Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕುಡಿದ ಅಮಲಿನಲ್ಲಿ ಚಾಲಕನ ತೊಡೆ ಮೇಲೆ ಕುಳಿತ ರಷ್ಯನ್ ಯುವತಿ, ನಿಯಂತ್ರಣ ತಪ್ಪಿ ಸ್ಕೂಟರ್ ಗೆ ಢಿಕ್ಕಿ

ಎಣ್ಣೆ ಒಳಗೆ ಇಳಿದರೆ ಕುಡಿದ ಅಮಲಿನಲ್ಲಿ ಏನ್‌ ಮಾಡ್ತಾನೆ ಅನ್ನೋದು ಅವನಿಗೆನೇ ಗೊತ್ತಾಗಲ್ಲ. ಹೌದು, ಬುಧವಾರ ರಾತ್ರಿ ನಡೆದ ಅಪಘಾತದ ನಂತರ ಕುಡಿದ ಅಮಲಿನಲ್ಲಿ ರಷ್ಯಾದ ಯುವತಿಯೊಬ್ಬಳು ಕೋಲಾಹಲ ಎಬ್ಬಿಸಿದ್ದಾರೆ. ಅಪಘಾತದ ಬಳಿಕ ಕಿರುಚುತ್ತಾ ಗಲಾಟೆಗೆ ಮುಂದಾಗಿದ್ದಾಳೆ. ಈ ಘಟನೆಯೂ ಛತ್ತೀಸ್‌ಗಢದ ರಾಯ್‌ಪುರದ ಜನನಿಬಿಡ ರಸ್ತೆಯಲ್ಲಿ ನಡೆದಿದೆ. ಈ ಘಟನೆಗೆ ಸಂಬಂಧಪಟ್ಟ ವಿಡಿಯೋವೊಂದು ಸೋಶಿಯಲ್ ಮೀಡಿಯಾದಲ್ಲಿ ಸಿಕ್ಕಾಪಟ್ಟೆ ವೈರಲ್ ಆಗುತ್ತಿದೆ.

ಕುಡಿದ ಅಮಲಿನಲ್ಲಿ ಚಾಲಕನ ತೊಡೆ ಮೇಲೆ ಕುಳಿತ ರಷ್ಯನ್ ಯುವತಿ, ನಿಯಂತ್ರಣ ತಪ್ಪಿ ಸ್ಕೂಟರ್ ಗೆ ಢಿಕ್ಕಿ
ವೈರಲ್​ ವಿಡಿಯೋ
Follow us
ಸಾಯಿನಂದಾ
| Updated By: ಅಕ್ಷಯ್​ ಪಲ್ಲಮಜಲು​​

Updated on: Feb 08, 2025 | 12:26 PM

ಕುಡಿದ ಮತ್ತಿನಲ್ಲಿ ಕುಡುಕರು ಮಾಡುವ ಎಡವಟ್ಟುಗಳು ಹಾಗೂ ಅವಾಂತರಗಳು ಒಂದೆರಡಲ್ಲ ಬಿಡಿ. ಹೌದು, ಈ ಕುಡುಕರು ನಶೆಯಲ್ಲಿ ಬೀದಿಬದಿಯಲ್ಲಿ ರಂಪ ಮಾಡುವ, ಎಡವಟ್ಟು ಮಾಡಿ ಪ್ರಾಣಕ್ಕೆ ಕುತ್ತು ತರುವ ಘಟನೆಗಳು ಆಗಾಗ ನಡೆಯುತ್ತಲೇ ಇರುತ್ತದೆ. ಇಂತಹದೊಂದು ಘಟನೆ ನಡೆದಿದ್ದು, ಛತ್ತೀಸ್‌ಗಢದ ರಾಯ್‌ಪುರದ ಜನನಿಬಿಡ ರಸ್ತೆಯಲ್ಲಿ ಬುಧವಾರ ರಾತ್ರಿ ನಡೆದ ಅಪಘಾತದ ಬಳಿಕ ಕುಡಿದ ಅಮಲಿನಲ್ಲಿದ್ದ ರಷ್ಯಾದ ಯುವತಿಯೊಬ್ಬಳು ಗಲಾಟೆ ಮಾಡಿದ್ದಾಳೆ. ಈ ಘಟನೆಗೆ ಸಂಬಂಧಪಟ್ಟ ವಿಡಿಯೋವೊಂದು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ.

ರಾಯ್‌ಪುರದ ವಿಐಪಿ ರಸ್ತೆಯಲ್ಲಿ ಬುಧವಾರ ರಾತ್ರಿ ವೇಗವಾಗಿ ಚಲಿಸುತ್ತಿದ್ದ ಇಂಡಿಗೋ ಕಾರು ಸ್ಕೂಟರ್‌ಗೆ ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ಮೂವರು ಯುವಕರು ಗಂಭೀರವಾಗಿ ಗಾಯಗೊಂಡಿದ್ದಾರೆ. ಡಿಕ್ಕಿ ಹೊಡೆದ ಬಳಿಕ ಪೊಲೀಸರು ಅಪಘಾತ ಸ್ಥಳಕ್ಕೆ ಧಾವಿಸಿದ್ದು, ಗೊಂದಲದ ವಾತಾವರಣವು ಉಂಟಾಗಿದೆ. ಇತ್ತ ರಷ್ಯನ್ ಯುವತಿಯೂ ಅವರೊಂದಿಗೆ ತೀವ್ರ ವಾಗ್ವಾದದಲ್ಲಿ ತೊಡಗಿ ಗಲಾಟೆ ಮಾಡಿದ್ದಾಳೆ. ಅದಲ್ಲದೇ, ಈ ಯುವತಿಯೂ ಪೊಲೀಸರೊಂದಿಗೆ ಠಾಣೆಗೆ ಹೋಗಲು ನಿರಾಕರಸಿದ್ದಾಳೆ.

ವೈರಲ್ ಆಗಿರುವ ವಿಡಿಯೋದಲ್ಲಿ ಪೊಲೀಸ್ ಸಿಬ್ಬಂದಿ ಹಾಗೂ ಸ್ಥಳದಲ್ಲಿ ನೆರೆದಿದ್ದ ಜನರ ಸಮ್ಮುಖದಲ್ಲಿ ಯುವತಿಯೂ ಅಳುತ್ತಿರುವುದು ಹಾಗೂ ಕಿರುಚುತ್ತಿರುವುದನ್ನು ಕಾಣಬಹುದು. ತನ್ನ ಫೋನ್ ಕಾಣೆಯಾಗಿದೆ ಎಂದು ಕಿರುಚುತ್ತಿದ್ದು, ಇದೇ ವೇಳೆ, ಪೊಲೀಸ್ ಠಾಣೆಗೆ ಕರೆದೊಯ್ಯಲು ಪೊಲೀಸರು ಪ್ರಯತ್ನಿಸಿದಾಗ ಯುವತಿ ವಿರೋಧಿಸುತ್ತಿರುವುದು ಕಾಣಬಹುದು. “ದಯವಿಟ್ಟು ಸಹಕರಿಸಿ” ಎಂದು ಪೊಲೀಸ್ ಅಧಿಕಾರಿಯೊಬ್ಬರು ಯುವತಿಗೆ ಹೇಳುತ್ತಿದ್ದು, ಆದರೆ ಆಕೆ ಮಾತ್ರ ಇದನ್ನು ವಿರೋಧಿಸಿದ್ದಾಳೆ.

ವೈರಲ್ ವಿಡಿಯೋ ಇಲ್ಲಿದೆ ನೋಡಿ:

ಪ್ರತ್ಯಕ್ಷದರ್ಶಿಗಳು ಯುವಕ ಮತ್ತು ರಷ್ಯನ್ ಯುವತಿ ಇಬ್ಬರೂ ಕುಡಿದ ಮತ್ತಿನಲ್ಲಿದ್ದರು. ರಷ್ಯನ್ ಯುವತಿ ಚಾಲಕನ ತೊಡೆಯ ಮೇಲೆ ಕುಳಿತಿದ್ದಳು, ಇದರಿಂದ ವಾಹನವನ್ನು ನಿಯಂತ್ರಿಸಲು ಚಾಲಕನಿಗೆ ಸಾಧ್ಯವಾಗಲಿಲ್ಲ ಎಂದು ತಿಳಿಸಿದ್ದಾರೆ. ಗಾಯಗೊಂಡ ಮೂವರನ್ನು ತಕ್ಷಣವೇ ಮೆಕಹಾರ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆಯ ಬಳಿಕ ಅವರನ್ನು ಬಿಡುಗಡೆ ಮಾಡಲಾಗಿದೆ.

ಇದನ್ನೂ ಓದಿ: ರೈಲಿನ ಶೌಚಾಲಯದೊಳಗೆ ನಿಂತು ಸ್ನೇಹಿತೆಯರೊಂದಿಗೆ ಕುಂಭಮೇಳಕ್ಕೆ ಹೊರಟ ಯುವತಿ

ಅದಲ್ಲದೇ, ಪ್ರವಾಸಿ ವೀಸಾದಲ್ಲಿ ಭಾರತಕ್ಕೆ ಬಂದಿರುವ ಚಾಲಕ ಹಾಗೂ ರಷ್ಯನ್ ಯುವತಿ ಇಬ್ಬರನ್ನೂ ವಶಕ್ಕೆ ಪಡೆದುಕೊಳ್ಳಲಾಗಿದೆ. ಖಾಸಗಿ ವ್ಯಕ್ತಿಗೆ ಸೇರಿದ ವಾಹನವಾಗಿದ್ದರೂ, ಅದರ ಮೇಲೆ “ಭಾರತ್ ಸರ್ಕಾರ” ಫಲಕವನ್ನು ಪ್ರದರ್ಶಿಸಿದ್ದಕ್ಕಾಗಿ ಅಧಿಕಾರಿಗಳು ಈ ಬಗ್ಗೆ ತನಿಖೆ ನಡೆಸುತ್ತಿದ್ದಾರೆ. ಇತ್ತ ಕಾರಿನ ಮಾಲೀಕ ಮತ್ತು ರಷ್ಯನ್ ಯುವತಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ಹೆಚ್ಚಿನ ತನಿಖೆಗಾಗಿ ಅವರನ್ನು ವಶಕ್ಕೆ ಪಡೆಯಲು ಪೊಲೀಸರು ನ್ಯಾಯಾಲಯಕ್ಕೆ ಮನವಿ ಮಾಡಿದ್ದಾರೆ.

ವೈರಲ್​ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

‘ಮೇ 9ಕ್ಕೆ ತಂದೆ ಕನಸು ನನಸಾಗುತ್ತೆ, ನನ್ನ ಹೊಸ ಜೀವನ ಶುರು’: ಚಂದನ್ ಶೆಟ್ಟಿ
‘ಮೇ 9ಕ್ಕೆ ತಂದೆ ಕನಸು ನನಸಾಗುತ್ತೆ, ನನ್ನ ಹೊಸ ಜೀವನ ಶುರು’: ಚಂದನ್ ಶೆಟ್ಟಿ
ಕೇವಲ 10 ರನ್​​ಗಳಿಂದ ಶತಕ ವಂಚಿತರಾದ ಶುಭ್​ಮನ್ ಗಿಲ್
ಕೇವಲ 10 ರನ್​​ಗಳಿಂದ ಶತಕ ವಂಚಿತರಾದ ಶುಭ್​ಮನ್ ಗಿಲ್
ಚಂದನ್ ಶೆಟ್ಟಿ ಟ್ಯಾಲೆಂಟ್ ಬಗ್ಗೆ ವಿವರಿಸಿದ ಅನುಭವಿ ಕಲಾವಿದ ತಬಲಾ ನಾಣಿ
ಚಂದನ್ ಶೆಟ್ಟಿ ಟ್ಯಾಲೆಂಟ್ ಬಗ್ಗೆ ವಿವರಿಸಿದ ಅನುಭವಿ ಕಲಾವಿದ ತಬಲಾ ನಾಣಿ
ಮಂಗಳೂರು: ಕಟೀಲು ದುರ್ಗಾಪರಮೇಶ್ವರಿ ದೇವಸ್ಥಾನದ ಮುಂಭಾಗ ಬೆಂಕಿ ಆಟ
ಮಂಗಳೂರು: ಕಟೀಲು ದುರ್ಗಾಪರಮೇಶ್ವರಿ ದೇವಸ್ಥಾನದ ಮುಂಭಾಗ ಬೆಂಕಿ ಆಟ
ರಾಂಬನ್‌ನಲ್ಲಿ ಭೂಕುಸಿತ; ಜಮ್ಮು-ಶ್ರೀನಗರ ರಾಷ್ಟ್ರೀಯ ಹೆದ್ದಾರಿ ಬಂದ್
ರಾಂಬನ್‌ನಲ್ಲಿ ಭೂಕುಸಿತ; ಜಮ್ಮು-ಶ್ರೀನಗರ ರಾಷ್ಟ್ರೀಯ ಹೆದ್ದಾರಿ ಬಂದ್
ತಾನೇ ಯುವಕನಿಗೆ ಹಿಗ್ಗಾಮುಗ್ಗಾ ಥಳಿಸಿ ದೂರು ನೀಡಿದ ವಿಂಗ್ ಕಮಾಂಡರ್: ವಿಡಿಯೋ
ತಾನೇ ಯುವಕನಿಗೆ ಹಿಗ್ಗಾಮುಗ್ಗಾ ಥಳಿಸಿ ದೂರು ನೀಡಿದ ವಿಂಗ್ ಕಮಾಂಡರ್: ವಿಡಿಯೋ
ದಾಖಲಾತಿ ಹೆಚ್ಚಳಕ್ಕೆ ಸರ್ಕಾರಿ ಶಾಲೆ ಶಿಕ್ಷಕರಿಂದ ಡಿಫರೆಂಟ್ ಕ್ಯಾಂಪೇನ್
ದಾಖಲಾತಿ ಹೆಚ್ಚಳಕ್ಕೆ ಸರ್ಕಾರಿ ಶಾಲೆ ಶಿಕ್ಷಕರಿಂದ ಡಿಫರೆಂಟ್ ಕ್ಯಾಂಪೇನ್
ಮೋದಿ ತಾತ ಕೊಟ್ಟ ನವಿಲುಗರಿ ಹಿಡಿದು ಕುಣಿದಾಡಿದ ಜೆಡಿ ವ್ಯಾನ್ಸ್ ಮಕ್ಕಳು
ಮೋದಿ ತಾತ ಕೊಟ್ಟ ನವಿಲುಗರಿ ಹಿಡಿದು ಕುಣಿದಾಡಿದ ಜೆಡಿ ವ್ಯಾನ್ಸ್ ಮಕ್ಕಳು
ಓಂ ಪ್ರಕಾಶ್​ ಹತ್ಯೆ: ಏನಿದು ಸ್ಕಿಜೋಫ್ರೇನಿಯಾ ರೋಗ? ಎಷ್ಟು ಡೇಂಜರ್​?
ಓಂ ಪ್ರಕಾಶ್​ ಹತ್ಯೆ: ಏನಿದು ಸ್ಕಿಜೋಫ್ರೇನಿಯಾ ರೋಗ? ಎಷ್ಟು ಡೇಂಜರ್​?
ಕಾರು ಅಡ್ಡಗಟ್ಟಿ ಮಧ್ಯದ ಬೆರಳು ತೋರಿಸಿ ನಿಂದಿನಿಸಿದ ಆಟೋ ಚಾಲಕ
ಕಾರು ಅಡ್ಡಗಟ್ಟಿ ಮಧ್ಯದ ಬೆರಳು ತೋರಿಸಿ ನಿಂದಿನಿಸಿದ ಆಟೋ ಚಾಲಕ