AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral: ಬಸ್ಸಿನೊಳಗೆ ನುಗ್ಗಿ ಅವಾಂತರ ಸೃಷ್ಟಿಸಿದ ಗೂಳಿ; ಎದ್ನೋ ಬಿದ್ನೋ ಅಂತ ಓಡಿ ಹೋದ ಡ್ರೈವರ್‌-ಕಂಡಕ್ಟರ್

ಪ್ರಾಣಿಗಳ ಅವಾಂತರಗಳಿಗೆ ಸಂಬಂಧಿಸಿದ ಆಘಾತಕಾರಿ ವಿಡಿಯೋಗಳು ಸೋಷಿಯಲ್‌ ಮೀಡಿಯಾದಲ್ಲಿ ವೈರಲ್‌ ಆಗುತ್ತಿರುತ್ತವೆ. ಇಲ್ಲೊಂದು ಅಂತಹದ್ದೇ ಬೆಚ್ಚಿಬೀಳಿಸುವಂತಹ ದೃಶ್ಯ ವೈರಲ್‌ ಆಗಿದ್ದು, ಗೂಳಿಯೊಂದು ಬಸ್ಸಿನೊಳಗೆ ನುಗ್ಗಿ ದೊಡ್ಡ ಅವಾಂತರ ಸೃಷ್ಟಿಸಿದೆ. ಏಕಾಏಕಿ ಬಸ್ಸಿನೊಳಗೆ ಗೂಳಿ ನುಗ್ಗಿದ್ದು, ಭಯದಲ್ಲಿ ಕಂಡಕ್ಟರ್‌ ಮತ್ತು ಡ್ರೈವರ್‌ ಪ್ರಾಣ ಉಳಿದರೆ ಸಾಕೆನ್ನುತ್ತಾ ಬಸ್ಸಿನಿಂದ ಕೆಳ ಜಿಗಿದು ಓಡಿ ಹೋಗಿದ್ದಾರೆ.

Viral: ಬಸ್ಸಿನೊಳಗೆ ನುಗ್ಗಿ ಅವಾಂತರ ಸೃಷ್ಟಿಸಿದ ಗೂಳಿ; ಎದ್ನೋ ಬಿದ್ನೋ ಅಂತ ಓಡಿ ಹೋದ ಡ್ರೈವರ್‌-ಕಂಡಕ್ಟರ್
ವೈರಲ್​ ವಿಡಿಯೋ
ಮಾಲಾಶ್ರೀ ಅಂಚನ್​
| Edited By: |

Updated on: Feb 13, 2025 | 3:55 PM

Share

ಮದವೇರಿದಾಗ ಆನೆ, ಗೂಳಿ ಸೇರಿದಂತೆ ಇನ್ನಿತರೆ ಪ್ರಾಣಿಗಳು ಎಲ್ಲೆಂದರಲ್ಲಿ ನುಗ್ಗಿ ದೊಡ್ಡ ಅವಾಂತರಗಳನ್ನೇ ಸೃಷ್ಟಿಸುತ್ತವೆ. ಹೀಗೆ ಹೆಚ್ಚಾಗಿ ಜನನಿಬಿಡ ಪ್ರದೇಶಗಳಿಗೆ ನುಗ್ಗಿ ಪ್ರಾಣಿಗಳು ಅವಾಂತರಗಳನ್ನು ಸೃಷ್ಟಿಸುವುದಕ್ಕೆ ಸಂಬಂಧಿಸಿ ಇಂತಹ ಸಾಕಷ್ಟು ವಿಡಿಯೋಗಳು ಸೋಷಿಯಲ್‌ ಮೀಡಿಯಾದಲ್ಲಿ ಆಗಾಗ್ಗೆ ಕಾಣಸಿಗುತ್ತಿರುತ್ತವೆ. ಇಲ್ಲೊಂದು ಅಂತಹದ್ದೇ ಘಟನೆ ನಡೆದಿದ್ದು, ಏಕಾಏಕಿ ಬಸ್ಸಿನೊಳಗೆ ನುಗ್ಗಿದ ಗೂಳಿ ಕಿಟಕಿ ಗಾಜುಗಳನ್ನು ಪುಡಿ ಮಾಡಿ ಅವಾಂತರ ಸೃಷ್ಟಿಸಿದೆ. ಇದರಿಂದ ಭಯಭೀತರಾಗ ಕಂಡಕ್ಟರ್‌ ಮತ್ತು ಡ್ರೈವರ್‌ ಪ್ರಾಣ ಉಳಿದರೆ ಸಾಕೆನ್ನುತ್ತಾ ಬಸ್ಸಿನಿಂದ ಕೆಳ ಜಿಗಿದು ಓಡಿ ಹೋಗಿದ್ದಾರೆ. ಈ ವಿಡಿಯೋ ಇದೀಗ ಭಾರೀ ವೈರಲ್‌ ಆಗುತ್ತಿದೆ.

ರಾಜಸ್ಥಾನದ ಜೈಪುರದಲ್ಲಿ ಈ ಬೆಚ್ಚಿ ಬೀಳಿಸುವ ಘಟನೆ ನಡೆದಿದ್ದು, ಏಕಾಏಕಿ ಬಸ್ಸಿನೊಳಗೆ ನುಗ್ಗಿದಂತಹ ಗೂಳಿಯೊಂದು ವಾಹನದ ಕಿಟಕಿ ಗಾಜುಗಳನ್ನು ಒದು ಹಾಕಿದೆ. ಮಾಧ್ಯಮ ವರದಿಗಳ ಪ್ರಕಾರ ಇಲ್ಲಿನ ತೋಡಿಮೋಡ್‌ ಕ್ರಾಸಿಂಗ್‌ ಬಳಿ ರಾತ್ರಿ 8.30 ರ ಸುಮಾರಿಗೆ ಈ ಘಟನೆ ನಡೆದಿದ್ದು, ಬಸ್ಸಿನೊಳಗೆ ನುಗ್ಗಿದಂತಹ ಗೂಳಿಯೊಂದು ಹೊರ ಹೋಗಲು ಸಾಧ್ಯವಾಗದೆ ಕಿಟಕಿ ಗಾಜುಗಳನ್ನು ಒಡೆದು ಹಾಕಿದೆ. ಇದರಿಂದ ಗಾಬರಿಗೊಂಡ ಡ್ರೈವರ್‌ ಮತ್ತು ಕಂಡಕ್ಟರ್‌ ವಾಹನದಿಂದ ಕೆಳಜಿಗಿದು ಎದ್ನೋ ಬಿದ್ನೋ ಅಂತ ಪ್ರಾಣ ಉಳಿಸಿಕೊಳ್ಳಲು ಓಡಿ ಹೋಗಿದ್ದಾರೆ.

ವೈರಲ್ ವಿಡಿಯೋ ಇಲ್ಲಿದೆ ನೋಡಿ:

Hate Detector ಹೆಸರಿನ ಎಕ್ಸ್‌ ಖಾತೆಯಲ್ಲಿ ಈ ಕುರಿತ ವಿಡಿಯೋವನ್ನು ಶೇರ್‌ ಮಾಡಲಾಗಿದ್ದು, ವೈರಲ್‌ ಆಗುತ್ತಿರುವ ವಿಡಿಯೋದಲ್ಲಿ ಬಸ್ಸಿನೊಳಗೆ ನುಗ್ಗಿದ ಗೂಳಿ ಕೋಪದಲ್ಲಿ ಕಿಟಕಿ ಗಾಜುಗಳನ್ನು ಪುಡಿ ಮಾಡುತ್ತಿರುವ ಬೆಚ್ಚಿ ಬೀಳಿಸುವ ದೃಶ್ಯವನ್ನು ಕಾಣಬಹುದು.

ಇದನ್ನೂ ಓದಿ: ಕುಂಭಮೇಳದಲ್ಲಿ ಚಹಾ ಮಾರಿ ಕೇವಲ ಒಂದು ದಿನದಲ್ಲಿ 5 ಸಾವಿರ ರೂ. ಲಾಭ ಗಳಿಸಿದ ಯುವಕ; ವಿಡಿಯೋ ವೈರಲ್‌

ಈ ಘಟನೆಯಿಂದ ಬಸ್ಸಿಗೆ ಒಂದಷ್ಟು ಹಾನಿಯಾಗಿದ್ದು ಬಿಟ್ಟರೆ ಇನ್ನು ಯಾವುದೇ ರೀತಿಯ ಅಪಾಯ ಸಂಭವಿಸಿಲ್ಲ ಎಂದು ವರದಿಗಳು ತಿಳಿಸಿವೆ.

ವೈರಲ್​ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್