AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Video: ಗಾಳಿಪಟವನ್ನು ಹಿಂಬಾಲಿಸುತ್ತಾ ರಸ್ತೆಗೆ ಓಡಿ ಬಂದ ಬಾಲಕನಿಗೆ ಕಾರು ಡಿಕ್ಕಿ; ಭೀಕರ ದೃಶ್ಯ ಸಿಸಿಟಿವಿಯಲ್ಲಿ ಸೆರೆ

ಗಾಳಿಪಟವನ್ನು ಹಿಂಬಾಲಿಸುತ್ತಾ ರಸ್ತೆಗೆ ಓಡಿ ಬಂದ 7 ವರ್ಷದ ಬಾಲಕನಿಗೆ ಕಾರು ಡಿಕ್ಕಿ ಹೊಡೆದಿರುವ ಆಘಾತಕಾರಿ ಘಟನೆ ರಾಜಸ್ಥಾನದ ಸಿಕಾರ್‌ನಲ್ಲಿ ನಡೆದಿದೆ. ಅಪಘಾತದಲ್ಲಿ ಮಗುವಿಗೆ ಗಂಭೀರ ಗಾಯಗಳಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಭೀಕರ ಅಪಘಾತ ಸ್ಥಳದಲ್ಲಿ ಅಳವಡಿಸಲಾಗಿದ್ದ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ.

ಅಕ್ಷತಾ ವರ್ಕಾಡಿ
|

Updated on: Dec 10, 2024 | 12:13 PM

Share

ರಾಜಸ್ಥಾನ: ಅತಿವೇಗವಾಗಿ ಬಂದ ಕಾರು 7 ವರ್ಷದ ಬಾಲಕನಿಗೆ ಡಿಕ್ಕಿ ಹೊಡೆದಿರುವ ಆಘಾತಕಾರಿ ಘಟನೆ ರಾಜಸ್ಥಾನದ ಸಿಕಾರ್‌ನಲ್ಲಿ ನಡೆದಿದೆ. ಈ ಭೀಕರ ಅಪಘಾತ ಸ್ಥಳದಲ್ಲಿ ಅಳವಡಿಸಲಾಗಿದ್ದ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ವೇಗವಾಗಿ ಬಂದ ವಾಹನ ಡಿಕ್ಕಿ ಹೊಡೆದು ಮಗು ಸುಮಾರು 40ರಿಂದ 50 ಅಡಿ ದೂರಕ್ಕೆ ಎಸೆಯಲ್ಪಟ್ಟಿರುವುದು ವಿಡಿಯೋದಲ್ಲಿ ಸೆರೆಯಾಗಿದೆ. ಗಾಳಿಪಟವನ್ನು ಹಿಂಬಾಲಿಸುತ್ತಾ ರಸ್ತೆಗೆ ಓಡಿ ಬಂದ ಬಾಲಕನಿಗೆ ಕಾರು ಡಿಕ್ಕಿಯಾಗಿರುವುದಾಗಿ ವರದಿಯಾಗಿದೆ. ಅಪಘಾತದಲ್ಲಿ ಬಾಲಕನಿಗೆ ಗಂಭೀರ ಗಾಯಗಳಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.

ಈ ಘಟನೆ ಶುಕ್ರವಾರ (ಡಿಸೆಂಬರ್ 6) ಲೊಸಾಲ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಘಟನೆಯ ವೀಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ರಸ್ತೆ ದಾಟಲು ಯತ್ನಿಸುತ್ತಿದ್ದ ಬಾಲಕ ಓಡುತ್ತಿರುವುದನ್ನು ವಿಡಿಯೋದಲ್ಲಿ ಕಾಣಬಹುದು. ಅದೃಷ್ಟವಶಾತ್, ಮಗುವಿಗೆ ಡಿಕ್ಕಿ ಹೊಡೆದ ನಂತರ ಕಾರು ಚಾಲಕ ಬ್ರೇಕ್ ಹಾಕಿದ್ದಾನೆ. ಬಳಿಕ ತನ್ನ ಕಾರಿನಲ್ಲೇ ಆಸ್ಪತ್ರೆಗೆ ಕರೆದ್ಯೊಯ್ದಿದಿರುವುದು ವಿಡಿಯೋದಲ್ಲಿ ಸೆರೆಯಾಗಿದೆ.

ಇದನ್ನೂ ಓದಿ: Viral Video: ತಿಂಗಳಿಗೆ 80,000 ರೂ. ಗಳಿಸುವ ಬೆಂಗಳೂರಿನ ಉಬರ್ ಬೈಕ್ ಚಾಲಕ; ವಿಡಿಯೋ ವೈರಲ್​​

ಬಾಲಕನನ್ನು ಸ್ಥಳೀಯ ಎಸ್‌ಕೆ ಆಸ್ಪತ್ರೆಗೆ ಕರೆದೊಯ್ದಲಾಗಿದೆ. ಬಳಿಕ ಅಲ್ಲಿಂದ ಜೈಪುರದ ಎಸ್‌ಎಂಎಸ್ ಆಸ್ಪತ್ರೆಗೆ ಕಳುಹಿಸಲಾಗಿದೆ. ಇದೀಗ ಬಾಲಕ ಎಸ್‌ಎಂಎಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ತಲೆ ಮತ್ತು ದೇಹದ ಇತರ ಭಾಗಗಳಿಗೆ ಗಾಯಗಳಾಗಿವೆ ಎಂದು ವರದಿಯಾಗಿದೆ.

ಮತ್ತಷ್ಟು ವೈರಲ್​​ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Follow Us
H1N1 ಫ್ಲೂ ಆತಂಕ: ಪೋಷಕರು, ಶಾಲೆಗಳಿಗೆ ಆರೋಗ್ಯ ಸಚಿವರಿಂದ ಮಹತ್ವದ ಮಾಹಿತಿ
H1N1 ಫ್ಲೂ ಆತಂಕ: ಪೋಷಕರು, ಶಾಲೆಗಳಿಗೆ ಆರೋಗ್ಯ ಸಚಿವರಿಂದ ಮಹತ್ವದ ಮಾಹಿತಿ
ಕರ್ನಾಟಕದ ಮುಖ್ಯ ಚುನಾವಣಾಧಿಕಾರಿ ವಿ. ಅನ್ಬುಕುಮಾರ್ ಸುದ್ದಿಗೋಷ್ಠಿ
ಕರ್ನಾಟಕದ ಮುಖ್ಯ ಚುನಾವಣಾಧಿಕಾರಿ ವಿ. ಅನ್ಬುಕುಮಾರ್ ಸುದ್ದಿಗೋಷ್ಠಿ
ನೀರು ಸಂಸ್ಕರಣಾ ಘಟಕದಲ್ಲಿ ವಿಷಾನಿಲ ಸೋರಿಕೆ
ನೀರು ಸಂಸ್ಕರಣಾ ಘಟಕದಲ್ಲಿ ವಿಷಾನಿಲ ಸೋರಿಕೆ
ತುಂಗಭದ್ರೆಗೆ ಕಂಟಕ ತಂದ ‘ಅಂತರಗಂಗೆ’! ಕಲುಷಿತಗೊಂಡ ಗದಗ ಜಿಲ್ಲೆಯ ಜೀವನಾಡಿ
ತುಂಗಭದ್ರೆಗೆ ಕಂಟಕ ತಂದ ‘ಅಂತರಗಂಗೆ’! ಕಲುಷಿತಗೊಂಡ ಗದಗ ಜಿಲ್ಲೆಯ ಜೀವನಾಡಿ
ಸರ್ಕಾರಿ ಆಸ್ಪತ್ರೆಗಳಲ್ಲಿ ನಕಲಿ ಔಷಧಿ ಇಲ್ಲ: ಸಚಿವ ಯು.ಟಿ. ಖಾದರ್ ಸ್ಪಷ್ಟನೆ
ಸರ್ಕಾರಿ ಆಸ್ಪತ್ರೆಗಳಲ್ಲಿ ನಕಲಿ ಔಷಧಿ ಇಲ್ಲ: ಸಚಿವ ಯು.ಟಿ. ಖಾದರ್ ಸ್ಪಷ್ಟನೆ
ತಮಿಳುನಾಡಿಗೆ ನೀರು ಬಿಡುಗಡೆ ವಿರೋಧಿಸಿ ಮಂಡ್ಯದಲ್ಲಿ ರೈತರ ಪ್ರತಿಭಟನೆ ತೀವ್ರ
ತಮಿಳುನಾಡಿಗೆ ನೀರು ಬಿಡುಗಡೆ ವಿರೋಧಿಸಿ ಮಂಡ್ಯದಲ್ಲಿ ರೈತರ ಪ್ರತಿಭಟನೆ ತೀವ್ರ
ಆಯುರ್ವೇದಿಕ್ ಕಾಲೇಜಿಗೆ ಬೀಗ: 300ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅತಂತ್ರ
ಆಯುರ್ವೇದಿಕ್ ಕಾಲೇಜಿಗೆ ಬೀಗ: 300ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅತಂತ್ರ
'ಪನ್ನೀರ್ ಮಾತ್ರವಲ್ಲ, ಎಲ್ಲಾ ಕೃತಕ ಉತ್ಪನ್ನಗಳೂ ಬ್ಯಾನ್'
'ಪನ್ನೀರ್ ಮಾತ್ರವಲ್ಲ, ಎಲ್ಲಾ ಕೃತಕ ಉತ್ಪನ್ನಗಳೂ ಬ್ಯಾನ್'
ಹಾಸನ ಜಿಲ್ಲಾಧಿಕಾರಿ ವಿರುದ್ಧ ಎಚ್.ಡಿ. ರೇವಣ್ಣ ವಾಗ್ದಾಳಿ
ಹಾಸನ ಜಿಲ್ಲಾಧಿಕಾರಿ ವಿರುದ್ಧ ಎಚ್.ಡಿ. ರೇವಣ್ಣ ವಾಗ್ದಾಳಿ
ಸಚಿವ ನಾಗೇಂದ್ರ ರಾಜೀನಾಮೆಗೆ ಆಗ್ರಹಿಸಿ ವಿಧಾನಸೌಧ ಮುತ್ತಿಗೆಗೆ ಬಿಜೆಪಿ ಯತ್ನ
ಸಚಿವ ನಾಗೇಂದ್ರ ರಾಜೀನಾಮೆಗೆ ಆಗ್ರಹಿಸಿ ವಿಧಾನಸೌಧ ಮುತ್ತಿಗೆಗೆ ಬಿಜೆಪಿ ಯತ್ನ