲ್ಲಿ ಸಾಕಷ್ಟು ಆಸಕ್ತಿದಾಯಕ ಜಾಹೀರಾತುಗಳನ್ನು ಪರಿಚಯಿಸಿತ್ತು. ಆ್ಯಡ್​ಗಳು ಪ್ರಸಾರವಾದರೆ ಚಾನೆಲ್​ ಬದಲಿಸುವವರು ಕೂಡ ಒಂದು ಕ್ಷಣ ಈ ಜಾಹೀರಾತುಗಳನ್ನು ಕಣ್ತುಂಬಿಕೊಂಡ ಉದಾಹರಣೆ ಇದೆ. ಅದೇ ರೀತಿ, ಈ ಬಾರಿಯ ಐಪಿಎಲ್​ ಸೀಸನ್​ಗೂ ಮೊದಲು ಹೊಸ ವಿಧವಾದ ಆ್ಯಡ್​ನೊಂದಿಗೆ ಕ್ರೆಡ್​ ಬಂದಿದೆ.

ಜಾಹೀರಾತಿನ ವಿಡಿಯೋವನ್ನು ವಿರಾಟ್ ಕೊಹ್ಲಿ ತಮ್ಮ ಸಾಮಾಜಿಕ ಜಾಲತಾಣದಲ್ಲಿ ಈಗ ಹಂಚಿಕೊಂಡಿದ್ದಾರೆ. ಜಾಹೀರಾತಿನಲ್ಲಿ ದ್ರಾವಿಡ್​ ಟ್ರಾಫಿಕ್​ನಲ್ಲಿ ಸಿಲುಕಿರುತ್ತಾರೆ. ಅಷ್ಟೇ ಅಲ್ಲ, ಒತ್ತಡಕ್ಕೆ ಒಳಗಾಗಿ ಅಕ್ಕ ಪಕ್ಕದಲ್ಲಿ ನಿಂತಿರುವ ಕಾರು ಚಾಲಕರ ಮೇಲೆ ಸಿಟ್ಟಿಗೆ ಒಳಗಾಗಿದ್ದಾರೆ. ಎದುರು ನಿಂತಿರುವ ಕಾರು ಗಾಜನ್ನು ಬ್ಯಾಟ್​​ನಿಂದ ಒಡೆದು ಹಾಕಿದ್ದಾರೆ. ರಾಹುಲ್​ ಅವರ ಈ ರೀತಿಯ ಮುಖವನ್ನು ನಾನು ಎಂದಿಗೂ ನೋಡಿಲ್ಲ ಎಂದು ವಿರಾಟ್​ ಕೊಹ್ಲಿ ಕ್ಯಾಪ್ಶನ್​ ನೀಡಿದ್ದಾರೆ. ಈ ವಿಡಿಯೋ ನೋಡಿದ ಸಾಕಷ್ಟು ಮಂದಿ ಹೊಟ್ಟೆ ಹುಣ್ಣಾಗುವಂತೆ ನಕ್ಕಿದ್ದಾರೆ. ಸದ್ಯ, ಈ ವಿಡಿಯೋ ಸಾಕಷ್ಟು ವೈರಲ್​ ಆಗಿದೆ.

ಇದನ್ನೂ ಓದಿ: Virat Kohli IPL 2021 RCB Team Player: ಆರ್​ಸಿಬಿ ರನ್ ಮಷಿನ್ ವಿರಾಟ್​ ಕೊಹ್ಲಿ ಈ ಬಾರಿಯಾದರೂ ತಂಡವನ್ನು ಚಾಂಪಿಯನ್ ಮಾಡ್ತಾರಾ?

ಸುಳ್ಳು ಹೇಳಿದ್ರೆ ರಿಸೈನ್: ಡಿಕೆಶಿ ರಾಜೀನಾಮೆ ಸವಾಲ್ ಹಾಕಿದ್ಯಾರಿಗೆ?
ಸುಳ್ಳು ಹೇಳಿದ್ರೆ ರಿಸೈನ್: ಡಿಕೆಶಿ ರಾಜೀನಾಮೆ ಸವಾಲ್ ಹಾಕಿದ್ಯಾರಿಗೆ?
ಸುಳ್ಳು ಹೇಳಿದ್ರೆ ಒದ್ದು ಒಳಗೆ ಹಾಕ್ತೀನಿ: ಸಚಿವ ಎಂಬಿ ಪಾಟೀಲ್
ಸುಳ್ಳು ಹೇಳಿದ್ರೆ ಒದ್ದು ಒಳಗೆ ಹಾಕ್ತೀನಿ: ಸಚಿವ ಎಂಬಿ ಪಾಟೀಲ್
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್