AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನೋಡ ನೋಡುತ್ತಿದ್ದಂತೆ ಚಲಿಸುತ್ತಿದ್ದ ರೈಲ್ವೆ ಹಳಿಗೆ ಬಿದ್ದು ಪೇದೆ ಸಾವು; ಸಿಸಿಟಿವಿಯಲ್ಲಿ ಸೆರೆಯಾಯಿತು ಹೃದಯ ವಿದ್ರಾವಕ ದೃಶ್ಯ

ಸಿಟಿವಿಯಲ್ಲಿ ಆಘಾತಕಾರಿ ಘಟನೆ ಸೆರೆಯಾಗಿದೆ. ಮೃತ ರೈಲ್ವೆ ಪೊಲೀಸ್ ಪೇದೆಯನ್ನು ರಾಜಾ ಕಿ ಮಂಡಿ ಸರ್ಕಾರಿ ರೈಲ್ವೆ ಪೊಲೀಸ್ ಠಾಣೆಯಲ್ಲಿ ಜಿಆರ್‌ಪಿ ಕಾನ್‌ಸ್ಟೆಬಲ್ ಆಗಿರುವ ರಿಂಗೆಲ್ ಸಿಂಗ್ (34) ಎಂದು ಗುರುತಿಸಲಾಗಿದೆ.

ನೋಡ ನೋಡುತ್ತಿದ್ದಂತೆ ಚಲಿಸುತ್ತಿದ್ದ ರೈಲ್ವೆ ಹಳಿಗೆ ಬಿದ್ದು ಪೇದೆ ಸಾವು; ಸಿಸಿಟಿವಿಯಲ್ಲಿ ಸೆರೆಯಾಯಿತು ಹೃದಯ ವಿದ್ರಾವಕ ದೃಶ್ಯ
ಪೇದೆ ರಿಂಗೆಲ್ ಸಿಂಗ್.
TV9 Web
| Edited By: |

Updated on:Mar 29, 2022 | 11:22 AM

Share
ಸಾವು ಅನ್ನೋದು ಯಾರಿಗೆ, ಯಾವಾಗ ಮತ್ತು ಹೇಗೆ ಬರುತ್ತದೆ ಎಂದು ಗೊತ್ತಾಗುವುದಿಲ್ಲ. ಇಂದು ಚೆನ್ನಾಗಿರೋರು ನಾಳೆ ಇರಲ್ಲ. ಅಂತಹದೇ ಒಂದು ಘಟನೆ ಇಲ್ಲಿದೆ. ಪ್ಲಾಟ್‌ಫಾರ್ಮ್‌ನಲ್ಲಿ ನಿಂತಿದ್ದ ರೈಲ್ವೆ ಪೊಲೀಸ್ ಪೇದೆ (Railway Police Constable) ಯೊಬ್ಬರು ತಲೆ ಸುತ್ತುವ ಅನುಭವವಾಗಿ ಚಲಿಸುತ್ತಿದ್ದ ರೈಲ್ವೆ ಹಳಿಗಳ ಮೇಲೆ ಬಿದ್ದು, ಸಾವನ್ನಪ್ಪಿರುವಂತಹ ಭಯಾನಕ ಮತ್ತು ಹೃದಯ ವಿದ್ರಾವಕ ಘಟನೆ ನಡೆದಿದೆ. ಆಗ್ರಾದ ರಾಜಾ ಕಿ ಮಂಡಿ ರೈಲು ನಿಲ್ದಾಣದಲ್ಲಿ ಈ ಘಟನೆ ಸಂಭವಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಸಿಸಿಟಿವಿಯಲ್ಲಿ ಆಘಾತಕಾರಿ ಘಟನೆ ಸೆರೆಯಾಗಿದೆ. ಮೃತ ರೈಲ್ವೆ ಪೊಲೀಸ್ ಪೇದೆಯನ್ನು ರಾಜಾ ಕಿ ಮಂಡಿ ಸರ್ಕಾರಿ ರೈಲ್ವೆ ಪೊಲೀಸ್ ಠಾಣೆಯಲ್ಲಿ ಜಿಆರ್‌ಪಿ ಕಾನ್‌ಸ್ಟೆಬಲ್ ಆಗಿರುವ ರಿಂಗೆಲ್ ಸಿಂಗ್ (34) ಎಂದು ಗುರುತಿಸಲಾಗಿದೆ. ಈ ದುರಂತವು ಭಾನುವಾರ ಬೆಳಗ್ಗೆ 9.25ರ ಸುಮಾರಿಗೆ ನಡೆದಿದೆ. ಚಲಿಸುತ್ತಿರುವ ರೈಲಿನಿಂದ ಕೆಲವೇ ಅಡಿಗಳಷ್ಟು ದೂರದ ಪ್ಲಾಟ್‌ಫಾರ್ಮ್‌ನಲ್ಲಿ ಪೇದೆ ನಿಂತಿರುವ ಘಟನೆಯ ಸಿಸಿಟಿವಿ ದೃಶ್ಯಾವಳಿ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದೆ.

ವಿಡಿಯೋದಲ್ಲಿ, ರೈಲ್ವೆ ನಿಲ್ದಾಣದ ಪ್ಲಾಟ್‌ಫಾರ್ಮ್ ನಂ. 1 ರಲ್ಲಿ ತನ್ನ ಕರ್ತವ್ಯವನ್ನು ನಿರ್ವಹಿಸುತ್ತಿದ್ದ ಪೇದೆ. ರೈಲ್ವೇ ಹಳಿಗಳ ಮೇಲೆ ಕುಸಿದು ಬೀಳುವ ಮೊದಲು ಮತ್ತು ಚಲಿಸುವ ಸರಕು ರೈಲಿಗೆ ಸಿಲುಕಿ ಸಾಯುವ ಮೊದಲು ತಮ್ಮನ್ನು ತಾವು ಸುತ್ತುವುದನ್ನು ಕಾಣಬಹುದು. ಎಂಟು ತಿಂಗಳಿನಿಂದ ರಾಜಾ ಕಿ ಮಂಡಿ ಪೊಲೀಸ್ ಠಾಣೆಯಲ್ಲಿ ಪೊಲೀಸ್ ಪೇದೆಯಾಗಿ ಕಾರ್ಯನಿರ್ವಹಿಸುತ್ತಿದ್ದರು. ಭೀಕರವಾಗಿ ಏನೋ ಸಂಭವಿಸಿದೆ ಎಂದು ಅರಿತುಕೊಂಡ ನಂತರ, ಒಬ್ಬ ವ್ಯಕ್ತಿ ಪೊಲೀಸರನ್ನು ರಕ್ಷಿಸಲು ಧಾವಿಸಿದ್ದಾನೆ. ಆದರೆ ತುಂಬಾ ತಡವಾಗಿ ಹೋಗಿತ್ತು. ಪೊಲೀಸರಿಂದ ಕೆಲವೇ ಅಡಿಗಳಷ್ಟು ದೂರದಲ್ಲಿದ್ದ ಇನ್ನೊಬ್ಬ ಪ್ರಯಾಣಿಕನು ತನ್ನ ಸೀಟಿನಿಂದ ಎದ್ದು ಮುಂದೆ ಬರುವುದನ್ನು ಕಾಣಬಹುದು.

ಘಟನೆಯ ನಂತರ, ಅವರ ದೇಹವನ್ನು ಪೊಲೀಸರು ವಶಪಡಿಸಿಕೊಂಡು, ಅದನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದಾರೆ. ದುರಂತದ ವೀಡಿಯೊ ಸಾಮಾಜಿಕ ಮಾಧ್ಯಮಗಳ್ಲಲಿ ವೈರಲ್ ಆಗುತ್ತಿದ್ದಂತೆ, ನೆಟಿಗರು ತಮ್ಮ ಸಂಕಟವನ್ನು ವ್ಯಕ್ತಪಡಿಸಿದ್ದಾರೆ ಮತ್ತು ಸಂತ್ರಸ್ತ ಕುಟುಂಬಕ್ಕಾಗಿ ಪ್ರಾರ್ಥಿಸಿದ್ದಾರೆ. ನಾವು ನಮ್ಮ ಭವಿಷ್ಯದ ಬಗ್ಗೆ ಯೋಜಿಸುತ್ತಾ ಜೀವನವನ್ನು ಕಳೆಯುವಾಗ ಕೆಲವೇ ಸೆಕೆಂಡುಗಳಲ್ಲಿ ಜೀವನವು ಹೇಗೆ ಕೊನೆಗೊಳ್ಳುತ್ತದೆ ಎಂದು ಬರೆದುಕೊಂಡಿದ್ದಾರೆ.
ಇದನ್ನೂ ಓದಿ:

Published On - 11:21 am, Tue, 29 March 22

ಸಿಕ್ಕ ಸಿಕ್ಕ ಜಾನುವಾರುಗಳನ್ನು ತಿಂದು ತೇಗಿದ ಚಿರತೆ ಬೋನಿಗೆ ಬಿತ್ತು
ಸಿಕ್ಕ ಸಿಕ್ಕ ಜಾನುವಾರುಗಳನ್ನು ತಿಂದು ತೇಗಿದ ಚಿರತೆ ಬೋನಿಗೆ ಬಿತ್ತು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಪ್ರೇಮ್ ಕಹಾನಿ: 19 ವರ್ಷದ ಯುವತಿ ಹಿಂದೆ ಬಿದ್ದು ದುರಂತ ಅಂತ್ಯಕಂಡ 40 ಅಂಕಲ್
ಪ್ರೇಮ್ ಕಹಾನಿ: 19 ವರ್ಷದ ಯುವತಿ ಹಿಂದೆ ಬಿದ್ದು ದುರಂತ ಅಂತ್ಯಕಂಡ 40 ಅಂಕಲ್
ಬೇರೆ ಮಹಿಳೆ ಜತೆ ಲವ್ವಿಡವ್ವಿ: ಹೆಂಡ್ತಿ ಹತ್ಯೆಗೆ ಸುಪಾರಿ ಕೊಟ್ಟ ಪತಿ
ಬೇರೆ ಮಹಿಳೆ ಜತೆ ಲವ್ವಿಡವ್ವಿ: ಹೆಂಡ್ತಿ ಹತ್ಯೆಗೆ ಸುಪಾರಿ ಕೊಟ್ಟ ಪತಿ
ಡಿಕೆಶಿ ಪ್ರಾರ್ಥನೆಗೆ ಅಸ್ತು ಎಂದಳಾ ಶಕ್ತಿದೇವಿ? ಅರ್ಚಕರು ಹೇಳಿದ್ದಿಷ್ಟು
ಡಿಕೆಶಿ ಪ್ರಾರ್ಥನೆಗೆ ಅಸ್ತು ಎಂದಳಾ ಶಕ್ತಿದೇವಿ? ಅರ್ಚಕರು ಹೇಳಿದ್ದಿಷ್ಟು
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ