AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Sonia Gandhi: ನೂರಿಯನ್ನು ಬೆನ್ನಿಗೆ ಕಟ್ಟಿಕೊಂಡು ಸೋನಿಯಾ ಗಾಂಧಿ ಪೋಸ್; ಅಮ್ಮನ ಫೋಟೋ ಶೇರ್ ಮಾಡಿದ ರಾಹುಲ್

ತಮ್ಮ ಮನೆಯ ಮುದ್ದಿನ ನಾಯಿ ಮರಿ ನೂರಿ ಜೊತೆ ಸೋನಿಯಾ ಗಾಂಧಿ ಎಂಜಾಯ್ ಮಾಡುತ್ತಿರುವ ಫೋಟೋವನ್ನು ರಾಹುಲ್ ಗಾಂಧಿ ಹಂಚಿಕೊಂಡಿದ್ದಾರೆ. ಆ ನಾಯಿಮರಿಯನ್ನು ಬ್ಯಾಗ್​ನಲ್ಲಿ ಹಾಕಿಕೊಂಡು ಬೆನ್ನಿಗೆ ಕಟ್ಟಿಕೊಂಡಿರುವ ಸೋನಿಯಾ ಗಾಂಧಿಯ ಫೋಟೋ ವೈರಲ್ ಆಗಿದೆ.

Sonia Gandhi: ನೂರಿಯನ್ನು ಬೆನ್ನಿಗೆ ಕಟ್ಟಿಕೊಂಡು ಸೋನಿಯಾ ಗಾಂಧಿ ಪೋಸ್; ಅಮ್ಮನ ಫೋಟೋ ಶೇರ್ ಮಾಡಿದ ರಾಹುಲ್
ನೂರಿಯನ್ನು ಬೆನ್ನಿಗೆ ಕಟ್ಟಿಕೊಂಡು ಸೋನಿಯಾ ಗಾಂಧಿ ಪೋಸ್
ಸುಷ್ಮಾ ಚಕ್ರೆ
|

Updated on: Aug 23, 2024 | 10:28 PM

Share

ನವದೆಹಲಿ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ತಮ್ಮ ಇನ್​ಸ್ಟಾಗ್ರಾಮ್ ಪೋಸ್ಟ್​ನಲ್ಲಿ ತಮ್ಮ ತಾಯಿ ಸೋನಿಯಾ ಗಾಂಧಿ ಅವರು ಮುದ್ದಿನ ನಾಯಿ ಮರಿ ನೂರಿಯ ಜೊತೆಗಿನ ಪ್ರೀತಿಯ ಕ್ಷಣವನ್ನು ಹಂಚಿಕೊಂಡಿದ್ದಾರೆ. ಈ ಪೋಸ್ಟ್ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಅಮ್ಮನ ಫೇವರೆಟ್ ಯಾರೆಂದು ಗೊತ್ತಾಯ್ತ? ಎಂದು ರಾಹುಲ್ ಗಾಂಧಿ ಅದಕ್ಕೆ ಕ್ಯಾಪ್ಷನ್ ನೀಡಿದ್ದಾರೆ.

ಈ ನಾಯಿ ಮರಿಯನ್ನು ರಾಹುಲ್ ಗಾಂಧಿ ಕಳೆದ ವರ್ಷ ಆಗಸ್ಟ್​ನಲ್ಲಿ ಗೋವಾಗೆ ಹೋಗಿದ್ದಾಗ ಅಲ್ಲಿಂದ ತಂದಿದ್ದರು. ಈ ನಾಯಿ ಮರಿಯನ್ನು ಅಮ್ಮನಿಗೆ ರಾಹುಲ್ ಉಡುಗೊರೆಯಾಗಿ ನೀಡಿದ್ದರು. ಗೋವಾದ ಜ್ಯಾಕ್ ರಸೆಲ್ ಟೆರಿಯರ್‌ ತಳಿಯ ನಾಯಿ ಮರಿ ಇದಾಗಿದ್ದು, ನಾಯಿ ಸಾಕುವ ಶರ್ವಾಣಿ ಪಿತ್ರೆ ಮತ್ತು ಪತಿ ಸ್ಟಾನ್ಲಿ ಬ್ರಗಾಂಕಾ ಅವರ ಬಳಿಯಿಂದ ತೆಗೆದುಕೊಂಡು ದೆಹಲಿಯ ತಮ್ಮ ಮನೆಯಲ್ಲಿ ಸಾಕಿಕೊಂಡಿದ್ದರು ರಾಹುಲ್ ಗಾಂಧಿ.

View this post on Instagram

A post shared by Rahul Gandhi (@rahulgandhi)

ಉತ್ತರ ಗೋವಾದ ಮಾಪುಸಾದಲ್ಲಿರುವ ನಾಯಿಯ ಕೆನಲ್‌ನಿಂದ ನಾಯಿಮರಿಯನ್ನು ದತ್ತು ತೆಗೆದುಕೊಳ್ಳಲಾಗಿತ್ತು. ಅಂದಿನಿಂದ ಇದು ಗಾಂಧಿ ಕುಟುಂಬದಲ್ಲಿ ಪ್ರೀತಿಯ ಒಡನಾಡಿಯಾಗಿ ಮಾರ್ಪಟ್ಟಿದೆ. ಈ ಕುರಿತು ರಾಹುಲ್ ಗಾಂಧಿ ಯೂಟ್ಯೂಬ್​ನಲ್ಲಿ ವಿಡಿಯೋವನ್ನೂ ಮಾಡಿದ್ದರು.

ರಾಹುಲ್ ಗಾಂಧಿ ತನ್ನ ತಾಯಿ ಸೋನಿಯಾ ಗಾಂಧಿಗೆ ಈ ನಾಯಿಯನ್ನು ಉಡುಗೊರೆಯಾಗಿ ನೀಡಿದಾಗ, ಅಸಾದುದ್ದೀನ್ ಓವೈಸಿ ಪಕ್ಷದ ಎಐಎಂಐಎಂ ನಾಯಕರೊಬ್ಬರು ರಾಹುಲ್ ಗಾಂಧಿ ಅವರ ವಿರುದ್ಧ ನ್ಯಾಯಾಲಯದಲ್ಲಿ ಮೊಕದ್ದಮೆ ಹೂಡಿದ್ದರು. ರಾಹುಲ್ ಗಾಂಧಿ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದಿದ್ದಾರೆ ಎಂದು ಆರೋಪಿಸಿದ್ದರು. ಎಐಎಂಐಎಂ ನಾಯಕ ಮೊಹಮ್ಮದ್ ಫರ್ಹಾನ್ ನಾಯಿಗೆ ನೂರಿ ಎಂದು ಹೆಸರಿಟ್ಟಿದ್ದಕ್ಕೆ ಆಕ್ಷೇಪ ವ್ಯಕ್ತಪಡಿಸಿದ್ದರು.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ