AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Sonia Gandhi: ನೂರಿಯನ್ನು ಬೆನ್ನಿಗೆ ಕಟ್ಟಿಕೊಂಡು ಸೋನಿಯಾ ಗಾಂಧಿ ಪೋಸ್; ಅಮ್ಮನ ಫೋಟೋ ಶೇರ್ ಮಾಡಿದ ರಾಹುಲ್

ತಮ್ಮ ಮನೆಯ ಮುದ್ದಿನ ನಾಯಿ ಮರಿ ನೂರಿ ಜೊತೆ ಸೋನಿಯಾ ಗಾಂಧಿ ಎಂಜಾಯ್ ಮಾಡುತ್ತಿರುವ ಫೋಟೋವನ್ನು ರಾಹುಲ್ ಗಾಂಧಿ ಹಂಚಿಕೊಂಡಿದ್ದಾರೆ. ಆ ನಾಯಿಮರಿಯನ್ನು ಬ್ಯಾಗ್​ನಲ್ಲಿ ಹಾಕಿಕೊಂಡು ಬೆನ್ನಿಗೆ ಕಟ್ಟಿಕೊಂಡಿರುವ ಸೋನಿಯಾ ಗಾಂಧಿಯ ಫೋಟೋ ವೈರಲ್ ಆಗಿದೆ.

Sonia Gandhi: ನೂರಿಯನ್ನು ಬೆನ್ನಿಗೆ ಕಟ್ಟಿಕೊಂಡು ಸೋನಿಯಾ ಗಾಂಧಿ ಪೋಸ್; ಅಮ್ಮನ ಫೋಟೋ ಶೇರ್ ಮಾಡಿದ ರಾಹುಲ್
ನೂರಿಯನ್ನು ಬೆನ್ನಿಗೆ ಕಟ್ಟಿಕೊಂಡು ಸೋನಿಯಾ ಗಾಂಧಿ ಪೋಸ್
ಸುಷ್ಮಾ ಚಕ್ರೆ
|

Updated on: Aug 23, 2024 | 10:28 PM

Share

ನವದೆಹಲಿ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ತಮ್ಮ ಇನ್​ಸ್ಟಾಗ್ರಾಮ್ ಪೋಸ್ಟ್​ನಲ್ಲಿ ತಮ್ಮ ತಾಯಿ ಸೋನಿಯಾ ಗಾಂಧಿ ಅವರು ಮುದ್ದಿನ ನಾಯಿ ಮರಿ ನೂರಿಯ ಜೊತೆಗಿನ ಪ್ರೀತಿಯ ಕ್ಷಣವನ್ನು ಹಂಚಿಕೊಂಡಿದ್ದಾರೆ. ಈ ಪೋಸ್ಟ್ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಅಮ್ಮನ ಫೇವರೆಟ್ ಯಾರೆಂದು ಗೊತ್ತಾಯ್ತ? ಎಂದು ರಾಹುಲ್ ಗಾಂಧಿ ಅದಕ್ಕೆ ಕ್ಯಾಪ್ಷನ್ ನೀಡಿದ್ದಾರೆ.

ಈ ನಾಯಿ ಮರಿಯನ್ನು ರಾಹುಲ್ ಗಾಂಧಿ ಕಳೆದ ವರ್ಷ ಆಗಸ್ಟ್​ನಲ್ಲಿ ಗೋವಾಗೆ ಹೋಗಿದ್ದಾಗ ಅಲ್ಲಿಂದ ತಂದಿದ್ದರು. ಈ ನಾಯಿ ಮರಿಯನ್ನು ಅಮ್ಮನಿಗೆ ರಾಹುಲ್ ಉಡುಗೊರೆಯಾಗಿ ನೀಡಿದ್ದರು. ಗೋವಾದ ಜ್ಯಾಕ್ ರಸೆಲ್ ಟೆರಿಯರ್‌ ತಳಿಯ ನಾಯಿ ಮರಿ ಇದಾಗಿದ್ದು, ನಾಯಿ ಸಾಕುವ ಶರ್ವಾಣಿ ಪಿತ್ರೆ ಮತ್ತು ಪತಿ ಸ್ಟಾನ್ಲಿ ಬ್ರಗಾಂಕಾ ಅವರ ಬಳಿಯಿಂದ ತೆಗೆದುಕೊಂಡು ದೆಹಲಿಯ ತಮ್ಮ ಮನೆಯಲ್ಲಿ ಸಾಕಿಕೊಂಡಿದ್ದರು ರಾಹುಲ್ ಗಾಂಧಿ.

View this post on Instagram

A post shared by Rahul Gandhi (@rahulgandhi)

ಉತ್ತರ ಗೋವಾದ ಮಾಪುಸಾದಲ್ಲಿರುವ ನಾಯಿಯ ಕೆನಲ್‌ನಿಂದ ನಾಯಿಮರಿಯನ್ನು ದತ್ತು ತೆಗೆದುಕೊಳ್ಳಲಾಗಿತ್ತು. ಅಂದಿನಿಂದ ಇದು ಗಾಂಧಿ ಕುಟುಂಬದಲ್ಲಿ ಪ್ರೀತಿಯ ಒಡನಾಡಿಯಾಗಿ ಮಾರ್ಪಟ್ಟಿದೆ. ಈ ಕುರಿತು ರಾಹುಲ್ ಗಾಂಧಿ ಯೂಟ್ಯೂಬ್​ನಲ್ಲಿ ವಿಡಿಯೋವನ್ನೂ ಮಾಡಿದ್ದರು.

ರಾಹುಲ್ ಗಾಂಧಿ ತನ್ನ ತಾಯಿ ಸೋನಿಯಾ ಗಾಂಧಿಗೆ ಈ ನಾಯಿಯನ್ನು ಉಡುಗೊರೆಯಾಗಿ ನೀಡಿದಾಗ, ಅಸಾದುದ್ದೀನ್ ಓವೈಸಿ ಪಕ್ಷದ ಎಐಎಂಐಎಂ ನಾಯಕರೊಬ್ಬರು ರಾಹುಲ್ ಗಾಂಧಿ ಅವರ ವಿರುದ್ಧ ನ್ಯಾಯಾಲಯದಲ್ಲಿ ಮೊಕದ್ದಮೆ ಹೂಡಿದ್ದರು. ರಾಹುಲ್ ಗಾಂಧಿ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದಿದ್ದಾರೆ ಎಂದು ಆರೋಪಿಸಿದ್ದರು. ಎಐಎಂಐಎಂ ನಾಯಕ ಮೊಹಮ್ಮದ್ ಫರ್ಹಾನ್ ನಾಯಿಗೆ ನೂರಿ ಎಂದು ಹೆಸರಿಟ್ಟಿದ್ದಕ್ಕೆ ಆಕ್ಷೇಪ ವ್ಯಕ್ತಪಡಿಸಿದ್ದರು.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ