AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Sonia Gandhi: ನೂರಿಯನ್ನು ಬೆನ್ನಿಗೆ ಕಟ್ಟಿಕೊಂಡು ಸೋನಿಯಾ ಗಾಂಧಿ ಪೋಸ್; ಅಮ್ಮನ ಫೋಟೋ ಶೇರ್ ಮಾಡಿದ ರಾಹುಲ್

ತಮ್ಮ ಮನೆಯ ಮುದ್ದಿನ ನಾಯಿ ಮರಿ ನೂರಿ ಜೊತೆ ಸೋನಿಯಾ ಗಾಂಧಿ ಎಂಜಾಯ್ ಮಾಡುತ್ತಿರುವ ಫೋಟೋವನ್ನು ರಾಹುಲ್ ಗಾಂಧಿ ಹಂಚಿಕೊಂಡಿದ್ದಾರೆ. ಆ ನಾಯಿಮರಿಯನ್ನು ಬ್ಯಾಗ್​ನಲ್ಲಿ ಹಾಕಿಕೊಂಡು ಬೆನ್ನಿಗೆ ಕಟ್ಟಿಕೊಂಡಿರುವ ಸೋನಿಯಾ ಗಾಂಧಿಯ ಫೋಟೋ ವೈರಲ್ ಆಗಿದೆ.

Sonia Gandhi: ನೂರಿಯನ್ನು ಬೆನ್ನಿಗೆ ಕಟ್ಟಿಕೊಂಡು ಸೋನಿಯಾ ಗಾಂಧಿ ಪೋಸ್; ಅಮ್ಮನ ಫೋಟೋ ಶೇರ್ ಮಾಡಿದ ರಾಹುಲ್
ನೂರಿಯನ್ನು ಬೆನ್ನಿಗೆ ಕಟ್ಟಿಕೊಂಡು ಸೋನಿಯಾ ಗಾಂಧಿ ಪೋಸ್
ಸುಷ್ಮಾ ಚಕ್ರೆ
|

Updated on: Aug 23, 2024 | 10:28 PM

Share

ನವದೆಹಲಿ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ತಮ್ಮ ಇನ್​ಸ್ಟಾಗ್ರಾಮ್ ಪೋಸ್ಟ್​ನಲ್ಲಿ ತಮ್ಮ ತಾಯಿ ಸೋನಿಯಾ ಗಾಂಧಿ ಅವರು ಮುದ್ದಿನ ನಾಯಿ ಮರಿ ನೂರಿಯ ಜೊತೆಗಿನ ಪ್ರೀತಿಯ ಕ್ಷಣವನ್ನು ಹಂಚಿಕೊಂಡಿದ್ದಾರೆ. ಈ ಪೋಸ್ಟ್ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಅಮ್ಮನ ಫೇವರೆಟ್ ಯಾರೆಂದು ಗೊತ್ತಾಯ್ತ? ಎಂದು ರಾಹುಲ್ ಗಾಂಧಿ ಅದಕ್ಕೆ ಕ್ಯಾಪ್ಷನ್ ನೀಡಿದ್ದಾರೆ.

ಈ ನಾಯಿ ಮರಿಯನ್ನು ರಾಹುಲ್ ಗಾಂಧಿ ಕಳೆದ ವರ್ಷ ಆಗಸ್ಟ್​ನಲ್ಲಿ ಗೋವಾಗೆ ಹೋಗಿದ್ದಾಗ ಅಲ್ಲಿಂದ ತಂದಿದ್ದರು. ಈ ನಾಯಿ ಮರಿಯನ್ನು ಅಮ್ಮನಿಗೆ ರಾಹುಲ್ ಉಡುಗೊರೆಯಾಗಿ ನೀಡಿದ್ದರು. ಗೋವಾದ ಜ್ಯಾಕ್ ರಸೆಲ್ ಟೆರಿಯರ್‌ ತಳಿಯ ನಾಯಿ ಮರಿ ಇದಾಗಿದ್ದು, ನಾಯಿ ಸಾಕುವ ಶರ್ವಾಣಿ ಪಿತ್ರೆ ಮತ್ತು ಪತಿ ಸ್ಟಾನ್ಲಿ ಬ್ರಗಾಂಕಾ ಅವರ ಬಳಿಯಿಂದ ತೆಗೆದುಕೊಂಡು ದೆಹಲಿಯ ತಮ್ಮ ಮನೆಯಲ್ಲಿ ಸಾಕಿಕೊಂಡಿದ್ದರು ರಾಹುಲ್ ಗಾಂಧಿ.

View this post on Instagram

A post shared by Rahul Gandhi (@rahulgandhi)

ಉತ್ತರ ಗೋವಾದ ಮಾಪುಸಾದಲ್ಲಿರುವ ನಾಯಿಯ ಕೆನಲ್‌ನಿಂದ ನಾಯಿಮರಿಯನ್ನು ದತ್ತು ತೆಗೆದುಕೊಳ್ಳಲಾಗಿತ್ತು. ಅಂದಿನಿಂದ ಇದು ಗಾಂಧಿ ಕುಟುಂಬದಲ್ಲಿ ಪ್ರೀತಿಯ ಒಡನಾಡಿಯಾಗಿ ಮಾರ್ಪಟ್ಟಿದೆ. ಈ ಕುರಿತು ರಾಹುಲ್ ಗಾಂಧಿ ಯೂಟ್ಯೂಬ್​ನಲ್ಲಿ ವಿಡಿಯೋವನ್ನೂ ಮಾಡಿದ್ದರು.

ರಾಹುಲ್ ಗಾಂಧಿ ತನ್ನ ತಾಯಿ ಸೋನಿಯಾ ಗಾಂಧಿಗೆ ಈ ನಾಯಿಯನ್ನು ಉಡುಗೊರೆಯಾಗಿ ನೀಡಿದಾಗ, ಅಸಾದುದ್ದೀನ್ ಓವೈಸಿ ಪಕ್ಷದ ಎಐಎಂಐಎಂ ನಾಯಕರೊಬ್ಬರು ರಾಹುಲ್ ಗಾಂಧಿ ಅವರ ವಿರುದ್ಧ ನ್ಯಾಯಾಲಯದಲ್ಲಿ ಮೊಕದ್ದಮೆ ಹೂಡಿದ್ದರು. ರಾಹುಲ್ ಗಾಂಧಿ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದಿದ್ದಾರೆ ಎಂದು ಆರೋಪಿಸಿದ್ದರು. ಎಐಎಂಐಎಂ ನಾಯಕ ಮೊಹಮ್ಮದ್ ಫರ್ಹಾನ್ ನಾಯಿಗೆ ನೂರಿ ಎಂದು ಹೆಸರಿಟ್ಟಿದ್ದಕ್ಕೆ ಆಕ್ಷೇಪ ವ್ಯಕ್ತಪಡಿಸಿದ್ದರು.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ