AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಎಸಿಬಿ ಮನೆಗೆ ಪ್ರವೇಶಿಸುತ್ತಿದ್ದಂತೆ ಲಂಚದ ಹಣವನ್ನು ಬೆಂಕಿ ಹಾಕಿ ಸುಟ್ಟ ತಹಶೀಲ್ದಾರ್; ವಿಡಿಯೋ ವೈರಲ್​

ಭ್ರಷ್ಟಾಚಾರ ನಡೆಸಿದ ಅಧಿಕಾರಿಗಳ ಪಾಡು ಒಂದೆರಡಲ್ಲ. ಒಂದೆಡೆ ಭ್ರಷ್ಟಾಚಾರದಿಂದ ಸಂಗ್ರಹಿಸಿದ ಹಣ ಯಾವಾಗಲೂ ಭಯ ಹುಟ್ಟಿಸುತ್ತಲೇ ಇರುತ್ತದೆ. ಇಲ್ಲೊಂದೆಡೆ ತಹಶೀಲ್ದಾರರು ತಮ್ಮ ಮನೆಯ ಅಡುಗೆ ಮನೆಯಲ್ಲಿ ಹಣವನ್ನು ಸುಡುತ್ತಿರುವ ವಿಡಿಯೋ ಇದೀಗ ವೈರಲ್​ ಆಗಿದೆ.

ಎಸಿಬಿ ಮನೆಗೆ ಪ್ರವೇಶಿಸುತ್ತಿದ್ದಂತೆ ಲಂಚದ ಹಣವನ್ನು ಬೆಂಕಿ ಹಾಕಿ ಸುಟ್ಟ ತಹಶೀಲ್ದಾರ್; ವಿಡಿಯೋ ವೈರಲ್​
ಸುಟ್ಟಿರುವ ನೋಟುಗಳು
shruti hegde
| Edited By: |

Updated on:Mar 26, 2021 | 5:03 PM

Share

ಜೈಪುರ: ಭ್ರಷ್ಟಾಚಾರ ನಡೆಸಿದ ಅಧಿಕಾರಿಗಳ ಪಾಡು ಒಂದೆರಡಲ್ಲ. ಒಂದೆಡೆ ಭ್ರಷ್ಟಾಚಾರದಿಂದ ಸಂಗ್ರಹಿಸಿದ ಹಣ ಯಾವಾಗಲೂ ಭಯ ಹುಟ್ಟಿಸುತ್ತಲೇ ಇರುತ್ತದೆ. ಇನ್ನೊಂದೆಡೆ ಯಾವಾಗ ತಮ್ಮ ಭ್ರಷ್ಟಾಚಾರ ಬಯಲಿಗೆ ಬರುತ್ತದೆಯೋ ಎಂಬ ಭಯವೂ ಅವರನ್ನು ಕಾಡುತ್ತದೆ. ಲೋಕಾಯುಕ್ತರು ಭ್ರಷ್ಟ ಅಧಿಕಾರಿಗಳ ಮನೆ ಮೇಲೆ ದಾಳಿ ಮಾಡಿದಾಗ ನಡೆಯುವ ಪರಿಸ್ಥಿತಿಗಳು ನಿಜಕ್ಕೂ ಕುತೂಹಲಕಾರಿ. ಇಲ್ಲಿ ಅಂತಹುದೇ ಒಂದು ವಿಚಿತ್ರ ಘಟನೆ ನಡೆದಿದೆ.  ರಾಜಸ್ಥಾನದ ಭ್ರಷ್ಟಾಚಾರ ನಿಗ್ರಹ ದಳ(ಎಸಿಬಿ) ತಹಶೀಲ್ದಾರ ಕಲ್ಪೇಶ್​ ಕುಮಾರ್​ ಜೈನ್​ ಅವರ ಮನೆಗೆ ಭೇಟಿ ನೀಡುತ್ತಿದ್ದಂತೆ ಭಯಭೀತರಾದ ತಹಶೀಲ್ದಾರ ಕಲ್ಪೇಶ್​ ಕುಮಾರ್​ ಜೈನ್ ಮನೆಯಲ್ಲಿದ್ದ 15-20 ಲಕ್ಷದಷ್ಟು ಹಣವನ್ನು ಸುಟ್ಟು ಹಾಕಿದ್ದಾರೆ. ಈ ಘಟನೆ ರಾಜಸ್ಥಾನದ ಸಿರೋಹಿ ಜಿಲ್ಲೆಯಲ್ಲಿ ಕಳೆದ ಬುಧವಾರ ನಡೆದಿದೆ.

ತಹಶೀಲ್ದಾರರು ತಮ್ಮ ಮನೆಯ ಅಡುಗೆ ಮನೆಯಲ್ಲಿ ಹಣವನ್ನು ಸುಡುತ್ತಿರುವ ವಿಡಿಯೋ ಇದೀಗ ವೈರಲ್​ ಆಗಿದೆ. ಅಡುಗೆ ಮನೆಗೆ ಸೇರಿಕೊಂಡಿದ್ದ ತಹಶೀಲ್ದಾರರನ್ನು ಎಸಿಬಿ ಅಧಿಕಾರಿಗಳು ಮನವೊಲಿಸಲು ಪ್ರಯತ್ನಿಸುತ್ತಿದ್ದರು. ಜೊತೆಗೆ ಕಿಟಕಿ ಬಾಗಿಲು ಒಡೆಯಲು ಪ್ರಯತ್ನಿಸುತ್ತಿದ್ದಾಗ ಮನೆಯಲ್ಲಿದ್ದ ಮಕ್ಕಳು ಭಯಭೀತರಾಗಿ ಅಳಲು ಪ್ರಾರಂಭಿಸಿದ್ದಾರೆ.

ಎಸಿಬಿ ತಂಡವು ಇನ್ನೇನು ಮನೆ ಪ್ರವೇಶಿಸುತ್ತಿದ್ದಂತೆ ಅವರನ್ನು ತಡೆಯಲು ಮನೆಯ ಎಲ್ಲಾ ಬಾಗಿಲುಗಳನ್ನು ಮುಚ್ಚಿ ಲಂಚ ಪಡೆದ ಹಣವನ್ನು ಸುಡಲು ಪ್ರಯತ್ನಿಸಿದರು ಎಂದು ಅಧಿಕಾರಿಗಳು ಮಾಹಿತಿ ತಿಳಿಸಿದ್ದಾರೆ. ಅಧಿಕಾರಿಗಳು ಮನೆ ಒಳ ಪ್ರವೇಶಿಸುವುದರೊಳಗೆ 1.5 ಲಕ್ಷ ರೂಪಾಯಿಯನ್ನು ಬೆಂಕಿಯಲ್ಲಿ ಸುಟ್ಟು ಹಾಕಿದ್ದಾರೆ ಎಂದು ಡಿಜಿ (ಎಸಿಬಿ) ಬಿಎಲ್​ ಸೋನಿ ತಿಳಿಸಿದ್ದಾರೆ.

ಇದನ್ನೂ ಓದಿ: Krunal Pandya: ಮೊದಲ ಪಂದ್ಯದಲ್ಲೇ ಹೊಸ ದಾಖಲೆ ಬರೆದ ಕೃನಾಲ್ ಪಾಂಡ್ಯ ಭಾವುಕರಾದ ವಿಡಿಯೋ ವೈರಲ್​

ಶ್ರೀದೇವಿ ಪುತ್ರಿ ಜಾನ್ವಿ ಕಪೂರ್​ ಜೊತೆ ಸುತ್ತಾಡುತ್ತಿರುವ ಹುಡುಗ ಯಾರು? ಫೋಟೋ ವೈರಲ್​

Published On - 4:44 pm, Fri, 26 March 21

Follow Us
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!